Homeಅಂತರಾಷ್ಟ್ರೀಯಭಾರತದ ಮೇಲೆ ಚೀನಾದ ಆಕ್ರಮಣ ಸಲ್ಲದು: ಅಮೆರಿಕಾ ವಿದೇಶಾಂಗ ಸಮಿತಿ ಸದಸ್ಯನ ವಿರೋಧ

ಭಾರತದ ಮೇಲೆ ಚೀನಾದ ಆಕ್ರಮಣ ಸಲ್ಲದು: ಅಮೆರಿಕಾ ವಿದೇಶಾಂಗ ಸಮಿತಿ ಸದಸ್ಯನ ವಿರೋಧ

- Advertisement -
- Advertisement -

ಲಡಾಕ್‌ನಲ್ಲಿನ ನೈಜ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತದ ವಿರುದ್ಧದ ಚೀನಾದ ಆಕ್ರಮಣದಿಂದ “ಅತ್ಯಂತ ಕಳವಳಗೊಂಡಿದ್ದೇನೆ” ಎಂದು ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಫಾರಿನ್ ಅಫೇರ್ಸ್ ಕಮಿಟಿಯ ಮುಖ್ಯಸ್ಥ ಎಲಿಯಟ್ ಎಂಗಲ್ ಹೇಳಿದ್ದಾರೆ. ರಾಜತಾಂತ್ರಿಕತೆ ಮತ್ತು ಅಸ್ತಿತ್ವದಲ್ಲಿರುವ ಗಡಿ ಪ್ರಶ್ನೆಗಳನ್ನು ಪರಿಹರಿಸುವ ಕಾರ್ಯವಿಧಾನಗಳು ಮತ್ತು ಮಾನದಂಡಗಳನ್ನು ಗೌರವಿಸಿ ಎಂದು ಚೀನಾಕ್ಕೆ ಒತ್ತಾಯಿಸಿದ್ದಾರೆ.

“ಭಾರತ-ಚೀನಾ ಗಡಿಯಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ನಡೆಯುತ್ತಿರುವ ಚೀನಾದ ಆಕ್ರಮಣದಿಂದ ನಾನು ತುಂಬಾ ಕಳವಳಗೊಂಡಿದ್ದೇನೆ. ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ಸಂಘರ್ಷಗಳನ್ನು ಪರಿಹರಿಸುವ ಬದಲು ತನ್ನ ನೆರೆಹೊರೆಯವರನ್ನು ಪೀಡಿಸಲು ಚೀನಾ ಸಿದ್ಧವಾಗಿದೆ ಎಂದು ಮತ್ತೊಮ್ಮೆ ತೋರಿಸುತ್ತಿದೆ” ಎಂದು ಡೆಮಾಕ್ರಟಿಕ್‌ ಪಕ್ಷದ ಎಂಗಲ್ ಹೇಳಿದ್ದಾರೆ.

“ಎಲ್ಲಾ ದೇಶಗಳು ಒಂದೇ ರೀತಿಯ ನಿಯಮಗಳಿಗೆ ಬದ್ಧರಾಗಿರಬೇಕು. ಇಲ್ಲಿದಿದ್ದಲ್ಲಿ ನಾವು ‘ಸರಿಹೊಂದುವಂತಹ’ ಜಗತ್ತಿನಲ್ಲಿ ವಾಸಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಚೀನಾದ ಸೈನ್ಯವು ಭಾರತೀಯ ಭೂಪ್ರದೇಶಕ್ಕೆ ನುಸುಳಿದ ನಂತರ ಮೇ ಆರಂಭದಿಂದಲೂ ಭಾರತೀಯ ಮತ್ತು ಚೀನಾದ ಸೈನಿಕರು ಲಡಾಖ್‌ನ ವಾಸ್ತವಿಕ ಗಡಿಯಲ್ಲಿ ಮುಖಾಮುಖಿಯಾಗಿದ್ದಾರೆ ಎಂದು ಭಾರತೀಯ ಮಿಲಿಟರಿ ಅಧಿಕಾರಿಗಳು ಹೇಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಎರಡೂ ಕಡೆಯವರು ರಕ್ಷಣಾ ಕಾರ್ಯಗಳನ್ನು ಸಜ್ಜುಗೊಳಿಸಿದ್ದಾರೆ.

ಲಡಾಖ್ ಮತ್ತು ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಚೀನಾದ ಮಿಲಿಟರಿ ತನ್ನ ಸೈನಿಕರನ್ನು ಜಮಾಯಿಸಿದ್ದು, ಗಸ್ತು ತಿರುಗುತ್ತಿದ್ದಾರೆ ಎಂದು ಭಾರತ ಹೇಳಿದೆ. ಈ ವಾದವನ್ನು ನಿರಾಕರಿಸಿರುವ ಚೀನಾ, ನಮ್ಮ ಭೂಪ್ರದೇಶವನ್ನು ಭಾರತೀಯ ಪಡೆಗಳನ್ನು ಅತಿಕ್ರಮಣ ಮಾಡುವುದರಿಂದ ಎರಡು ಸೈನ್ಯಗಳ ನಡುವೆ ಉದ್ವಿಗ್ನತೆ ಉಂಟಾಗುತ್ತಿದೆ ಎಂದು ಹೇಳಿದೆ.

ಕಳೆದ ವಾರ ಈ ಕುರಿತು ತಾನು ಮಧ್ಯಸ್ಥಿಕೆ ವಹಿಸಲು ಸಮರ್ಥ ಮತ್ತು ಸಿದ್ದನಿರುವುದಾಗಿ ಅಮೆರಿಕಾ ಅಧ್ಯಕ್ಷ ಟ್ರಂಪ್‌ ಘೋಷಿಸಿದ್ದರು. ಈ ಕುರಿತು ಭಾರತದ ಪ್ರಧಾನಿ ಮೋದಿಯೊಡನೆ ಮಾತನಾಡಿದ್ದೇನೆ ಎಂದು ಸಹ ಹೇಳಿದ್ದರು. ಆದರೆ ಭಾರತವು ಟ್ರಂಪ್‌ ಪ್ರಸ್ತಾಪವನ್ನು ತಿರಸ್ಕರಿಸಿತ್ತು ಮತ್ತು ಮೋದಿಯೊಡನೆ ಈ ವಿಚಾರ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಸದ್ಯಕ್ಕೆ ಟ್ರಂಪ್ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವನ್ನು ಬದಿಗೊತ್ತಿ ಭಾರತವು ಮಿಲಿಟರಿ ನಿಲುವನ್ನು ಎದುರಿಸಲು ಚೀನಾದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದೆ.


ಇದನ್ನೂ ಓದಿ: ಕ್ಯಾಮರ ಎದುರೆ ಇಸ್ಲಾಮೋಫೋಬಿಯ ಹರಡಿದ ಪ್ರಾಂಶುಪಾಲೆ: ತೀವ್ರ ವಿರೋಧ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗಡಿ ವಿವಾದಗಳನ್ನು ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳಬೇಕು. ಯುದ್ಧ ವಿನಾಶಕಾರಿ.

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...