Homeಅಂತರಾಷ್ಟ್ರೀಯಭಾರತದ ಮೇಲೆ ಚೀನಾದ ಆಕ್ರಮಣ ಸಲ್ಲದು: ಅಮೆರಿಕಾ ವಿದೇಶಾಂಗ ಸಮಿತಿ ಸದಸ್ಯನ ವಿರೋಧ

ಭಾರತದ ಮೇಲೆ ಚೀನಾದ ಆಕ್ರಮಣ ಸಲ್ಲದು: ಅಮೆರಿಕಾ ವಿದೇಶಾಂಗ ಸಮಿತಿ ಸದಸ್ಯನ ವಿರೋಧ

- Advertisement -
- Advertisement -

ಲಡಾಕ್‌ನಲ್ಲಿನ ನೈಜ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತದ ವಿರುದ್ಧದ ಚೀನಾದ ಆಕ್ರಮಣದಿಂದ “ಅತ್ಯಂತ ಕಳವಳಗೊಂಡಿದ್ದೇನೆ” ಎಂದು ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಫಾರಿನ್ ಅಫೇರ್ಸ್ ಕಮಿಟಿಯ ಮುಖ್ಯಸ್ಥ ಎಲಿಯಟ್ ಎಂಗಲ್ ಹೇಳಿದ್ದಾರೆ. ರಾಜತಾಂತ್ರಿಕತೆ ಮತ್ತು ಅಸ್ತಿತ್ವದಲ್ಲಿರುವ ಗಡಿ ಪ್ರಶ್ನೆಗಳನ್ನು ಪರಿಹರಿಸುವ ಕಾರ್ಯವಿಧಾನಗಳು ಮತ್ತು ಮಾನದಂಡಗಳನ್ನು ಗೌರವಿಸಿ ಎಂದು ಚೀನಾಕ್ಕೆ ಒತ್ತಾಯಿಸಿದ್ದಾರೆ.

“ಭಾರತ-ಚೀನಾ ಗಡಿಯಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ನಡೆಯುತ್ತಿರುವ ಚೀನಾದ ಆಕ್ರಮಣದಿಂದ ನಾನು ತುಂಬಾ ಕಳವಳಗೊಂಡಿದ್ದೇನೆ. ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ಸಂಘರ್ಷಗಳನ್ನು ಪರಿಹರಿಸುವ ಬದಲು ತನ್ನ ನೆರೆಹೊರೆಯವರನ್ನು ಪೀಡಿಸಲು ಚೀನಾ ಸಿದ್ಧವಾಗಿದೆ ಎಂದು ಮತ್ತೊಮ್ಮೆ ತೋರಿಸುತ್ತಿದೆ” ಎಂದು ಡೆಮಾಕ್ರಟಿಕ್‌ ಪಕ್ಷದ ಎಂಗಲ್ ಹೇಳಿದ್ದಾರೆ.

“ಎಲ್ಲಾ ದೇಶಗಳು ಒಂದೇ ರೀತಿಯ ನಿಯಮಗಳಿಗೆ ಬದ್ಧರಾಗಿರಬೇಕು. ಇಲ್ಲಿದಿದ್ದಲ್ಲಿ ನಾವು ‘ಸರಿಹೊಂದುವಂತಹ’ ಜಗತ್ತಿನಲ್ಲಿ ವಾಸಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಚೀನಾದ ಸೈನ್ಯವು ಭಾರತೀಯ ಭೂಪ್ರದೇಶಕ್ಕೆ ನುಸುಳಿದ ನಂತರ ಮೇ ಆರಂಭದಿಂದಲೂ ಭಾರತೀಯ ಮತ್ತು ಚೀನಾದ ಸೈನಿಕರು ಲಡಾಖ್‌ನ ವಾಸ್ತವಿಕ ಗಡಿಯಲ್ಲಿ ಮುಖಾಮುಖಿಯಾಗಿದ್ದಾರೆ ಎಂದು ಭಾರತೀಯ ಮಿಲಿಟರಿ ಅಧಿಕಾರಿಗಳು ಹೇಳುತ್ತಾರೆ. ಇತ್ತೀಚಿನ ದಿನಗಳಲ್ಲಿ ಎರಡೂ ಕಡೆಯವರು ರಕ್ಷಣಾ ಕಾರ್ಯಗಳನ್ನು ಸಜ್ಜುಗೊಳಿಸಿದ್ದಾರೆ.

ಲಡಾಖ್ ಮತ್ತು ಸಿಕ್ಕಿಂನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಚೀನಾದ ಮಿಲಿಟರಿ ತನ್ನ ಸೈನಿಕರನ್ನು ಜಮಾಯಿಸಿದ್ದು, ಗಸ್ತು ತಿರುಗುತ್ತಿದ್ದಾರೆ ಎಂದು ಭಾರತ ಹೇಳಿದೆ. ಈ ವಾದವನ್ನು ನಿರಾಕರಿಸಿರುವ ಚೀನಾ, ನಮ್ಮ ಭೂಪ್ರದೇಶವನ್ನು ಭಾರತೀಯ ಪಡೆಗಳನ್ನು ಅತಿಕ್ರಮಣ ಮಾಡುವುದರಿಂದ ಎರಡು ಸೈನ್ಯಗಳ ನಡುವೆ ಉದ್ವಿಗ್ನತೆ ಉಂಟಾಗುತ್ತಿದೆ ಎಂದು ಹೇಳಿದೆ.

ಕಳೆದ ವಾರ ಈ ಕುರಿತು ತಾನು ಮಧ್ಯಸ್ಥಿಕೆ ವಹಿಸಲು ಸಮರ್ಥ ಮತ್ತು ಸಿದ್ದನಿರುವುದಾಗಿ ಅಮೆರಿಕಾ ಅಧ್ಯಕ್ಷ ಟ್ರಂಪ್‌ ಘೋಷಿಸಿದ್ದರು. ಈ ಕುರಿತು ಭಾರತದ ಪ್ರಧಾನಿ ಮೋದಿಯೊಡನೆ ಮಾತನಾಡಿದ್ದೇನೆ ಎಂದು ಸಹ ಹೇಳಿದ್ದರು. ಆದರೆ ಭಾರತವು ಟ್ರಂಪ್‌ ಪ್ರಸ್ತಾಪವನ್ನು ತಿರಸ್ಕರಿಸಿತ್ತು ಮತ್ತು ಮೋದಿಯೊಡನೆ ಈ ವಿಚಾರ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಸದ್ಯಕ್ಕೆ ಟ್ರಂಪ್ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವನ್ನು ಬದಿಗೊತ್ತಿ ಭಾರತವು ಮಿಲಿಟರಿ ನಿಲುವನ್ನು ಎದುರಿಸಲು ಚೀನಾದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದೆ.


ಇದನ್ನೂ ಓದಿ: ಕ್ಯಾಮರ ಎದುರೆ ಇಸ್ಲಾಮೋಫೋಬಿಯ ಹರಡಿದ ಪ್ರಾಂಶುಪಾಲೆ: ತೀವ್ರ ವಿರೋಧ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗಡಿ ವಿವಾದಗಳನ್ನು ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳಬೇಕು. ಯುದ್ಧ ವಿನಾಶಕಾರಿ.

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...