Homeಮುಖಪುಟಚೀನಾ ಸೇನೆ ಹಿನ್ನಡೆದಿದ್ದು ಸ್ವಾಗತಾರ್ಹ. ಹಿನ್ನಡೆದ ಪ್ರದೇಶದ ಬಗ್ಗೆ ಸ್ಪಷ್ಟನೆ ಕೊಡಿ: ಪಿ ಚಿದಂಬರಂ

ಚೀನಾ ಸೇನೆ ಹಿನ್ನಡೆದಿದ್ದು ಸ್ವಾಗತಾರ್ಹ. ಹಿನ್ನಡೆದ ಪ್ರದೇಶದ ಬಗ್ಗೆ ಸ್ಪಷ್ಟನೆ ಕೊಡಿ: ಪಿ ಚಿದಂಬರಂ

"ಭಾರತದ ಭೂಪ್ರದೇಶವನ್ನು ಚೀನಾ ಸೇನೆ ಕಬಳಿಸಿಲ್ಲ. ನಮ್ಮ ನೆಲದಲ್ಲಿ ಡ್ಯ್ರಾಗನ್ ಸೇನೆ ಇಲ್ಲ" ಎಂದಿದ್ದರು. ಮೋದಿ ಅವರ ಈ ಹೇಳಿಕೆ ಭಾರೀ ವಿವಾದಕ್ಕೆ ಈಡಾಗಿತ್ತು. ಆದರೆ, ಇದೀಗ ಮತ್ತೊಂದು ಮಾಹಿತಿಯನ್ನು ಹೊರ ಹಾಕುತ್ತಿರುವ ಕೇಂದ್ರ ಸರ್ಕಾರ, "ಚೀನಾ ಸೇನೆ ಭಾರತದ ಭೂ ಭಾಗದಿಂದ ಹಿಂದಕ್ಕೆ ಸರಿದಿದೆ" ಎಂದು ಹೇಳುತ್ತಿದೆ.

- Advertisement -
- Advertisement -

ಇಂಡೋ-ಚೀನಾ ಗಡಿಯಿಂದ, ಚೀನಾ ಸೇನೆ ಹಿನ್ನಡೆದಿದ್ದು ಸ್ವಾಗತಾರ್ಹ. ಆದರೆ, ಚೀನಾ ಸೇನೆ ಯಾವ ಪ್ರದೇಶದಿಂದ ಹಿಂದೆ ಸರಿದಿದೆ? ಎಂದು ಯಾರಾದರೂ ಸ್ಪಷ್ಟಪಡಿಸಲಿ ಎಂದು ಕೇಂದ್ರ ಸರ್ಕಾರವನ್ನು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪ್ರಶ್ನೆ ಮಾಡಿದ್ದಾರೆ.

ಈ ಹಿಂದೆ ಇಂಡೋ-ಚೀನಾ ಗಡಿ ಪ್ರದೇಶವಾದ ಗಾಲ್ವಾನ್‌ ಕಣಿವೆಯಲ್ಲಿ ಎರಡೂ ದೇಶದ ಸೈನಿಕರ ನಡುವೆ ಸಂಘರ್ಷ ಉಂಟಾಗಿತ್ತು. ಈ ಸಂಘರ್ಷದಲ್ಲಿ ಭಾರತದ 20 ಜನ ಸೈನಿಕರನ್ನು ಚೀನಾದ  ಸೇನೆ ಹತ್ಯೆ ಮಾಡಿತ್ತು. ಆದರೆ, ಈ ಸಂಘರ್ಷದ ನಂತರ ಸರ್ವ ಪಕ್ಷಗಳ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, “ಭಾರತದ ಭೂಪ್ರದೇಶವನ್ನು ಚೀನಾ ಸೇನೆ ಕಬಳಿಸಿಲ್ಲ. ನಮ್ಮ ನೆಲದಲ್ಲಿ ಡ್ಯ್ರಾಗನ್ ಸೇನೆ ಇಲ್ಲ” ಎಂದಿದ್ದರು.

ಮೋದಿ ಅವರ ಈ ಹೇಳಿಕೆ ಭಾರೀ ವಿವಾದಕ್ಕೆ ಈಡಾಗಿತ್ತು. ಆದರೆ, ಇದೀಗ ಮತ್ತೊಂದು ಮಾಹಿತಿಯನ್ನು ಹೊರ ಹಾಕುತ್ತಿರುವ ಕೇಂದ್ರ ಸರ್ಕಾರ, “ಚೀನಾ ಸೇನೆ ಭಾರತದ ಭೂ ಭಾಗದಿಂದ ಹಿಂದಕ್ಕೆ ಸರಿದಿದೆ” ಎಂದು ಹೇಳುತ್ತಿದೆ.

ಇದೇ ಕಾರಣಕ್ಕೆ ಟ್ವೀಟ್‌ ಮೂಲಕ ಪ್ರಶ್ನೆ ಮಾಡಿರುವ ಮಾಜಿ ಕಣಕಾಸು ಸಚಿವ ಪಿ. ಚಿದಂಬರಂ, “ಭಾರತದ ಗಡಿಯಿಂದ ಚೀನಾ ಸೇನೆಗಳ ಹಿಂತಗೆತ ಸ್ವಾಗತಾರ್ಹ. ಆದರೆ, ಚೀನಾದ ಸೈನ್ಯ ಭಾರತದ ಯಾವ ಭೂ ಭಾಗದಿಂದ ಹಿಂದೆ ಸರಿದಿದೆ? ಈಗ ಅವರು ಇರುವ ಸ್ಥಳ ಯಾವುದು? ಅದೇ ರೀತಿ ಭಾರತೀಯ ಪಡೆಗಳನ್ನು ಬೇರ್ಪಡಿಸಿದ ಸ್ಥಳ ಯಾವುದು?” ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಮತ್ತೊಂದು ಟ್ವೀಟ್‌ನಲ್ಲಿ “ಜೂನ್ 15 ರಂದು ಏನಾಯಿತು? ಭಾರತ-ಚೀನಾ ಸೈನಿಕರ ನಡುವೆ ಯಾವ ಪ್ರದೇಶದಲ್ಲಿ ಸಂಘರ್ಷ ಉಂಟಾಗಿತ್ತು? ಚೀನಾ ಅಥವಾ ಅಥವಾ ಭಾರತೀಯ ಸೈನಿಕರ ಪೈಕಿ ಅಂತಾರಾಷ್ಟ್ರೀಯ ಗಡಿಯನ್ನು ಉಲ್ಲಂಘಿಸಿ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋದವರು ಯಾರು? ಈ ಎಲ್ಲಾ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಉತ್ತರ ನೀಡಲಿ. ಏಕೆಂದರೆ ದೇಶದ ಜನ ಇದರ ಬಗ್ಗೆ ಮಾಹಿತಿಯ ನಿರೀಕ್ಷೆಯಲ್ಲಿದ್ದಾರೆ” ಎಂದಿದ್ದಾರೆ.


ಇದನ್ನೂ ಓದಿ : ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...