Homeಮುಖಪುಟಚೀನಾ ಸೇನೆ ಹಿನ್ನಡೆದಿದ್ದು ಸ್ವಾಗತಾರ್ಹ. ಹಿನ್ನಡೆದ ಪ್ರದೇಶದ ಬಗ್ಗೆ ಸ್ಪಷ್ಟನೆ ಕೊಡಿ: ಪಿ ಚಿದಂಬರಂ

ಚೀನಾ ಸೇನೆ ಹಿನ್ನಡೆದಿದ್ದು ಸ್ವಾಗತಾರ್ಹ. ಹಿನ್ನಡೆದ ಪ್ರದೇಶದ ಬಗ್ಗೆ ಸ್ಪಷ್ಟನೆ ಕೊಡಿ: ಪಿ ಚಿದಂಬರಂ

"ಭಾರತದ ಭೂಪ್ರದೇಶವನ್ನು ಚೀನಾ ಸೇನೆ ಕಬಳಿಸಿಲ್ಲ. ನಮ್ಮ ನೆಲದಲ್ಲಿ ಡ್ಯ್ರಾಗನ್ ಸೇನೆ ಇಲ್ಲ" ಎಂದಿದ್ದರು. ಮೋದಿ ಅವರ ಈ ಹೇಳಿಕೆ ಭಾರೀ ವಿವಾದಕ್ಕೆ ಈಡಾಗಿತ್ತು. ಆದರೆ, ಇದೀಗ ಮತ್ತೊಂದು ಮಾಹಿತಿಯನ್ನು ಹೊರ ಹಾಕುತ್ತಿರುವ ಕೇಂದ್ರ ಸರ್ಕಾರ, "ಚೀನಾ ಸೇನೆ ಭಾರತದ ಭೂ ಭಾಗದಿಂದ ಹಿಂದಕ್ಕೆ ಸರಿದಿದೆ" ಎಂದು ಹೇಳುತ್ತಿದೆ.

- Advertisement -
- Advertisement -

ಇಂಡೋ-ಚೀನಾ ಗಡಿಯಿಂದ, ಚೀನಾ ಸೇನೆ ಹಿನ್ನಡೆದಿದ್ದು ಸ್ವಾಗತಾರ್ಹ. ಆದರೆ, ಚೀನಾ ಸೇನೆ ಯಾವ ಪ್ರದೇಶದಿಂದ ಹಿಂದೆ ಸರಿದಿದೆ? ಎಂದು ಯಾರಾದರೂ ಸ್ಪಷ್ಟಪಡಿಸಲಿ ಎಂದು ಕೇಂದ್ರ ಸರ್ಕಾರವನ್ನು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪ್ರಶ್ನೆ ಮಾಡಿದ್ದಾರೆ.

ಈ ಹಿಂದೆ ಇಂಡೋ-ಚೀನಾ ಗಡಿ ಪ್ರದೇಶವಾದ ಗಾಲ್ವಾನ್‌ ಕಣಿವೆಯಲ್ಲಿ ಎರಡೂ ದೇಶದ ಸೈನಿಕರ ನಡುವೆ ಸಂಘರ್ಷ ಉಂಟಾಗಿತ್ತು. ಈ ಸಂಘರ್ಷದಲ್ಲಿ ಭಾರತದ 20 ಜನ ಸೈನಿಕರನ್ನು ಚೀನಾದ  ಸೇನೆ ಹತ್ಯೆ ಮಾಡಿತ್ತು. ಆದರೆ, ಈ ಸಂಘರ್ಷದ ನಂತರ ಸರ್ವ ಪಕ್ಷಗಳ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, “ಭಾರತದ ಭೂಪ್ರದೇಶವನ್ನು ಚೀನಾ ಸೇನೆ ಕಬಳಿಸಿಲ್ಲ. ನಮ್ಮ ನೆಲದಲ್ಲಿ ಡ್ಯ್ರಾಗನ್ ಸೇನೆ ಇಲ್ಲ” ಎಂದಿದ್ದರು.

ಮೋದಿ ಅವರ ಈ ಹೇಳಿಕೆ ಭಾರೀ ವಿವಾದಕ್ಕೆ ಈಡಾಗಿತ್ತು. ಆದರೆ, ಇದೀಗ ಮತ್ತೊಂದು ಮಾಹಿತಿಯನ್ನು ಹೊರ ಹಾಕುತ್ತಿರುವ ಕೇಂದ್ರ ಸರ್ಕಾರ, “ಚೀನಾ ಸೇನೆ ಭಾರತದ ಭೂ ಭಾಗದಿಂದ ಹಿಂದಕ್ಕೆ ಸರಿದಿದೆ” ಎಂದು ಹೇಳುತ್ತಿದೆ.

ಇದೇ ಕಾರಣಕ್ಕೆ ಟ್ವೀಟ್‌ ಮೂಲಕ ಪ್ರಶ್ನೆ ಮಾಡಿರುವ ಮಾಜಿ ಕಣಕಾಸು ಸಚಿವ ಪಿ. ಚಿದಂಬರಂ, “ಭಾರತದ ಗಡಿಯಿಂದ ಚೀನಾ ಸೇನೆಗಳ ಹಿಂತಗೆತ ಸ್ವಾಗತಾರ್ಹ. ಆದರೆ, ಚೀನಾದ ಸೈನ್ಯ ಭಾರತದ ಯಾವ ಭೂ ಭಾಗದಿಂದ ಹಿಂದೆ ಸರಿದಿದೆ? ಈಗ ಅವರು ಇರುವ ಸ್ಥಳ ಯಾವುದು? ಅದೇ ರೀತಿ ಭಾರತೀಯ ಪಡೆಗಳನ್ನು ಬೇರ್ಪಡಿಸಿದ ಸ್ಥಳ ಯಾವುದು?” ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಮತ್ತೊಂದು ಟ್ವೀಟ್‌ನಲ್ಲಿ “ಜೂನ್ 15 ರಂದು ಏನಾಯಿತು? ಭಾರತ-ಚೀನಾ ಸೈನಿಕರ ನಡುವೆ ಯಾವ ಪ್ರದೇಶದಲ್ಲಿ ಸಂಘರ್ಷ ಉಂಟಾಗಿತ್ತು? ಚೀನಾ ಅಥವಾ ಅಥವಾ ಭಾರತೀಯ ಸೈನಿಕರ ಪೈಕಿ ಅಂತಾರಾಷ್ಟ್ರೀಯ ಗಡಿಯನ್ನು ಉಲ್ಲಂಘಿಸಿ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋದವರು ಯಾರು? ಈ ಎಲ್ಲಾ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಉತ್ತರ ನೀಡಲಿ. ಏಕೆಂದರೆ ದೇಶದ ಜನ ಇದರ ಬಗ್ಗೆ ಮಾಹಿತಿಯ ನಿರೀಕ್ಷೆಯಲ್ಲಿದ್ದಾರೆ” ಎಂದಿದ್ದಾರೆ.


ಇದನ್ನೂ ಓದಿ : ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...