Homeಮುಖಪುಟವಿರೋಧ ಪಕ್ಷದಲ್ಲಿದ್ದಾಗ ಚೀನಾ ವಿರುದ್ಧ ಕೆಂಡಕಾರುತ್ತಿದ್ದ ಪ್ರಧಾನಿ ಈಗ ಏನು ಮಾಡುತ್ತಿದ್ದಾರೆ?: ಮೋದಿ ವಿರುದ್ಧ ಸಿಬಲ್...

ವಿರೋಧ ಪಕ್ಷದಲ್ಲಿದ್ದಾಗ ಚೀನಾ ವಿರುದ್ಧ ಕೆಂಡಕಾರುತ್ತಿದ್ದ ಪ್ರಧಾನಿ ಈಗ ಏನು ಮಾಡುತ್ತಿದ್ದಾರೆ?: ಮೋದಿ ವಿರುದ್ಧ ಸಿಬಲ್ ವಾಗ್ದಾಳಿ

- Advertisement -
- Advertisement -

ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಮೇಲೆ ಹಕ್ಕು ಸಾಧಿಸುವ ಚೀನಾ “ಸ್ಟ್ಯಾಂಡರ್ಡ್ ಮ್ಯಾಪ್” ಬಿಡುಗಡೆ ಮಾಡಿದೆ. ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಾತನಾಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಮತ್ತೊಂದೆಡೆ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರು ಅರುಣಾಚಲ ಪ್ರದೇಶದ ಮೇಲೆ ಚೀನಾ ಹಕ್ಕು ಪ್ರತಿಪಾದಿಸುತ್ತಿರುವುದು ಹೊಸ ವಿಷಯವಲ್ಲ ಎಂದು ಹೇಳಿದ್ದಾರೆ.

ANI ಸುದ್ದಿ ಸಂಸ್ಥೆಯ ಸಂದರ್ಶನದಲ್ಲಿ ಮಾತನಾಡಿರುವ ಅವರು, ”ಅಕ್ಸಾಯ್ ಚಿನ್ ಹಲವು ವರ್ಷಗಳಿಂದ ಚೀನಾದ ಅಡಿಯಲ್ಲಿದೆ ಎಂದು ನಮಗೆ ಈಗಾಗಲೇ ಗೊತ್ತಿದೆ… ಅದು ಹೊಸ ವಿಷಯವಲ್ಲ. ಅರುಣಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಚೀನಾದ ಹಕ್ಕು ಹೊಸ ವಿಷಯವಲ್ಲ” ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ವಿರುದ್ಧ ಕಿಡಿಕಾರಿರುವ ಸಿಬಲ್, ”ಪ್ರಧಾನಿ ಅವರು ವಿರೋಧ ಪಕ್ಷದಲ್ಲಿದ್ದಾಗ ಚೀನಾದ ವಿರುದ್ಧ ಕೆಂಡಕಾರುತ್ತಿದ್ದರು. ಆದರೆ ಈಗ ಈ ಮಾತುಕತೆ ನಡೆಯುತ್ತಿರುವುದು ಕೇಂದ್ರದಲ್ಲಿಯೇ ಕಾಣಿಸುತ್ತಿದೆ. ಅದೇ ಬದಲಾವಣೆ” ಎಂದು ವ್ಯಂಗ್ಯ ಮಾಡಿದ್ದಾರೆ.

”ವಿದೇಶಾಂಗ ವ್ಯವಹಾರಗಳ ಸಚಿವ (ಎಸ್ ಜೈಶಂಕರ್) ಸ್ವತಃ ಚೀನಾ ನಮಗಿಂತ ದೊಡ್ಡ ಆರ್ಥಿಕ ಶಕ್ತಿ ಹೊಂದಿದೆ ಎಂದು ಹೇಳಿದ್ದಾರೆ… ಈ ಹೇಳಿಕೆಯು ನಮಗೆ ಹೆಚ್ಚಿನ ಸಂಧಾನ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ತೋರಿಸುತ್ತದೆ. ಹಲವು ಹಂತಗಳಲ್ಲಿ ಮಾತುಕತೆಗಳು ನಡೆದಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವರು ಹೇಳುತ್ತಾರೆ, ಆದರೆ ಚೀನಾದ ಸೇನಾಪಡೆ ಹಿಂದೆ ಸರಿದಿಲ್ಲ” ಎಂದು ಸಿಬಲ್ ಹೇಳಿದರು.

”ವಿದೇಶಾಂಗ ಸಚಿವರು, ಇದು ಆಕ್ಷೇಪಾರ್ಹ ಇದನ್ನು ನಾವು ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಆಗಾಗ್ಗೆ ಹೇಳುತ್ತಾರೆ, ಇದು ಸರಿ … ಆದರೆ ಹೇಳಿಕೆಗಳನ್ನು ನೀಡುವುದರಿಂದ ಪರಿಹಾರ ಸಿಗುವುದಿಲ್ಲ… ನಾವು ದೊಡ್ಡ ಆರ್ಥಿಕ ಶಕ್ತಿಯಾದಾಗ ಪರಿಹಾರವನ್ನು ಸಾಧಿಸಬಹುದು. ಆಗ ಮಾತ್ರ ನೀವು ಅವರೊಂದಿಗೆ ಸಮಾನವಾಗಿ ಮಾತನಾಡಬಹುದು”’ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.

ಇದನ್ನೂ ಓದಿ: ಚೀನಾ ಮ್ಯಾಪ್‌ ”ತುಂಬಾ ಗಂಭೀರ” ವಿಚಾರ, ಪ್ರಧಾನಿ ಮಾತನಾಡಲೇಬೇಕು: ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...