Homeಮುಖಪುಟ'ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..'; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

‘ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..’; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

- Advertisement -
- Advertisement -

ರಾಜ್ಯದ ಗಡಿಯ ಬಳಿ ಚೀನಾ ನಿರ್ಮಿಸುತ್ತಿರುವ ಬೃಹತ್ ಅಣೆಕಟ್ಟು ಭಾರತಕ್ಕೆ ನೀರಿನ ಬಾಂಬ್ ಆಗಿದ್ದು, ನಮ್ಮ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡಬಹುದು ಎಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮಂಗಳವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬ್ರಹ್ಮಪುತ್ರ ನದಿಯ ಟಿಬೆಟಿಯನ್ ಹೆಸರಾದ ಯಾರ್ಲುಂಗ್ ತ್ಸಾಂಗ್ಪೊ ನದಿಯ ಮೇಲೆ ನಿರ್ಮಿಸಲಾಗಿರುವ ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆಯು ಗಂಭೀರ ಕಳವಳಕಾರಿ ವಿಷಯವಾಗಿದೆ. ಏಕೆಂದರೆ, ಚೀನಾ ಅಂತರರಾಷ್ಟ್ರೀಯ ಜಲ ಒಪ್ಪಂದಕ್ಕೆ ಸಹಿ ಹಾಕಿಲ್ಲ, ಅದು ಅಂತರರಾಷ್ಟ್ರೀಯ ಮಾನದಂಡಗಳನ್ನು ಪಾಲಿಸುವಂತೆ ಒತ್ತಾಯಿಸಬಹುದಿತ್ತು ಎಂದು ಹೇಳಿದ್ದಾರೆ.

“ನಾವು ಚೀನಾವನ್ನು ನಂಬಲು ಸಾಧ್ಯವಿಲ್ಲ. ಅವರು ಏನು ಮಾಡುತ್ತಾರೆಂದು ಯಾರಿಗೂ ತಿಳಿದಿಲ್ಲ” ಎಂದು ಖಂಡು ಸಂದರ್ಶನದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಚೀನಾದಿಂದ ಬರುವ ಮಿಲಿಟರಿ ಬೆದರಿಕೆಯನ್ನು ಬದಿಗಿಟ್ಟರೆ, ಇದು ಬೇರೇಯದಕ್ಕಿಂತಲೂ ದೊಡ್ಡ ಸಮಸ್ಯೆ ಎಂದು ನನಗೆ ತೋರುತ್ತದೆ. ಇದು ನಮ್ಮ ಬುಡಕಟ್ಟು ಜನಾಂಗ ಮತ್ತು ನಮ್ಮ ಜೀವನೋಪಾಯಕ್ಕೆ ಅಸ್ತಿತ್ವದ ಬೆದರಿಕೆಯನ್ನುಂಟುಮಾಡಲಿದೆ; ಇದು ತುಂಬಾ ಗಂಭೀರವಾಗಿದೆ. ಏಕೆಂದರೆ, ಚೀನಾ ಇದನ್ನು ಒಂದು ರೀತಿಯ ‘ವಾಟರ್ ಬಾಂಬ್’ ಆಗಿಯೂ ಬಳಸಬಹುದು” ಎಂದು ಅವರು ಹೇಳಿದರು.

ಚೀನಾ ಅಂತರರಾಷ್ಟ್ರೀಯ ನೀರು ಹಂಚಿಕೆ ಒಪ್ಪಂದಗಳಿಗೆ ಸಹಿ ಹಾಕಿದ್ದರೆ, ಈ ಯೋಜನೆಯು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಬಾಂಗ್ಲಾದೇಶದ ಬೇಸಿಗೆಯ ಪ್ರವಾಹವನ್ನು ತಡೆಯುವುದರಿಂದ ತಪ್ಪಿಸಬಹುದು ಎಂದು ಮುಖ್ಯಮಂತ್ರಿ ಹೇಳಿದರು.

“ಆದರೆ, ಚೀನಾ ಸಹಿ ಹಾಕಿಲ್ಲ, ಅದೇ ನಮಗೆ ಸಮಸ್ಯೆ… ಅಣೆಕಟ್ಟು ನಿರ್ಮಿಸಿ ಅವರು ಇದ್ದಕ್ಕಿದ್ದಂತೆ ನೀರನ್ನು ಬಿಡುಗಡೆ ಮಾಡಿದರೆ, ನಮ್ಮ ಇಡೀ ಸಿಯಾಂಗ್ ಬೆಲ್ಟ್ ನಾಶವಾಗುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಆದಿ ಬುಡಕಟ್ಟು ಮತ್ತು ಅಂತಹುದೇ ಗುಂಪುಗಳು ಸಮಸ್ಯೆಗೆ ಸಿಲುಕುತ್ತವೆ. ಅವರ ಎ;f; ಆಸ್ತಿ, ಭೂಮಿ ಮತ್ತು ವಿಶೇಷವಾಗಿ ಮಾನವ ಜೀವನವು ವಿನಾಶಕಾರಿ ಪರಿಣಾಮಗಳನ್ನು ಅನುಭವಿಸುತ್ತದೆ” ಎಂದು ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಭಾರತ ಸರ್ಕಾರದೊಂದಿಗೆ ಚರ್ಚೆಯ ನಂತರ, ರಾಜ್ಯ ಸರ್ಕಾರವು ಸಿಯಾಂಗ್ ಅಪ್ಪರ್ ಬಹುಪಯೋಗಿ ಯೋಜನೆ ಎಂಬ ಯೋಜನೆಯನ್ನು ಹೊಂದಿದೆ ಎಂದು ಅರುಣಾಚಲ ಮುಖ್ಯಮಂತ್ರಿ ತಿಳಿಸಿದರು. ಇದು ರಕ್ಷಣಾ ಕಾರ್ಯವಿಧಾನವಾಗಿ ಕಾರ್ಯನಿರ್ವಹಿಸುತ್ತದೆ, ನೀರಿನ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದರು.

“ಚೀನಾ ತನ್ನ ಕಡೆಯಿಂದ ಕೆಲಸ ಆರಂಭಿಸಲಿದೆ, ಅಥವಾ ಈಗಾಗಲೇ ಆರಂಭಿಸಿದೆ ಎಂದು ನಾನು ನಂಬುತ್ತೇನೆ. ಆದರೆ, ಅವರು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ದೀರ್ಘಾವಧಿಯಲ್ಲಿ, ಅಣೆಕಟ್ಟು ಪೂರ್ಣಗೊಂಡರೆ, ನಮ್ಮ ಸಿಯಾಂಗ್ ಮತ್ತು ಬ್ರಹ್ಮಪುತ್ರ ನದಿಗಳು ಗಣನೀಯವಾಗಿ ಒಣಗಬಹುದು” ಎಂದು ಅವರು ಹೇಳಿದರು.

ಭಾರತ ಸರ್ಕಾರವು ತನ್ನ ಯೋಜನೆಯನ್ನು ಯೋಜಿಸಿದಂತೆ ಪೂರ್ಣಗೊಳಿಸಲು ಸಾಧ್ಯವಾದರೆ, ಅದು ತನ್ನದೇ ಆದ ಅಣೆಕಟ್ಟಿನ ನೀರಿನ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಚೀನಾ ಭವಿಷ್ಯದಲ್ಲಿ ನೀರು ಬಿಡುಗಡೆ ಮಾಡಿದರೆ, ಖಂಡಿತವಾಗಿಯೂ ಪ್ರವಾಹ ಉಂಟಾಗುತ್ತದೆ. ಆದರೆ ಅದನ್ನು ನಿಯಂತ್ರಿಸಬಹುದು ಎಂದು ಖಂಡು ಹೇಳಿದರು.

ಮಾರ್ಚ್‌ನಲ್ಲಿ, ಕೇಂದ್ರವು ಬ್ರಹ್ಮಪುತ್ರ ನದಿಗೆ ಸಂಬಂಧಿಸಿದ ಎಲ್ಲ ಬೆಳವಣಿಗೆಗಳನ್ನು ‘ಎಚ್ಚರಿಕೆಯಿಂದ’ ಮೇಲ್ವಿಚಾರಣೆ ಮಾಡುತ್ತಿದೆ, ಇದರಲ್ಲಿ ಚೀನಾದ ಜಲವಿದ್ಯುತ್ ಯೋಜನೆ ನಿರ್ಮಿಸುವ ಯೋಜನೆಗಳು ಸೇರಿವೆ. ದೇಶದ ಹಿತಾಸಕ್ತಿಗಳನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ.

2021 ರಲ್ಲಿ ಚೀನಾದ ಪ್ರಧಾನಿ ಲಿ ಕೆಕಿಯಾಂಗ್ ಅವರು ಗಡಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಯಾರ್ಲುಂಗ್ ತ್ಸಾಂಗ್ಪೊ ಅಣೆಕಟ್ಟು ಯೋಜನೆಯನ್ನು ಘೋಷಿಸಲಾಯಿತು.

2024 ರಲ್ಲಿ ಚೀನಾ ಐದು ವರ್ಷಗಳ, $137 ಶತಕೋಟಿ ಯೋಜನೆಗೆ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ, ಇದು 60,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ನಿರೀಕ್ಷೆಯಿದೆ, ಇದು ವಿಶ್ವದ ಅತಿದೊಡ್ಡ ಜಲವಿದ್ಯುತ್ ಅಣೆಕಟ್ಟಾಗಿದೆ.

ಈ ಯೋಜನೆಯು ಪರಿಸರ ಸೂಕ್ಷ್ಮ ಹಿಮಾಲಯ ಪ್ರದೇಶದಲ್ಲಿದೆ, ಇದು ಆಗಾಗ್ಗೆ ಭೂಕಂಪಗಳು ಸಂಭವಿಸುವ ಟೆಕ್ಟೋನಿಕ್ ಪ್ಲೇಟ್ ಗಡಿಯಲ್ಲಿ ನೆಲೆಗೊಂಡಿದೆ ಎಂಬುದು ಆತಂಕಕಾರಿ ವಿಷಯವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...