Homeಮುಖಪುಟ'ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..'; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

‘ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..’; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

- Advertisement -
- Advertisement -

ರಾಜ್ಯದ ಗಡಿಯ ಬಳಿ ಚೀನಾ ನಿರ್ಮಿಸುತ್ತಿರುವ ಬೃಹತ್ ಅಣೆಕಟ್ಟು ಭಾರತಕ್ಕೆ ನೀರಿನ ಬಾಂಬ್ ಆಗಿದ್ದು, ನಮ್ಮ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡಬಹುದು ಎಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮಂಗಳವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬ್ರಹ್ಮಪುತ್ರ ನದಿಯ ಟಿಬೆಟಿಯನ್ ಹೆಸರಾದ ಯಾರ್ಲುಂಗ್ ತ್ಸಾಂಗ್ಪೊ ನದಿಯ ಮೇಲೆ ನಿರ್ಮಿಸಲಾಗಿರುವ ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆಯು ಗಂಭೀರ ಕಳವಳಕಾರಿ ವಿಷಯವಾಗಿದೆ. ಏಕೆಂದರೆ, ಚೀನಾ ಅಂತರರಾಷ್ಟ್ರೀಯ ಜಲ ಒಪ್ಪಂದಕ್ಕೆ ಸಹಿ ಹಾಕಿಲ್ಲ, ಅದು ಅಂತರರಾಷ್ಟ್ರೀಯ ಮಾನದಂಡಗಳನ್ನು ಪಾಲಿಸುವಂತೆ ಒತ್ತಾಯಿಸಬಹುದಿತ್ತು ಎಂದು ಹೇಳಿದ್ದಾರೆ.

“ನಾವು ಚೀನಾವನ್ನು ನಂಬಲು ಸಾಧ್ಯವಿಲ್ಲ. ಅವರು ಏನು ಮಾಡುತ್ತಾರೆಂದು ಯಾರಿಗೂ ತಿಳಿದಿಲ್ಲ” ಎಂದು ಖಂಡು ಸಂದರ್ಶನದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಚೀನಾದಿಂದ ಬರುವ ಮಿಲಿಟರಿ ಬೆದರಿಕೆಯನ್ನು ಬದಿಗಿಟ್ಟರೆ, ಇದು ಬೇರೇಯದಕ್ಕಿಂತಲೂ ದೊಡ್ಡ ಸಮಸ್ಯೆ ಎಂದು ನನಗೆ ತೋರುತ್ತದೆ. ಇದು ನಮ್ಮ ಬುಡಕಟ್ಟು ಜನಾಂಗ ಮತ್ತು ನಮ್ಮ ಜೀವನೋಪಾಯಕ್ಕೆ ಅಸ್ತಿತ್ವದ ಬೆದರಿಕೆಯನ್ನುಂಟುಮಾಡಲಿದೆ; ಇದು ತುಂಬಾ ಗಂಭೀರವಾಗಿದೆ. ಏಕೆಂದರೆ, ಚೀನಾ ಇದನ್ನು ಒಂದು ರೀತಿಯ ‘ವಾಟರ್ ಬಾಂಬ್’ ಆಗಿಯೂ ಬಳಸಬಹುದು” ಎಂದು ಅವರು ಹೇಳಿದರು.

ಚೀನಾ ಅಂತರರಾಷ್ಟ್ರೀಯ ನೀರು ಹಂಚಿಕೆ ಒಪ್ಪಂದಗಳಿಗೆ ಸಹಿ ಹಾಕಿದ್ದರೆ, ಈ ಯೋಜನೆಯು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಬಾಂಗ್ಲಾದೇಶದ ಬೇಸಿಗೆಯ ಪ್ರವಾಹವನ್ನು ತಡೆಯುವುದರಿಂದ ತಪ್ಪಿಸಬಹುದು ಎಂದು ಮುಖ್ಯಮಂತ್ರಿ ಹೇಳಿದರು.

“ಆದರೆ, ಚೀನಾ ಸಹಿ ಹಾಕಿಲ್ಲ, ಅದೇ ನಮಗೆ ಸಮಸ್ಯೆ… ಅಣೆಕಟ್ಟು ನಿರ್ಮಿಸಿ ಅವರು ಇದ್ದಕ್ಕಿದ್ದಂತೆ ನೀರನ್ನು ಬಿಡುಗಡೆ ಮಾಡಿದರೆ, ನಮ್ಮ ಇಡೀ ಸಿಯಾಂಗ್ ಬೆಲ್ಟ್ ನಾಶವಾಗುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಆದಿ ಬುಡಕಟ್ಟು ಮತ್ತು ಅಂತಹುದೇ ಗುಂಪುಗಳು ಸಮಸ್ಯೆಗೆ ಸಿಲುಕುತ್ತವೆ. ಅವರ ಎ;f; ಆಸ್ತಿ, ಭೂಮಿ ಮತ್ತು ವಿಶೇಷವಾಗಿ ಮಾನವ ಜೀವನವು ವಿನಾಶಕಾರಿ ಪರಿಣಾಮಗಳನ್ನು ಅನುಭವಿಸುತ್ತದೆ” ಎಂದು ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಭಾರತ ಸರ್ಕಾರದೊಂದಿಗೆ ಚರ್ಚೆಯ ನಂತರ, ರಾಜ್ಯ ಸರ್ಕಾರವು ಸಿಯಾಂಗ್ ಅಪ್ಪರ್ ಬಹುಪಯೋಗಿ ಯೋಜನೆ ಎಂಬ ಯೋಜನೆಯನ್ನು ಹೊಂದಿದೆ ಎಂದು ಅರುಣಾಚಲ ಮುಖ್ಯಮಂತ್ರಿ ತಿಳಿಸಿದರು. ಇದು ರಕ್ಷಣಾ ಕಾರ್ಯವಿಧಾನವಾಗಿ ಕಾರ್ಯನಿರ್ವಹಿಸುತ್ತದೆ, ನೀರಿನ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದರು.

“ಚೀನಾ ತನ್ನ ಕಡೆಯಿಂದ ಕೆಲಸ ಆರಂಭಿಸಲಿದೆ, ಅಥವಾ ಈಗಾಗಲೇ ಆರಂಭಿಸಿದೆ ಎಂದು ನಾನು ನಂಬುತ್ತೇನೆ. ಆದರೆ, ಅವರು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ದೀರ್ಘಾವಧಿಯಲ್ಲಿ, ಅಣೆಕಟ್ಟು ಪೂರ್ಣಗೊಂಡರೆ, ನಮ್ಮ ಸಿಯಾಂಗ್ ಮತ್ತು ಬ್ರಹ್ಮಪುತ್ರ ನದಿಗಳು ಗಣನೀಯವಾಗಿ ಒಣಗಬಹುದು” ಎಂದು ಅವರು ಹೇಳಿದರು.

ಭಾರತ ಸರ್ಕಾರವು ತನ್ನ ಯೋಜನೆಯನ್ನು ಯೋಜಿಸಿದಂತೆ ಪೂರ್ಣಗೊಳಿಸಲು ಸಾಧ್ಯವಾದರೆ, ಅದು ತನ್ನದೇ ಆದ ಅಣೆಕಟ್ಟಿನ ನೀರಿನ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಚೀನಾ ಭವಿಷ್ಯದಲ್ಲಿ ನೀರು ಬಿಡುಗಡೆ ಮಾಡಿದರೆ, ಖಂಡಿತವಾಗಿಯೂ ಪ್ರವಾಹ ಉಂಟಾಗುತ್ತದೆ. ಆದರೆ ಅದನ್ನು ನಿಯಂತ್ರಿಸಬಹುದು ಎಂದು ಖಂಡು ಹೇಳಿದರು.

ಮಾರ್ಚ್‌ನಲ್ಲಿ, ಕೇಂದ್ರವು ಬ್ರಹ್ಮಪುತ್ರ ನದಿಗೆ ಸಂಬಂಧಿಸಿದ ಎಲ್ಲ ಬೆಳವಣಿಗೆಗಳನ್ನು ‘ಎಚ್ಚರಿಕೆಯಿಂದ’ ಮೇಲ್ವಿಚಾರಣೆ ಮಾಡುತ್ತಿದೆ, ಇದರಲ್ಲಿ ಚೀನಾದ ಜಲವಿದ್ಯುತ್ ಯೋಜನೆ ನಿರ್ಮಿಸುವ ಯೋಜನೆಗಳು ಸೇರಿವೆ. ದೇಶದ ಹಿತಾಸಕ್ತಿಗಳನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ.

2021 ರಲ್ಲಿ ಚೀನಾದ ಪ್ರಧಾನಿ ಲಿ ಕೆಕಿಯಾಂಗ್ ಅವರು ಗಡಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಯಾರ್ಲುಂಗ್ ತ್ಸಾಂಗ್ಪೊ ಅಣೆಕಟ್ಟು ಯೋಜನೆಯನ್ನು ಘೋಷಿಸಲಾಯಿತು.

2024 ರಲ್ಲಿ ಚೀನಾ ಐದು ವರ್ಷಗಳ, $137 ಶತಕೋಟಿ ಯೋಜನೆಗೆ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ, ಇದು 60,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ನಿರೀಕ್ಷೆಯಿದೆ, ಇದು ವಿಶ್ವದ ಅತಿದೊಡ್ಡ ಜಲವಿದ್ಯುತ್ ಅಣೆಕಟ್ಟಾಗಿದೆ.

ಈ ಯೋಜನೆಯು ಪರಿಸರ ಸೂಕ್ಷ್ಮ ಹಿಮಾಲಯ ಪ್ರದೇಶದಲ್ಲಿದೆ, ಇದು ಆಗಾಗ್ಗೆ ಭೂಕಂಪಗಳು ಸಂಭವಿಸುವ ಟೆಕ್ಟೋನಿಕ್ ಪ್ಲೇಟ್ ಗಡಿಯಲ್ಲಿ ನೆಲೆಗೊಂಡಿದೆ ಎಂಬುದು ಆತಂಕಕಾರಿ ವಿಷಯವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...