Homeಮುಖಪುಟ'ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..'; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

‘ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..’; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

- Advertisement -
- Advertisement -

ರಾಜ್ಯದ ಗಡಿಯ ಬಳಿ ಚೀನಾ ನಿರ್ಮಿಸುತ್ತಿರುವ ಬೃಹತ್ ಅಣೆಕಟ್ಟು ಭಾರತಕ್ಕೆ ನೀರಿನ ಬಾಂಬ್ ಆಗಿದ್ದು, ನಮ್ಮ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡಬಹುದು ಎಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮಂಗಳವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬ್ರಹ್ಮಪುತ್ರ ನದಿಯ ಟಿಬೆಟಿಯನ್ ಹೆಸರಾದ ಯಾರ್ಲುಂಗ್ ತ್ಸಾಂಗ್ಪೊ ನದಿಯ ಮೇಲೆ ನಿರ್ಮಿಸಲಾಗಿರುವ ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆಯು ಗಂಭೀರ ಕಳವಳಕಾರಿ ವಿಷಯವಾಗಿದೆ. ಏಕೆಂದರೆ, ಚೀನಾ ಅಂತರರಾಷ್ಟ್ರೀಯ ಜಲ ಒಪ್ಪಂದಕ್ಕೆ ಸಹಿ ಹಾಕಿಲ್ಲ, ಅದು ಅಂತರರಾಷ್ಟ್ರೀಯ ಮಾನದಂಡಗಳನ್ನು ಪಾಲಿಸುವಂತೆ ಒತ್ತಾಯಿಸಬಹುದಿತ್ತು ಎಂದು ಹೇಳಿದ್ದಾರೆ.

“ನಾವು ಚೀನಾವನ್ನು ನಂಬಲು ಸಾಧ್ಯವಿಲ್ಲ. ಅವರು ಏನು ಮಾಡುತ್ತಾರೆಂದು ಯಾರಿಗೂ ತಿಳಿದಿಲ್ಲ” ಎಂದು ಖಂಡು ಸಂದರ್ಶನದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಚೀನಾದಿಂದ ಬರುವ ಮಿಲಿಟರಿ ಬೆದರಿಕೆಯನ್ನು ಬದಿಗಿಟ್ಟರೆ, ಇದು ಬೇರೇಯದಕ್ಕಿಂತಲೂ ದೊಡ್ಡ ಸಮಸ್ಯೆ ಎಂದು ನನಗೆ ತೋರುತ್ತದೆ. ಇದು ನಮ್ಮ ಬುಡಕಟ್ಟು ಜನಾಂಗ ಮತ್ತು ನಮ್ಮ ಜೀವನೋಪಾಯಕ್ಕೆ ಅಸ್ತಿತ್ವದ ಬೆದರಿಕೆಯನ್ನುಂಟುಮಾಡಲಿದೆ; ಇದು ತುಂಬಾ ಗಂಭೀರವಾಗಿದೆ. ಏಕೆಂದರೆ, ಚೀನಾ ಇದನ್ನು ಒಂದು ರೀತಿಯ ‘ವಾಟರ್ ಬಾಂಬ್’ ಆಗಿಯೂ ಬಳಸಬಹುದು” ಎಂದು ಅವರು ಹೇಳಿದರು.

ಚೀನಾ ಅಂತರರಾಷ್ಟ್ರೀಯ ನೀರು ಹಂಚಿಕೆ ಒಪ್ಪಂದಗಳಿಗೆ ಸಹಿ ಹಾಕಿದ್ದರೆ, ಈ ಯೋಜನೆಯು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಬಾಂಗ್ಲಾದೇಶದ ಬೇಸಿಗೆಯ ಪ್ರವಾಹವನ್ನು ತಡೆಯುವುದರಿಂದ ತಪ್ಪಿಸಬಹುದು ಎಂದು ಮುಖ್ಯಮಂತ್ರಿ ಹೇಳಿದರು.

“ಆದರೆ, ಚೀನಾ ಸಹಿ ಹಾಕಿಲ್ಲ, ಅದೇ ನಮಗೆ ಸಮಸ್ಯೆ… ಅಣೆಕಟ್ಟು ನಿರ್ಮಿಸಿ ಅವರು ಇದ್ದಕ್ಕಿದ್ದಂತೆ ನೀರನ್ನು ಬಿಡುಗಡೆ ಮಾಡಿದರೆ, ನಮ್ಮ ಇಡೀ ಸಿಯಾಂಗ್ ಬೆಲ್ಟ್ ನಾಶವಾಗುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಆದಿ ಬುಡಕಟ್ಟು ಮತ್ತು ಅಂತಹುದೇ ಗುಂಪುಗಳು ಸಮಸ್ಯೆಗೆ ಸಿಲುಕುತ್ತವೆ. ಅವರ ಎ;f; ಆಸ್ತಿ, ಭೂಮಿ ಮತ್ತು ವಿಶೇಷವಾಗಿ ಮಾನವ ಜೀವನವು ವಿನಾಶಕಾರಿ ಪರಿಣಾಮಗಳನ್ನು ಅನುಭವಿಸುತ್ತದೆ” ಎಂದು ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಭಾರತ ಸರ್ಕಾರದೊಂದಿಗೆ ಚರ್ಚೆಯ ನಂತರ, ರಾಜ್ಯ ಸರ್ಕಾರವು ಸಿಯಾಂಗ್ ಅಪ್ಪರ್ ಬಹುಪಯೋಗಿ ಯೋಜನೆ ಎಂಬ ಯೋಜನೆಯನ್ನು ಹೊಂದಿದೆ ಎಂದು ಅರುಣಾಚಲ ಮುಖ್ಯಮಂತ್ರಿ ತಿಳಿಸಿದರು. ಇದು ರಕ್ಷಣಾ ಕಾರ್ಯವಿಧಾನವಾಗಿ ಕಾರ್ಯನಿರ್ವಹಿಸುತ್ತದೆ, ನೀರಿನ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದರು.

“ಚೀನಾ ತನ್ನ ಕಡೆಯಿಂದ ಕೆಲಸ ಆರಂಭಿಸಲಿದೆ, ಅಥವಾ ಈಗಾಗಲೇ ಆರಂಭಿಸಿದೆ ಎಂದು ನಾನು ನಂಬುತ್ತೇನೆ. ಆದರೆ, ಅವರು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ದೀರ್ಘಾವಧಿಯಲ್ಲಿ, ಅಣೆಕಟ್ಟು ಪೂರ್ಣಗೊಂಡರೆ, ನಮ್ಮ ಸಿಯಾಂಗ್ ಮತ್ತು ಬ್ರಹ್ಮಪುತ್ರ ನದಿಗಳು ಗಣನೀಯವಾಗಿ ಒಣಗಬಹುದು” ಎಂದು ಅವರು ಹೇಳಿದರು.

ಭಾರತ ಸರ್ಕಾರವು ತನ್ನ ಯೋಜನೆಯನ್ನು ಯೋಜಿಸಿದಂತೆ ಪೂರ್ಣಗೊಳಿಸಲು ಸಾಧ್ಯವಾದರೆ, ಅದು ತನ್ನದೇ ಆದ ಅಣೆಕಟ್ಟಿನ ನೀರಿನ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಚೀನಾ ಭವಿಷ್ಯದಲ್ಲಿ ನೀರು ಬಿಡುಗಡೆ ಮಾಡಿದರೆ, ಖಂಡಿತವಾಗಿಯೂ ಪ್ರವಾಹ ಉಂಟಾಗುತ್ತದೆ. ಆದರೆ ಅದನ್ನು ನಿಯಂತ್ರಿಸಬಹುದು ಎಂದು ಖಂಡು ಹೇಳಿದರು.

ಮಾರ್ಚ್‌ನಲ್ಲಿ, ಕೇಂದ್ರವು ಬ್ರಹ್ಮಪುತ್ರ ನದಿಗೆ ಸಂಬಂಧಿಸಿದ ಎಲ್ಲ ಬೆಳವಣಿಗೆಗಳನ್ನು ‘ಎಚ್ಚರಿಕೆಯಿಂದ’ ಮೇಲ್ವಿಚಾರಣೆ ಮಾಡುತ್ತಿದೆ, ಇದರಲ್ಲಿ ಚೀನಾದ ಜಲವಿದ್ಯುತ್ ಯೋಜನೆ ನಿರ್ಮಿಸುವ ಯೋಜನೆಗಳು ಸೇರಿವೆ. ದೇಶದ ಹಿತಾಸಕ್ತಿಗಳನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ.

2021 ರಲ್ಲಿ ಚೀನಾದ ಪ್ರಧಾನಿ ಲಿ ಕೆಕಿಯಾಂಗ್ ಅವರು ಗಡಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಯಾರ್ಲುಂಗ್ ತ್ಸಾಂಗ್ಪೊ ಅಣೆಕಟ್ಟು ಯೋಜನೆಯನ್ನು ಘೋಷಿಸಲಾಯಿತು.

2024 ರಲ್ಲಿ ಚೀನಾ ಐದು ವರ್ಷಗಳ, $137 ಶತಕೋಟಿ ಯೋಜನೆಗೆ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ, ಇದು 60,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ನಿರೀಕ್ಷೆಯಿದೆ, ಇದು ವಿಶ್ವದ ಅತಿದೊಡ್ಡ ಜಲವಿದ್ಯುತ್ ಅಣೆಕಟ್ಟಾಗಿದೆ.

ಈ ಯೋಜನೆಯು ಪರಿಸರ ಸೂಕ್ಷ್ಮ ಹಿಮಾಲಯ ಪ್ರದೇಶದಲ್ಲಿದೆ, ಇದು ಆಗಾಗ್ಗೆ ಭೂಕಂಪಗಳು ಸಂಭವಿಸುವ ಟೆಕ್ಟೋನಿಕ್ ಪ್ಲೇಟ್ ಗಡಿಯಲ್ಲಿ ನೆಲೆಗೊಂಡಿದೆ ಎಂಬುದು ಆತಂಕಕಾರಿ ವಿಷಯವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...