Homeಮುಖಪುಟ'ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..'; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

‘ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..’; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

- Advertisement -
- Advertisement -

ರಾಜ್ಯದ ಗಡಿಯ ಬಳಿ ಚೀನಾ ನಿರ್ಮಿಸುತ್ತಿರುವ ಬೃಹತ್ ಅಣೆಕಟ್ಟು ಭಾರತಕ್ಕೆ ನೀರಿನ ಬಾಂಬ್ ಆಗಿದ್ದು, ನಮ್ಮ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡಬಹುದು ಎಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮಂಗಳವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬ್ರಹ್ಮಪುತ್ರ ನದಿಯ ಟಿಬೆಟಿಯನ್ ಹೆಸರಾದ ಯಾರ್ಲುಂಗ್ ತ್ಸಾಂಗ್ಪೊ ನದಿಯ ಮೇಲೆ ನಿರ್ಮಿಸಲಾಗಿರುವ ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆಯು ಗಂಭೀರ ಕಳವಳಕಾರಿ ವಿಷಯವಾಗಿದೆ. ಏಕೆಂದರೆ, ಚೀನಾ ಅಂತರರಾಷ್ಟ್ರೀಯ ಜಲ ಒಪ್ಪಂದಕ್ಕೆ ಸಹಿ ಹಾಕಿಲ್ಲ, ಅದು ಅಂತರರಾಷ್ಟ್ರೀಯ ಮಾನದಂಡಗಳನ್ನು ಪಾಲಿಸುವಂತೆ ಒತ್ತಾಯಿಸಬಹುದಿತ್ತು ಎಂದು ಹೇಳಿದ್ದಾರೆ.

“ನಾವು ಚೀನಾವನ್ನು ನಂಬಲು ಸಾಧ್ಯವಿಲ್ಲ. ಅವರು ಏನು ಮಾಡುತ್ತಾರೆಂದು ಯಾರಿಗೂ ತಿಳಿದಿಲ್ಲ” ಎಂದು ಖಂಡು ಸಂದರ್ಶನದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಚೀನಾದಿಂದ ಬರುವ ಮಿಲಿಟರಿ ಬೆದರಿಕೆಯನ್ನು ಬದಿಗಿಟ್ಟರೆ, ಇದು ಬೇರೇಯದಕ್ಕಿಂತಲೂ ದೊಡ್ಡ ಸಮಸ್ಯೆ ಎಂದು ನನಗೆ ತೋರುತ್ತದೆ. ಇದು ನಮ್ಮ ಬುಡಕಟ್ಟು ಜನಾಂಗ ಮತ್ತು ನಮ್ಮ ಜೀವನೋಪಾಯಕ್ಕೆ ಅಸ್ತಿತ್ವದ ಬೆದರಿಕೆಯನ್ನುಂಟುಮಾಡಲಿದೆ; ಇದು ತುಂಬಾ ಗಂಭೀರವಾಗಿದೆ. ಏಕೆಂದರೆ, ಚೀನಾ ಇದನ್ನು ಒಂದು ರೀತಿಯ ‘ವಾಟರ್ ಬಾಂಬ್’ ಆಗಿಯೂ ಬಳಸಬಹುದು” ಎಂದು ಅವರು ಹೇಳಿದರು.

ಚೀನಾ ಅಂತರರಾಷ್ಟ್ರೀಯ ನೀರು ಹಂಚಿಕೆ ಒಪ್ಪಂದಗಳಿಗೆ ಸಹಿ ಹಾಕಿದ್ದರೆ, ಈ ಯೋಜನೆಯು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಬಾಂಗ್ಲಾದೇಶದ ಬೇಸಿಗೆಯ ಪ್ರವಾಹವನ್ನು ತಡೆಯುವುದರಿಂದ ತಪ್ಪಿಸಬಹುದು ಎಂದು ಮುಖ್ಯಮಂತ್ರಿ ಹೇಳಿದರು.

“ಆದರೆ, ಚೀನಾ ಸಹಿ ಹಾಕಿಲ್ಲ, ಅದೇ ನಮಗೆ ಸಮಸ್ಯೆ… ಅಣೆಕಟ್ಟು ನಿರ್ಮಿಸಿ ಅವರು ಇದ್ದಕ್ಕಿದ್ದಂತೆ ನೀರನ್ನು ಬಿಡುಗಡೆ ಮಾಡಿದರೆ, ನಮ್ಮ ಇಡೀ ಸಿಯಾಂಗ್ ಬೆಲ್ಟ್ ನಾಶವಾಗುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಆದಿ ಬುಡಕಟ್ಟು ಮತ್ತು ಅಂತಹುದೇ ಗುಂಪುಗಳು ಸಮಸ್ಯೆಗೆ ಸಿಲುಕುತ್ತವೆ. ಅವರ ಎ;f; ಆಸ್ತಿ, ಭೂಮಿ ಮತ್ತು ವಿಶೇಷವಾಗಿ ಮಾನವ ಜೀವನವು ವಿನಾಶಕಾರಿ ಪರಿಣಾಮಗಳನ್ನು ಅನುಭವಿಸುತ್ತದೆ” ಎಂದು ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಭಾರತ ಸರ್ಕಾರದೊಂದಿಗೆ ಚರ್ಚೆಯ ನಂತರ, ರಾಜ್ಯ ಸರ್ಕಾರವು ಸಿಯಾಂಗ್ ಅಪ್ಪರ್ ಬಹುಪಯೋಗಿ ಯೋಜನೆ ಎಂಬ ಯೋಜನೆಯನ್ನು ಹೊಂದಿದೆ ಎಂದು ಅರುಣಾಚಲ ಮುಖ್ಯಮಂತ್ರಿ ತಿಳಿಸಿದರು. ಇದು ರಕ್ಷಣಾ ಕಾರ್ಯವಿಧಾನವಾಗಿ ಕಾರ್ಯನಿರ್ವಹಿಸುತ್ತದೆ, ನೀರಿನ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದರು.

“ಚೀನಾ ತನ್ನ ಕಡೆಯಿಂದ ಕೆಲಸ ಆರಂಭಿಸಲಿದೆ, ಅಥವಾ ಈಗಾಗಲೇ ಆರಂಭಿಸಿದೆ ಎಂದು ನಾನು ನಂಬುತ್ತೇನೆ. ಆದರೆ, ಅವರು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ದೀರ್ಘಾವಧಿಯಲ್ಲಿ, ಅಣೆಕಟ್ಟು ಪೂರ್ಣಗೊಂಡರೆ, ನಮ್ಮ ಸಿಯಾಂಗ್ ಮತ್ತು ಬ್ರಹ್ಮಪುತ್ರ ನದಿಗಳು ಗಣನೀಯವಾಗಿ ಒಣಗಬಹುದು” ಎಂದು ಅವರು ಹೇಳಿದರು.

ಭಾರತ ಸರ್ಕಾರವು ತನ್ನ ಯೋಜನೆಯನ್ನು ಯೋಜಿಸಿದಂತೆ ಪೂರ್ಣಗೊಳಿಸಲು ಸಾಧ್ಯವಾದರೆ, ಅದು ತನ್ನದೇ ಆದ ಅಣೆಕಟ್ಟಿನ ನೀರಿನ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಚೀನಾ ಭವಿಷ್ಯದಲ್ಲಿ ನೀರು ಬಿಡುಗಡೆ ಮಾಡಿದರೆ, ಖಂಡಿತವಾಗಿಯೂ ಪ್ರವಾಹ ಉಂಟಾಗುತ್ತದೆ. ಆದರೆ ಅದನ್ನು ನಿಯಂತ್ರಿಸಬಹುದು ಎಂದು ಖಂಡು ಹೇಳಿದರು.

ಮಾರ್ಚ್‌ನಲ್ಲಿ, ಕೇಂದ್ರವು ಬ್ರಹ್ಮಪುತ್ರ ನದಿಗೆ ಸಂಬಂಧಿಸಿದ ಎಲ್ಲ ಬೆಳವಣಿಗೆಗಳನ್ನು ‘ಎಚ್ಚರಿಕೆಯಿಂದ’ ಮೇಲ್ವಿಚಾರಣೆ ಮಾಡುತ್ತಿದೆ, ಇದರಲ್ಲಿ ಚೀನಾದ ಜಲವಿದ್ಯುತ್ ಯೋಜನೆ ನಿರ್ಮಿಸುವ ಯೋಜನೆಗಳು ಸೇರಿವೆ. ದೇಶದ ಹಿತಾಸಕ್ತಿಗಳನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ.

2021 ರಲ್ಲಿ ಚೀನಾದ ಪ್ರಧಾನಿ ಲಿ ಕೆಕಿಯಾಂಗ್ ಅವರು ಗಡಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಯಾರ್ಲುಂಗ್ ತ್ಸಾಂಗ್ಪೊ ಅಣೆಕಟ್ಟು ಯೋಜನೆಯನ್ನು ಘೋಷಿಸಲಾಯಿತು.

2024 ರಲ್ಲಿ ಚೀನಾ ಐದು ವರ್ಷಗಳ, $137 ಶತಕೋಟಿ ಯೋಜನೆಗೆ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ, ಇದು 60,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ನಿರೀಕ್ಷೆಯಿದೆ, ಇದು ವಿಶ್ವದ ಅತಿದೊಡ್ಡ ಜಲವಿದ್ಯುತ್ ಅಣೆಕಟ್ಟಾಗಿದೆ.

ಈ ಯೋಜನೆಯು ಪರಿಸರ ಸೂಕ್ಷ್ಮ ಹಿಮಾಲಯ ಪ್ರದೇಶದಲ್ಲಿದೆ, ಇದು ಆಗಾಗ್ಗೆ ಭೂಕಂಪಗಳು ಸಂಭವಿಸುವ ಟೆಕ್ಟೋನಿಕ್ ಪ್ಲೇಟ್ ಗಡಿಯಲ್ಲಿ ನೆಲೆಗೊಂಡಿದೆ ಎಂಬುದು ಆತಂಕಕಾರಿ ವಿಷಯವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...