Homeಮುಖಪುಟ'ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..'; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

‘ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..’; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

- Advertisement -
- Advertisement -

ರಾಜ್ಯದ ಗಡಿಯ ಬಳಿ ಚೀನಾ ನಿರ್ಮಿಸುತ್ತಿರುವ ಬೃಹತ್ ಅಣೆಕಟ್ಟು ಭಾರತಕ್ಕೆ ನೀರಿನ ಬಾಂಬ್ ಆಗಿದ್ದು, ನಮ್ಮ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡಬಹುದು ಎಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮಂಗಳವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬ್ರಹ್ಮಪುತ್ರ ನದಿಯ ಟಿಬೆಟಿಯನ್ ಹೆಸರಾದ ಯಾರ್ಲುಂಗ್ ತ್ಸಾಂಗ್ಪೊ ನದಿಯ ಮೇಲೆ ನಿರ್ಮಿಸಲಾಗಿರುವ ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆಯು ಗಂಭೀರ ಕಳವಳಕಾರಿ ವಿಷಯವಾಗಿದೆ. ಏಕೆಂದರೆ, ಚೀನಾ ಅಂತರರಾಷ್ಟ್ರೀಯ ಜಲ ಒಪ್ಪಂದಕ್ಕೆ ಸಹಿ ಹಾಕಿಲ್ಲ, ಅದು ಅಂತರರಾಷ್ಟ್ರೀಯ ಮಾನದಂಡಗಳನ್ನು ಪಾಲಿಸುವಂತೆ ಒತ್ತಾಯಿಸಬಹುದಿತ್ತು ಎಂದು ಹೇಳಿದ್ದಾರೆ.

“ನಾವು ಚೀನಾವನ್ನು ನಂಬಲು ಸಾಧ್ಯವಿಲ್ಲ. ಅವರು ಏನು ಮಾಡುತ್ತಾರೆಂದು ಯಾರಿಗೂ ತಿಳಿದಿಲ್ಲ” ಎಂದು ಖಂಡು ಸಂದರ್ಶನದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಚೀನಾದಿಂದ ಬರುವ ಮಿಲಿಟರಿ ಬೆದರಿಕೆಯನ್ನು ಬದಿಗಿಟ್ಟರೆ, ಇದು ಬೇರೇಯದಕ್ಕಿಂತಲೂ ದೊಡ್ಡ ಸಮಸ್ಯೆ ಎಂದು ನನಗೆ ತೋರುತ್ತದೆ. ಇದು ನಮ್ಮ ಬುಡಕಟ್ಟು ಜನಾಂಗ ಮತ್ತು ನಮ್ಮ ಜೀವನೋಪಾಯಕ್ಕೆ ಅಸ್ತಿತ್ವದ ಬೆದರಿಕೆಯನ್ನುಂಟುಮಾಡಲಿದೆ; ಇದು ತುಂಬಾ ಗಂಭೀರವಾಗಿದೆ. ಏಕೆಂದರೆ, ಚೀನಾ ಇದನ್ನು ಒಂದು ರೀತಿಯ ‘ವಾಟರ್ ಬಾಂಬ್’ ಆಗಿಯೂ ಬಳಸಬಹುದು” ಎಂದು ಅವರು ಹೇಳಿದರು.

ಚೀನಾ ಅಂತರರಾಷ್ಟ್ರೀಯ ನೀರು ಹಂಚಿಕೆ ಒಪ್ಪಂದಗಳಿಗೆ ಸಹಿ ಹಾಕಿದ್ದರೆ, ಈ ಯೋಜನೆಯು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಬಾಂಗ್ಲಾದೇಶದ ಬೇಸಿಗೆಯ ಪ್ರವಾಹವನ್ನು ತಡೆಯುವುದರಿಂದ ತಪ್ಪಿಸಬಹುದು ಎಂದು ಮುಖ್ಯಮಂತ್ರಿ ಹೇಳಿದರು.

“ಆದರೆ, ಚೀನಾ ಸಹಿ ಹಾಕಿಲ್ಲ, ಅದೇ ನಮಗೆ ಸಮಸ್ಯೆ… ಅಣೆಕಟ್ಟು ನಿರ್ಮಿಸಿ ಅವರು ಇದ್ದಕ್ಕಿದ್ದಂತೆ ನೀರನ್ನು ಬಿಡುಗಡೆ ಮಾಡಿದರೆ, ನಮ್ಮ ಇಡೀ ಸಿಯಾಂಗ್ ಬೆಲ್ಟ್ ನಾಶವಾಗುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಆದಿ ಬುಡಕಟ್ಟು ಮತ್ತು ಅಂತಹುದೇ ಗುಂಪುಗಳು ಸಮಸ್ಯೆಗೆ ಸಿಲುಕುತ್ತವೆ. ಅವರ ಎ;f; ಆಸ್ತಿ, ಭೂಮಿ ಮತ್ತು ವಿಶೇಷವಾಗಿ ಮಾನವ ಜೀವನವು ವಿನಾಶಕಾರಿ ಪರಿಣಾಮಗಳನ್ನು ಅನುಭವಿಸುತ್ತದೆ” ಎಂದು ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಭಾರತ ಸರ್ಕಾರದೊಂದಿಗೆ ಚರ್ಚೆಯ ನಂತರ, ರಾಜ್ಯ ಸರ್ಕಾರವು ಸಿಯಾಂಗ್ ಅಪ್ಪರ್ ಬಹುಪಯೋಗಿ ಯೋಜನೆ ಎಂಬ ಯೋಜನೆಯನ್ನು ಹೊಂದಿದೆ ಎಂದು ಅರುಣಾಚಲ ಮುಖ್ಯಮಂತ್ರಿ ತಿಳಿಸಿದರು. ಇದು ರಕ್ಷಣಾ ಕಾರ್ಯವಿಧಾನವಾಗಿ ಕಾರ್ಯನಿರ್ವಹಿಸುತ್ತದೆ, ನೀರಿನ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದರು.

“ಚೀನಾ ತನ್ನ ಕಡೆಯಿಂದ ಕೆಲಸ ಆರಂಭಿಸಲಿದೆ, ಅಥವಾ ಈಗಾಗಲೇ ಆರಂಭಿಸಿದೆ ಎಂದು ನಾನು ನಂಬುತ್ತೇನೆ. ಆದರೆ, ಅವರು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ದೀರ್ಘಾವಧಿಯಲ್ಲಿ, ಅಣೆಕಟ್ಟು ಪೂರ್ಣಗೊಂಡರೆ, ನಮ್ಮ ಸಿಯಾಂಗ್ ಮತ್ತು ಬ್ರಹ್ಮಪುತ್ರ ನದಿಗಳು ಗಣನೀಯವಾಗಿ ಒಣಗಬಹುದು” ಎಂದು ಅವರು ಹೇಳಿದರು.

ಭಾರತ ಸರ್ಕಾರವು ತನ್ನ ಯೋಜನೆಯನ್ನು ಯೋಜಿಸಿದಂತೆ ಪೂರ್ಣಗೊಳಿಸಲು ಸಾಧ್ಯವಾದರೆ, ಅದು ತನ್ನದೇ ಆದ ಅಣೆಕಟ್ಟಿನ ನೀರಿನ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಚೀನಾ ಭವಿಷ್ಯದಲ್ಲಿ ನೀರು ಬಿಡುಗಡೆ ಮಾಡಿದರೆ, ಖಂಡಿತವಾಗಿಯೂ ಪ್ರವಾಹ ಉಂಟಾಗುತ್ತದೆ. ಆದರೆ ಅದನ್ನು ನಿಯಂತ್ರಿಸಬಹುದು ಎಂದು ಖಂಡು ಹೇಳಿದರು.

ಮಾರ್ಚ್‌ನಲ್ಲಿ, ಕೇಂದ್ರವು ಬ್ರಹ್ಮಪುತ್ರ ನದಿಗೆ ಸಂಬಂಧಿಸಿದ ಎಲ್ಲ ಬೆಳವಣಿಗೆಗಳನ್ನು ‘ಎಚ್ಚರಿಕೆಯಿಂದ’ ಮೇಲ್ವಿಚಾರಣೆ ಮಾಡುತ್ತಿದೆ, ಇದರಲ್ಲಿ ಚೀನಾದ ಜಲವಿದ್ಯುತ್ ಯೋಜನೆ ನಿರ್ಮಿಸುವ ಯೋಜನೆಗಳು ಸೇರಿವೆ. ದೇಶದ ಹಿತಾಸಕ್ತಿಗಳನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ.

2021 ರಲ್ಲಿ ಚೀನಾದ ಪ್ರಧಾನಿ ಲಿ ಕೆಕಿಯಾಂಗ್ ಅವರು ಗಡಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಯಾರ್ಲುಂಗ್ ತ್ಸಾಂಗ್ಪೊ ಅಣೆಕಟ್ಟು ಯೋಜನೆಯನ್ನು ಘೋಷಿಸಲಾಯಿತು.

2024 ರಲ್ಲಿ ಚೀನಾ ಐದು ವರ್ಷಗಳ, $137 ಶತಕೋಟಿ ಯೋಜನೆಗೆ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ, ಇದು 60,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ನಿರೀಕ್ಷೆಯಿದೆ, ಇದು ವಿಶ್ವದ ಅತಿದೊಡ್ಡ ಜಲವಿದ್ಯುತ್ ಅಣೆಕಟ್ಟಾಗಿದೆ.

ಈ ಯೋಜನೆಯು ಪರಿಸರ ಸೂಕ್ಷ್ಮ ಹಿಮಾಲಯ ಪ್ರದೇಶದಲ್ಲಿದೆ, ಇದು ಆಗಾಗ್ಗೆ ಭೂಕಂಪಗಳು ಸಂಭವಿಸುವ ಟೆಕ್ಟೋನಿಕ್ ಪ್ಲೇಟ್ ಗಡಿಯಲ್ಲಿ ನೆಲೆಗೊಂಡಿದೆ ಎಂಬುದು ಆತಂಕಕಾರಿ ವಿಷಯವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...