Homeಮುಖಪುಟ'ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..'; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

‘ಭಾರತಕ್ಕೆ ಚೀನಾದಿಂದ ನೀರಿನ ಬಾಂಬ್..’; ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆ ಬಗ್ಗೆ ಅರುಣಾಚಲ ಸಿಎಂ ಎಚ್ಚರಿಕೆ

- Advertisement -
- Advertisement -

ರಾಜ್ಯದ ಗಡಿಯ ಬಳಿ ಚೀನಾ ನಿರ್ಮಿಸುತ್ತಿರುವ ಬೃಹತ್ ಅಣೆಕಟ್ಟು ಭಾರತಕ್ಕೆ ನೀರಿನ ಬಾಂಬ್ ಆಗಿದ್ದು, ನಮ್ಮ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡಬಹುದು ಎಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮಂಗಳವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬ್ರಹ್ಮಪುತ್ರ ನದಿಯ ಟಿಬೆಟಿಯನ್ ಹೆಸರಾದ ಯಾರ್ಲುಂಗ್ ತ್ಸಾಂಗ್ಪೊ ನದಿಯ ಮೇಲೆ ನಿರ್ಮಿಸಲಾಗಿರುವ ವಿಶ್ವದ ಅತಿದೊಡ್ಡ ಅಣೆಕಟ್ಟು ಯೋಜನೆಯು ಗಂಭೀರ ಕಳವಳಕಾರಿ ವಿಷಯವಾಗಿದೆ. ಏಕೆಂದರೆ, ಚೀನಾ ಅಂತರರಾಷ್ಟ್ರೀಯ ಜಲ ಒಪ್ಪಂದಕ್ಕೆ ಸಹಿ ಹಾಕಿಲ್ಲ, ಅದು ಅಂತರರಾಷ್ಟ್ರೀಯ ಮಾನದಂಡಗಳನ್ನು ಪಾಲಿಸುವಂತೆ ಒತ್ತಾಯಿಸಬಹುದಿತ್ತು ಎಂದು ಹೇಳಿದ್ದಾರೆ.

“ನಾವು ಚೀನಾವನ್ನು ನಂಬಲು ಸಾಧ್ಯವಿಲ್ಲ. ಅವರು ಏನು ಮಾಡುತ್ತಾರೆಂದು ಯಾರಿಗೂ ತಿಳಿದಿಲ್ಲ” ಎಂದು ಖಂಡು ಸಂದರ್ಶನದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಚೀನಾದಿಂದ ಬರುವ ಮಿಲಿಟರಿ ಬೆದರಿಕೆಯನ್ನು ಬದಿಗಿಟ್ಟರೆ, ಇದು ಬೇರೇಯದಕ್ಕಿಂತಲೂ ದೊಡ್ಡ ಸಮಸ್ಯೆ ಎಂದು ನನಗೆ ತೋರುತ್ತದೆ. ಇದು ನಮ್ಮ ಬುಡಕಟ್ಟು ಜನಾಂಗ ಮತ್ತು ನಮ್ಮ ಜೀವನೋಪಾಯಕ್ಕೆ ಅಸ್ತಿತ್ವದ ಬೆದರಿಕೆಯನ್ನುಂಟುಮಾಡಲಿದೆ; ಇದು ತುಂಬಾ ಗಂಭೀರವಾಗಿದೆ. ಏಕೆಂದರೆ, ಚೀನಾ ಇದನ್ನು ಒಂದು ರೀತಿಯ ‘ವಾಟರ್ ಬಾಂಬ್’ ಆಗಿಯೂ ಬಳಸಬಹುದು” ಎಂದು ಅವರು ಹೇಳಿದರು.

ಚೀನಾ ಅಂತರರಾಷ್ಟ್ರೀಯ ನೀರು ಹಂಚಿಕೆ ಒಪ್ಪಂದಗಳಿಗೆ ಸಹಿ ಹಾಕಿದ್ದರೆ, ಈ ಯೋಜನೆಯು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಬಾಂಗ್ಲಾದೇಶದ ಬೇಸಿಗೆಯ ಪ್ರವಾಹವನ್ನು ತಡೆಯುವುದರಿಂದ ತಪ್ಪಿಸಬಹುದು ಎಂದು ಮುಖ್ಯಮಂತ್ರಿ ಹೇಳಿದರು.

“ಆದರೆ, ಚೀನಾ ಸಹಿ ಹಾಕಿಲ್ಲ, ಅದೇ ನಮಗೆ ಸಮಸ್ಯೆ… ಅಣೆಕಟ್ಟು ನಿರ್ಮಿಸಿ ಅವರು ಇದ್ದಕ್ಕಿದ್ದಂತೆ ನೀರನ್ನು ಬಿಡುಗಡೆ ಮಾಡಿದರೆ, ನಮ್ಮ ಇಡೀ ಸಿಯಾಂಗ್ ಬೆಲ್ಟ್ ನಾಶವಾಗುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಆದಿ ಬುಡಕಟ್ಟು ಮತ್ತು ಅಂತಹುದೇ ಗುಂಪುಗಳು ಸಮಸ್ಯೆಗೆ ಸಿಲುಕುತ್ತವೆ. ಅವರ ಎ;f; ಆಸ್ತಿ, ಭೂಮಿ ಮತ್ತು ವಿಶೇಷವಾಗಿ ಮಾನವ ಜೀವನವು ವಿನಾಶಕಾರಿ ಪರಿಣಾಮಗಳನ್ನು ಅನುಭವಿಸುತ್ತದೆ” ಎಂದು ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಭಾರತ ಸರ್ಕಾರದೊಂದಿಗೆ ಚರ್ಚೆಯ ನಂತರ, ರಾಜ್ಯ ಸರ್ಕಾರವು ಸಿಯಾಂಗ್ ಅಪ್ಪರ್ ಬಹುಪಯೋಗಿ ಯೋಜನೆ ಎಂಬ ಯೋಜನೆಯನ್ನು ಹೊಂದಿದೆ ಎಂದು ಅರುಣಾಚಲ ಮುಖ್ಯಮಂತ್ರಿ ತಿಳಿಸಿದರು. ಇದು ರಕ್ಷಣಾ ಕಾರ್ಯವಿಧಾನವಾಗಿ ಕಾರ್ಯನಿರ್ವಹಿಸುತ್ತದೆ, ನೀರಿನ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದರು.

“ಚೀನಾ ತನ್ನ ಕಡೆಯಿಂದ ಕೆಲಸ ಆರಂಭಿಸಲಿದೆ, ಅಥವಾ ಈಗಾಗಲೇ ಆರಂಭಿಸಿದೆ ಎಂದು ನಾನು ನಂಬುತ್ತೇನೆ. ಆದರೆ, ಅವರು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ದೀರ್ಘಾವಧಿಯಲ್ಲಿ, ಅಣೆಕಟ್ಟು ಪೂರ್ಣಗೊಂಡರೆ, ನಮ್ಮ ಸಿಯಾಂಗ್ ಮತ್ತು ಬ್ರಹ್ಮಪುತ್ರ ನದಿಗಳು ಗಣನೀಯವಾಗಿ ಒಣಗಬಹುದು” ಎಂದು ಅವರು ಹೇಳಿದರು.

ಭಾರತ ಸರ್ಕಾರವು ತನ್ನ ಯೋಜನೆಯನ್ನು ಯೋಜಿಸಿದಂತೆ ಪೂರ್ಣಗೊಳಿಸಲು ಸಾಧ್ಯವಾದರೆ, ಅದು ತನ್ನದೇ ಆದ ಅಣೆಕಟ್ಟಿನ ನೀರಿನ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಚೀನಾ ಭವಿಷ್ಯದಲ್ಲಿ ನೀರು ಬಿಡುಗಡೆ ಮಾಡಿದರೆ, ಖಂಡಿತವಾಗಿಯೂ ಪ್ರವಾಹ ಉಂಟಾಗುತ್ತದೆ. ಆದರೆ ಅದನ್ನು ನಿಯಂತ್ರಿಸಬಹುದು ಎಂದು ಖಂಡು ಹೇಳಿದರು.

ಮಾರ್ಚ್‌ನಲ್ಲಿ, ಕೇಂದ್ರವು ಬ್ರಹ್ಮಪುತ್ರ ನದಿಗೆ ಸಂಬಂಧಿಸಿದ ಎಲ್ಲ ಬೆಳವಣಿಗೆಗಳನ್ನು ‘ಎಚ್ಚರಿಕೆಯಿಂದ’ ಮೇಲ್ವಿಚಾರಣೆ ಮಾಡುತ್ತಿದೆ, ಇದರಲ್ಲಿ ಚೀನಾದ ಜಲವಿದ್ಯುತ್ ಯೋಜನೆ ನಿರ್ಮಿಸುವ ಯೋಜನೆಗಳು ಸೇರಿವೆ. ದೇಶದ ಹಿತಾಸಕ್ತಿಗಳನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ.

2021 ರಲ್ಲಿ ಚೀನಾದ ಪ್ರಧಾನಿ ಲಿ ಕೆಕಿಯಾಂಗ್ ಅವರು ಗಡಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಯಾರ್ಲುಂಗ್ ತ್ಸಾಂಗ್ಪೊ ಅಣೆಕಟ್ಟು ಯೋಜನೆಯನ್ನು ಘೋಷಿಸಲಾಯಿತು.

2024 ರಲ್ಲಿ ಚೀನಾ ಐದು ವರ್ಷಗಳ, $137 ಶತಕೋಟಿ ಯೋಜನೆಗೆ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ, ಇದು 60,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ನಿರೀಕ್ಷೆಯಿದೆ, ಇದು ವಿಶ್ವದ ಅತಿದೊಡ್ಡ ಜಲವಿದ್ಯುತ್ ಅಣೆಕಟ್ಟಾಗಿದೆ.

ಈ ಯೋಜನೆಯು ಪರಿಸರ ಸೂಕ್ಷ್ಮ ಹಿಮಾಲಯ ಪ್ರದೇಶದಲ್ಲಿದೆ, ಇದು ಆಗಾಗ್ಗೆ ಭೂಕಂಪಗಳು ಸಂಭವಿಸುವ ಟೆಕ್ಟೋನಿಕ್ ಪ್ಲೇಟ್ ಗಡಿಯಲ್ಲಿ ನೆಲೆಗೊಂಡಿದೆ ಎಂಬುದು ಆತಂಕಕಾರಿ ವಿಷಯವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...