Homeಮುಖಪುಟಅಮೆರಿಕಕ್ಕೆ ಹಾರಿದ ಚೀನಿ ಬಲೂನ್‌: ‘ಇದು ಹಿಂಡನ್‌ಬರ್ಗ್ ಅಲ್ಲ’ ಎಂದ ತಜ್ಞರು

ಅಮೆರಿಕಕ್ಕೆ ಹಾರಿದ ಚೀನಿ ಬಲೂನ್‌: ‘ಇದು ಹಿಂಡನ್‌ಬರ್ಗ್ ಅಲ್ಲ’ ಎಂದ ತಜ್ಞರು

- Advertisement -
- Advertisement -

ಶಂಕಿತ ಚೀನೀ ಕಣ್ಗಾವಲು ಬಲೂನ್ ಈಗ ಸುದ್ದಿಯಲ್ಲಿದೆ. ಸುರಕ್ಷತೆಯ ನಿಟ್ಟಿನಲ್ಲಿ ಅದನ್ನು ಹೊಡೆದುರುಳಿಸಿಲ್ಲ ಎಂದು ಅಮೆರಿಕ ಹೇಳಿಕೊಂಡರೆ, ಮತ್ತೊಂದೆಡೆ ಅಮೆರಿಕದ ತಜ್ಞರು, “ಈ ಬಲೂನುಗಳು ಅದ್ಭುತವಾದ ಕಣ್ಗಾವಲು ವ್ಯವಸ್ಥೆಯಾಗಿದ್ದು, ಅವುಗಳನ್ನು ಶೂಟ್ ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಾಷಿಂಗ್ಟನ್‌ನಲ್ಲಿನ ಮ್ಯಾರಥಾನ್ ಇನಿಶಿಯೇಟಿವ್ ಥಿಂಕ್ ಟ್ಯಾಂಕ್‌ನಲ್ಲಿ ಕಣ್ಗಾವಲು ಬಲೂನ್‌ಗಳ ಪರಿಣಿತರಾಗಿರುವ ವಿಲಿಯಂ ಕಿಮ್ ಪ್ರತಿಕ್ರಿಯಿಸಿದ್ದು, “ಬೀಜಿಂಗ್ ಹೇಳಿಕೊಂಡಂತೆ ಅಮೆರಿಕ ಗಡಿಯ ಹೊರಗಿನಿಂದ ದತ್ತಾಂಶಗಳನ್ನು ಸಂಗ್ರಹಿಸಲು ಚೀನಾದ ಬಲೂನ್ ಉದ್ದೇಶಿಸಿರಬಹುದು, ಆದರೆ ಅಸಮರ್ಪಕವಾಗಿ ಕಾರ್ಯನಿರ್ವಹಿಸುವ ಸಾಧ್ಯತೆಯೂ ಇದೆ” ಎಂದಿದ್ದಾರೆ.

ಮೂರು ಬಸ್‌ಗಳಷ್ಟು ದೊಡ್ಡದಾದ ಬಿಳಿಯ ಗೋಳಾಕಾರದ ಬಲೂನ್‌ಗಳು ಅಮೆರಿಕದ ಮೇಲೆ ಹಾರಾಡುತ್ತಿವೆ. ಇದು ರಾಜತಾಂತ್ರಿಕ ಚರ್ಚೆಗೆ ಕಾರಣವಾಗಿದೆ. ಪರಮಾಣು ಸೂಕ್ಷ್ಮಪ್ರದೇಶವಾಗಿರುವ ಮೊಂಟಾನಾದಲ್ಲಿ ಈ ಬಲೂನ್‌ಗಳು ಹಾರಾಡುತ್ತಿವೆ ಎಂದು ಪೆಂಟಗನ್ ಹೇಳಿದೆ.

ಪೆಂಟಗನ್ ಪತ್ರಿಕಾ ಕಾರ್ಯದರ್ಶಿ ಬ್ರಿಗ್ ಜನರಲ್ ಪ್ಯಾಟ್ ರೈಡರ್ ಪ್ರತಿಕ್ರಿಯಿಸಿದ್ದು, “ಸೂಕ್ಷ್ಮ ಮಾಹಿತಿಗಳ ಸಂಗ್ರಹಣೆಯನ್ನು ತಪ್ಪಿಸಲು ಯುಎಸ್ ತಕ್ಷಣವೇ ಕಾರ್ಯನಿರ್ವಹಿಸಿದೆ” ಎಂದು  ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉತ್ತರ ಅಮೆರಿಕಾದ ಏರೋಸ್ಪೇಸ್ ಡಿಫೆನ್ಸ್ ಕಮಾಂಡ್ ಜಾಗೃತವಾಗಿದ್ದು ಬಲೂನ್ ಅನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸಿದೆ ಎಂದು ರೈಡರ್ ಮಾಹಿತಿ ನೀಡಿದ್ದಾರೆ.

ಏತನ್ಮಧ್ಯೆ, ಮುಂದಿನ ವಾರ ನಡೆಯಬೇಕಿದ್ದ ಬೀಜಿಂಗ್ ಪ್ರವಾಸವನ್ನು ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ರದ್ದುಗೊಳಿಸಿದ್ದಾರೆ.

ಹವಾಮಾನ ಸಂಶೋಧನಾ ಬಲೂನ್‌: ಚೀನಾ

ಅಮೆರಿಕಾಕ್ಕೆ ಬಲೂನ್ ಹಾರಿದ್ದರ ಕುರಿತು ಚೀನಾ ಸ್ಪಷ್ಟನೆ ನೀಡಿದ್ದು, “ಹವಾಮಾನ ಸಂಶೋಧನೆಗಾಗಿ ಬಳಸಲಾದ ನಾಗರಿಕ ವಾಯುನೌಕೆ ಇದಾಗಿದೆ. ಗಾಳಿಯ ರಭಸದಿಂದಾಗಿ ಹಾದಿ ತಪ್ಪಿ ಅಮೆರಿಕ ತಲುಪಿದೆ” ಎಂದು ತಿಳಿಸಿದೆ.

ಚೀನಾದ ವಿದೇಶಾಂಗ ಸಚಿವಾಲಯವು ತನ್ನ ಹೇಳಿಕೆಯಲ್ಲಿ “ವಾಯು ನೌಕೆಯು ಅನಪೇಕ್ಷಿತವಾಗಿ ಅಮೆರಿಕಕ್ಕೆ ಪ್ರವೇಶಿಸಿರುವುದಕ್ಕೆ ವಿಷಾದಿಸುತ್ತೇವೆ” ಎಂದಿದೆ.

ಅಮೆರಿಕ ಏಕೆ ಇನ್ನು ಬಲೂನ್‌ ಹೊಡೆದು ಹಾಕಿಲ್ಲ?

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಆರಂಭದಲ್ಲಿ ಬಲೂನ್ ಅನ್ನು ಒಡೆದು ಹಾಕಲು ಬಯಸಿದ್ದರು. ಆದರೆ ಅಲ್ಲಿನ ಸ್ಥಳೀಯರ ಸುರಕ್ಷತೆಗಳ ಕುರಿತು ಉನ್ನತ ರಕ್ಷಣಾ ಅಧಿಕಾರಿಗಳು ಬಿಡೆನ್‌ ಅವರಿಗೆ ಸಲಹೆ ನೀಡಿದ್ದರಿಂದ ಕ್ರಮ ಜರುಗಿಸಿಲ್ಲ ಎಂದು ಹಿರಿಯ ಆಡಳಿತ ಅಧಿಕಾರಿಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಕಣ್ಗಾವಲು ಬಲೂನ್‌ಗಳ ಪರಿಣಿತರಾಗಿರುವ ವಿಲಿಯಂ ಕಿಮ್ ಕಾರ್ಯಸಾಧ್ಯತೆ ಬಗ್ಗೆ ವಿವರಿಸಿದ್ದು, “ಈ ಬಲೂನುಗಳಲ್ಲಿ ಹೀಲಿಯಂ ಬಳಸಲಾಗಿದೆ. ಇದು ಹಿಂಡೆನ್ಬರ್ಗ್ ಅಲ್ಲ, ನೀವು ಅದನ್ನು ಶೂಟ್ ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ಮೇ 6, 1937ರಂದು ಸಂಭವಿಸಿದ ಹಿಂಡನ್‌ಬರ್ಗ್ ವಾಯುನೌಕೆ ದುರಂತ ಇತಿಹಾಸ ಪ್ರಸಿದ್ಧವಾಗಿದೆ. ಅದರಲ್ಲಿ ಹೈಡ್ರೋಜನ್ ಅನಿಲ ಬಳಸಲಾಗಿತ್ತು. ಅದು ಸುಮಾರು 90 ಸೆಕೆಂಡುಗಳಲ್ಲಿ ಸುಟ್ಟುಹೋಗಿತ್ತು.

“ನೀವು ಅದಕ್ಕೆ ಪಂಚ್ ಮೂಲಕ ರಂಧ್ರ ಮಾಡಿದರೆ, ಅದು ತುಂಬಾ ನಿಧಾನವಾಗಿ ಸೋರಿಕೆಯಾಗುತ್ತದೆ” ಎಂದಿದ್ದಾರೆ.

1998ರಲ್ಲಿ ಕೆನಡಾದ ವಾಯುಪಡೆಯು ಬೃಹದಾಕಾರದ ವಾಯುನೌಕೆಯನ್ನು ಹೊಡೆದುರುಳಿಸಲು ಎಫ್-18 ಫೈಟರ್ ಜೆಟ್‌ಗಳನ್ನು ಕಳುಹಿಸಿತ್ತು ಎಂದು ಕಿಮ್ ನೆನಪಿಸಿಕೊಂಡಿದ್ದಾರೆ.

“ಅವರು ಅದರೊಳಗೆ ಸಾವಿರದಷ್ಟು 20-ಮಿಲಿಮೀಟರ್ ಫಿರಂಗಿ ಸುತ್ತುಗಳನ್ನು ಹಾರಿಸಿದರು. ಅದು ಅಂತಿಮವಾಗಿ ಕೆಳಗೆ ಬೀಳಲು ಇನ್ನೂ ಆರು ದಿನಗಳನ್ನು ತೆಗೆದುಕೊಂಡಿತು. ನೀವು ಅವರ ಮೇಲೆ ಗುಂಡು ಹಾರಿಸಿದಾಗ ಇವು ಸ್ಫೋಟಗೊಳ್ಳುವ ವಸ್ತುಗಳಾಗಿರುವುದಿಲ್ಲ” ಎಂದಿದ್ದಾರೆ.

ಹಿಂಡನ್‌ಬರ್ಗ್ ದುರಂತದ ಬಗ್ಗೆ ಕನ್ನಡದ ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆಯವರು ಇತ್ತೀಚೆಗೆ ವಿವರಿಸಿದ್ದು, “ಹೈಡ್ರೊಜನ್‌ (ಜಲಜನಕ) ಇಡೀ ವಿಶ್ವದಲ್ಲೇ ಅತ್ಯಂತ ದಹನಶೀಲ ಅನಿಲ. ತುಸು ಕಿಡಿ ಹೊಮ್ಮಿದರೂ ಸಾಕು ಢಮಾರೆಂದು ಸ್ಫೋಟವಾಗಿ ಅನಿಲ ಉರಿಯುತ್ತದೆ. ಇಂಥ ಬಲೂನಿನಲ್ಲಿ ಸವಾರಿ ಮಾಡಿ, ಅದು ಸ್ಫೋಟವಾಗಿ ಅದಾಗಲೇ ಅನೇಕರು ಪ್ರಾಣ ಕಳಕೊಂಡಿದ್ದರು. ಆದರೆ ಹಿಂಡನ್‌ಬರ್ಗ್‌ ವಿಮಾನ ಎಂದರೆ (ಟೈಟಾನಿಕ್‌ ಥರಾ) ಅತ್ಯಂತ ಮಜಬೂತಾದ, ಅತ್ಯಂತ ಸುಭದ್ರ ವಿಮಾನಗಳೆಂಬ ಪ್ರತೀತಿ ಇತ್ತು” ಎಂದು ವಿವರಿಸಿದ್ದಾರೆ.

(ಹಿಂಡನ್‌ಬರ್ಗ್ ದುರಂತದ ಬಗ್ಗೆ ನಾಗೇಶ್‌ ಹೆಗಡೆಯವರು ಬರೆದಿರುವ ಲೇಖನವನ್ನು ಮೇಲಿನ ಫೇಸ್‌ಬುಕ್‌ ಲಿಂಕ್‌ ಕ್ಲಿಕ್‌ ಮಾಡಿ ಓದಬಹುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...