Homeಮುಖಪುಟಅಮೆರಿಕಕ್ಕೆ ಹಾರಿದ ಚೀನಿ ಬಲೂನ್‌: ‘ಇದು ಹಿಂಡನ್‌ಬರ್ಗ್ ಅಲ್ಲ’ ಎಂದ ತಜ್ಞರು

ಅಮೆರಿಕಕ್ಕೆ ಹಾರಿದ ಚೀನಿ ಬಲೂನ್‌: ‘ಇದು ಹಿಂಡನ್‌ಬರ್ಗ್ ಅಲ್ಲ’ ಎಂದ ತಜ್ಞರು

- Advertisement -
- Advertisement -

ಶಂಕಿತ ಚೀನೀ ಕಣ್ಗಾವಲು ಬಲೂನ್ ಈಗ ಸುದ್ದಿಯಲ್ಲಿದೆ. ಸುರಕ್ಷತೆಯ ನಿಟ್ಟಿನಲ್ಲಿ ಅದನ್ನು ಹೊಡೆದುರುಳಿಸಿಲ್ಲ ಎಂದು ಅಮೆರಿಕ ಹೇಳಿಕೊಂಡರೆ, ಮತ್ತೊಂದೆಡೆ ಅಮೆರಿಕದ ತಜ್ಞರು, “ಈ ಬಲೂನುಗಳು ಅದ್ಭುತವಾದ ಕಣ್ಗಾವಲು ವ್ಯವಸ್ಥೆಯಾಗಿದ್ದು, ಅವುಗಳನ್ನು ಶೂಟ್ ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಾಷಿಂಗ್ಟನ್‌ನಲ್ಲಿನ ಮ್ಯಾರಥಾನ್ ಇನಿಶಿಯೇಟಿವ್ ಥಿಂಕ್ ಟ್ಯಾಂಕ್‌ನಲ್ಲಿ ಕಣ್ಗಾವಲು ಬಲೂನ್‌ಗಳ ಪರಿಣಿತರಾಗಿರುವ ವಿಲಿಯಂ ಕಿಮ್ ಪ್ರತಿಕ್ರಿಯಿಸಿದ್ದು, “ಬೀಜಿಂಗ್ ಹೇಳಿಕೊಂಡಂತೆ ಅಮೆರಿಕ ಗಡಿಯ ಹೊರಗಿನಿಂದ ದತ್ತಾಂಶಗಳನ್ನು ಸಂಗ್ರಹಿಸಲು ಚೀನಾದ ಬಲೂನ್ ಉದ್ದೇಶಿಸಿರಬಹುದು, ಆದರೆ ಅಸಮರ್ಪಕವಾಗಿ ಕಾರ್ಯನಿರ್ವಹಿಸುವ ಸಾಧ್ಯತೆಯೂ ಇದೆ” ಎಂದಿದ್ದಾರೆ.

ಮೂರು ಬಸ್‌ಗಳಷ್ಟು ದೊಡ್ಡದಾದ ಬಿಳಿಯ ಗೋಳಾಕಾರದ ಬಲೂನ್‌ಗಳು ಅಮೆರಿಕದ ಮೇಲೆ ಹಾರಾಡುತ್ತಿವೆ. ಇದು ರಾಜತಾಂತ್ರಿಕ ಚರ್ಚೆಗೆ ಕಾರಣವಾಗಿದೆ. ಪರಮಾಣು ಸೂಕ್ಷ್ಮಪ್ರದೇಶವಾಗಿರುವ ಮೊಂಟಾನಾದಲ್ಲಿ ಈ ಬಲೂನ್‌ಗಳು ಹಾರಾಡುತ್ತಿವೆ ಎಂದು ಪೆಂಟಗನ್ ಹೇಳಿದೆ.

ಪೆಂಟಗನ್ ಪತ್ರಿಕಾ ಕಾರ್ಯದರ್ಶಿ ಬ್ರಿಗ್ ಜನರಲ್ ಪ್ಯಾಟ್ ರೈಡರ್ ಪ್ರತಿಕ್ರಿಯಿಸಿದ್ದು, “ಸೂಕ್ಷ್ಮ ಮಾಹಿತಿಗಳ ಸಂಗ್ರಹಣೆಯನ್ನು ತಪ್ಪಿಸಲು ಯುಎಸ್ ತಕ್ಷಣವೇ ಕಾರ್ಯನಿರ್ವಹಿಸಿದೆ” ಎಂದು  ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉತ್ತರ ಅಮೆರಿಕಾದ ಏರೋಸ್ಪೇಸ್ ಡಿಫೆನ್ಸ್ ಕಮಾಂಡ್ ಜಾಗೃತವಾಗಿದ್ದು ಬಲೂನ್ ಅನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸಿದೆ ಎಂದು ರೈಡರ್ ಮಾಹಿತಿ ನೀಡಿದ್ದಾರೆ.

ಏತನ್ಮಧ್ಯೆ, ಮುಂದಿನ ವಾರ ನಡೆಯಬೇಕಿದ್ದ ಬೀಜಿಂಗ್ ಪ್ರವಾಸವನ್ನು ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ರದ್ದುಗೊಳಿಸಿದ್ದಾರೆ.

ಹವಾಮಾನ ಸಂಶೋಧನಾ ಬಲೂನ್‌: ಚೀನಾ

ಅಮೆರಿಕಾಕ್ಕೆ ಬಲೂನ್ ಹಾರಿದ್ದರ ಕುರಿತು ಚೀನಾ ಸ್ಪಷ್ಟನೆ ನೀಡಿದ್ದು, “ಹವಾಮಾನ ಸಂಶೋಧನೆಗಾಗಿ ಬಳಸಲಾದ ನಾಗರಿಕ ವಾಯುನೌಕೆ ಇದಾಗಿದೆ. ಗಾಳಿಯ ರಭಸದಿಂದಾಗಿ ಹಾದಿ ತಪ್ಪಿ ಅಮೆರಿಕ ತಲುಪಿದೆ” ಎಂದು ತಿಳಿಸಿದೆ.

ಚೀನಾದ ವಿದೇಶಾಂಗ ಸಚಿವಾಲಯವು ತನ್ನ ಹೇಳಿಕೆಯಲ್ಲಿ “ವಾಯು ನೌಕೆಯು ಅನಪೇಕ್ಷಿತವಾಗಿ ಅಮೆರಿಕಕ್ಕೆ ಪ್ರವೇಶಿಸಿರುವುದಕ್ಕೆ ವಿಷಾದಿಸುತ್ತೇವೆ” ಎಂದಿದೆ.

ಅಮೆರಿಕ ಏಕೆ ಇನ್ನು ಬಲೂನ್‌ ಹೊಡೆದು ಹಾಕಿಲ್ಲ?

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಆರಂಭದಲ್ಲಿ ಬಲೂನ್ ಅನ್ನು ಒಡೆದು ಹಾಕಲು ಬಯಸಿದ್ದರು. ಆದರೆ ಅಲ್ಲಿನ ಸ್ಥಳೀಯರ ಸುರಕ್ಷತೆಗಳ ಕುರಿತು ಉನ್ನತ ರಕ್ಷಣಾ ಅಧಿಕಾರಿಗಳು ಬಿಡೆನ್‌ ಅವರಿಗೆ ಸಲಹೆ ನೀಡಿದ್ದರಿಂದ ಕ್ರಮ ಜರುಗಿಸಿಲ್ಲ ಎಂದು ಹಿರಿಯ ಆಡಳಿತ ಅಧಿಕಾರಿಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಕಣ್ಗಾವಲು ಬಲೂನ್‌ಗಳ ಪರಿಣಿತರಾಗಿರುವ ವಿಲಿಯಂ ಕಿಮ್ ಕಾರ್ಯಸಾಧ್ಯತೆ ಬಗ್ಗೆ ವಿವರಿಸಿದ್ದು, “ಈ ಬಲೂನುಗಳಲ್ಲಿ ಹೀಲಿಯಂ ಬಳಸಲಾಗಿದೆ. ಇದು ಹಿಂಡೆನ್ಬರ್ಗ್ ಅಲ್ಲ, ನೀವು ಅದನ್ನು ಶೂಟ್ ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ಮೇ 6, 1937ರಂದು ಸಂಭವಿಸಿದ ಹಿಂಡನ್‌ಬರ್ಗ್ ವಾಯುನೌಕೆ ದುರಂತ ಇತಿಹಾಸ ಪ್ರಸಿದ್ಧವಾಗಿದೆ. ಅದರಲ್ಲಿ ಹೈಡ್ರೋಜನ್ ಅನಿಲ ಬಳಸಲಾಗಿತ್ತು. ಅದು ಸುಮಾರು 90 ಸೆಕೆಂಡುಗಳಲ್ಲಿ ಸುಟ್ಟುಹೋಗಿತ್ತು.

“ನೀವು ಅದಕ್ಕೆ ಪಂಚ್ ಮೂಲಕ ರಂಧ್ರ ಮಾಡಿದರೆ, ಅದು ತುಂಬಾ ನಿಧಾನವಾಗಿ ಸೋರಿಕೆಯಾಗುತ್ತದೆ” ಎಂದಿದ್ದಾರೆ.

1998ರಲ್ಲಿ ಕೆನಡಾದ ವಾಯುಪಡೆಯು ಬೃಹದಾಕಾರದ ವಾಯುನೌಕೆಯನ್ನು ಹೊಡೆದುರುಳಿಸಲು ಎಫ್-18 ಫೈಟರ್ ಜೆಟ್‌ಗಳನ್ನು ಕಳುಹಿಸಿತ್ತು ಎಂದು ಕಿಮ್ ನೆನಪಿಸಿಕೊಂಡಿದ್ದಾರೆ.

“ಅವರು ಅದರೊಳಗೆ ಸಾವಿರದಷ್ಟು 20-ಮಿಲಿಮೀಟರ್ ಫಿರಂಗಿ ಸುತ್ತುಗಳನ್ನು ಹಾರಿಸಿದರು. ಅದು ಅಂತಿಮವಾಗಿ ಕೆಳಗೆ ಬೀಳಲು ಇನ್ನೂ ಆರು ದಿನಗಳನ್ನು ತೆಗೆದುಕೊಂಡಿತು. ನೀವು ಅವರ ಮೇಲೆ ಗುಂಡು ಹಾರಿಸಿದಾಗ ಇವು ಸ್ಫೋಟಗೊಳ್ಳುವ ವಸ್ತುಗಳಾಗಿರುವುದಿಲ್ಲ” ಎಂದಿದ್ದಾರೆ.

ಹಿಂಡನ್‌ಬರ್ಗ್ ದುರಂತದ ಬಗ್ಗೆ ಕನ್ನಡದ ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆಯವರು ಇತ್ತೀಚೆಗೆ ವಿವರಿಸಿದ್ದು, “ಹೈಡ್ರೊಜನ್‌ (ಜಲಜನಕ) ಇಡೀ ವಿಶ್ವದಲ್ಲೇ ಅತ್ಯಂತ ದಹನಶೀಲ ಅನಿಲ. ತುಸು ಕಿಡಿ ಹೊಮ್ಮಿದರೂ ಸಾಕು ಢಮಾರೆಂದು ಸ್ಫೋಟವಾಗಿ ಅನಿಲ ಉರಿಯುತ್ತದೆ. ಇಂಥ ಬಲೂನಿನಲ್ಲಿ ಸವಾರಿ ಮಾಡಿ, ಅದು ಸ್ಫೋಟವಾಗಿ ಅದಾಗಲೇ ಅನೇಕರು ಪ್ರಾಣ ಕಳಕೊಂಡಿದ್ದರು. ಆದರೆ ಹಿಂಡನ್‌ಬರ್ಗ್‌ ವಿಮಾನ ಎಂದರೆ (ಟೈಟಾನಿಕ್‌ ಥರಾ) ಅತ್ಯಂತ ಮಜಬೂತಾದ, ಅತ್ಯಂತ ಸುಭದ್ರ ವಿಮಾನಗಳೆಂಬ ಪ್ರತೀತಿ ಇತ್ತು” ಎಂದು ವಿವರಿಸಿದ್ದಾರೆ.

(ಹಿಂಡನ್‌ಬರ್ಗ್ ದುರಂತದ ಬಗ್ಗೆ ನಾಗೇಶ್‌ ಹೆಗಡೆಯವರು ಬರೆದಿರುವ ಲೇಖನವನ್ನು ಮೇಲಿನ ಫೇಸ್‌ಬುಕ್‌ ಲಿಂಕ್‌ ಕ್ಲಿಕ್‌ ಮಾಡಿ ಓದಬಹುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...