Homeಮುಖಪುಟಅಮೆರಿಕಕ್ಕೆ ಹಾರಿದ ಚೀನಿ ಬಲೂನ್‌: ‘ಇದು ಹಿಂಡನ್‌ಬರ್ಗ್ ಅಲ್ಲ’ ಎಂದ ತಜ್ಞರು

ಅಮೆರಿಕಕ್ಕೆ ಹಾರಿದ ಚೀನಿ ಬಲೂನ್‌: ‘ಇದು ಹಿಂಡನ್‌ಬರ್ಗ್ ಅಲ್ಲ’ ಎಂದ ತಜ್ಞರು

- Advertisement -
- Advertisement -

ಶಂಕಿತ ಚೀನೀ ಕಣ್ಗಾವಲು ಬಲೂನ್ ಈಗ ಸುದ್ದಿಯಲ್ಲಿದೆ. ಸುರಕ್ಷತೆಯ ನಿಟ್ಟಿನಲ್ಲಿ ಅದನ್ನು ಹೊಡೆದುರುಳಿಸಿಲ್ಲ ಎಂದು ಅಮೆರಿಕ ಹೇಳಿಕೊಂಡರೆ, ಮತ್ತೊಂದೆಡೆ ಅಮೆರಿಕದ ತಜ್ಞರು, “ಈ ಬಲೂನುಗಳು ಅದ್ಭುತವಾದ ಕಣ್ಗಾವಲು ವ್ಯವಸ್ಥೆಯಾಗಿದ್ದು, ಅವುಗಳನ್ನು ಶೂಟ್ ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಾಷಿಂಗ್ಟನ್‌ನಲ್ಲಿನ ಮ್ಯಾರಥಾನ್ ಇನಿಶಿಯೇಟಿವ್ ಥಿಂಕ್ ಟ್ಯಾಂಕ್‌ನಲ್ಲಿ ಕಣ್ಗಾವಲು ಬಲೂನ್‌ಗಳ ಪರಿಣಿತರಾಗಿರುವ ವಿಲಿಯಂ ಕಿಮ್ ಪ್ರತಿಕ್ರಿಯಿಸಿದ್ದು, “ಬೀಜಿಂಗ್ ಹೇಳಿಕೊಂಡಂತೆ ಅಮೆರಿಕ ಗಡಿಯ ಹೊರಗಿನಿಂದ ದತ್ತಾಂಶಗಳನ್ನು ಸಂಗ್ರಹಿಸಲು ಚೀನಾದ ಬಲೂನ್ ಉದ್ದೇಶಿಸಿರಬಹುದು, ಆದರೆ ಅಸಮರ್ಪಕವಾಗಿ ಕಾರ್ಯನಿರ್ವಹಿಸುವ ಸಾಧ್ಯತೆಯೂ ಇದೆ” ಎಂದಿದ್ದಾರೆ.

ಮೂರು ಬಸ್‌ಗಳಷ್ಟು ದೊಡ್ಡದಾದ ಬಿಳಿಯ ಗೋಳಾಕಾರದ ಬಲೂನ್‌ಗಳು ಅಮೆರಿಕದ ಮೇಲೆ ಹಾರಾಡುತ್ತಿವೆ. ಇದು ರಾಜತಾಂತ್ರಿಕ ಚರ್ಚೆಗೆ ಕಾರಣವಾಗಿದೆ. ಪರಮಾಣು ಸೂಕ್ಷ್ಮಪ್ರದೇಶವಾಗಿರುವ ಮೊಂಟಾನಾದಲ್ಲಿ ಈ ಬಲೂನ್‌ಗಳು ಹಾರಾಡುತ್ತಿವೆ ಎಂದು ಪೆಂಟಗನ್ ಹೇಳಿದೆ.

ಪೆಂಟಗನ್ ಪತ್ರಿಕಾ ಕಾರ್ಯದರ್ಶಿ ಬ್ರಿಗ್ ಜನರಲ್ ಪ್ಯಾಟ್ ರೈಡರ್ ಪ್ರತಿಕ್ರಿಯಿಸಿದ್ದು, “ಸೂಕ್ಷ್ಮ ಮಾಹಿತಿಗಳ ಸಂಗ್ರಹಣೆಯನ್ನು ತಪ್ಪಿಸಲು ಯುಎಸ್ ತಕ್ಷಣವೇ ಕಾರ್ಯನಿರ್ವಹಿಸಿದೆ” ಎಂದು  ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉತ್ತರ ಅಮೆರಿಕಾದ ಏರೋಸ್ಪೇಸ್ ಡಿಫೆನ್ಸ್ ಕಮಾಂಡ್ ಜಾಗೃತವಾಗಿದ್ದು ಬಲೂನ್ ಅನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸಿದೆ ಎಂದು ರೈಡರ್ ಮಾಹಿತಿ ನೀಡಿದ್ದಾರೆ.

ಏತನ್ಮಧ್ಯೆ, ಮುಂದಿನ ವಾರ ನಡೆಯಬೇಕಿದ್ದ ಬೀಜಿಂಗ್ ಪ್ರವಾಸವನ್ನು ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ರದ್ದುಗೊಳಿಸಿದ್ದಾರೆ.

ಹವಾಮಾನ ಸಂಶೋಧನಾ ಬಲೂನ್‌: ಚೀನಾ

ಅಮೆರಿಕಾಕ್ಕೆ ಬಲೂನ್ ಹಾರಿದ್ದರ ಕುರಿತು ಚೀನಾ ಸ್ಪಷ್ಟನೆ ನೀಡಿದ್ದು, “ಹವಾಮಾನ ಸಂಶೋಧನೆಗಾಗಿ ಬಳಸಲಾದ ನಾಗರಿಕ ವಾಯುನೌಕೆ ಇದಾಗಿದೆ. ಗಾಳಿಯ ರಭಸದಿಂದಾಗಿ ಹಾದಿ ತಪ್ಪಿ ಅಮೆರಿಕ ತಲುಪಿದೆ” ಎಂದು ತಿಳಿಸಿದೆ.

ಚೀನಾದ ವಿದೇಶಾಂಗ ಸಚಿವಾಲಯವು ತನ್ನ ಹೇಳಿಕೆಯಲ್ಲಿ “ವಾಯು ನೌಕೆಯು ಅನಪೇಕ್ಷಿತವಾಗಿ ಅಮೆರಿಕಕ್ಕೆ ಪ್ರವೇಶಿಸಿರುವುದಕ್ಕೆ ವಿಷಾದಿಸುತ್ತೇವೆ” ಎಂದಿದೆ.

ಅಮೆರಿಕ ಏಕೆ ಇನ್ನು ಬಲೂನ್‌ ಹೊಡೆದು ಹಾಕಿಲ್ಲ?

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಆರಂಭದಲ್ಲಿ ಬಲೂನ್ ಅನ್ನು ಒಡೆದು ಹಾಕಲು ಬಯಸಿದ್ದರು. ಆದರೆ ಅಲ್ಲಿನ ಸ್ಥಳೀಯರ ಸುರಕ್ಷತೆಗಳ ಕುರಿತು ಉನ್ನತ ರಕ್ಷಣಾ ಅಧಿಕಾರಿಗಳು ಬಿಡೆನ್‌ ಅವರಿಗೆ ಸಲಹೆ ನೀಡಿದ್ದರಿಂದ ಕ್ರಮ ಜರುಗಿಸಿಲ್ಲ ಎಂದು ಹಿರಿಯ ಆಡಳಿತ ಅಧಿಕಾರಿಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಕಣ್ಗಾವಲು ಬಲೂನ್‌ಗಳ ಪರಿಣಿತರಾಗಿರುವ ವಿಲಿಯಂ ಕಿಮ್ ಕಾರ್ಯಸಾಧ್ಯತೆ ಬಗ್ಗೆ ವಿವರಿಸಿದ್ದು, “ಈ ಬಲೂನುಗಳಲ್ಲಿ ಹೀಲಿಯಂ ಬಳಸಲಾಗಿದೆ. ಇದು ಹಿಂಡೆನ್ಬರ್ಗ್ ಅಲ್ಲ, ನೀವು ಅದನ್ನು ಶೂಟ್ ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ಮೇ 6, 1937ರಂದು ಸಂಭವಿಸಿದ ಹಿಂಡನ್‌ಬರ್ಗ್ ವಾಯುನೌಕೆ ದುರಂತ ಇತಿಹಾಸ ಪ್ರಸಿದ್ಧವಾಗಿದೆ. ಅದರಲ್ಲಿ ಹೈಡ್ರೋಜನ್ ಅನಿಲ ಬಳಸಲಾಗಿತ್ತು. ಅದು ಸುಮಾರು 90 ಸೆಕೆಂಡುಗಳಲ್ಲಿ ಸುಟ್ಟುಹೋಗಿತ್ತು.

“ನೀವು ಅದಕ್ಕೆ ಪಂಚ್ ಮೂಲಕ ರಂಧ್ರ ಮಾಡಿದರೆ, ಅದು ತುಂಬಾ ನಿಧಾನವಾಗಿ ಸೋರಿಕೆಯಾಗುತ್ತದೆ” ಎಂದಿದ್ದಾರೆ.

1998ರಲ್ಲಿ ಕೆನಡಾದ ವಾಯುಪಡೆಯು ಬೃಹದಾಕಾರದ ವಾಯುನೌಕೆಯನ್ನು ಹೊಡೆದುರುಳಿಸಲು ಎಫ್-18 ಫೈಟರ್ ಜೆಟ್‌ಗಳನ್ನು ಕಳುಹಿಸಿತ್ತು ಎಂದು ಕಿಮ್ ನೆನಪಿಸಿಕೊಂಡಿದ್ದಾರೆ.

“ಅವರು ಅದರೊಳಗೆ ಸಾವಿರದಷ್ಟು 20-ಮಿಲಿಮೀಟರ್ ಫಿರಂಗಿ ಸುತ್ತುಗಳನ್ನು ಹಾರಿಸಿದರು. ಅದು ಅಂತಿಮವಾಗಿ ಕೆಳಗೆ ಬೀಳಲು ಇನ್ನೂ ಆರು ದಿನಗಳನ್ನು ತೆಗೆದುಕೊಂಡಿತು. ನೀವು ಅವರ ಮೇಲೆ ಗುಂಡು ಹಾರಿಸಿದಾಗ ಇವು ಸ್ಫೋಟಗೊಳ್ಳುವ ವಸ್ತುಗಳಾಗಿರುವುದಿಲ್ಲ” ಎಂದಿದ್ದಾರೆ.

ಹಿಂಡನ್‌ಬರ್ಗ್ ದುರಂತದ ಬಗ್ಗೆ ಕನ್ನಡದ ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆಯವರು ಇತ್ತೀಚೆಗೆ ವಿವರಿಸಿದ್ದು, “ಹೈಡ್ರೊಜನ್‌ (ಜಲಜನಕ) ಇಡೀ ವಿಶ್ವದಲ್ಲೇ ಅತ್ಯಂತ ದಹನಶೀಲ ಅನಿಲ. ತುಸು ಕಿಡಿ ಹೊಮ್ಮಿದರೂ ಸಾಕು ಢಮಾರೆಂದು ಸ್ಫೋಟವಾಗಿ ಅನಿಲ ಉರಿಯುತ್ತದೆ. ಇಂಥ ಬಲೂನಿನಲ್ಲಿ ಸವಾರಿ ಮಾಡಿ, ಅದು ಸ್ಫೋಟವಾಗಿ ಅದಾಗಲೇ ಅನೇಕರು ಪ್ರಾಣ ಕಳಕೊಂಡಿದ್ದರು. ಆದರೆ ಹಿಂಡನ್‌ಬರ್ಗ್‌ ವಿಮಾನ ಎಂದರೆ (ಟೈಟಾನಿಕ್‌ ಥರಾ) ಅತ್ಯಂತ ಮಜಬೂತಾದ, ಅತ್ಯಂತ ಸುಭದ್ರ ವಿಮಾನಗಳೆಂಬ ಪ್ರತೀತಿ ಇತ್ತು” ಎಂದು ವಿವರಿಸಿದ್ದಾರೆ.

(ಹಿಂಡನ್‌ಬರ್ಗ್ ದುರಂತದ ಬಗ್ಗೆ ನಾಗೇಶ್‌ ಹೆಗಡೆಯವರು ಬರೆದಿರುವ ಲೇಖನವನ್ನು ಮೇಲಿನ ಫೇಸ್‌ಬುಕ್‌ ಲಿಂಕ್‌ ಕ್ಲಿಕ್‌ ಮಾಡಿ ಓದಬಹುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...