Homeಮುಖಪುಟಅಮೆರಿಕಕ್ಕೆ ಹಾರಿದ ಚೀನಿ ಬಲೂನ್‌: ‘ಇದು ಹಿಂಡನ್‌ಬರ್ಗ್ ಅಲ್ಲ’ ಎಂದ ತಜ್ಞರು

ಅಮೆರಿಕಕ್ಕೆ ಹಾರಿದ ಚೀನಿ ಬಲೂನ್‌: ‘ಇದು ಹಿಂಡನ್‌ಬರ್ಗ್ ಅಲ್ಲ’ ಎಂದ ತಜ್ಞರು

- Advertisement -
- Advertisement -

ಶಂಕಿತ ಚೀನೀ ಕಣ್ಗಾವಲು ಬಲೂನ್ ಈಗ ಸುದ್ದಿಯಲ್ಲಿದೆ. ಸುರಕ್ಷತೆಯ ನಿಟ್ಟಿನಲ್ಲಿ ಅದನ್ನು ಹೊಡೆದುರುಳಿಸಿಲ್ಲ ಎಂದು ಅಮೆರಿಕ ಹೇಳಿಕೊಂಡರೆ, ಮತ್ತೊಂದೆಡೆ ಅಮೆರಿಕದ ತಜ್ಞರು, “ಈ ಬಲೂನುಗಳು ಅದ್ಭುತವಾದ ಕಣ್ಗಾವಲು ವ್ಯವಸ್ಥೆಯಾಗಿದ್ದು, ಅವುಗಳನ್ನು ಶೂಟ್ ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಾಷಿಂಗ್ಟನ್‌ನಲ್ಲಿನ ಮ್ಯಾರಥಾನ್ ಇನಿಶಿಯೇಟಿವ್ ಥಿಂಕ್ ಟ್ಯಾಂಕ್‌ನಲ್ಲಿ ಕಣ್ಗಾವಲು ಬಲೂನ್‌ಗಳ ಪರಿಣಿತರಾಗಿರುವ ವಿಲಿಯಂ ಕಿಮ್ ಪ್ರತಿಕ್ರಿಯಿಸಿದ್ದು, “ಬೀಜಿಂಗ್ ಹೇಳಿಕೊಂಡಂತೆ ಅಮೆರಿಕ ಗಡಿಯ ಹೊರಗಿನಿಂದ ದತ್ತಾಂಶಗಳನ್ನು ಸಂಗ್ರಹಿಸಲು ಚೀನಾದ ಬಲೂನ್ ಉದ್ದೇಶಿಸಿರಬಹುದು, ಆದರೆ ಅಸಮರ್ಪಕವಾಗಿ ಕಾರ್ಯನಿರ್ವಹಿಸುವ ಸಾಧ್ಯತೆಯೂ ಇದೆ” ಎಂದಿದ್ದಾರೆ.

ಮೂರು ಬಸ್‌ಗಳಷ್ಟು ದೊಡ್ಡದಾದ ಬಿಳಿಯ ಗೋಳಾಕಾರದ ಬಲೂನ್‌ಗಳು ಅಮೆರಿಕದ ಮೇಲೆ ಹಾರಾಡುತ್ತಿವೆ. ಇದು ರಾಜತಾಂತ್ರಿಕ ಚರ್ಚೆಗೆ ಕಾರಣವಾಗಿದೆ. ಪರಮಾಣು ಸೂಕ್ಷ್ಮಪ್ರದೇಶವಾಗಿರುವ ಮೊಂಟಾನಾದಲ್ಲಿ ಈ ಬಲೂನ್‌ಗಳು ಹಾರಾಡುತ್ತಿವೆ ಎಂದು ಪೆಂಟಗನ್ ಹೇಳಿದೆ.

ಪೆಂಟಗನ್ ಪತ್ರಿಕಾ ಕಾರ್ಯದರ್ಶಿ ಬ್ರಿಗ್ ಜನರಲ್ ಪ್ಯಾಟ್ ರೈಡರ್ ಪ್ರತಿಕ್ರಿಯಿಸಿದ್ದು, “ಸೂಕ್ಷ್ಮ ಮಾಹಿತಿಗಳ ಸಂಗ್ರಹಣೆಯನ್ನು ತಪ್ಪಿಸಲು ಯುಎಸ್ ತಕ್ಷಣವೇ ಕಾರ್ಯನಿರ್ವಹಿಸಿದೆ” ಎಂದು  ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉತ್ತರ ಅಮೆರಿಕಾದ ಏರೋಸ್ಪೇಸ್ ಡಿಫೆನ್ಸ್ ಕಮಾಂಡ್ ಜಾಗೃತವಾಗಿದ್ದು ಬಲೂನ್ ಅನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸಿದೆ ಎಂದು ರೈಡರ್ ಮಾಹಿತಿ ನೀಡಿದ್ದಾರೆ.

ಏತನ್ಮಧ್ಯೆ, ಮುಂದಿನ ವಾರ ನಡೆಯಬೇಕಿದ್ದ ಬೀಜಿಂಗ್ ಪ್ರವಾಸವನ್ನು ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ರದ್ದುಗೊಳಿಸಿದ್ದಾರೆ.

ಹವಾಮಾನ ಸಂಶೋಧನಾ ಬಲೂನ್‌: ಚೀನಾ

ಅಮೆರಿಕಾಕ್ಕೆ ಬಲೂನ್ ಹಾರಿದ್ದರ ಕುರಿತು ಚೀನಾ ಸ್ಪಷ್ಟನೆ ನೀಡಿದ್ದು, “ಹವಾಮಾನ ಸಂಶೋಧನೆಗಾಗಿ ಬಳಸಲಾದ ನಾಗರಿಕ ವಾಯುನೌಕೆ ಇದಾಗಿದೆ. ಗಾಳಿಯ ರಭಸದಿಂದಾಗಿ ಹಾದಿ ತಪ್ಪಿ ಅಮೆರಿಕ ತಲುಪಿದೆ” ಎಂದು ತಿಳಿಸಿದೆ.

ಚೀನಾದ ವಿದೇಶಾಂಗ ಸಚಿವಾಲಯವು ತನ್ನ ಹೇಳಿಕೆಯಲ್ಲಿ “ವಾಯು ನೌಕೆಯು ಅನಪೇಕ್ಷಿತವಾಗಿ ಅಮೆರಿಕಕ್ಕೆ ಪ್ರವೇಶಿಸಿರುವುದಕ್ಕೆ ವಿಷಾದಿಸುತ್ತೇವೆ” ಎಂದಿದೆ.

ಅಮೆರಿಕ ಏಕೆ ಇನ್ನು ಬಲೂನ್‌ ಹೊಡೆದು ಹಾಕಿಲ್ಲ?

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಆರಂಭದಲ್ಲಿ ಬಲೂನ್ ಅನ್ನು ಒಡೆದು ಹಾಕಲು ಬಯಸಿದ್ದರು. ಆದರೆ ಅಲ್ಲಿನ ಸ್ಥಳೀಯರ ಸುರಕ್ಷತೆಗಳ ಕುರಿತು ಉನ್ನತ ರಕ್ಷಣಾ ಅಧಿಕಾರಿಗಳು ಬಿಡೆನ್‌ ಅವರಿಗೆ ಸಲಹೆ ನೀಡಿದ್ದರಿಂದ ಕ್ರಮ ಜರುಗಿಸಿಲ್ಲ ಎಂದು ಹಿರಿಯ ಆಡಳಿತ ಅಧಿಕಾರಿಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಕಣ್ಗಾವಲು ಬಲೂನ್‌ಗಳ ಪರಿಣಿತರಾಗಿರುವ ವಿಲಿಯಂ ಕಿಮ್ ಕಾರ್ಯಸಾಧ್ಯತೆ ಬಗ್ಗೆ ವಿವರಿಸಿದ್ದು, “ಈ ಬಲೂನುಗಳಲ್ಲಿ ಹೀಲಿಯಂ ಬಳಸಲಾಗಿದೆ. ಇದು ಹಿಂಡೆನ್ಬರ್ಗ್ ಅಲ್ಲ, ನೀವು ಅದನ್ನು ಶೂಟ್ ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

ಮೇ 6, 1937ರಂದು ಸಂಭವಿಸಿದ ಹಿಂಡನ್‌ಬರ್ಗ್ ವಾಯುನೌಕೆ ದುರಂತ ಇತಿಹಾಸ ಪ್ರಸಿದ್ಧವಾಗಿದೆ. ಅದರಲ್ಲಿ ಹೈಡ್ರೋಜನ್ ಅನಿಲ ಬಳಸಲಾಗಿತ್ತು. ಅದು ಸುಮಾರು 90 ಸೆಕೆಂಡುಗಳಲ್ಲಿ ಸುಟ್ಟುಹೋಗಿತ್ತು.

“ನೀವು ಅದಕ್ಕೆ ಪಂಚ್ ಮೂಲಕ ರಂಧ್ರ ಮಾಡಿದರೆ, ಅದು ತುಂಬಾ ನಿಧಾನವಾಗಿ ಸೋರಿಕೆಯಾಗುತ್ತದೆ” ಎಂದಿದ್ದಾರೆ.

1998ರಲ್ಲಿ ಕೆನಡಾದ ವಾಯುಪಡೆಯು ಬೃಹದಾಕಾರದ ವಾಯುನೌಕೆಯನ್ನು ಹೊಡೆದುರುಳಿಸಲು ಎಫ್-18 ಫೈಟರ್ ಜೆಟ್‌ಗಳನ್ನು ಕಳುಹಿಸಿತ್ತು ಎಂದು ಕಿಮ್ ನೆನಪಿಸಿಕೊಂಡಿದ್ದಾರೆ.

“ಅವರು ಅದರೊಳಗೆ ಸಾವಿರದಷ್ಟು 20-ಮಿಲಿಮೀಟರ್ ಫಿರಂಗಿ ಸುತ್ತುಗಳನ್ನು ಹಾರಿಸಿದರು. ಅದು ಅಂತಿಮವಾಗಿ ಕೆಳಗೆ ಬೀಳಲು ಇನ್ನೂ ಆರು ದಿನಗಳನ್ನು ತೆಗೆದುಕೊಂಡಿತು. ನೀವು ಅವರ ಮೇಲೆ ಗುಂಡು ಹಾರಿಸಿದಾಗ ಇವು ಸ್ಫೋಟಗೊಳ್ಳುವ ವಸ್ತುಗಳಾಗಿರುವುದಿಲ್ಲ” ಎಂದಿದ್ದಾರೆ.

ಹಿಂಡನ್‌ಬರ್ಗ್ ದುರಂತದ ಬಗ್ಗೆ ಕನ್ನಡದ ವಿಜ್ಞಾನ ಲೇಖಕರಾದ ನಾಗೇಶ್ ಹೆಗಡೆಯವರು ಇತ್ತೀಚೆಗೆ ವಿವರಿಸಿದ್ದು, “ಹೈಡ್ರೊಜನ್‌ (ಜಲಜನಕ) ಇಡೀ ವಿಶ್ವದಲ್ಲೇ ಅತ್ಯಂತ ದಹನಶೀಲ ಅನಿಲ. ತುಸು ಕಿಡಿ ಹೊಮ್ಮಿದರೂ ಸಾಕು ಢಮಾರೆಂದು ಸ್ಫೋಟವಾಗಿ ಅನಿಲ ಉರಿಯುತ್ತದೆ. ಇಂಥ ಬಲೂನಿನಲ್ಲಿ ಸವಾರಿ ಮಾಡಿ, ಅದು ಸ್ಫೋಟವಾಗಿ ಅದಾಗಲೇ ಅನೇಕರು ಪ್ರಾಣ ಕಳಕೊಂಡಿದ್ದರು. ಆದರೆ ಹಿಂಡನ್‌ಬರ್ಗ್‌ ವಿಮಾನ ಎಂದರೆ (ಟೈಟಾನಿಕ್‌ ಥರಾ) ಅತ್ಯಂತ ಮಜಬೂತಾದ, ಅತ್ಯಂತ ಸುಭದ್ರ ವಿಮಾನಗಳೆಂಬ ಪ್ರತೀತಿ ಇತ್ತು” ಎಂದು ವಿವರಿಸಿದ್ದಾರೆ.

(ಹಿಂಡನ್‌ಬರ್ಗ್ ದುರಂತದ ಬಗ್ಗೆ ನಾಗೇಶ್‌ ಹೆಗಡೆಯವರು ಬರೆದಿರುವ ಲೇಖನವನ್ನು ಮೇಲಿನ ಫೇಸ್‌ಬುಕ್‌ ಲಿಂಕ್‌ ಕ್ಲಿಕ್‌ ಮಾಡಿ ಓದಬಹುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಾಂಡೆಲ್ ಬಂಧನ

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ (ಏಪ್ರಿಲ್ 13) ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿಯ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ...

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...