Homeಮುಖಪುಟಚೀನಾ: ಕೋವಿಡ್ ಕುರಿತು ವರದಿ ಮಾಡಿದ್ದಕ್ಕೆ ಬಂಧಿಸಲ್ಪಟ್ಟಿದ್ದ ಪತ್ರಕರ್ತೆಯ ಬಿಡುಗಡೆ

ಚೀನಾ: ಕೋವಿಡ್ ಕುರಿತು ವರದಿ ಮಾಡಿದ್ದಕ್ಕೆ ಬಂಧಿಸಲ್ಪಟ್ಟಿದ್ದ ಪತ್ರಕರ್ತೆಯ ಬಿಡುಗಡೆ

- Advertisement -
- Advertisement -

ಚೀನಾ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ವರದಿ ಮಾಡಿದ್ದಕ್ಕೆ 2020ರಲ್ಲಿ ಬಂಧಿಸಲ್ಪಟ್ಟಿದ್ದ ಪತ್ರಕರ್ತೆ ಝಾಂಗ್ ಝಾನ್ ಅವರು ನಾಲ್ಕು ವರ್ಷದ ಸೆರೆವಾಸದ ಬಳಿಕ ಬಿಡುಗಡೆಗೊಂಡಿರುವುದಾಗಿ ವರದಿಯಾಗಿದೆ.

ಆದರೆ, ಝಾಂಗ್ ಝಾನ್ ಇನ್ನೂ ಸರ್ಕಾರದ ಕಣ್ಗಾವಲಿನಲ್ಲಿದ್ದು, ಅವರ ಸ್ವಾತಂತ್ರ್ಯ ಸೀಮಿತವಾಗಿದೆ ಎಂದು ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ.

2020ರ ಫೆಬ್ರವರಿಯಲ್ಲಿ ಕೋವಿಡ್-19 ಸೋಂಕಿನ ಹಾಟ್‌ ಸ್ಪಾಟ್ ಎನಿಸಿಕೊಂಡಿದ್ದ ಚೀನಾದ ವುಹಾನ್ ನಗರಕ್ಕೆ ತೆರಳಿದ್ದ ಪತ್ರಕರ್ತೆ ಝಾಂಗ್, ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ವರದಿ ಮಾಡಿದ್ದರು. ಅಲ್ಲಿನ ಅಧಿಕಾರಿಗಳನ್ನು ಪ್ರಶ್ನಿಸಿದ್ದರು. ಸರ್ಕಾರಿ ಅಧಿಕಾರಿಗಳೊಂದಿಗೆ ಜಗಳವಾಡಿ ಸಮಸ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಝಾಂಗ್ ಅವರನ್ನು 2020ರ ಮೇ ತಿಂಗಳಲ್ಲಿ ಬಂಧಿಸಿ 4 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಝಾಂಗ್ ಝಾನ್ ಅವರು 2024ರ ಮೇ 13ರಂದು ಜೈಲಿನಿಂದ ಬಿಡುಗಡೆಯಾಗಬೇಕಿತ್ತು. ಅವರು ಬಿಡುಗಡೆಯಾಗಿದ್ದಾರೆ ಎಂದು ಹೇಳಲಾಗ್ತಿದೆ. ಆದರೆ, ಆಕೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುತ್ತಿಲ್ಲ. ಹಾಗಾಗಿ, ಆಕೆ ಇನ್ನೂ ಬಂಧನಲ್ಲಿರಬಹುದಾ? ಎಂಬ ಕಳವಳವನ್ನು ಮಾನವ ಹಕ್ಕುಗಳ ಸಂಸ್ಥೆ ವ್ಯಕ್ತಪಡಿಸಿದೆ.

“ಝಾಂಗ್ ಅವರ ಸಣ್ಣ ವಿಡಿಯೋ ತುಣುಕೊಂಡು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬುಧವಾರ ಹಂಚಿಕೊಂಡಿದೆ. ಅದರಲ್ಲಿ ಆಕೆ, “ಪೊಲೀಸರು ನನ್ನನ್ನು ಮೇ 13ರಂದು ಬೆಳಿಗ್ಗೆ ಐದು ಗಂಟೆಗೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಶಾಂಘೈನಲ್ಲಿರುವ ನನ್ನ ಅಣ್ಣನ ಮನೆಗೆ ಕಳುಹಿಸಿದ್ದಾರೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಮೃದುವಾದ ಧ್ವನಿಯಲ್ಲಿ ಹೇಳಿರುವುದು ಇದೆ. ಆ ವಿಡಿಯೋ ಆಧರಿಸಿ ಆಕೆ ಬಿಡುಗಡೆಯಾಗಿರುವುದನ್ನು ಖಚಿತಪಡಿಸಬಹುದು ಎಂದು ವರದಿಗಳು ತಿಳಿಸಿವೆ.

ಪತ್ರಕರ್ತೆ ಝಾಂಗ್ ಝಾನ್ ಅವರನ್ನು 2020ರಲ್ಲಿ ಬಂಧಿಸಿದಾಗ, ಅದು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ಪ್ರಶ್ನಿಸಿದ ಪತ್ರಕರ್ತೆಯನ್ನು ಬಂಧಿಸಿದ ಚೀನಾ ಸರ್ಕಾರದ ವಿರುದ್ದ ಸರ್ವಾಧಿಕಾರದ ಆರೋಪ ಕೇಳಿ ಬಂದಿತ್ತು. ಜಾಗತಿಕ ಸಂಸ್ಥೆಗಳು ಚೀನಾದ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು. ಅನೇಕ ದೇಶಗಳಿಂದ ಝಾಂಗ್ ಝಾನ್ ಅವರಿಗೆ ಬೆಂಬಲ ವ್ಯಕ್ತವಾಗಿತ್ತು.

ಇದನ್ನೂ ಓದಿ : ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...