Homeಮುಖಪುಟಚೀನಾ: ಕೋವಿಡ್ ಕುರಿತು ವರದಿ ಮಾಡಿದ್ದಕ್ಕೆ ಬಂಧಿಸಲ್ಪಟ್ಟಿದ್ದ ಪತ್ರಕರ್ತೆಯ ಬಿಡುಗಡೆ

ಚೀನಾ: ಕೋವಿಡ್ ಕುರಿತು ವರದಿ ಮಾಡಿದ್ದಕ್ಕೆ ಬಂಧಿಸಲ್ಪಟ್ಟಿದ್ದ ಪತ್ರಕರ್ತೆಯ ಬಿಡುಗಡೆ

- Advertisement -
- Advertisement -

ಚೀನಾ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ವರದಿ ಮಾಡಿದ್ದಕ್ಕೆ 2020ರಲ್ಲಿ ಬಂಧಿಸಲ್ಪಟ್ಟಿದ್ದ ಪತ್ರಕರ್ತೆ ಝಾಂಗ್ ಝಾನ್ ಅವರು ನಾಲ್ಕು ವರ್ಷದ ಸೆರೆವಾಸದ ಬಳಿಕ ಬಿಡುಗಡೆಗೊಂಡಿರುವುದಾಗಿ ವರದಿಯಾಗಿದೆ.

ಆದರೆ, ಝಾಂಗ್ ಝಾನ್ ಇನ್ನೂ ಸರ್ಕಾರದ ಕಣ್ಗಾವಲಿನಲ್ಲಿದ್ದು, ಅವರ ಸ್ವಾತಂತ್ರ್ಯ ಸೀಮಿತವಾಗಿದೆ ಎಂದು ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ.

2020ರ ಫೆಬ್ರವರಿಯಲ್ಲಿ ಕೋವಿಡ್-19 ಸೋಂಕಿನ ಹಾಟ್‌ ಸ್ಪಾಟ್ ಎನಿಸಿಕೊಂಡಿದ್ದ ಚೀನಾದ ವುಹಾನ್ ನಗರಕ್ಕೆ ತೆರಳಿದ್ದ ಪತ್ರಕರ್ತೆ ಝಾಂಗ್, ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ವರದಿ ಮಾಡಿದ್ದರು. ಅಲ್ಲಿನ ಅಧಿಕಾರಿಗಳನ್ನು ಪ್ರಶ್ನಿಸಿದ್ದರು. ಸರ್ಕಾರಿ ಅಧಿಕಾರಿಗಳೊಂದಿಗೆ ಜಗಳವಾಡಿ ಸಮಸ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಝಾಂಗ್ ಅವರನ್ನು 2020ರ ಮೇ ತಿಂಗಳಲ್ಲಿ ಬಂಧಿಸಿ 4 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಝಾಂಗ್ ಝಾನ್ ಅವರು 2024ರ ಮೇ 13ರಂದು ಜೈಲಿನಿಂದ ಬಿಡುಗಡೆಯಾಗಬೇಕಿತ್ತು. ಅವರು ಬಿಡುಗಡೆಯಾಗಿದ್ದಾರೆ ಎಂದು ಹೇಳಲಾಗ್ತಿದೆ. ಆದರೆ, ಆಕೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುತ್ತಿಲ್ಲ. ಹಾಗಾಗಿ, ಆಕೆ ಇನ್ನೂ ಬಂಧನಲ್ಲಿರಬಹುದಾ? ಎಂಬ ಕಳವಳವನ್ನು ಮಾನವ ಹಕ್ಕುಗಳ ಸಂಸ್ಥೆ ವ್ಯಕ್ತಪಡಿಸಿದೆ.

“ಝಾಂಗ್ ಅವರ ಸಣ್ಣ ವಿಡಿಯೋ ತುಣುಕೊಂಡು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬುಧವಾರ ಹಂಚಿಕೊಂಡಿದೆ. ಅದರಲ್ಲಿ ಆಕೆ, “ಪೊಲೀಸರು ನನ್ನನ್ನು ಮೇ 13ರಂದು ಬೆಳಿಗ್ಗೆ ಐದು ಗಂಟೆಗೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಶಾಂಘೈನಲ್ಲಿರುವ ನನ್ನ ಅಣ್ಣನ ಮನೆಗೆ ಕಳುಹಿಸಿದ್ದಾರೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಮೃದುವಾದ ಧ್ವನಿಯಲ್ಲಿ ಹೇಳಿರುವುದು ಇದೆ. ಆ ವಿಡಿಯೋ ಆಧರಿಸಿ ಆಕೆ ಬಿಡುಗಡೆಯಾಗಿರುವುದನ್ನು ಖಚಿತಪಡಿಸಬಹುದು ಎಂದು ವರದಿಗಳು ತಿಳಿಸಿವೆ.

ಪತ್ರಕರ್ತೆ ಝಾಂಗ್ ಝಾನ್ ಅವರನ್ನು 2020ರಲ್ಲಿ ಬಂಧಿಸಿದಾಗ, ಅದು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು. ಪ್ರಶ್ನಿಸಿದ ಪತ್ರಕರ್ತೆಯನ್ನು ಬಂಧಿಸಿದ ಚೀನಾ ಸರ್ಕಾರದ ವಿರುದ್ದ ಸರ್ವಾಧಿಕಾರದ ಆರೋಪ ಕೇಳಿ ಬಂದಿತ್ತು. ಜಾಗತಿಕ ಸಂಸ್ಥೆಗಳು ಚೀನಾದ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು. ಅನೇಕ ದೇಶಗಳಿಂದ ಝಾಂಗ್ ಝಾನ್ ಅವರಿಗೆ ಬೆಂಬಲ ವ್ಯಕ್ತವಾಗಿತ್ತು.

ಇದನ್ನೂ ಓದಿ : ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...