Homeಮುಖಪುಟಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

- Advertisement -
- Advertisement -

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ.

ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ನಿಯೋಗ, ಮಂಗಳವಾರ (ಜ.13) ಆರ್‌ಎಸ್‌ಎಸ್‌ ಕಚೇರಿಯಲ್ಲಿ, ಅದರ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಎಂದು ತಿಳಿದು ಬಂದಿದೆ.

ಬಿಜೆಪಿಯ ದೆಹಲಿ ಕಚೇರಿಗೆ ಸಿಪಿಸಿ ನಿಯೋಗ ಭೇಟಿ ನೀಡಿರುವ ಮಾಹಿತಿಯನ್ನು, ಬಿಜೆಪಿಯ ವಿದೇಶಾಂಗ ವ್ಯವಹಾರಗಳ ಘಟಕದ ಮುಖ್ಯಸ್ಥ ವಿಜಯ್ ಚೌತೈವಾಲೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, “ಅಂತಾರಾಷ್ಟ್ರೀಯ ಸಂಪರ್ಕ ವಿಭಾಗದ ಉಪಾಧ್ಯಕ್ಷರಾಗಿರುವ ಸನ್ ಹೈಯಾನ್ ನೇತೃತ್ವದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವು ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದೆ” ಎಂದು ಹೇಳಿದ್ದಾರೆ.

“ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು ‘ಬಿಜೆಪಿ ಮತ್ತು ಸಿಪಿಸಿ’ ನಡುವಿನ ಅಂತರ-ಪಕ್ಷ ಸಂವಹನವನ್ನು ಹೇಗೆ ಮುಂದುವರಿಸುವುದು ಎಂಬುದರ ಕುರಿತು ದೀರ್ಘವಾಗಿ ಚರ್ಚಿಸಿದೆ” ಎಂದು ಚೌತೈವಾಲೆ ತಿಳಿಸಿದ್ದಾರೆ.

ಮಂಗಳವಾರ ಕೇಶವ್ ಕುಂಜ್‌ನಲ್ಲಿರುವ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯಲ್ಲಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿಯಾದ ನಿಯೋಗ ಸುಮಾರು30-40 ನಿಮಿಷ ಮಾತುಕತೆ ನಡೆಸಿದೆ. ಇದು ಸೌಜನ್ಯಯುತ ಭೇಟಿ, ಆರ್‌ಎಸ್‌ಎಸ್‌ನ ಕಾರ್ಯನಿರ್ವಹಣೆಯ ಬಗ್ಗೆ ನಿಯೋಗ ಮಾಹಿತಿ ಪಡೆದುಕೊಂಡಿದೆ ಎಂದು ವರದಿಗಳು ಹೇಳಿವೆ.

ಬಿಜೆಪಿ ಮತ್ತು ಚೀನಾ ಕಮ್ಯುನಿಸ್ಟ್ ಪಕ್ಷಗಳು 2000ರ ದಶಕದ ಅಂತ್ಯದಿಂದಲೂ ಒಳ್ಳೆಯ ಸಂಪರ್ಕದಲ್ಲಿವೆ. ಬಿಜೆಪಿಯ ಹಲವಾರು ನಿಯೋಗಗಳು ಚೀನಾದ ನಾಯಕರನ್ನು ಭೇಟಿ ಮಾಡಲು ಬೀಜಿಂಗ್‌ಗೆ ಭೇಟಿ ನೀಡಿವೆ. 2009ರಲ್ಲಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರ ನಿಯೋಗವು ಚೀನಾಕ್ಕೆ ಭೇಟಿ ನೀಡಿತ್ತು ಎಂದು ವರದಿಗಳು ಉಲ್ಲೇಖಿಸಿವೆ.

ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವು ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರನ್ನು ಕೂಡ ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಪಕ್ಷದ ನಾಯಕರೊಬ್ಬರನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.

ಈ ನಡುವೆ, ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ ಮಂಗಳವಾರ ಚೀನಾದ ನಿಯೋಗದೊಂದಿಗಿನ ಬಿಜೆಪಿ ಸಭೆಯನ್ನು ಟೀಕಿಸಿದ್ದಾರೆ.

“ಆಪರೇಷನ್ ಸಿಂಧೂರ್ ಸಮಯದಲ್ಲಿ ಚೀನಾ ಪಾಕಿಸ್ತಾನವನ್ನು ಬೆಂಬಲಿಸಿತ್ತು” ಎಂದು ಶ್ರೀನಾತೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. “ನಮ್ಮ ಧೈರ್ಯಶಾಲಿ ಸೈನಿಕರು ಗಾಲ್ವಾನ್‌ನಲ್ಲಿ ಹುತಾತ್ಮರಾದರು. ಲಡಾಖ್‌ನಲ್ಲಿ ಅತಿಕ್ರಮಣ ಮಾಡಿದ ನಂತರ ಚೀನಾ ಅಲ್ಲಿಯೇ ಕುಳಿತಿದೆ. ಅದು ಅರುಣಾಚಲ ಪ್ರದೇಶದ ಹಳ್ಳಿಗಳನ್ನು ಕಬಳಿಸುತ್ತಿದೆ. ಇಲ್ಲಿ, ಅಪ್ಪುಗೆಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, ತಮ್ಮ ಪಕ್ಷವು ತನ್ನ ಚೀನಾ ನೀತಿಯ ಬಗ್ಗೆ ಸರ್ಕಾರದಿಂದ ಸಂಪೂರ್ಣ ಹೊಣೆಗಾರಿಕೆ ಮತ್ತು ಸಂಪೂರ್ಣ ಪಾರದರ್ಶಕತೆಯನ್ನು ಬಯಸುತ್ತದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ತುಹಿನ್ ಸಿನ್ಹಾ, “ಇದು ಔಪಚಾರಿಕ ಸಭೆಯ ಪ್ರಕ್ರಿಯೆಯಾಗಿತ್ತು. ಪರಿಸ್ಥಿತಿ ಸುಧಾರಿಸಿದಾಗ ಔಪಚಾರಿಕ ಸಭೆ ನಡೆಯುತ್ತದೆ. ನಾವು ಅದನ್ನು ಬಹಳ ಬಹಿರಂಗವಾಗಿ ಮಾಡುತ್ತೇವೆ” ಎಂದಿದ್ದಾರೆ.

“ನಾವು ವರ್ಷಗಳ ಕಾಲ ವಿವರಿಸಲು ಸಾಧ್ಯವಾಗದ ಯಾವುದೇ ತಿಳುವಳಿಕೆ ಒಪ್ಪಂದಕ್ಕೆ ರಹಸ್ಯವಾಗಿ ಸಹಿ ಹಾಕುವುದಿಲ್ಲ” ಎಂದು ಹೇಳಿದ್ದಾರೆ. ಕಾಂಗ್ರೆಸ್ ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂಬುವುದು ಬಿಜೆಪಿಯ ಆರೋಪವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...