Homeಮುಖಪುಟಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

- Advertisement -
- Advertisement -

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ.

ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ನಿಯೋಗ, ಮಂಗಳವಾರ (ಜ.13) ಆರ್‌ಎಸ್‌ಎಸ್‌ ಕಚೇರಿಯಲ್ಲಿ, ಅದರ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಎಂದು ತಿಳಿದು ಬಂದಿದೆ.

ಬಿಜೆಪಿಯ ದೆಹಲಿ ಕಚೇರಿಗೆ ಸಿಪಿಸಿ ನಿಯೋಗ ಭೇಟಿ ನೀಡಿರುವ ಮಾಹಿತಿಯನ್ನು, ಬಿಜೆಪಿಯ ವಿದೇಶಾಂಗ ವ್ಯವಹಾರಗಳ ಘಟಕದ ಮುಖ್ಯಸ್ಥ ವಿಜಯ್ ಚೌತೈವಾಲೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, “ಅಂತಾರಾಷ್ಟ್ರೀಯ ಸಂಪರ್ಕ ವಿಭಾಗದ ಉಪಾಧ್ಯಕ್ಷರಾಗಿರುವ ಸನ್ ಹೈಯಾನ್ ನೇತೃತ್ವದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವು ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದೆ” ಎಂದು ಹೇಳಿದ್ದಾರೆ.

“ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು ‘ಬಿಜೆಪಿ ಮತ್ತು ಸಿಪಿಸಿ’ ನಡುವಿನ ಅಂತರ-ಪಕ್ಷ ಸಂವಹನವನ್ನು ಹೇಗೆ ಮುಂದುವರಿಸುವುದು ಎಂಬುದರ ಕುರಿತು ದೀರ್ಘವಾಗಿ ಚರ್ಚಿಸಿದೆ” ಎಂದು ಚೌತೈವಾಲೆ ತಿಳಿಸಿದ್ದಾರೆ.

ಮಂಗಳವಾರ ಕೇಶವ್ ಕುಂಜ್‌ನಲ್ಲಿರುವ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯಲ್ಲಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿಯಾದ ನಿಯೋಗ ಸುಮಾರು30-40 ನಿಮಿಷ ಮಾತುಕತೆ ನಡೆಸಿದೆ. ಇದು ಸೌಜನ್ಯಯುತ ಭೇಟಿ, ಆರ್‌ಎಸ್‌ಎಸ್‌ನ ಕಾರ್ಯನಿರ್ವಹಣೆಯ ಬಗ್ಗೆ ನಿಯೋಗ ಮಾಹಿತಿ ಪಡೆದುಕೊಂಡಿದೆ ಎಂದು ವರದಿಗಳು ಹೇಳಿವೆ.

ಬಿಜೆಪಿ ಮತ್ತು ಚೀನಾ ಕಮ್ಯುನಿಸ್ಟ್ ಪಕ್ಷಗಳು 2000ರ ದಶಕದ ಅಂತ್ಯದಿಂದಲೂ ಒಳ್ಳೆಯ ಸಂಪರ್ಕದಲ್ಲಿವೆ. ಬಿಜೆಪಿಯ ಹಲವಾರು ನಿಯೋಗಗಳು ಚೀನಾದ ನಾಯಕರನ್ನು ಭೇಟಿ ಮಾಡಲು ಬೀಜಿಂಗ್‌ಗೆ ಭೇಟಿ ನೀಡಿವೆ. 2009ರಲ್ಲಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರ ನಿಯೋಗವು ಚೀನಾಕ್ಕೆ ಭೇಟಿ ನೀಡಿತ್ತು ಎಂದು ವರದಿಗಳು ಉಲ್ಲೇಖಿಸಿವೆ.

ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವು ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರನ್ನು ಕೂಡ ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಪಕ್ಷದ ನಾಯಕರೊಬ್ಬರನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.

ಈ ನಡುವೆ, ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ ಮಂಗಳವಾರ ಚೀನಾದ ನಿಯೋಗದೊಂದಿಗಿನ ಬಿಜೆಪಿ ಸಭೆಯನ್ನು ಟೀಕಿಸಿದ್ದಾರೆ.

“ಆಪರೇಷನ್ ಸಿಂಧೂರ್ ಸಮಯದಲ್ಲಿ ಚೀನಾ ಪಾಕಿಸ್ತಾನವನ್ನು ಬೆಂಬಲಿಸಿತ್ತು” ಎಂದು ಶ್ರೀನಾತೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. “ನಮ್ಮ ಧೈರ್ಯಶಾಲಿ ಸೈನಿಕರು ಗಾಲ್ವಾನ್‌ನಲ್ಲಿ ಹುತಾತ್ಮರಾದರು. ಲಡಾಖ್‌ನಲ್ಲಿ ಅತಿಕ್ರಮಣ ಮಾಡಿದ ನಂತರ ಚೀನಾ ಅಲ್ಲಿಯೇ ಕುಳಿತಿದೆ. ಅದು ಅರುಣಾಚಲ ಪ್ರದೇಶದ ಹಳ್ಳಿಗಳನ್ನು ಕಬಳಿಸುತ್ತಿದೆ. ಇಲ್ಲಿ, ಅಪ್ಪುಗೆಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, ತಮ್ಮ ಪಕ್ಷವು ತನ್ನ ಚೀನಾ ನೀತಿಯ ಬಗ್ಗೆ ಸರ್ಕಾರದಿಂದ ಸಂಪೂರ್ಣ ಹೊಣೆಗಾರಿಕೆ ಮತ್ತು ಸಂಪೂರ್ಣ ಪಾರದರ್ಶಕತೆಯನ್ನು ಬಯಸುತ್ತದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ತುಹಿನ್ ಸಿನ್ಹಾ, “ಇದು ಔಪಚಾರಿಕ ಸಭೆಯ ಪ್ರಕ್ರಿಯೆಯಾಗಿತ್ತು. ಪರಿಸ್ಥಿತಿ ಸುಧಾರಿಸಿದಾಗ ಔಪಚಾರಿಕ ಸಭೆ ನಡೆಯುತ್ತದೆ. ನಾವು ಅದನ್ನು ಬಹಳ ಬಹಿರಂಗವಾಗಿ ಮಾಡುತ್ತೇವೆ” ಎಂದಿದ್ದಾರೆ.

“ನಾವು ವರ್ಷಗಳ ಕಾಲ ವಿವರಿಸಲು ಸಾಧ್ಯವಾಗದ ಯಾವುದೇ ತಿಳುವಳಿಕೆ ಒಪ್ಪಂದಕ್ಕೆ ರಹಸ್ಯವಾಗಿ ಸಹಿ ಹಾಕುವುದಿಲ್ಲ” ಎಂದು ಹೇಳಿದ್ದಾರೆ. ಕಾಂಗ್ರೆಸ್ ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂಬುವುದು ಬಿಜೆಪಿಯ ಆರೋಪವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...