Homeಮುಖಪುಟಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

- Advertisement -
- Advertisement -

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ.

ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ನಿಯೋಗ, ಮಂಗಳವಾರ (ಜ.13) ಆರ್‌ಎಸ್‌ಎಸ್‌ ಕಚೇರಿಯಲ್ಲಿ, ಅದರ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಎಂದು ತಿಳಿದು ಬಂದಿದೆ.

ಬಿಜೆಪಿಯ ದೆಹಲಿ ಕಚೇರಿಗೆ ಸಿಪಿಸಿ ನಿಯೋಗ ಭೇಟಿ ನೀಡಿರುವ ಮಾಹಿತಿಯನ್ನು, ಬಿಜೆಪಿಯ ವಿದೇಶಾಂಗ ವ್ಯವಹಾರಗಳ ಘಟಕದ ಮುಖ್ಯಸ್ಥ ವಿಜಯ್ ಚೌತೈವಾಲೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, “ಅಂತಾರಾಷ್ಟ್ರೀಯ ಸಂಪರ್ಕ ವಿಭಾಗದ ಉಪಾಧ್ಯಕ್ಷರಾಗಿರುವ ಸನ್ ಹೈಯಾನ್ ನೇತೃತ್ವದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವು ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದೆ” ಎಂದು ಹೇಳಿದ್ದಾರೆ.

“ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು ‘ಬಿಜೆಪಿ ಮತ್ತು ಸಿಪಿಸಿ’ ನಡುವಿನ ಅಂತರ-ಪಕ್ಷ ಸಂವಹನವನ್ನು ಹೇಗೆ ಮುಂದುವರಿಸುವುದು ಎಂಬುದರ ಕುರಿತು ದೀರ್ಘವಾಗಿ ಚರ್ಚಿಸಿದೆ” ಎಂದು ಚೌತೈವಾಲೆ ತಿಳಿಸಿದ್ದಾರೆ.

ಮಂಗಳವಾರ ಕೇಶವ್ ಕುಂಜ್‌ನಲ್ಲಿರುವ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯಲ್ಲಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿಯಾದ ನಿಯೋಗ ಸುಮಾರು30-40 ನಿಮಿಷ ಮಾತುಕತೆ ನಡೆಸಿದೆ. ಇದು ಸೌಜನ್ಯಯುತ ಭೇಟಿ, ಆರ್‌ಎಸ್‌ಎಸ್‌ನ ಕಾರ್ಯನಿರ್ವಹಣೆಯ ಬಗ್ಗೆ ನಿಯೋಗ ಮಾಹಿತಿ ಪಡೆದುಕೊಂಡಿದೆ ಎಂದು ವರದಿಗಳು ಹೇಳಿವೆ.

ಬಿಜೆಪಿ ಮತ್ತು ಚೀನಾ ಕಮ್ಯುನಿಸ್ಟ್ ಪಕ್ಷಗಳು 2000ರ ದಶಕದ ಅಂತ್ಯದಿಂದಲೂ ಒಳ್ಳೆಯ ಸಂಪರ್ಕದಲ್ಲಿವೆ. ಬಿಜೆಪಿಯ ಹಲವಾರು ನಿಯೋಗಗಳು ಚೀನಾದ ನಾಯಕರನ್ನು ಭೇಟಿ ಮಾಡಲು ಬೀಜಿಂಗ್‌ಗೆ ಭೇಟಿ ನೀಡಿವೆ. 2009ರಲ್ಲಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರ ನಿಯೋಗವು ಚೀನಾಕ್ಕೆ ಭೇಟಿ ನೀಡಿತ್ತು ಎಂದು ವರದಿಗಳು ಉಲ್ಲೇಖಿಸಿವೆ.

ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವು ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರನ್ನು ಕೂಡ ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಪಕ್ಷದ ನಾಯಕರೊಬ್ಬರನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.

ಈ ನಡುವೆ, ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ ಮಂಗಳವಾರ ಚೀನಾದ ನಿಯೋಗದೊಂದಿಗಿನ ಬಿಜೆಪಿ ಸಭೆಯನ್ನು ಟೀಕಿಸಿದ್ದಾರೆ.

“ಆಪರೇಷನ್ ಸಿಂಧೂರ್ ಸಮಯದಲ್ಲಿ ಚೀನಾ ಪಾಕಿಸ್ತಾನವನ್ನು ಬೆಂಬಲಿಸಿತ್ತು” ಎಂದು ಶ್ರೀನಾತೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. “ನಮ್ಮ ಧೈರ್ಯಶಾಲಿ ಸೈನಿಕರು ಗಾಲ್ವಾನ್‌ನಲ್ಲಿ ಹುತಾತ್ಮರಾದರು. ಲಡಾಖ್‌ನಲ್ಲಿ ಅತಿಕ್ರಮಣ ಮಾಡಿದ ನಂತರ ಚೀನಾ ಅಲ್ಲಿಯೇ ಕುಳಿತಿದೆ. ಅದು ಅರುಣಾಚಲ ಪ್ರದೇಶದ ಹಳ್ಳಿಗಳನ್ನು ಕಬಳಿಸುತ್ತಿದೆ. ಇಲ್ಲಿ, ಅಪ್ಪುಗೆಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, ತಮ್ಮ ಪಕ್ಷವು ತನ್ನ ಚೀನಾ ನೀತಿಯ ಬಗ್ಗೆ ಸರ್ಕಾರದಿಂದ ಸಂಪೂರ್ಣ ಹೊಣೆಗಾರಿಕೆ ಮತ್ತು ಸಂಪೂರ್ಣ ಪಾರದರ್ಶಕತೆಯನ್ನು ಬಯಸುತ್ತದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ತುಹಿನ್ ಸಿನ್ಹಾ, “ಇದು ಔಪಚಾರಿಕ ಸಭೆಯ ಪ್ರಕ್ರಿಯೆಯಾಗಿತ್ತು. ಪರಿಸ್ಥಿತಿ ಸುಧಾರಿಸಿದಾಗ ಔಪಚಾರಿಕ ಸಭೆ ನಡೆಯುತ್ತದೆ. ನಾವು ಅದನ್ನು ಬಹಳ ಬಹಿರಂಗವಾಗಿ ಮಾಡುತ್ತೇವೆ” ಎಂದಿದ್ದಾರೆ.

“ನಾವು ವರ್ಷಗಳ ಕಾಲ ವಿವರಿಸಲು ಸಾಧ್ಯವಾಗದ ಯಾವುದೇ ತಿಳುವಳಿಕೆ ಒಪ್ಪಂದಕ್ಕೆ ರಹಸ್ಯವಾಗಿ ಸಹಿ ಹಾಕುವುದಿಲ್ಲ” ಎಂದು ಹೇಳಿದ್ದಾರೆ. ಕಾಂಗ್ರೆಸ್ ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂಬುವುದು ಬಿಜೆಪಿಯ ಆರೋಪವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...