Homeಮುಖಪುಟಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಕಳೆದ ತಿಂಗಳು ಲಡಾಖ್ ಗಡಿಯಲ್ಲಿ 20 ಭಾರತೀಯ ಸೇನಾ ಸಿಬ್ಬಂದಿಗಳ ಸಾವಿಗೆ ಕಾರಣವಾಗಿದ್ದ ಘರ್ಷಣೆಯ ಹಿನ್ನಲೆಯಲ್ಲಿ ಸಚಿವರ ಪ್ರತಿಪಾದನೆಯು ಮಹತ್ವವನ್ನು ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತವು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕಿದೆ ಎಂದು 59 ಚೀನಿ ಆ್ಯಪ್‌ಗಳನ್ನು ನಿಷೇಧಿಸಿದೆ.

- Advertisement -
- Advertisement -

ಜಂಟಿ ಉದ್ಯಮಗಳು ಸೇರಿದಂತೆ ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ಅತೀಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮ (ಎಂಎಸ್‌ಎಂಇ) ದಂತಹ ವಿವಿಧ ಕ್ಷೇತ್ರಗಳಲ್ಲಿ ಚೀನಾದ ಹೂಡಿಕೆದಾರರಿಗೆ ಅವಕಾಶ ಸಿಗದಂತೆ ಸರ್ಕಾರ ಖಚಿತಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಲಡಾಖ್ ಗಡಿಯಲ್ಲಿ 20 ಭಾರತೀಯ ಸೇನಾ ಸಿಬ್ಬಂದಿಗಳ ಸಾವಿಗೆ ಕಾರಣವಾಗಿದ್ದ ಘರ್ಷಣೆಯ ಹಿನ್ನಲೆಯಲ್ಲಿ ಸಚಿವರ ಪ್ರತಿಪಾದನೆಯು ಮಹತ್ವವನ್ನು ಪಡೆದುಕೊಂಡಿದೆ.

ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತವು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕಿದೆ ಎಂದು 59 ಚೀನಿ ಆ್ಯಪ್‌ಗಳನ್ನು ನಿಷೇಧಿಸಿದೆ.

ಪಿಟಿಐ ಸಂದರ್ಶನವೊಂದರಲ್ಲಿ ಮಾತನಾಡಿದ ಸಚಿವರು “ರಸ್ತೆ ನಿರ್ಮಾಣಕ್ಕಾಗಿ ಚೀನಾದ ಪಾಲುದಾರರನ್ನು ಹೊಂದಿರುವ ಜಂಟಿ ಉದ್ಯಮಗಳಿಗೆ ನಾವು ಅನುಮತಿ ನೀಡುವುದಿಲ್ಲ. ಅವರು (ಚೀನೀ ಕಂಪನಿಗಳು) ನಮ್ಮ ದೇಶದಲ್ಲಿ ಜಂಟಿ ಉದ್ಯಮದ ಮೂಲಕ ಬಂದರೆ ನಾವು ಅದನ್ನು ಅನುಮತಿಸುವುದಿಲ್ಲ ಎಂದು ನಾವು ದೃಢವಾದ ನಿಲುವನ್ನು ತೆಗೆದುಕೊಂಡಿದ್ದೇವೆ” ಎಂದು ಹೇಳಿದರು.

ಹೆದ್ದಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲು ತಮ್ಮ ಅರ್ಹತಾ ಮಾನದಂಡಗಳನ್ನು ವಿಸ್ತರಿಸಿ ಚೀನಾದ ಸಂಸ್ಥೆಗಳನ್ನು ನಿಷೇಧಿಸುವುದು ಮತ್ತು ಭಾರತೀಯ ಕಂಪನಿಗಳಿಗೆ ದಾರಿಗಳನ್ನು ಸಡಿಲಿಸುವುದು ಎಂಬ ನೀತಿಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಈಗಾಗಲೇ ಚೀನಾದ ಕೆಲವು ಪಾಲುದಾರರನ್ನು ಒಳಗೊಂಡಿರುವ ಕೆಲವು ಯೋಜನೆಗಳ ಬಗ್ಗೆ ಕೇಳಿದ ಪ್ರಶ್ನೆಗೆ “ಹೊಸ ನಿರ್ಧಾರವನ್ನು ಪ್ರಸ್ತುತ ಮತ್ತು ಭವಿಷ್ಯದ ಟೆಂಡರ್‌ಗಳಲ್ಲಿ ಜಾರಿಗೆ ತರಲಾಗುವುದು” ಎಂದು ಹೇಳಿದರು.

ಅಸ್ತಿತ್ವದಲ್ಲಿರುವ ಟೆಂಡರ್‌ಗಳು ಮತ್ತು ಭವಿಷ್ಯದ ಬಿಡ್‌ಗಳಿಗೆ ಸಂಬಂಧಿಸಿದಂತೆ, ಚೀನಾದ ಯಾವುದೇ ಜಂಟಿ ಉದ್ಯಮಗಳು ಇದ್ದಲ್ಲಿ ಮರುಬಿಡ್ ಮಾಡಲಾಗುವುದು ಎಂದು ಗಡ್ಕರಿ ಹೇಳಿದರು.

“ನಮ್ಮ ಕಂಪನಿಗಳು ದೊಡ್ಡ ಯೋಜನೆಗಳಲ್ಲಿ ಬಿಡ್ಡಿಂಗ್ ಮಾಡಲು ಅರ್ಹತೆ ಹೊಂದಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾವು ನಿಯಮಗಳನ್ನು ಸಡಿಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ತಾಂತ್ರಿಕ ಮತ್ತು ಆರ್ಥಿಕ ಮಾನದಂಡಗಳನ್ನು ಸಡಿಲಿಸಲು ಸಭೆ ನಡೆಸಲು ನಾನು ಹೆದ್ದಾರಿಗಳ ಕಾರ್ಯದರ್ಶಿ (ಗಿರಿಧರ್ ಅರಮನೆ) ಮತ್ತು ಎನ್‌ಎಚ್‌ಎಐ ಅಧ್ಯಕ್ಷ (ಎಸ್‌ಎಸ್ ಸಂಧು) ಅವರಿಗೆ ನಿರ್ದೇಶನ ನೀಡಿದ್ದೇನೆ. ಆದ್ದರಿಂದ ನಮ್ಮ ಕಂಪನಿಗಳು ಕೆಲಸ ಮಾಡಲು ಅರ್ಹತೆ ಪಡೆಯಬಹುದು “ಎಂದು ಅವರು ಹೇಳಿದರು.

ನಿರ್ಧಾರವನ್ನು ವಿಸ್ತಾರವಾಗಿ ವಿವರಿಸಿದ ಗಡ್ಕರಿ, ಗುತ್ತಿಗೆದಾರನು ಸಣ್ಣ ಯೋಜನೆಗೆ ಅರ್ಹತೆ ಗಳಿಸಬಹುದಾದರೆ, ಅವನು ದೊಡ್ಡ ಯೋಜನೆಗೆ ಅರ್ಹತೆ ಪಡೆಯಬಹುದು ಎಂದು ಹೇಳಿದರು. “ನಿರ್ಮಾಣ ಮಾನದಂಡಗಳು ಉತ್ತಮವಾಗಿಲ್ಲ, ಹಾಗಾಗಿ ಅದನ್ನು ಬದಲಾಯಿಸಲು ನಾನು ಕೇಳಿದ್ದೇನೆ. ನಾವು ಅದನ್ನು ಬದಲಾಯಿಸುತ್ತಿದ್ದೇವೆ ಇದರಿಂದ ನಾವು ಭಾರತೀಯ ಕಂಪನಿಗಳನ್ನು ಪ್ರೋತ್ಸಾಹಿಸಬಹುದು” ಎಂದು ಅವರು ಹೇಳಿದರು.

“ನಾವು ತಂತ್ರಜ್ಞಾನ, ಸಲಹೆ ಅಥವಾ ವಿನ್ಯಾಸ ಕ್ಷೇತ್ರಗಳಲ್ಲಿ ವಿದೇಶಿ ಜಂಟಿ ಉದ್ಯಮದೊಂದಿಗೆ ಸೇರಲೆಬೇಕೆಂದಿದ್ದರೂ, ನಾವು ಚೀನೀಯರನ್ನು ಅನುಮತಿಸುವುದಿಲ್ಲ” ಎಂದು ಸಚಿವರು ಹೇಳಿದರು.

ಎಂಎಸ್‌ಎಂಇ ವಲಯದ ಬಗ್ಗೆ, ಸ್ಥಳೀಯ ಉತ್ಪಾದನೆಯ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಯತ್ನವಾಗಿದೆ ಆದರೆ ಅದೇ ಸಮಯದಲ್ಲಿ ವಿದೇಶಿ ಹೂಡಿಕೆಯನ್ನು ಉತ್ತೇಜಿಸಲಾಗುತ್ತಿದೆ ಎಂದು ಗಡ್ಕರಿ ಹೇಳಿದರು.

ಆದರೆ, ವಿದೇಶಿ ಹೂಡಿಕೆಗೆ ಉತ್ತೇಜನ ನೀಡುವ ನಿರ್ಧಾರವಿದ್ದರೂ, ಚೀನಾದ ಹೂಡಿಕೆದಾರರಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ಓದಿ: ಚೀನಾ ಪಡೆಗಳನ್ನು ಹೇಗೆ ಮತ್ತು ಯಾವಾಗ ಹೊರಹಾಕಲಾಯಿತು ಬಹಿರಂಗಪಡಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ


ವಿಡಿಯೋ ನೋಡಿ:

ಗುರುದೇವ ರವೀಂದ್ರ ಠಾಗೋರ್‌ ಅವರ ‘ಅಂತರಂಗವನು ಅರಳಿಸು!’ ಎಂ ಡಿ ಪಲ್ಲವಿ ಕಂಠಸಿರಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...