Homeಮುಖಪುಟಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಕಳೆದ ತಿಂಗಳು ಲಡಾಖ್ ಗಡಿಯಲ್ಲಿ 20 ಭಾರತೀಯ ಸೇನಾ ಸಿಬ್ಬಂದಿಗಳ ಸಾವಿಗೆ ಕಾರಣವಾಗಿದ್ದ ಘರ್ಷಣೆಯ ಹಿನ್ನಲೆಯಲ್ಲಿ ಸಚಿವರ ಪ್ರತಿಪಾದನೆಯು ಮಹತ್ವವನ್ನು ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತವು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕಿದೆ ಎಂದು 59 ಚೀನಿ ಆ್ಯಪ್‌ಗಳನ್ನು ನಿಷೇಧಿಸಿದೆ.

- Advertisement -
- Advertisement -

ಜಂಟಿ ಉದ್ಯಮಗಳು ಸೇರಿದಂತೆ ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ಅತೀಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮ (ಎಂಎಸ್‌ಎಂಇ) ದಂತಹ ವಿವಿಧ ಕ್ಷೇತ್ರಗಳಲ್ಲಿ ಚೀನಾದ ಹೂಡಿಕೆದಾರರಿಗೆ ಅವಕಾಶ ಸಿಗದಂತೆ ಸರ್ಕಾರ ಖಚಿತಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಲಡಾಖ್ ಗಡಿಯಲ್ಲಿ 20 ಭಾರತೀಯ ಸೇನಾ ಸಿಬ್ಬಂದಿಗಳ ಸಾವಿಗೆ ಕಾರಣವಾಗಿದ್ದ ಘರ್ಷಣೆಯ ಹಿನ್ನಲೆಯಲ್ಲಿ ಸಚಿವರ ಪ್ರತಿಪಾದನೆಯು ಮಹತ್ವವನ್ನು ಪಡೆದುಕೊಂಡಿದೆ.

ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತವು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕಿದೆ ಎಂದು 59 ಚೀನಿ ಆ್ಯಪ್‌ಗಳನ್ನು ನಿಷೇಧಿಸಿದೆ.

ಪಿಟಿಐ ಸಂದರ್ಶನವೊಂದರಲ್ಲಿ ಮಾತನಾಡಿದ ಸಚಿವರು “ರಸ್ತೆ ನಿರ್ಮಾಣಕ್ಕಾಗಿ ಚೀನಾದ ಪಾಲುದಾರರನ್ನು ಹೊಂದಿರುವ ಜಂಟಿ ಉದ್ಯಮಗಳಿಗೆ ನಾವು ಅನುಮತಿ ನೀಡುವುದಿಲ್ಲ. ಅವರು (ಚೀನೀ ಕಂಪನಿಗಳು) ನಮ್ಮ ದೇಶದಲ್ಲಿ ಜಂಟಿ ಉದ್ಯಮದ ಮೂಲಕ ಬಂದರೆ ನಾವು ಅದನ್ನು ಅನುಮತಿಸುವುದಿಲ್ಲ ಎಂದು ನಾವು ದೃಢವಾದ ನಿಲುವನ್ನು ತೆಗೆದುಕೊಂಡಿದ್ದೇವೆ” ಎಂದು ಹೇಳಿದರು.

ಹೆದ್ದಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲು ತಮ್ಮ ಅರ್ಹತಾ ಮಾನದಂಡಗಳನ್ನು ವಿಸ್ತರಿಸಿ ಚೀನಾದ ಸಂಸ್ಥೆಗಳನ್ನು ನಿಷೇಧಿಸುವುದು ಮತ್ತು ಭಾರತೀಯ ಕಂಪನಿಗಳಿಗೆ ದಾರಿಗಳನ್ನು ಸಡಿಲಿಸುವುದು ಎಂಬ ನೀತಿಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಈಗಾಗಲೇ ಚೀನಾದ ಕೆಲವು ಪಾಲುದಾರರನ್ನು ಒಳಗೊಂಡಿರುವ ಕೆಲವು ಯೋಜನೆಗಳ ಬಗ್ಗೆ ಕೇಳಿದ ಪ್ರಶ್ನೆಗೆ “ಹೊಸ ನಿರ್ಧಾರವನ್ನು ಪ್ರಸ್ತುತ ಮತ್ತು ಭವಿಷ್ಯದ ಟೆಂಡರ್‌ಗಳಲ್ಲಿ ಜಾರಿಗೆ ತರಲಾಗುವುದು” ಎಂದು ಹೇಳಿದರು.

ಅಸ್ತಿತ್ವದಲ್ಲಿರುವ ಟೆಂಡರ್‌ಗಳು ಮತ್ತು ಭವಿಷ್ಯದ ಬಿಡ್‌ಗಳಿಗೆ ಸಂಬಂಧಿಸಿದಂತೆ, ಚೀನಾದ ಯಾವುದೇ ಜಂಟಿ ಉದ್ಯಮಗಳು ಇದ್ದಲ್ಲಿ ಮರುಬಿಡ್ ಮಾಡಲಾಗುವುದು ಎಂದು ಗಡ್ಕರಿ ಹೇಳಿದರು.

“ನಮ್ಮ ಕಂಪನಿಗಳು ದೊಡ್ಡ ಯೋಜನೆಗಳಲ್ಲಿ ಬಿಡ್ಡಿಂಗ್ ಮಾಡಲು ಅರ್ಹತೆ ಹೊಂದಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾವು ನಿಯಮಗಳನ್ನು ಸಡಿಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ತಾಂತ್ರಿಕ ಮತ್ತು ಆರ್ಥಿಕ ಮಾನದಂಡಗಳನ್ನು ಸಡಿಲಿಸಲು ಸಭೆ ನಡೆಸಲು ನಾನು ಹೆದ್ದಾರಿಗಳ ಕಾರ್ಯದರ್ಶಿ (ಗಿರಿಧರ್ ಅರಮನೆ) ಮತ್ತು ಎನ್‌ಎಚ್‌ಎಐ ಅಧ್ಯಕ್ಷ (ಎಸ್‌ಎಸ್ ಸಂಧು) ಅವರಿಗೆ ನಿರ್ದೇಶನ ನೀಡಿದ್ದೇನೆ. ಆದ್ದರಿಂದ ನಮ್ಮ ಕಂಪನಿಗಳು ಕೆಲಸ ಮಾಡಲು ಅರ್ಹತೆ ಪಡೆಯಬಹುದು “ಎಂದು ಅವರು ಹೇಳಿದರು.

ನಿರ್ಧಾರವನ್ನು ವಿಸ್ತಾರವಾಗಿ ವಿವರಿಸಿದ ಗಡ್ಕರಿ, ಗುತ್ತಿಗೆದಾರನು ಸಣ್ಣ ಯೋಜನೆಗೆ ಅರ್ಹತೆ ಗಳಿಸಬಹುದಾದರೆ, ಅವನು ದೊಡ್ಡ ಯೋಜನೆಗೆ ಅರ್ಹತೆ ಪಡೆಯಬಹುದು ಎಂದು ಹೇಳಿದರು. “ನಿರ್ಮಾಣ ಮಾನದಂಡಗಳು ಉತ್ತಮವಾಗಿಲ್ಲ, ಹಾಗಾಗಿ ಅದನ್ನು ಬದಲಾಯಿಸಲು ನಾನು ಕೇಳಿದ್ದೇನೆ. ನಾವು ಅದನ್ನು ಬದಲಾಯಿಸುತ್ತಿದ್ದೇವೆ ಇದರಿಂದ ನಾವು ಭಾರತೀಯ ಕಂಪನಿಗಳನ್ನು ಪ್ರೋತ್ಸಾಹಿಸಬಹುದು” ಎಂದು ಅವರು ಹೇಳಿದರು.

“ನಾವು ತಂತ್ರಜ್ಞಾನ, ಸಲಹೆ ಅಥವಾ ವಿನ್ಯಾಸ ಕ್ಷೇತ್ರಗಳಲ್ಲಿ ವಿದೇಶಿ ಜಂಟಿ ಉದ್ಯಮದೊಂದಿಗೆ ಸೇರಲೆಬೇಕೆಂದಿದ್ದರೂ, ನಾವು ಚೀನೀಯರನ್ನು ಅನುಮತಿಸುವುದಿಲ್ಲ” ಎಂದು ಸಚಿವರು ಹೇಳಿದರು.

ಎಂಎಸ್‌ಎಂಇ ವಲಯದ ಬಗ್ಗೆ, ಸ್ಥಳೀಯ ಉತ್ಪಾದನೆಯ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಯತ್ನವಾಗಿದೆ ಆದರೆ ಅದೇ ಸಮಯದಲ್ಲಿ ವಿದೇಶಿ ಹೂಡಿಕೆಯನ್ನು ಉತ್ತೇಜಿಸಲಾಗುತ್ತಿದೆ ಎಂದು ಗಡ್ಕರಿ ಹೇಳಿದರು.

ಆದರೆ, ವಿದೇಶಿ ಹೂಡಿಕೆಗೆ ಉತ್ತೇಜನ ನೀಡುವ ನಿರ್ಧಾರವಿದ್ದರೂ, ಚೀನಾದ ಹೂಡಿಕೆದಾರರಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ಓದಿ: ಚೀನಾ ಪಡೆಗಳನ್ನು ಹೇಗೆ ಮತ್ತು ಯಾವಾಗ ಹೊರಹಾಕಲಾಯಿತು ಬಹಿರಂಗಪಡಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ


ವಿಡಿಯೋ ನೋಡಿ:

ಗುರುದೇವ ರವೀಂದ್ರ ಠಾಗೋರ್‌ ಅವರ ‘ಅಂತರಂಗವನು ಅರಳಿಸು!’ ಎಂ ಡಿ ಪಲ್ಲವಿ ಕಂಠಸಿರಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...