Homeಮುಖಪುಟಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪೆನಿಗಳಿಗೆ ಅನುಮತಿ ನೀಡುವುದಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಕಳೆದ ತಿಂಗಳು ಲಡಾಖ್ ಗಡಿಯಲ್ಲಿ 20 ಭಾರತೀಯ ಸೇನಾ ಸಿಬ್ಬಂದಿಗಳ ಸಾವಿಗೆ ಕಾರಣವಾಗಿದ್ದ ಘರ್ಷಣೆಯ ಹಿನ್ನಲೆಯಲ್ಲಿ ಸಚಿವರ ಪ್ರತಿಪಾದನೆಯು ಮಹತ್ವವನ್ನು ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತವು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕಿದೆ ಎಂದು 59 ಚೀನಿ ಆ್ಯಪ್‌ಗಳನ್ನು ನಿಷೇಧಿಸಿದೆ.

- Advertisement -
- Advertisement -

ಜಂಟಿ ಉದ್ಯಮಗಳು ಸೇರಿದಂತೆ ಹೆದ್ದಾರಿ ಯೋಜನೆಗಳಲ್ಲಿ ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ಅತೀಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮ (ಎಂಎಸ್‌ಎಂಇ) ದಂತಹ ವಿವಿಧ ಕ್ಷೇತ್ರಗಳಲ್ಲಿ ಚೀನಾದ ಹೂಡಿಕೆದಾರರಿಗೆ ಅವಕಾಶ ಸಿಗದಂತೆ ಸರ್ಕಾರ ಖಚಿತಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಲಡಾಖ್ ಗಡಿಯಲ್ಲಿ 20 ಭಾರತೀಯ ಸೇನಾ ಸಿಬ್ಬಂದಿಗಳ ಸಾವಿಗೆ ಕಾರಣವಾಗಿದ್ದ ಘರ್ಷಣೆಯ ಹಿನ್ನಲೆಯಲ್ಲಿ ಸಚಿವರ ಪ್ರತಿಪಾದನೆಯು ಮಹತ್ವವನ್ನು ಪಡೆದುಕೊಂಡಿದೆ.

ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತವು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕಿದೆ ಎಂದು 59 ಚೀನಿ ಆ್ಯಪ್‌ಗಳನ್ನು ನಿಷೇಧಿಸಿದೆ.

ಪಿಟಿಐ ಸಂದರ್ಶನವೊಂದರಲ್ಲಿ ಮಾತನಾಡಿದ ಸಚಿವರು “ರಸ್ತೆ ನಿರ್ಮಾಣಕ್ಕಾಗಿ ಚೀನಾದ ಪಾಲುದಾರರನ್ನು ಹೊಂದಿರುವ ಜಂಟಿ ಉದ್ಯಮಗಳಿಗೆ ನಾವು ಅನುಮತಿ ನೀಡುವುದಿಲ್ಲ. ಅವರು (ಚೀನೀ ಕಂಪನಿಗಳು) ನಮ್ಮ ದೇಶದಲ್ಲಿ ಜಂಟಿ ಉದ್ಯಮದ ಮೂಲಕ ಬಂದರೆ ನಾವು ಅದನ್ನು ಅನುಮತಿಸುವುದಿಲ್ಲ ಎಂದು ನಾವು ದೃಢವಾದ ನಿಲುವನ್ನು ತೆಗೆದುಕೊಂಡಿದ್ದೇವೆ” ಎಂದು ಹೇಳಿದರು.

ಹೆದ್ದಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲು ತಮ್ಮ ಅರ್ಹತಾ ಮಾನದಂಡಗಳನ್ನು ವಿಸ್ತರಿಸಿ ಚೀನಾದ ಸಂಸ್ಥೆಗಳನ್ನು ನಿಷೇಧಿಸುವುದು ಮತ್ತು ಭಾರತೀಯ ಕಂಪನಿಗಳಿಗೆ ದಾರಿಗಳನ್ನು ಸಡಿಲಿಸುವುದು ಎಂಬ ನೀತಿಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಈಗಾಗಲೇ ಚೀನಾದ ಕೆಲವು ಪಾಲುದಾರರನ್ನು ಒಳಗೊಂಡಿರುವ ಕೆಲವು ಯೋಜನೆಗಳ ಬಗ್ಗೆ ಕೇಳಿದ ಪ್ರಶ್ನೆಗೆ “ಹೊಸ ನಿರ್ಧಾರವನ್ನು ಪ್ರಸ್ತುತ ಮತ್ತು ಭವಿಷ್ಯದ ಟೆಂಡರ್‌ಗಳಲ್ಲಿ ಜಾರಿಗೆ ತರಲಾಗುವುದು” ಎಂದು ಹೇಳಿದರು.

ಅಸ್ತಿತ್ವದಲ್ಲಿರುವ ಟೆಂಡರ್‌ಗಳು ಮತ್ತು ಭವಿಷ್ಯದ ಬಿಡ್‌ಗಳಿಗೆ ಸಂಬಂಧಿಸಿದಂತೆ, ಚೀನಾದ ಯಾವುದೇ ಜಂಟಿ ಉದ್ಯಮಗಳು ಇದ್ದಲ್ಲಿ ಮರುಬಿಡ್ ಮಾಡಲಾಗುವುದು ಎಂದು ಗಡ್ಕರಿ ಹೇಳಿದರು.

“ನಮ್ಮ ಕಂಪನಿಗಳು ದೊಡ್ಡ ಯೋಜನೆಗಳಲ್ಲಿ ಬಿಡ್ಡಿಂಗ್ ಮಾಡಲು ಅರ್ಹತೆ ಹೊಂದಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾವು ನಿಯಮಗಳನ್ನು ಸಡಿಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ತಾಂತ್ರಿಕ ಮತ್ತು ಆರ್ಥಿಕ ಮಾನದಂಡಗಳನ್ನು ಸಡಿಲಿಸಲು ಸಭೆ ನಡೆಸಲು ನಾನು ಹೆದ್ದಾರಿಗಳ ಕಾರ್ಯದರ್ಶಿ (ಗಿರಿಧರ್ ಅರಮನೆ) ಮತ್ತು ಎನ್‌ಎಚ್‌ಎಐ ಅಧ್ಯಕ್ಷ (ಎಸ್‌ಎಸ್ ಸಂಧು) ಅವರಿಗೆ ನಿರ್ದೇಶನ ನೀಡಿದ್ದೇನೆ. ಆದ್ದರಿಂದ ನಮ್ಮ ಕಂಪನಿಗಳು ಕೆಲಸ ಮಾಡಲು ಅರ್ಹತೆ ಪಡೆಯಬಹುದು “ಎಂದು ಅವರು ಹೇಳಿದರು.

ನಿರ್ಧಾರವನ್ನು ವಿಸ್ತಾರವಾಗಿ ವಿವರಿಸಿದ ಗಡ್ಕರಿ, ಗುತ್ತಿಗೆದಾರನು ಸಣ್ಣ ಯೋಜನೆಗೆ ಅರ್ಹತೆ ಗಳಿಸಬಹುದಾದರೆ, ಅವನು ದೊಡ್ಡ ಯೋಜನೆಗೆ ಅರ್ಹತೆ ಪಡೆಯಬಹುದು ಎಂದು ಹೇಳಿದರು. “ನಿರ್ಮಾಣ ಮಾನದಂಡಗಳು ಉತ್ತಮವಾಗಿಲ್ಲ, ಹಾಗಾಗಿ ಅದನ್ನು ಬದಲಾಯಿಸಲು ನಾನು ಕೇಳಿದ್ದೇನೆ. ನಾವು ಅದನ್ನು ಬದಲಾಯಿಸುತ್ತಿದ್ದೇವೆ ಇದರಿಂದ ನಾವು ಭಾರತೀಯ ಕಂಪನಿಗಳನ್ನು ಪ್ರೋತ್ಸಾಹಿಸಬಹುದು” ಎಂದು ಅವರು ಹೇಳಿದರು.

“ನಾವು ತಂತ್ರಜ್ಞಾನ, ಸಲಹೆ ಅಥವಾ ವಿನ್ಯಾಸ ಕ್ಷೇತ್ರಗಳಲ್ಲಿ ವಿದೇಶಿ ಜಂಟಿ ಉದ್ಯಮದೊಂದಿಗೆ ಸೇರಲೆಬೇಕೆಂದಿದ್ದರೂ, ನಾವು ಚೀನೀಯರನ್ನು ಅನುಮತಿಸುವುದಿಲ್ಲ” ಎಂದು ಸಚಿವರು ಹೇಳಿದರು.

ಎಂಎಸ್‌ಎಂಇ ವಲಯದ ಬಗ್ಗೆ, ಸ್ಥಳೀಯ ಉತ್ಪಾದನೆಯ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಯತ್ನವಾಗಿದೆ ಆದರೆ ಅದೇ ಸಮಯದಲ್ಲಿ ವಿದೇಶಿ ಹೂಡಿಕೆಯನ್ನು ಉತ್ತೇಜಿಸಲಾಗುತ್ತಿದೆ ಎಂದು ಗಡ್ಕರಿ ಹೇಳಿದರು.

ಆದರೆ, ವಿದೇಶಿ ಹೂಡಿಕೆಗೆ ಉತ್ತೇಜನ ನೀಡುವ ನಿರ್ಧಾರವಿದ್ದರೂ, ಚೀನಾದ ಹೂಡಿಕೆದಾರರಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ಓದಿ: ಚೀನಾ ಪಡೆಗಳನ್ನು ಹೇಗೆ ಮತ್ತು ಯಾವಾಗ ಹೊರಹಾಕಲಾಯಿತು ಬಹಿರಂಗಪಡಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ


ವಿಡಿಯೋ ನೋಡಿ:

ಗುರುದೇವ ರವೀಂದ್ರ ಠಾಗೋರ್‌ ಅವರ ‘ಅಂತರಂಗವನು ಅರಳಿಸು!’ ಎಂ ಡಿ ಪಲ್ಲವಿ ಕಂಠಸಿರಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...