Homeನಿಜವೋ ಸುಳ್ಳೋFact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

- Advertisement -
- Advertisement -

ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಿಗೆ ಚೀನೀ ಮೂಲದ ಜನರನ್ನು ಅನುಮತಿಸಲಾಗುವುದಿಲ್ಲ ಎಂಬ ಹೇಳಿಕೆಯೊಂದಿಗೆ ದಂಪತಿಗಳು ಒಬ್ಬ ವ್ಯಕ್ತಿಯೊಂದಿಗೆ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಗುಜರಾತಿ ನ್ಯೂಸ್ ಚಾನೆಲ್ ಟಿವಿ9 “# ಕೊರೋನವೈರಸ್, #ಆಸ್ಟ್ರೇಲಿಯಾದಲ್ಲಿ ಚೀನೀಯರ ಮೇಲೆ ಜನಾಂಗೀಯ ದಾಳಿಯನ್ನು ಹುಟ್ಟುಹಾಕಿದೆ. ವೈರಲ್ ವೀಡಿಯೊ ಪ್ರಕಾರ, ಚೀನೀ ಜನರಿಗೆ ಸೂಪರ್‌ ಮಾರ್ಕೆಟ್‌ಗಳಿಗೆ ಪ್ರವೇಶಿಸಲು ಅವಕಾಶವಿಲ್ಲ.” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಟ್ವೀಟ್ ಮಾಡಿದೆ.

ಬಿಜೆವೈಎಂ ತೆಲಂಗಾಣದ ವಕ್ತಾರ ರೂಪ್ ದಾರಕ್ ಅವರು “ಇಡೀ ವಿಶ್ವವೂ ಇದನ್ನು ಅನುಸರಿಸಬೇಕು.  ಚೈನೀಸ್ ಅನ್ನು ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಲ್ಲಿ ಅನುಮತಿಸಲಾಗುವುದಿಲ್ಲ. ಇದು ಈಗ ಶುರುವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಇಲ್ಲಿಯವರೆಗೆ 1,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಸಂಗ್ರಹಿಸಿದೆ. ಐಪಿಎಸ್ ಅಧಿಕಾರಿ ಎಚ್‌ಜಿಎಸ್ ಧಲಿವಾಲ್ ಕೂಡ ಇದೇ ವಿಡಿಯೋ ಜೊತೆಗೆ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ ಚೆಕ್‌:

ವಾಸ್ತವವೇನೆಂದರೆ, ಇದರ ಮೂಲ 2020 ರ ಏಪ್ರಿಲ್ 11 ರಂದು ಪ್ರಕಟವಾದ ಯುಕೆ ಸುದ್ದಿವಾಹಿನಿ ಡೈಲಿ ಮೇಲ್‌ನಲ್ಲಿ ದೊರೆತಿದೆ. ಅದರ ಪ್ರಕಾರ ಮೆಲ್ಬೋರ್ನ್‌ನ ಲಿಲಿಡೇಲ್‌ನಲ್ಲಿರುವ ಬಿಗ್ ಡಬ್ಲ್ಯೂ ಮಾಲ್‌ನಲ್ಲಿ ಬೇಬಿ ಫಾರ್ಮುಲಾ ಕುರಿತು ಇಬ್ಬರು ಗ್ರಾಹಕರ ನಡುವಿನ ದೊಡ್ಡ ಜಗಳ ಇದಾಗಿದೆ.

ಬಿಗ್ ಡಬ್ಲ್ಯೂ, ಕೋಲ್ಸ್ ಮತ್ತು ವೂಲ್‌ವರ್ತ್ಸ್‌ನಂತಹ ಪ್ರಮುಖ ಚಿಲ್ಲರೆ ವ್ಯಾಪಾರಿಗಳು ದೀರ್ಘಕಾಲದಿಂದ ಅಂಗಡಿಯಲ್ಲಿನ ಕೆಲ ನೀತಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮ ಸಂಸ್ಥೆ ನ್ಯೂಸ್.ಕಾಮ್ ತಿಳಿಸಿದೆ. ಅದರಂತೆ ಒಬ್ಬರು ಪ್ರತಿ ಖರೀದಿಗೆ ಎರಡು ಬೇಬಿ ಫಾರ್ಮುಲಾ ಟಿನ್‌ಗಳನ್ನು ಮಾತ್ರ ಖರೀದಿಸಬಹುದಾಗಿದೆ.

ಆದರೆ ವಿಡಿಯೋದಲ್ಲಿ ಕಾಣುವಂತೆ ಯುವ ದಂಪತಿಗಳಿಬ್ಬರೂ ಎರಡಕ್ಕಿಂತ ಹೆಚ್ಚಿನ  ಬೇಬಿ ಫಾರ್ಮುಲಾ ಟಿನ್‌ಗಳನ್ನು ಹಿಡಿದುಕೊಂಡಿರುವುದನ್ನು ಹಿರಿಯ ದಂಪತಿಗಳು ಪ್ರಶ್ನಿಸಿದ್ದಾರೆ. ಅಲ್ಲಿಗೆ ಜಗಳ ಆರಂಭವಾಗಿದೆ. ಕೈ ಕೈ ಮಿಲಾಯಿಸುವ ಪರಿಸ್ಥಿತಿ ಬಂದಾಗ ಭದ್ರತಾ ಅಧಿಕಾರಿಗಳು ಯುವ ದಂಪತಿಗಳನ್ನು ಸೂಪರ್‌ ಮಾರ್ಕೆಟ್‌ನಿಂದ ಹೊರ ಕಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 


ಯಾಹೂ ನ್ಯೂಸ್ ಆಸ್ಟ್ರೇಲಿಯಾ ನೀಡಿದ ಹೇಳಿಕೆಯಲ್ಲಿ, ಬಿಗ್ ಡಬ್ಲ್ಯೂ ವಕ್ತಾರರು, “ಗ್ರಾಹಕರಿಗೆ ಭಿನ್ನಾಭಿಪ್ರಾಯವಿತ್ತು, ಹಾಗಾಗಿ ಜಗಳ ಆರಂಭವಾಗಿದೆ. ಕೂಡಲೇ ಬಿಗ್ ಡಬ್ಲ್ಯೂ ಲಿಲಿಡೇಲ್ ಅಂಗಡಿಯಿಂದ ಹೊರಹೋಗುವಂತೆ ನಮ್ಮ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಕೇಳಿದ್ದಾರೆ. ಇಲ್ಲಿಗೆ ಪ್ರಕರಣ ಮುಗಿದಿದೆ, ಪೊಲೀಸರ ಅಗತ್ಯ ಬಿದ್ದಿಲ್ಲ ಎಂದು ತಿಳಿಸಿದ್ದಾರೆ.

ಮಗುವಿನ ಆಹಾರವನ್ನು ಸಂಗ್ರಹಿಸಿಡಲಾಗಿದೆ ಎಂಬ ಆರೋಪದ ಮೇಲೆ ಇಬ್ಬರು ಗ್ರಾಹಕರ ನಡುವಿನ ತೀವ್ರ ಜಗಳದ ವಿಡಿಯೋವನ್ನು ಚೀನಾದ ಪ್ರಜೆಗಳಿಗೆ ಆಸ್ಟ್ರೇಲಿಯಾದ ‌ಸೂಪರ್ ಮಾರ್ಕೆಟ್‌ಗಳಲ್ಲಿ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please avoid using question marks in the headings of articles. Be objective while reporting. For example, in the present article the heading could have been “ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲ ಎಂಬ ಸುಳ್ಳು ಸುದ್ದಿ”

    I agree that the heading you have chosen creates curiosity, it also creates an impression that the reporter/ broadcaster is not sure of what is being reported.

    • Thanks Nandan, You are right. But our social media experts say that since 60% of readers come through social media, they will be think that the content is over with the title. Anyway, we shall discuss this in our team. You can also write to us to [email protected].

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...