Homeನಿಜವೋ ಸುಳ್ಳೋFact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

- Advertisement -
- Advertisement -

ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಿಗೆ ಚೀನೀ ಮೂಲದ ಜನರನ್ನು ಅನುಮತಿಸಲಾಗುವುದಿಲ್ಲ ಎಂಬ ಹೇಳಿಕೆಯೊಂದಿಗೆ ದಂಪತಿಗಳು ಒಬ್ಬ ವ್ಯಕ್ತಿಯೊಂದಿಗೆ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಗುಜರಾತಿ ನ್ಯೂಸ್ ಚಾನೆಲ್ ಟಿವಿ9 “# ಕೊರೋನವೈರಸ್, #ಆಸ್ಟ್ರೇಲಿಯಾದಲ್ಲಿ ಚೀನೀಯರ ಮೇಲೆ ಜನಾಂಗೀಯ ದಾಳಿಯನ್ನು ಹುಟ್ಟುಹಾಕಿದೆ. ವೈರಲ್ ವೀಡಿಯೊ ಪ್ರಕಾರ, ಚೀನೀ ಜನರಿಗೆ ಸೂಪರ್‌ ಮಾರ್ಕೆಟ್‌ಗಳಿಗೆ ಪ್ರವೇಶಿಸಲು ಅವಕಾಶವಿಲ್ಲ.” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಟ್ವೀಟ್ ಮಾಡಿದೆ.

ಬಿಜೆವೈಎಂ ತೆಲಂಗಾಣದ ವಕ್ತಾರ ರೂಪ್ ದಾರಕ್ ಅವರು “ಇಡೀ ವಿಶ್ವವೂ ಇದನ್ನು ಅನುಸರಿಸಬೇಕು.  ಚೈನೀಸ್ ಅನ್ನು ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಲ್ಲಿ ಅನುಮತಿಸಲಾಗುವುದಿಲ್ಲ. ಇದು ಈಗ ಶುರುವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಇಲ್ಲಿಯವರೆಗೆ 1,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಸಂಗ್ರಹಿಸಿದೆ. ಐಪಿಎಸ್ ಅಧಿಕಾರಿ ಎಚ್‌ಜಿಎಸ್ ಧಲಿವಾಲ್ ಕೂಡ ಇದೇ ವಿಡಿಯೋ ಜೊತೆಗೆ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ ಚೆಕ್‌:

ವಾಸ್ತವವೇನೆಂದರೆ, ಇದರ ಮೂಲ 2020 ರ ಏಪ್ರಿಲ್ 11 ರಂದು ಪ್ರಕಟವಾದ ಯುಕೆ ಸುದ್ದಿವಾಹಿನಿ ಡೈಲಿ ಮೇಲ್‌ನಲ್ಲಿ ದೊರೆತಿದೆ. ಅದರ ಪ್ರಕಾರ ಮೆಲ್ಬೋರ್ನ್‌ನ ಲಿಲಿಡೇಲ್‌ನಲ್ಲಿರುವ ಬಿಗ್ ಡಬ್ಲ್ಯೂ ಮಾಲ್‌ನಲ್ಲಿ ಬೇಬಿ ಫಾರ್ಮುಲಾ ಕುರಿತು ಇಬ್ಬರು ಗ್ರಾಹಕರ ನಡುವಿನ ದೊಡ್ಡ ಜಗಳ ಇದಾಗಿದೆ.

ಬಿಗ್ ಡಬ್ಲ್ಯೂ, ಕೋಲ್ಸ್ ಮತ್ತು ವೂಲ್‌ವರ್ತ್ಸ್‌ನಂತಹ ಪ್ರಮುಖ ಚಿಲ್ಲರೆ ವ್ಯಾಪಾರಿಗಳು ದೀರ್ಘಕಾಲದಿಂದ ಅಂಗಡಿಯಲ್ಲಿನ ಕೆಲ ನೀತಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮ ಸಂಸ್ಥೆ ನ್ಯೂಸ್.ಕಾಮ್ ತಿಳಿಸಿದೆ. ಅದರಂತೆ ಒಬ್ಬರು ಪ್ರತಿ ಖರೀದಿಗೆ ಎರಡು ಬೇಬಿ ಫಾರ್ಮುಲಾ ಟಿನ್‌ಗಳನ್ನು ಮಾತ್ರ ಖರೀದಿಸಬಹುದಾಗಿದೆ.

ಆದರೆ ವಿಡಿಯೋದಲ್ಲಿ ಕಾಣುವಂತೆ ಯುವ ದಂಪತಿಗಳಿಬ್ಬರೂ ಎರಡಕ್ಕಿಂತ ಹೆಚ್ಚಿನ  ಬೇಬಿ ಫಾರ್ಮುಲಾ ಟಿನ್‌ಗಳನ್ನು ಹಿಡಿದುಕೊಂಡಿರುವುದನ್ನು ಹಿರಿಯ ದಂಪತಿಗಳು ಪ್ರಶ್ನಿಸಿದ್ದಾರೆ. ಅಲ್ಲಿಗೆ ಜಗಳ ಆರಂಭವಾಗಿದೆ. ಕೈ ಕೈ ಮಿಲಾಯಿಸುವ ಪರಿಸ್ಥಿತಿ ಬಂದಾಗ ಭದ್ರತಾ ಅಧಿಕಾರಿಗಳು ಯುವ ದಂಪತಿಗಳನ್ನು ಸೂಪರ್‌ ಮಾರ್ಕೆಟ್‌ನಿಂದ ಹೊರ ಕಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 


ಯಾಹೂ ನ್ಯೂಸ್ ಆಸ್ಟ್ರೇಲಿಯಾ ನೀಡಿದ ಹೇಳಿಕೆಯಲ್ಲಿ, ಬಿಗ್ ಡಬ್ಲ್ಯೂ ವಕ್ತಾರರು, “ಗ್ರಾಹಕರಿಗೆ ಭಿನ್ನಾಭಿಪ್ರಾಯವಿತ್ತು, ಹಾಗಾಗಿ ಜಗಳ ಆರಂಭವಾಗಿದೆ. ಕೂಡಲೇ ಬಿಗ್ ಡಬ್ಲ್ಯೂ ಲಿಲಿಡೇಲ್ ಅಂಗಡಿಯಿಂದ ಹೊರಹೋಗುವಂತೆ ನಮ್ಮ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಕೇಳಿದ್ದಾರೆ. ಇಲ್ಲಿಗೆ ಪ್ರಕರಣ ಮುಗಿದಿದೆ, ಪೊಲೀಸರ ಅಗತ್ಯ ಬಿದ್ದಿಲ್ಲ ಎಂದು ತಿಳಿಸಿದ್ದಾರೆ.

ಮಗುವಿನ ಆಹಾರವನ್ನು ಸಂಗ್ರಹಿಸಿಡಲಾಗಿದೆ ಎಂಬ ಆರೋಪದ ಮೇಲೆ ಇಬ್ಬರು ಗ್ರಾಹಕರ ನಡುವಿನ ತೀವ್ರ ಜಗಳದ ವಿಡಿಯೋವನ್ನು ಚೀನಾದ ಪ್ರಜೆಗಳಿಗೆ ಆಸ್ಟ್ರೇಲಿಯಾದ ‌ಸೂಪರ್ ಮಾರ್ಕೆಟ್‌ಗಳಲ್ಲಿ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please avoid using question marks in the headings of articles. Be objective while reporting. For example, in the present article the heading could have been “ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲ ಎಂಬ ಸುಳ್ಳು ಸುದ್ದಿ”

    I agree that the heading you have chosen creates curiosity, it also creates an impression that the reporter/ broadcaster is not sure of what is being reported.

    • Thanks Nandan, You are right. But our social media experts say that since 60% of readers come through social media, they will be think that the content is over with the title. Anyway, we shall discuss this in our team. You can also write to us to [email protected].

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...