Homeನಿಜವೋ ಸುಳ್ಳೋFact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

- Advertisement -
- Advertisement -

ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಿಗೆ ಚೀನೀ ಮೂಲದ ಜನರನ್ನು ಅನುಮತಿಸಲಾಗುವುದಿಲ್ಲ ಎಂಬ ಹೇಳಿಕೆಯೊಂದಿಗೆ ದಂಪತಿಗಳು ಒಬ್ಬ ವ್ಯಕ್ತಿಯೊಂದಿಗೆ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಗುಜರಾತಿ ನ್ಯೂಸ್ ಚಾನೆಲ್ ಟಿವಿ9 “# ಕೊರೋನವೈರಸ್, #ಆಸ್ಟ್ರೇಲಿಯಾದಲ್ಲಿ ಚೀನೀಯರ ಮೇಲೆ ಜನಾಂಗೀಯ ದಾಳಿಯನ್ನು ಹುಟ್ಟುಹಾಕಿದೆ. ವೈರಲ್ ವೀಡಿಯೊ ಪ್ರಕಾರ, ಚೀನೀ ಜನರಿಗೆ ಸೂಪರ್‌ ಮಾರ್ಕೆಟ್‌ಗಳಿಗೆ ಪ್ರವೇಶಿಸಲು ಅವಕಾಶವಿಲ್ಲ.” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಟ್ವೀಟ್ ಮಾಡಿದೆ.

ಬಿಜೆವೈಎಂ ತೆಲಂಗಾಣದ ವಕ್ತಾರ ರೂಪ್ ದಾರಕ್ ಅವರು “ಇಡೀ ವಿಶ್ವವೂ ಇದನ್ನು ಅನುಸರಿಸಬೇಕು.  ಚೈನೀಸ್ ಅನ್ನು ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಲ್ಲಿ ಅನುಮತಿಸಲಾಗುವುದಿಲ್ಲ. ಇದು ಈಗ ಶುರುವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಇಲ್ಲಿಯವರೆಗೆ 1,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಸಂಗ್ರಹಿಸಿದೆ. ಐಪಿಎಸ್ ಅಧಿಕಾರಿ ಎಚ್‌ಜಿಎಸ್ ಧಲಿವಾಲ್ ಕೂಡ ಇದೇ ವಿಡಿಯೋ ಜೊತೆಗೆ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ ಚೆಕ್‌:

ವಾಸ್ತವವೇನೆಂದರೆ, ಇದರ ಮೂಲ 2020 ರ ಏಪ್ರಿಲ್ 11 ರಂದು ಪ್ರಕಟವಾದ ಯುಕೆ ಸುದ್ದಿವಾಹಿನಿ ಡೈಲಿ ಮೇಲ್‌ನಲ್ಲಿ ದೊರೆತಿದೆ. ಅದರ ಪ್ರಕಾರ ಮೆಲ್ಬೋರ್ನ್‌ನ ಲಿಲಿಡೇಲ್‌ನಲ್ಲಿರುವ ಬಿಗ್ ಡಬ್ಲ್ಯೂ ಮಾಲ್‌ನಲ್ಲಿ ಬೇಬಿ ಫಾರ್ಮುಲಾ ಕುರಿತು ಇಬ್ಬರು ಗ್ರಾಹಕರ ನಡುವಿನ ದೊಡ್ಡ ಜಗಳ ಇದಾಗಿದೆ.

ಬಿಗ್ ಡಬ್ಲ್ಯೂ, ಕೋಲ್ಸ್ ಮತ್ತು ವೂಲ್‌ವರ್ತ್ಸ್‌ನಂತಹ ಪ್ರಮುಖ ಚಿಲ್ಲರೆ ವ್ಯಾಪಾರಿಗಳು ದೀರ್ಘಕಾಲದಿಂದ ಅಂಗಡಿಯಲ್ಲಿನ ಕೆಲ ನೀತಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮ ಸಂಸ್ಥೆ ನ್ಯೂಸ್.ಕಾಮ್ ತಿಳಿಸಿದೆ. ಅದರಂತೆ ಒಬ್ಬರು ಪ್ರತಿ ಖರೀದಿಗೆ ಎರಡು ಬೇಬಿ ಫಾರ್ಮುಲಾ ಟಿನ್‌ಗಳನ್ನು ಮಾತ್ರ ಖರೀದಿಸಬಹುದಾಗಿದೆ.

ಆದರೆ ವಿಡಿಯೋದಲ್ಲಿ ಕಾಣುವಂತೆ ಯುವ ದಂಪತಿಗಳಿಬ್ಬರೂ ಎರಡಕ್ಕಿಂತ ಹೆಚ್ಚಿನ  ಬೇಬಿ ಫಾರ್ಮುಲಾ ಟಿನ್‌ಗಳನ್ನು ಹಿಡಿದುಕೊಂಡಿರುವುದನ್ನು ಹಿರಿಯ ದಂಪತಿಗಳು ಪ್ರಶ್ನಿಸಿದ್ದಾರೆ. ಅಲ್ಲಿಗೆ ಜಗಳ ಆರಂಭವಾಗಿದೆ. ಕೈ ಕೈ ಮಿಲಾಯಿಸುವ ಪರಿಸ್ಥಿತಿ ಬಂದಾಗ ಭದ್ರತಾ ಅಧಿಕಾರಿಗಳು ಯುವ ದಂಪತಿಗಳನ್ನು ಸೂಪರ್‌ ಮಾರ್ಕೆಟ್‌ನಿಂದ ಹೊರ ಕಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 


ಯಾಹೂ ನ್ಯೂಸ್ ಆಸ್ಟ್ರೇಲಿಯಾ ನೀಡಿದ ಹೇಳಿಕೆಯಲ್ಲಿ, ಬಿಗ್ ಡಬ್ಲ್ಯೂ ವಕ್ತಾರರು, “ಗ್ರಾಹಕರಿಗೆ ಭಿನ್ನಾಭಿಪ್ರಾಯವಿತ್ತು, ಹಾಗಾಗಿ ಜಗಳ ಆರಂಭವಾಗಿದೆ. ಕೂಡಲೇ ಬಿಗ್ ಡಬ್ಲ್ಯೂ ಲಿಲಿಡೇಲ್ ಅಂಗಡಿಯಿಂದ ಹೊರಹೋಗುವಂತೆ ನಮ್ಮ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಕೇಳಿದ್ದಾರೆ. ಇಲ್ಲಿಗೆ ಪ್ರಕರಣ ಮುಗಿದಿದೆ, ಪೊಲೀಸರ ಅಗತ್ಯ ಬಿದ್ದಿಲ್ಲ ಎಂದು ತಿಳಿಸಿದ್ದಾರೆ.

ಮಗುವಿನ ಆಹಾರವನ್ನು ಸಂಗ್ರಹಿಸಿಡಲಾಗಿದೆ ಎಂಬ ಆರೋಪದ ಮೇಲೆ ಇಬ್ಬರು ಗ್ರಾಹಕರ ನಡುವಿನ ತೀವ್ರ ಜಗಳದ ವಿಡಿಯೋವನ್ನು ಚೀನಾದ ಪ್ರಜೆಗಳಿಗೆ ಆಸ್ಟ್ರೇಲಿಯಾದ ‌ಸೂಪರ್ ಮಾರ್ಕೆಟ್‌ಗಳಲ್ಲಿ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please avoid using question marks in the headings of articles. Be objective while reporting. For example, in the present article the heading could have been “ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲ ಎಂಬ ಸುಳ್ಳು ಸುದ್ದಿ”

    I agree that the heading you have chosen creates curiosity, it also creates an impression that the reporter/ broadcaster is not sure of what is being reported.

    • Thanks Nandan, You are right. But our social media experts say that since 60% of readers come through social media, they will be think that the content is over with the title. Anyway, we shall discuss this in our team. You can also write to us to [email protected].

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...