Homeನಿಜವೋ ಸುಳ್ಳೋFact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

- Advertisement -
- Advertisement -

ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಿಗೆ ಚೀನೀ ಮೂಲದ ಜನರನ್ನು ಅನುಮತಿಸಲಾಗುವುದಿಲ್ಲ ಎಂಬ ಹೇಳಿಕೆಯೊಂದಿಗೆ ದಂಪತಿಗಳು ಒಬ್ಬ ವ್ಯಕ್ತಿಯೊಂದಿಗೆ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಗುಜರಾತಿ ನ್ಯೂಸ್ ಚಾನೆಲ್ ಟಿವಿ9 “# ಕೊರೋನವೈರಸ್, #ಆಸ್ಟ್ರೇಲಿಯಾದಲ್ಲಿ ಚೀನೀಯರ ಮೇಲೆ ಜನಾಂಗೀಯ ದಾಳಿಯನ್ನು ಹುಟ್ಟುಹಾಕಿದೆ. ವೈರಲ್ ವೀಡಿಯೊ ಪ್ರಕಾರ, ಚೀನೀ ಜನರಿಗೆ ಸೂಪರ್‌ ಮಾರ್ಕೆಟ್‌ಗಳಿಗೆ ಪ್ರವೇಶಿಸಲು ಅವಕಾಶವಿಲ್ಲ.” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಟ್ವೀಟ್ ಮಾಡಿದೆ.

ಬಿಜೆವೈಎಂ ತೆಲಂಗಾಣದ ವಕ್ತಾರ ರೂಪ್ ದಾರಕ್ ಅವರು “ಇಡೀ ವಿಶ್ವವೂ ಇದನ್ನು ಅನುಸರಿಸಬೇಕು.  ಚೈನೀಸ್ ಅನ್ನು ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಲ್ಲಿ ಅನುಮತಿಸಲಾಗುವುದಿಲ್ಲ. ಇದು ಈಗ ಶುರುವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಇಲ್ಲಿಯವರೆಗೆ 1,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಸಂಗ್ರಹಿಸಿದೆ. ಐಪಿಎಸ್ ಅಧಿಕಾರಿ ಎಚ್‌ಜಿಎಸ್ ಧಲಿವಾಲ್ ಕೂಡ ಇದೇ ವಿಡಿಯೋ ಜೊತೆಗೆ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ ಚೆಕ್‌:

ವಾಸ್ತವವೇನೆಂದರೆ, ಇದರ ಮೂಲ 2020 ರ ಏಪ್ರಿಲ್ 11 ರಂದು ಪ್ರಕಟವಾದ ಯುಕೆ ಸುದ್ದಿವಾಹಿನಿ ಡೈಲಿ ಮೇಲ್‌ನಲ್ಲಿ ದೊರೆತಿದೆ. ಅದರ ಪ್ರಕಾರ ಮೆಲ್ಬೋರ್ನ್‌ನ ಲಿಲಿಡೇಲ್‌ನಲ್ಲಿರುವ ಬಿಗ್ ಡಬ್ಲ್ಯೂ ಮಾಲ್‌ನಲ್ಲಿ ಬೇಬಿ ಫಾರ್ಮುಲಾ ಕುರಿತು ಇಬ್ಬರು ಗ್ರಾಹಕರ ನಡುವಿನ ದೊಡ್ಡ ಜಗಳ ಇದಾಗಿದೆ.

ಬಿಗ್ ಡಬ್ಲ್ಯೂ, ಕೋಲ್ಸ್ ಮತ್ತು ವೂಲ್‌ವರ್ತ್ಸ್‌ನಂತಹ ಪ್ರಮುಖ ಚಿಲ್ಲರೆ ವ್ಯಾಪಾರಿಗಳು ದೀರ್ಘಕಾಲದಿಂದ ಅಂಗಡಿಯಲ್ಲಿನ ಕೆಲ ನೀತಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮ ಸಂಸ್ಥೆ ನ್ಯೂಸ್.ಕಾಮ್ ತಿಳಿಸಿದೆ. ಅದರಂತೆ ಒಬ್ಬರು ಪ್ರತಿ ಖರೀದಿಗೆ ಎರಡು ಬೇಬಿ ಫಾರ್ಮುಲಾ ಟಿನ್‌ಗಳನ್ನು ಮಾತ್ರ ಖರೀದಿಸಬಹುದಾಗಿದೆ.

ಆದರೆ ವಿಡಿಯೋದಲ್ಲಿ ಕಾಣುವಂತೆ ಯುವ ದಂಪತಿಗಳಿಬ್ಬರೂ ಎರಡಕ್ಕಿಂತ ಹೆಚ್ಚಿನ  ಬೇಬಿ ಫಾರ್ಮುಲಾ ಟಿನ್‌ಗಳನ್ನು ಹಿಡಿದುಕೊಂಡಿರುವುದನ್ನು ಹಿರಿಯ ದಂಪತಿಗಳು ಪ್ರಶ್ನಿಸಿದ್ದಾರೆ. ಅಲ್ಲಿಗೆ ಜಗಳ ಆರಂಭವಾಗಿದೆ. ಕೈ ಕೈ ಮಿಲಾಯಿಸುವ ಪರಿಸ್ಥಿತಿ ಬಂದಾಗ ಭದ್ರತಾ ಅಧಿಕಾರಿಗಳು ಯುವ ದಂಪತಿಗಳನ್ನು ಸೂಪರ್‌ ಮಾರ್ಕೆಟ್‌ನಿಂದ ಹೊರ ಕಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 


ಯಾಹೂ ನ್ಯೂಸ್ ಆಸ್ಟ್ರೇಲಿಯಾ ನೀಡಿದ ಹೇಳಿಕೆಯಲ್ಲಿ, ಬಿಗ್ ಡಬ್ಲ್ಯೂ ವಕ್ತಾರರು, “ಗ್ರಾಹಕರಿಗೆ ಭಿನ್ನಾಭಿಪ್ರಾಯವಿತ್ತು, ಹಾಗಾಗಿ ಜಗಳ ಆರಂಭವಾಗಿದೆ. ಕೂಡಲೇ ಬಿಗ್ ಡಬ್ಲ್ಯೂ ಲಿಲಿಡೇಲ್ ಅಂಗಡಿಯಿಂದ ಹೊರಹೋಗುವಂತೆ ನಮ್ಮ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಕೇಳಿದ್ದಾರೆ. ಇಲ್ಲಿಗೆ ಪ್ರಕರಣ ಮುಗಿದಿದೆ, ಪೊಲೀಸರ ಅಗತ್ಯ ಬಿದ್ದಿಲ್ಲ ಎಂದು ತಿಳಿಸಿದ್ದಾರೆ.

ಮಗುವಿನ ಆಹಾರವನ್ನು ಸಂಗ್ರಹಿಸಿಡಲಾಗಿದೆ ಎಂಬ ಆರೋಪದ ಮೇಲೆ ಇಬ್ಬರು ಗ್ರಾಹಕರ ನಡುವಿನ ತೀವ್ರ ಜಗಳದ ವಿಡಿಯೋವನ್ನು ಚೀನಾದ ಪ್ರಜೆಗಳಿಗೆ ಆಸ್ಟ್ರೇಲಿಯಾದ ‌ಸೂಪರ್ ಮಾರ್ಕೆಟ್‌ಗಳಲ್ಲಿ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please avoid using question marks in the headings of articles. Be objective while reporting. For example, in the present article the heading could have been “ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲ ಎಂಬ ಸುಳ್ಳು ಸುದ್ದಿ”

    I agree that the heading you have chosen creates curiosity, it also creates an impression that the reporter/ broadcaster is not sure of what is being reported.

    • Thanks Nandan, You are right. But our social media experts say that since 60% of readers come through social media, they will be think that the content is over with the title. Anyway, we shall discuss this in our team. You can also write to us to [email protected].

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...