Homeನಿಜವೋ ಸುಳ್ಳೋFact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

- Advertisement -
- Advertisement -

ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಿಗೆ ಚೀನೀ ಮೂಲದ ಜನರನ್ನು ಅನುಮತಿಸಲಾಗುವುದಿಲ್ಲ ಎಂಬ ಹೇಳಿಕೆಯೊಂದಿಗೆ ದಂಪತಿಗಳು ಒಬ್ಬ ವ್ಯಕ್ತಿಯೊಂದಿಗೆ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಗುಜರಾತಿ ನ್ಯೂಸ್ ಚಾನೆಲ್ ಟಿವಿ9 “# ಕೊರೋನವೈರಸ್, #ಆಸ್ಟ್ರೇಲಿಯಾದಲ್ಲಿ ಚೀನೀಯರ ಮೇಲೆ ಜನಾಂಗೀಯ ದಾಳಿಯನ್ನು ಹುಟ್ಟುಹಾಕಿದೆ. ವೈರಲ್ ವೀಡಿಯೊ ಪ್ರಕಾರ, ಚೀನೀ ಜನರಿಗೆ ಸೂಪರ್‌ ಮಾರ್ಕೆಟ್‌ಗಳಿಗೆ ಪ್ರವೇಶಿಸಲು ಅವಕಾಶವಿಲ್ಲ.” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಟ್ವೀಟ್ ಮಾಡಿದೆ.

ಬಿಜೆವೈಎಂ ತೆಲಂಗಾಣದ ವಕ್ತಾರ ರೂಪ್ ದಾರಕ್ ಅವರು “ಇಡೀ ವಿಶ್ವವೂ ಇದನ್ನು ಅನುಸರಿಸಬೇಕು.  ಚೈನೀಸ್ ಅನ್ನು ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಲ್ಲಿ ಅನುಮತಿಸಲಾಗುವುದಿಲ್ಲ. ಇದು ಈಗ ಶುರುವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಇಲ್ಲಿಯವರೆಗೆ 1,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಸಂಗ್ರಹಿಸಿದೆ. ಐಪಿಎಸ್ ಅಧಿಕಾರಿ ಎಚ್‌ಜಿಎಸ್ ಧಲಿವಾಲ್ ಕೂಡ ಇದೇ ವಿಡಿಯೋ ಜೊತೆಗೆ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ ಚೆಕ್‌:

ವಾಸ್ತವವೇನೆಂದರೆ, ಇದರ ಮೂಲ 2020 ರ ಏಪ್ರಿಲ್ 11 ರಂದು ಪ್ರಕಟವಾದ ಯುಕೆ ಸುದ್ದಿವಾಹಿನಿ ಡೈಲಿ ಮೇಲ್‌ನಲ್ಲಿ ದೊರೆತಿದೆ. ಅದರ ಪ್ರಕಾರ ಮೆಲ್ಬೋರ್ನ್‌ನ ಲಿಲಿಡೇಲ್‌ನಲ್ಲಿರುವ ಬಿಗ್ ಡಬ್ಲ್ಯೂ ಮಾಲ್‌ನಲ್ಲಿ ಬೇಬಿ ಫಾರ್ಮುಲಾ ಕುರಿತು ಇಬ್ಬರು ಗ್ರಾಹಕರ ನಡುವಿನ ದೊಡ್ಡ ಜಗಳ ಇದಾಗಿದೆ.

ಬಿಗ್ ಡಬ್ಲ್ಯೂ, ಕೋಲ್ಸ್ ಮತ್ತು ವೂಲ್‌ವರ್ತ್ಸ್‌ನಂತಹ ಪ್ರಮುಖ ಚಿಲ್ಲರೆ ವ್ಯಾಪಾರಿಗಳು ದೀರ್ಘಕಾಲದಿಂದ ಅಂಗಡಿಯಲ್ಲಿನ ಕೆಲ ನೀತಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮ ಸಂಸ್ಥೆ ನ್ಯೂಸ್.ಕಾಮ್ ತಿಳಿಸಿದೆ. ಅದರಂತೆ ಒಬ್ಬರು ಪ್ರತಿ ಖರೀದಿಗೆ ಎರಡು ಬೇಬಿ ಫಾರ್ಮುಲಾ ಟಿನ್‌ಗಳನ್ನು ಮಾತ್ರ ಖರೀದಿಸಬಹುದಾಗಿದೆ.

ಆದರೆ ವಿಡಿಯೋದಲ್ಲಿ ಕಾಣುವಂತೆ ಯುವ ದಂಪತಿಗಳಿಬ್ಬರೂ ಎರಡಕ್ಕಿಂತ ಹೆಚ್ಚಿನ  ಬೇಬಿ ಫಾರ್ಮುಲಾ ಟಿನ್‌ಗಳನ್ನು ಹಿಡಿದುಕೊಂಡಿರುವುದನ್ನು ಹಿರಿಯ ದಂಪತಿಗಳು ಪ್ರಶ್ನಿಸಿದ್ದಾರೆ. ಅಲ್ಲಿಗೆ ಜಗಳ ಆರಂಭವಾಗಿದೆ. ಕೈ ಕೈ ಮಿಲಾಯಿಸುವ ಪರಿಸ್ಥಿತಿ ಬಂದಾಗ ಭದ್ರತಾ ಅಧಿಕಾರಿಗಳು ಯುವ ದಂಪತಿಗಳನ್ನು ಸೂಪರ್‌ ಮಾರ್ಕೆಟ್‌ನಿಂದ ಹೊರ ಕಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 


ಯಾಹೂ ನ್ಯೂಸ್ ಆಸ್ಟ್ರೇಲಿಯಾ ನೀಡಿದ ಹೇಳಿಕೆಯಲ್ಲಿ, ಬಿಗ್ ಡಬ್ಲ್ಯೂ ವಕ್ತಾರರು, “ಗ್ರಾಹಕರಿಗೆ ಭಿನ್ನಾಭಿಪ್ರಾಯವಿತ್ತು, ಹಾಗಾಗಿ ಜಗಳ ಆರಂಭವಾಗಿದೆ. ಕೂಡಲೇ ಬಿಗ್ ಡಬ್ಲ್ಯೂ ಲಿಲಿಡೇಲ್ ಅಂಗಡಿಯಿಂದ ಹೊರಹೋಗುವಂತೆ ನಮ್ಮ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಕೇಳಿದ್ದಾರೆ. ಇಲ್ಲಿಗೆ ಪ್ರಕರಣ ಮುಗಿದಿದೆ, ಪೊಲೀಸರ ಅಗತ್ಯ ಬಿದ್ದಿಲ್ಲ ಎಂದು ತಿಳಿಸಿದ್ದಾರೆ.

ಮಗುವಿನ ಆಹಾರವನ್ನು ಸಂಗ್ರಹಿಸಿಡಲಾಗಿದೆ ಎಂಬ ಆರೋಪದ ಮೇಲೆ ಇಬ್ಬರು ಗ್ರಾಹಕರ ನಡುವಿನ ತೀವ್ರ ಜಗಳದ ವಿಡಿಯೋವನ್ನು ಚೀನಾದ ಪ್ರಜೆಗಳಿಗೆ ಆಸ್ಟ್ರೇಲಿಯಾದ ‌ಸೂಪರ್ ಮಾರ್ಕೆಟ್‌ಗಳಲ್ಲಿ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please avoid using question marks in the headings of articles. Be objective while reporting. For example, in the present article the heading could have been “ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲ ಎಂಬ ಸುಳ್ಳು ಸುದ್ದಿ”

    I agree that the heading you have chosen creates curiosity, it also creates an impression that the reporter/ broadcaster is not sure of what is being reported.

    • Thanks Nandan, You are right. But our social media experts say that since 60% of readers come through social media, they will be think that the content is over with the title. Anyway, we shall discuss this in our team. You can also write to us to [email protected].

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...