Homeನಿಜವೋ ಸುಳ್ಳೋFact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

Fact Check: ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲವೇ?

- Advertisement -
- Advertisement -

ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಿಗೆ ಚೀನೀ ಮೂಲದ ಜನರನ್ನು ಅನುಮತಿಸಲಾಗುವುದಿಲ್ಲ ಎಂಬ ಹೇಳಿಕೆಯೊಂದಿಗೆ ದಂಪತಿಗಳು ಒಬ್ಬ ವ್ಯಕ್ತಿಯೊಂದಿಗೆ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಗುಜರಾತಿ ನ್ಯೂಸ್ ಚಾನೆಲ್ ಟಿವಿ9 “# ಕೊರೋನವೈರಸ್, #ಆಸ್ಟ್ರೇಲಿಯಾದಲ್ಲಿ ಚೀನೀಯರ ಮೇಲೆ ಜನಾಂಗೀಯ ದಾಳಿಯನ್ನು ಹುಟ್ಟುಹಾಕಿದೆ. ವೈರಲ್ ವೀಡಿಯೊ ಪ್ರಕಾರ, ಚೀನೀ ಜನರಿಗೆ ಸೂಪರ್‌ ಮಾರ್ಕೆಟ್‌ಗಳಿಗೆ ಪ್ರವೇಶಿಸಲು ಅವಕಾಶವಿಲ್ಲ.” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಟ್ವೀಟ್ ಮಾಡಿದೆ.

ಬಿಜೆವೈಎಂ ತೆಲಂಗಾಣದ ವಕ್ತಾರ ರೂಪ್ ದಾರಕ್ ಅವರು “ಇಡೀ ವಿಶ್ವವೂ ಇದನ್ನು ಅನುಸರಿಸಬೇಕು.  ಚೈನೀಸ್ ಅನ್ನು ಆಸ್ಟ್ರೇಲಿಯಾದ ಸೂಪರ್ ಮಾರ್ಕೆಟ್‌ಗಳಲ್ಲಿ ಅನುಮತಿಸಲಾಗುವುದಿಲ್ಲ. ಇದು ಈಗ ಶುರುವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಇದು ಇಲ್ಲಿಯವರೆಗೆ 1,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಸಂಗ್ರಹಿಸಿದೆ. ಐಪಿಎಸ್ ಅಧಿಕಾರಿ ಎಚ್‌ಜಿಎಸ್ ಧಲಿವಾಲ್ ಕೂಡ ಇದೇ ವಿಡಿಯೋ ಜೊತೆಗೆ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ ಚೆಕ್‌:

ವಾಸ್ತವವೇನೆಂದರೆ, ಇದರ ಮೂಲ 2020 ರ ಏಪ್ರಿಲ್ 11 ರಂದು ಪ್ರಕಟವಾದ ಯುಕೆ ಸುದ್ದಿವಾಹಿನಿ ಡೈಲಿ ಮೇಲ್‌ನಲ್ಲಿ ದೊರೆತಿದೆ. ಅದರ ಪ್ರಕಾರ ಮೆಲ್ಬೋರ್ನ್‌ನ ಲಿಲಿಡೇಲ್‌ನಲ್ಲಿರುವ ಬಿಗ್ ಡಬ್ಲ್ಯೂ ಮಾಲ್‌ನಲ್ಲಿ ಬೇಬಿ ಫಾರ್ಮುಲಾ ಕುರಿತು ಇಬ್ಬರು ಗ್ರಾಹಕರ ನಡುವಿನ ದೊಡ್ಡ ಜಗಳ ಇದಾಗಿದೆ.

ಬಿಗ್ ಡಬ್ಲ್ಯೂ, ಕೋಲ್ಸ್ ಮತ್ತು ವೂಲ್‌ವರ್ತ್ಸ್‌ನಂತಹ ಪ್ರಮುಖ ಚಿಲ್ಲರೆ ವ್ಯಾಪಾರಿಗಳು ದೀರ್ಘಕಾಲದಿಂದ ಅಂಗಡಿಯಲ್ಲಿನ ಕೆಲ ನೀತಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮ ಸಂಸ್ಥೆ ನ್ಯೂಸ್.ಕಾಮ್ ತಿಳಿಸಿದೆ. ಅದರಂತೆ ಒಬ್ಬರು ಪ್ರತಿ ಖರೀದಿಗೆ ಎರಡು ಬೇಬಿ ಫಾರ್ಮುಲಾ ಟಿನ್‌ಗಳನ್ನು ಮಾತ್ರ ಖರೀದಿಸಬಹುದಾಗಿದೆ.

ಆದರೆ ವಿಡಿಯೋದಲ್ಲಿ ಕಾಣುವಂತೆ ಯುವ ದಂಪತಿಗಳಿಬ್ಬರೂ ಎರಡಕ್ಕಿಂತ ಹೆಚ್ಚಿನ  ಬೇಬಿ ಫಾರ್ಮುಲಾ ಟಿನ್‌ಗಳನ್ನು ಹಿಡಿದುಕೊಂಡಿರುವುದನ್ನು ಹಿರಿಯ ದಂಪತಿಗಳು ಪ್ರಶ್ನಿಸಿದ್ದಾರೆ. ಅಲ್ಲಿಗೆ ಜಗಳ ಆರಂಭವಾಗಿದೆ. ಕೈ ಕೈ ಮಿಲಾಯಿಸುವ ಪರಿಸ್ಥಿತಿ ಬಂದಾಗ ಭದ್ರತಾ ಅಧಿಕಾರಿಗಳು ಯುವ ದಂಪತಿಗಳನ್ನು ಸೂಪರ್‌ ಮಾರ್ಕೆಟ್‌ನಿಂದ ಹೊರ ಕಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 


ಯಾಹೂ ನ್ಯೂಸ್ ಆಸ್ಟ್ರೇಲಿಯಾ ನೀಡಿದ ಹೇಳಿಕೆಯಲ್ಲಿ, ಬಿಗ್ ಡಬ್ಲ್ಯೂ ವಕ್ತಾರರು, “ಗ್ರಾಹಕರಿಗೆ ಭಿನ್ನಾಭಿಪ್ರಾಯವಿತ್ತು, ಹಾಗಾಗಿ ಜಗಳ ಆರಂಭವಾಗಿದೆ. ಕೂಡಲೇ ಬಿಗ್ ಡಬ್ಲ್ಯೂ ಲಿಲಿಡೇಲ್ ಅಂಗಡಿಯಿಂದ ಹೊರಹೋಗುವಂತೆ ನಮ್ಮ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಕೇಳಿದ್ದಾರೆ. ಇಲ್ಲಿಗೆ ಪ್ರಕರಣ ಮುಗಿದಿದೆ, ಪೊಲೀಸರ ಅಗತ್ಯ ಬಿದ್ದಿಲ್ಲ ಎಂದು ತಿಳಿಸಿದ್ದಾರೆ.

ಮಗುವಿನ ಆಹಾರವನ್ನು ಸಂಗ್ರಹಿಸಿಡಲಾಗಿದೆ ಎಂಬ ಆರೋಪದ ಮೇಲೆ ಇಬ್ಬರು ಗ್ರಾಹಕರ ನಡುವಿನ ತೀವ್ರ ಜಗಳದ ವಿಡಿಯೋವನ್ನು ಚೀನಾದ ಪ್ರಜೆಗಳಿಗೆ ಆಸ್ಟ್ರೇಲಿಯಾದ ‌ಸೂಪರ್ ಮಾರ್ಕೆಟ್‌ಗಳಲ್ಲಿ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Please avoid using question marks in the headings of articles. Be objective while reporting. For example, in the present article the heading could have been “ಆಸ್ಟ್ರೇಲಿಯಾದ ಸೂಪರ್‌ ಮಾರ್ಕೆಟ್‌ಗಳಲ್ಲಿ ಚೀನಿಯರಿಗೆ ಪ್ರವೇಶವಿಲ್ಲ ಎಂಬ ಸುಳ್ಳು ಸುದ್ದಿ”

    I agree that the heading you have chosen creates curiosity, it also creates an impression that the reporter/ broadcaster is not sure of what is being reported.

    • Thanks Nandan, You are right. But our social media experts say that since 60% of readers come through social media, they will be think that the content is over with the title. Anyway, we shall discuss this in our team. You can also write to us to [email protected].

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....