Homeಮುಖಪುಟಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ ಯುವತಿಯ ಬಂಧನ..

ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ ಯುವತಿಯ ಬಂಧನ..

- Advertisement -
- Advertisement -

ಬಿಜೆಪಿ ಮುಖಂಡ ಚಿನ್ಮಯಾನಂದ್ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ 23 ವರ್ಷದ ಉತ್ತರ ಪ್ರದೇಶದ ಕಾನೂನು ವಿದ್ಯಾರ್ಥಿಯನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತಂಡವು ಸುಲಿಗೆ ಮಾಡಿದ ಆರೋಪದ ಮೇಲೆ ಬಂಧಿಸಿದ್ದಾರೆ.

ಬಂಧನದ ವಿರುದ್ಧ ರಕ್ಷಣೆಗಾಗಿ ಕಾನೂನು ವಿದ್ಯಾರ್ಥಿ ಸ್ಥಳೀಯ ನ್ಯಾಯಾಲಯವನ್ನು ಕೋರಿದ್ದರೂ ತಕ್ಷಣದ ಪರಿಹಾರ ಸಿಗಲಿಲ್ಲ. ನ್ಯಾಯಾಲಯವು ಬುಧವಾರಕ್ಕೆ ವಿಚಾರಣೆಯನ್ನು ಮೂಂದೂಡಿತ್ತು.

”ಮಹಿಳೆಯನ್ನು ತನ್ನ ನಿವಾಸದಿಂದ ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಾವು ನಂತರ ಅವಳನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುತ್ತೇವೆ ಮತ್ತು ಆಕೆಯನ್ನು ವಶಕ್ಕೆ ಪಡೆಯುತ್ತೇವೆ ”ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರುವ ಪೊಲೀಸ್ ಇನ್ಸ್‌ಪೆಕ್ಟರ್ ನವೀನ್ ಅರೋರಾ ತಿಳಿಸಿದ್ದಾರೆ.

ಕಳೆದ ವಾರ, ಬಿಜೆಪಿ ನಾಯಕನ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಆರೋಪ ಮಾಡಿದ ಕಾನೂನು ವಿದ್ಯಾರ್ಥಿಯ ದೂರಿನ ಮೇರೆಗೆ ವಿಶೇಷ ತನಿಖಾ ತಂಡ ಚಿನ್ಮಯಾನಂದ್ ಅವರನ್ನು ಬಂಧಿಸಿತ್ತು. ಈಗ ಚಿನ್ಮಯಾನಂದ್ ನೀಡಿದ ದೂರಿನ ಮೇಲೆ ಆಕೆಯನ್ನು ಬಂಧಿಸಿರುವುದು ಸೇಡಿನ ಕ್ರಮ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಅತ್ಯಾಚಾರದ ಆರೋಪದಲ್ಲಿ ಬಿಜೆಪಿ ಮುಖಂಡ ಚಿನ್ಮಯಾನಂದ್ ಬಂಧನ..

ಕಳೆದ ತಿಂಗಳು ಆಗಸ್ಟ್ 24 ರಂದು ಆ ವಿದ್ಯಾರ್ಥಿನಿಯು “ಸಮುದಾಯದ ಹಿರಿಯ ಮುಖಂಡ” ಕಿರುಕುಳ ಮತ್ತು ಬೆದರಿಕೆ ಹಾಕುತ್ತಿದ್ದಾನೆ ಎಂದು ಆರೋಪಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಕಾಣೆಯಾಗಿದ್ದಳು.

ಚಿನ್ಮಯಾನಂದ್ ಅವರ ಆಶ್ರಮ ನಡೆಸುತ್ತಿರುವ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ಕಾನೂನು ವಿದ್ಯಾರ್ಥಿನಿಯು, ಒಂದು ವರ್ಷದಿಂದ ಅತ್ಯಾಚಾರ ಮತ್ತು ದೈಹಿಕವಾಗಿ ಶೋಷಣೆಗೆ ಒಳಗಾಗಿದ್ದೆ ಎಂದು ಆರೋಪಿಸಿದ್ದಾಳೆ.

ಆಕೆಯ ವಿರುದ್ಧ ಸುಲಿಗೆ ಪ್ರಕರಣವನ್ನು ದಾಖಲಿಸಿರುವ ಚಿನ್ಮಯಾನಂದ್ ಪರ ವಕೀಲ ಓಂ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕಾನೂನು ವಿದ್ಯಾರ್ಥಿ ತನ್ನ ಮೂವರು ಸ್ನೇಹಿತರಾದ ಸಚಿನ್ ಸೆಂಗಾರ್, ಶಿವಂ ಸಿಂಗ್ ಮತ್ತು ವಿಕಾರಂ ಸಿಂಗ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಚಿನ್ಮಯಾನಂದ್ ಬಳಿ 5 ಕೋಟಿ ನೀಡುವಂತೆ ಒತ್ತಾಯ ಹಾಕಿದ್ದಳು ಎಂದು ಆರೋಪಿಸಿದ್ದಾರೆ.

ಚಿನ್ಮಯಾನಂದ್ ವಿರುದ್ಧದ ಪ್ರಕರಣವನ್ನು ದುರ್ಬಲಗೊಳಿಸಲು ತನ್ನ ವಿರುದ್ಧ ಸುಲಿಗೆ ಪ್ರಕರಣವನ್ನು ಹಾಕಲಾಗಿದೆ ಎಂದು ಕಾನೂನು ವಿದ್ಯಾರ್ಥಿನಿ ಹೇಳಿದ್ದಾಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...