Homeಮುಖಪುಟಚಿನ್ಮಯಾನಂದ್ ಮೇಲೆ ಅತ್ಯಾಚಾರ ಆರೋಪ ಮಾಡಿದ ಕಾನೂನು ವಿದ್ಯಾರ್ಥಿನಿಗೆ ಸೆಮಿಸ್ಟರ್ ಪರೀಕ್ಷೆಗೆ  ಅನುಮತಿ ನಿರಾಕರಣೆ

ಚಿನ್ಮಯಾನಂದ್ ಮೇಲೆ ಅತ್ಯಾಚಾರ ಆರೋಪ ಮಾಡಿದ ಕಾನೂನು ವಿದ್ಯಾರ್ಥಿನಿಗೆ ಸೆಮಿಸ್ಟರ್ ಪರೀಕ್ಷೆಗೆ  ಅನುಮತಿ ನಿರಾಕರಣೆ

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಬಿಜೆಪಿ ಮುಖಂಡ ಚಿನ್ಮಯಾನಂದ್ ಅವರ ಮೇಲೆ ಅತ್ಯಾಚಾರ ಆರೋಪ ಹೊರಿಸಿರುವ 23 ವರ್ಷದ ಕಾನೂನು ವಿದ್ಯಾರ್ಥಿನಿಗೆ ಸೋಮವಾರ ತನ್ನ ಮೂರನೇ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಅನುಮತಿ ನಿರಾಕರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

75% ಹಾಜರಾತಿಯ ಕಡ್ಡಾಯ ನಿಯಮವನ್ನು ವಿದ್ಯಾರ್ಥಿನಿಯು ಪೂರೈಸಲಿಲ್ಲ ಎಂದು ಉತ್ತರ ಪ್ರದೇಶದ ಬರೇಲಿಯ ವಿಶ್ವವಿದ್ಯಾಲಯವು ತಿಳಿಸಿದೆ. ಮಂಗಳವಾರದಿಂದ ಪ್ರಾರಂಭವಾಗಲಿರುವ ಪರೀಕ್ಷೆಗೆ ಹಾಜರಾಗಲು ನ್ಯಾಯಾಲಯದ ಆದೇಶವನ್ನು ಸಲ್ಲಿಸುವಂತೆ ಆ ವಿದ್ಯಾರ್ಥಿನಿಗೆ ಸೂಚಿಸಿದೆ.

ಚಿನ್ಮಯಾನಂದ್‌ನಿಂದ ಬ್ಲ್ಯಾಕ್‌ಮೇಲ್ ಮಾಡಿ 5 ಕೋಟಿ ರೂ.ಗೆ ಬೇಡಿಕೆ ಇಟ್ಟಿರುವ ಆರೋಪಕ್ಕಾಗಿ ಆಕೆ ಮತ್ತು  ಇತರ ಮೂವರನ್ನು ಶಹಜಹಾನಪುರ ಜೈಲಿನಲ್ಲಿ ಇರಿಸಲಾಗಿದೆ. ಅವರ ವಕೀಲ ಕಲ್ವಿಂದರ್ ಸಿಂಗ್ ಅವರು ವಿಶ್ವವಿದ್ಯಾಲಯದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ವಿಶ್ವವಿದ್ಯಾಲಯವು ಸೋಮವಾರ ಆಕೆಗೆ ತನ್ನ ಮೊದಲ ಸೆಮಿಸ್ಟರ್‌ನಲ್ಲಿ ಬಾಕಿ ಬ್ಯಾಕ್ ಪೇಪರ್ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿದೆ ಎಂದು ರಿಜಿಸ್ಟ್ರಾರ್ ಸುನೀತಾ ಪಾಂಡೆ ಹೇಳಿದ್ದಾರೆ. “ಆದರೆ ನಾಳೆ [ಮಂಗಳವಾರ] ರಿಂದ ಪ್ರಾರಂಭವಾಗುತ್ತಿರುವ ತನ್ನ LLM ನ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಳನ್ನು ಅನುಮತಿಸಲಾಗುವುದಿಲ್ಲ. ಆಕೆಗೆ ಪ್ರವೇಶ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು, ಮತ್ತು ನಾವು ಆ ನಿರ್ದೇಶನವನ್ನು ಪಾಲಿಸಿದ್ದೇವೆ. ಅಗತ್ಯವಿರುವ 75% ಹಾಜರಾತಿಯನ್ನು ಅವಳು ಪೂರೈಸದಿದ್ದರೂ ಸಹ ಪರೀಕ್ಷೆಗೆ ಹಾಜರಾಗಲು ನ್ಯಾಯಾಲಯದ ನಿರ್ದೇಶನ ನೀಡಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ, ಉತ್ತರ ಪ್ರದೇಶ ಸರ್ಕಾರವು ಆಕೆ ಮತ್ತು ಆಕೆಯ ಸಹೋದರನನ್ನು ಎಸ್‌ಎಸ್ ಕಾನೂನು ಕಾಲೇಜಿನಿಂದ ಬರೇಲಿಯ ಮಹಾತ್ಮ ಜ್ಯೋತಿಬಾ ಫುಲೆ ರೋಹಿಲ್‌ಖಂಡ್ ವಿಶ್ವವಿದ್ಯಾಲಯಕ್ಕೆ ಮತ್ತು ಶ್ರೀಜಿ ಇನ್‌ಸ್ಟಿಟ್ಯೂಟ್ ಆಫ್ ಲೀಗಲ್ ಮತ್ತು ವೊಕೇಶನಲ್ ಸ್ಟಡೀಸ್‌ಗೆ ಕ್ರಮವಾಗಿ ವರ್ಗಾಯಿಸಲು ವ್ಯವಸ್ಥೆ ಮಾಡಿತು. ಶಿಕ್ಷಣವು ಆಕೆಯ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಉನ್ನತ ನ್ಯಾಯಾಲಯವು ಭಾವಿಸಿತ್ತು ಮತ್ತು ಅದಕ್ಕಾಗಿ ಅವರು ಸ್ಥಳಾಂತರಗೊಂಡ ಆಯಾ ಕಾನೂನು ಕೋರ್ಸ್‌ಗಳಿಗೆ  ಆಸನಗಳನ್ನು ಹೆಚ್ಚಿಸುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾವನ್ನು ಕೋರಿತ್ತು.

ನ್ಯಾಯಾಲಯದ ಆದೇಶದ ನಂತರ ಮತ್ತು ಹಾಸ್ಟೆಲ್‌ನಲ್ಲಿ ಒಂದು ಕೋಣೆಯನ್ನು ಮಂಜೂರು ಮಾಡಿದ ನಂತರ ಆಕೆಗೆ ಅಕ್ಟೋಬರ್‌ನಲ್ಲಿ ಪ್ರವೇಶ ನೀಡಲಾಯಿತು ಎಂದು ಕಾನೂನು ವಿದ್ಯಾರ್ಥಿನಿಯ ಸಹೋದರ ಹೇಳಿದ್ದಾರೆ. “ನನ್ನ ಸಹೋದರಿ ನ್ಯಾಯಾಂಗ ಬಂಧನದಲ್ಲಿರುವುದರಿಂದ, ಅವಳು ಯಾವುದೇ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯಿಂದ ಇಸ್ಲಾಮೋಫೋಬಿಕ್ ಹೇಳಿಕೆ : ತೀವ್ರ ಆಕ್ರೋಶ

ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ 'ಶಾಂತಿ ಸಭೆ'ಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು 'ಇಸ್ಲಾಮೋಫೋಬಿಕ್' ಹೇಳಿಕೆ ನೀಡಿರುವುದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಧಿಕಾರಿಯ ಹೇಳಿಕೆ ರಾಜಕೀಯ ನಾಯಕರು...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...