Homeಮುಖಪುಟಚಿನ್ಮಯಾನಂದ್ ಮೇಲೆ ಅತ್ಯಾಚಾರ ಆರೋಪ ಮಾಡಿದ ಕಾನೂನು ವಿದ್ಯಾರ್ಥಿನಿಗೆ ಸೆಮಿಸ್ಟರ್ ಪರೀಕ್ಷೆಗೆ  ಅನುಮತಿ ನಿರಾಕರಣೆ

ಚಿನ್ಮಯಾನಂದ್ ಮೇಲೆ ಅತ್ಯಾಚಾರ ಆರೋಪ ಮಾಡಿದ ಕಾನೂನು ವಿದ್ಯಾರ್ಥಿನಿಗೆ ಸೆಮಿಸ್ಟರ್ ಪರೀಕ್ಷೆಗೆ  ಅನುಮತಿ ನಿರಾಕರಣೆ

- Advertisement -
- Advertisement -

ಮಾಜಿ ಕೇಂದ್ರ ಸಚಿವ, ಬಿಜೆಪಿ ಮುಖಂಡ ಚಿನ್ಮಯಾನಂದ್ ಅವರ ಮೇಲೆ ಅತ್ಯಾಚಾರ ಆರೋಪ ಹೊರಿಸಿರುವ 23 ವರ್ಷದ ಕಾನೂನು ವಿದ್ಯಾರ್ಥಿನಿಗೆ ಸೋಮವಾರ ತನ್ನ ಮೂರನೇ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಅನುಮತಿ ನಿರಾಕರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

75% ಹಾಜರಾತಿಯ ಕಡ್ಡಾಯ ನಿಯಮವನ್ನು ವಿದ್ಯಾರ್ಥಿನಿಯು ಪೂರೈಸಲಿಲ್ಲ ಎಂದು ಉತ್ತರ ಪ್ರದೇಶದ ಬರೇಲಿಯ ವಿಶ್ವವಿದ್ಯಾಲಯವು ತಿಳಿಸಿದೆ. ಮಂಗಳವಾರದಿಂದ ಪ್ರಾರಂಭವಾಗಲಿರುವ ಪರೀಕ್ಷೆಗೆ ಹಾಜರಾಗಲು ನ್ಯಾಯಾಲಯದ ಆದೇಶವನ್ನು ಸಲ್ಲಿಸುವಂತೆ ಆ ವಿದ್ಯಾರ್ಥಿನಿಗೆ ಸೂಚಿಸಿದೆ.

ಚಿನ್ಮಯಾನಂದ್‌ನಿಂದ ಬ್ಲ್ಯಾಕ್‌ಮೇಲ್ ಮಾಡಿ 5 ಕೋಟಿ ರೂ.ಗೆ ಬೇಡಿಕೆ ಇಟ್ಟಿರುವ ಆರೋಪಕ್ಕಾಗಿ ಆಕೆ ಮತ್ತು  ಇತರ ಮೂವರನ್ನು ಶಹಜಹಾನಪುರ ಜೈಲಿನಲ್ಲಿ ಇರಿಸಲಾಗಿದೆ. ಅವರ ವಕೀಲ ಕಲ್ವಿಂದರ್ ಸಿಂಗ್ ಅವರು ವಿಶ್ವವಿದ್ಯಾಲಯದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ವಿಶ್ವವಿದ್ಯಾಲಯವು ಸೋಮವಾರ ಆಕೆಗೆ ತನ್ನ ಮೊದಲ ಸೆಮಿಸ್ಟರ್‌ನಲ್ಲಿ ಬಾಕಿ ಬ್ಯಾಕ್ ಪೇಪರ್ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿದೆ ಎಂದು ರಿಜಿಸ್ಟ್ರಾರ್ ಸುನೀತಾ ಪಾಂಡೆ ಹೇಳಿದ್ದಾರೆ. “ಆದರೆ ನಾಳೆ [ಮಂಗಳವಾರ] ರಿಂದ ಪ್ರಾರಂಭವಾಗುತ್ತಿರುವ ತನ್ನ LLM ನ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಳನ್ನು ಅನುಮತಿಸಲಾಗುವುದಿಲ್ಲ. ಆಕೆಗೆ ಪ್ರವೇಶ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು, ಮತ್ತು ನಾವು ಆ ನಿರ್ದೇಶನವನ್ನು ಪಾಲಿಸಿದ್ದೇವೆ. ಅಗತ್ಯವಿರುವ 75% ಹಾಜರಾತಿಯನ್ನು ಅವಳು ಪೂರೈಸದಿದ್ದರೂ ಸಹ ಪರೀಕ್ಷೆಗೆ ಹಾಜರಾಗಲು ನ್ಯಾಯಾಲಯದ ನಿರ್ದೇಶನ ನೀಡಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

ಸೆಪ್ಟೆಂಬರ್‌ನಲ್ಲಿ, ಉತ್ತರ ಪ್ರದೇಶ ಸರ್ಕಾರವು ಆಕೆ ಮತ್ತು ಆಕೆಯ ಸಹೋದರನನ್ನು ಎಸ್‌ಎಸ್ ಕಾನೂನು ಕಾಲೇಜಿನಿಂದ ಬರೇಲಿಯ ಮಹಾತ್ಮ ಜ್ಯೋತಿಬಾ ಫುಲೆ ರೋಹಿಲ್‌ಖಂಡ್ ವಿಶ್ವವಿದ್ಯಾಲಯಕ್ಕೆ ಮತ್ತು ಶ್ರೀಜಿ ಇನ್‌ಸ್ಟಿಟ್ಯೂಟ್ ಆಫ್ ಲೀಗಲ್ ಮತ್ತು ವೊಕೇಶನಲ್ ಸ್ಟಡೀಸ್‌ಗೆ ಕ್ರಮವಾಗಿ ವರ್ಗಾಯಿಸಲು ವ್ಯವಸ್ಥೆ ಮಾಡಿತು. ಶಿಕ್ಷಣವು ಆಕೆಯ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಉನ್ನತ ನ್ಯಾಯಾಲಯವು ಭಾವಿಸಿತ್ತು ಮತ್ತು ಅದಕ್ಕಾಗಿ ಅವರು ಸ್ಥಳಾಂತರಗೊಂಡ ಆಯಾ ಕಾನೂನು ಕೋರ್ಸ್‌ಗಳಿಗೆ  ಆಸನಗಳನ್ನು ಹೆಚ್ಚಿಸುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾವನ್ನು ಕೋರಿತ್ತು.

ನ್ಯಾಯಾಲಯದ ಆದೇಶದ ನಂತರ ಮತ್ತು ಹಾಸ್ಟೆಲ್‌ನಲ್ಲಿ ಒಂದು ಕೋಣೆಯನ್ನು ಮಂಜೂರು ಮಾಡಿದ ನಂತರ ಆಕೆಗೆ ಅಕ್ಟೋಬರ್‌ನಲ್ಲಿ ಪ್ರವೇಶ ನೀಡಲಾಯಿತು ಎಂದು ಕಾನೂನು ವಿದ್ಯಾರ್ಥಿನಿಯ ಸಹೋದರ ಹೇಳಿದ್ದಾರೆ. “ನನ್ನ ಸಹೋದರಿ ನ್ಯಾಯಾಂಗ ಬಂಧನದಲ್ಲಿರುವುದರಿಂದ, ಅವಳು ಯಾವುದೇ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...