Homeಮುಖಪುಟವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

- Advertisement -
- Advertisement -

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. 

ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ ಎಂದರೂ, ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ದೂರುಗಳಿಂದಾಗಿ ಅನೇಕರು ಈ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ತೀವ್ರವಾಗಿ ಖಂಡಿಸುತ್ತಿದ್ದಾರೆ.

ಗಾಯಕಿ ಚಿನ್ಮಯಿ ಶ್ರೀಪಾದ ಸೇರಿದಂತೆ ಹಲವು ಕಲಾವಿದರು ಈ ಪ್ರಶಸ್ತಿ ಆಯ್ಕೆಯ ವಿರುದ್ಧ ತಮ್ಮ ಆಕ್ರೋಶ ಮತ್ತು ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ನಿರ್ಧಾರವು ವೈರಮುತ್ತು ವಿರುದ್ಧ ಧ್ವನಿ ಎತ್ತಿದ ಮಹಿಳೆಯರ ನೋವುಗಳನ್ನು ಕಡೆಗಣಿಸಿದಂತಾಗುತ್ತದೆ ಮತ್ತು ಅವರಂತಹ ವ್ಯಕ್ತಿಗೆ ಮತ್ತಷ್ಟು ಸಾಮಾಜಿಕ ಮಾನ್ಯತೆ ನೀಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಜ್ಞಾನಪೀಠ ಎಂಬ ಸಾಹಿತ್ಯಿಕ ಸಂಸ್ಥೆಯು 2026ರ ಮಾರ್ಚ್ 14ರಂದು 2025ನೇ ಸಾಲಿನ (60ನೇ ವರ್ಷದ) ಜ್ಞಾನಪೀಠ ಪ್ರಶಸ್ತಿಯನ್ನು ವೈರಮುತ್ತು ಅವರಿಗೆ ಘೋಷಿಸಿದೆ. ಈ ಪ್ರತಿಷ್ಠಿತ ಸಂಸ್ಥೆಯನ್ನು 1944ರಲ್ಲಿ ಉದ್ಯಮಿ ಸಾಹು ಶಾಂತಿ ಪ್ರಸಾದ್ ಜೈನ್ ಅವರು ಸ್ಥಾಪಿಸಿದರು.

1964ರಿಂದ ಪ್ರತಿ ವರ್ಷದ ಜ್ಞಾನಪೀಠ ಪ್ರಶಸ್ತಿಯನ್ನು ಭಾರತೀಯ ಭಾಷೆಗಳಿಗೆ ನೀಡಿದ ಕೊಡುಗೆಗಾಗಿ ಸಾಹಿತಿಗಳಿಗೆ ನೀಡಲಾಗುತ್ತಿದೆ. ಇದನ್ನು ಭಾರತೀಯ ಸಾಹಿತ್ಯದ ಅತ್ಯಂತ ಪ್ರತಿಷ್ಠಿತ ಗೌರವವೆಂದು ಪರಿಗಣಿಸಲಾಗಿದೆ. ಈ ಪ್ರಶಸ್ತಿ 11 ಲಕ್ಷ ರೂಪಾಯಿ ನಗದು ಬಹುಮಾನ, ವಾಗ್ವೇವಿ (ಸರಸ್ವತಿ ದೇವಿಯ) ಕಂಚಿನ ವಿಗ್ರಹ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಗೌರವವನ್ನು ರಾಷ್ಟ್ರಪತಿ ಪ್ರಧಾನ ಮಾಡುತ್ತಾರೆ.

ಅಮೃತಾ ಪ್ರೀತಮ್, ಸಿ. ನಾರಾಯಣ ರೆಡ್ಡಿ, ಯು.ಆರ್. ಅನಂತಮೂರ್ತಿ, ಎಂ.ಟಿ ವಾಸುದೇವನ್ ನಾಯರ್, ಮಹಾಶ್ವೇತಾ ದೇವಿ, ಗಿರೀಶ್ ಕಾರ್ನಾಡ್, ಕೃಷ್ಣಾ ಸೋಬ್ತಿ, ಅಮಿತಾವ್ ಘೋಷ್ ಮತ್ತು ಗುಲ್ಜಾರ್ ಅವರಂತಹ ದಿಗ್ಗಜರು ಈ ಹಿಂದೆ ಈ ಪ್ರಶಸ್ತಿಯನ್ನು ಪಡೆದಿದ್ದಾರೆ.

2025ರ ಭಾರತೀಯ ಜ್ಞಾನಪೀಠ ಆಯ್ಕೆ ಸಮಿತಿಯು ಪ್ರತಿಭಾ ರೇ, ಮಾಧವ್ ಕೌಶಿಕ್, ದಾಮೋದರ್ ಮೌಜೊ, ಸುರಂಜನ್ ದಾಸ್, ಎ. ಕೃಷ್ಣ ರಾವ್, ಪ್ರಫುಲ್ಲ ಶಿಲೇದಾರ್, ಕೇಸುಭಾಯಿ ದೇಸಾಯಿ, ಜಾನಕಿ ಪ್ರಸಾದ್ ಶರ್ಮಾ, ಕೆ. ಶ್ರೀನಿವಾಸ್ ರಾವ್ ಮತ್ತು ಮಹೇಶ್ವರ್ ಸೇರಿದಂತೆ ಹಲವಾರು ಸಾಹಿತಿಗಳು ಮತ್ತು ವಿದ್ವಾಂಸರನ್ನು ಒಳಗೊಂಡಿತ್ತು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಟೀಕಿಸಿದ ಚಿನ್ಮಯಿ ಶ್ರೀಪಾದ, “2018ರಲ್ಲಿ, ವಿವಿಧ ವಯೋಮಾನದ ಅನೇಕ ಮಹಿಳೆಯರು ಒಬ್ಬ ಕವಿ ಮತ್ತು ಗೀತರಚನೆಕಾರನನ್ನು ತಮಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಎಂದು ಹೆಸರಿಸಿದ್ದರು. ಇಂದು ಅದೇ ವ್ಯಕ್ತಿಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಗುತ್ತಿದೆ… ಅವರ ವಿರುದ್ಧ ದನಿ ಎತ್ತಿದ ಮಹಿಳೆಯರ ಒಟ್ಟಾರೆ ಧ್ವನಿಯನ್ನು ಅಡಗಿಸಲಾಗಿದೆ. ಇದಕ್ಕಾಗಿ ನಾನು ದೊಡ್ಡ ಬೆಲೆ ತೆರಬೇಕಾಯಿತು – ತಮ್ಮ ಕನಸುಗಳನ್ನು ಅರ್ಧಕ್ಕೇ ಬಿಟ್ಟು ಹೋದ ಉಳಿದ ಮಹಿಳೆಯರು ನನ್ನಷ್ಟು ಅದೃಷ್ಟವಂತರಾಗಿರಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ವೈರಮುತ್ತು ಅವರಿಗೆ ಪ್ರಶಸ್ತಿ ಬಂದಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಅವರನ್ನೂ ಸಹ ಚಿನ್ಮಯಿ ಟೀಕಿಸಿದ್ದಾರೆ. ಇಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಬೆಂಬಲಿಸುವುದು ತಪ್ಪು ಎಂಬರ್ಥದಲ್ಲಿ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರ ಅಭಿನಂದನಾ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ಚಿನ್ಮಯಿ ಅವರು, “ಸಿನಿಮಾದಲ್ಲಿ ಇಂತಹ ಪ್ರಬಲ ಅಧಿಕಾರ ಹೊಂದಿದ್ದು, ರಾಜಕೀಯಕ್ಕೆ ಕಾಲಿಡುತ್ತಿರುವ ಪುರುಷರು, ತಮ್ಮ ‘ಮಾರ್ಗದರ್ಶಕ ಅಥವಾ ಚಿಕ್ಕಪ್ಪ’ನಂತಹ ವ್ಯಕ್ತಿಯಿಂದ ತಾವು ಕಿರುಕುಳಕ್ಕೊಳಗಾಗಿದ್ದೇವೆ ಎಂದು ದಾಖಲೆ ಸಮೇತ ಹೇಳುವ ಮಹಿಳೆಯರ ವಿಷಯದಲ್ಲಿ ಸಂಪೂರ್ಣ ಕಿವುಡರಂತೆ ವರ್ತಿಸುತ್ತಿದ್ದಾರೆ. ಪುರುಷರು ಎಂದಿಗೂ ನಮ್ಮ ಪರವಾಗಿ ನಿಲ್ಲುವುದಿಲ್ಲ ಎಂಬ ಅಂಶವನ್ನು ಮತ ಚಲಾಯಿಸುವ ಮಹಿಳೆಯರಿಗೆ ನೆನಪಿಸಬೇಕು” ಎಂದು ಹೇಳಿದ್ದಾರೆ.

ಸಂಗೀತಗಾರ, ಬರಹಗಾರ ಮತ್ತು ಹೋರಾಟಗಾರ ಟಿ.ಎಂ. ಕೃಷ್ಣ ಅವರು ವೈರಮುತ್ತು ಅವರಿಗೆ ನೀಡಲಾದ ಪ್ರಶಸ್ತಿಯನ್ನು ಟೀಕಿಸಿದ್ದು, ಇದು “ಅವರನ್ನು ಇನ್ನಷ್ಟು ಬಲಶಾಲಿಯನ್ನಾಗಿಸುತ್ತದೆ ಮತ್ತು ಅವರ ವಿರುದ್ಧ ಧ್ವನಿ ಎತ್ತುವ ಧೈರ್ಯ ಮಾಡಿದ ಎಲ್ಲಾ ಮಹಿಳೆಯರನ್ನು ಮತ್ತಷ್ಟು ಮೂಲೆಗುಂಪು ಮಾಡುತ್ತದೆ” ಎಂದು ಹೇಳಿದ್ದಾರೆ. ಮುಂದುವರಿದು, “ಒಬ್ಬ ಕಲಾವಿದನನ್ನು ಆತ ಸೃಷ್ಟಿಸುವ ಕಲೆಯಿಂದ ಬೇರ್ಪಡಿಸಲು ಸಾಧ್ಯವಿಲ್ಲ ಮತ್ತು ಹಾಗೆ ಮಾಡಬಾರದು. #metoo” ಎಂದು ಅವರು ಬರೆದುಕೊಂಡಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ ಅವರು 2023ರಲ್ಲಿ ವ್ಯಕ್ತಪಡಿಸಿದ್ದ ತಮ್ಮ ಅಭಿಪ್ರಾಯಗಳನ್ನು ಪುನರುಚ್ಚರಿಸಿದ್ದಾರೆ. ಆಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ವೈರಮುತ್ತು ಅವರ ಜನ್ಮದಿನದಂದು ಅವರ ಮನೆಗೆ ಭೇಟಿ ನೀಡಿದ್ದನ್ನು ಮೀನಾ ಟೀಕಿಸಿದ್ದರು. “ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಕವಿಯೊಂದಿಗೆ ರಾಜಕಾರಣಿಗಳು ಸಾರ್ವಜನಿಕವಾಗಿ ಇಷ್ಟೊಂದು ಮುಜುಗರದ ರೀತಿಯಲ್ಲಿ ಬೆರೆಯುವ ಅಗತ್ಯವೇನಿದೆ?” ಎಂದು ಅವರು ಆ ಸಮಯದಲ್ಲಿ ಪ್ರಶ್ನಿಸಿದ್ದರು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಇನ್ನೂ ಅನೇಕರು ಟೀಕಿಸಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...