Homeಮುಖಪುಟವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

- Advertisement -
- Advertisement -

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. 

ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ ಎಂದರೂ, ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ದೂರುಗಳಿಂದಾಗಿ ಅನೇಕರು ಈ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ತೀವ್ರವಾಗಿ ಖಂಡಿಸುತ್ತಿದ್ದಾರೆ.

ಗಾಯಕಿ ಚಿನ್ಮಯಿ ಶ್ರೀಪಾದ ಸೇರಿದಂತೆ ಹಲವು ಕಲಾವಿದರು ಈ ಪ್ರಶಸ್ತಿ ಆಯ್ಕೆಯ ವಿರುದ್ಧ ತಮ್ಮ ಆಕ್ರೋಶ ಮತ್ತು ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ನಿರ್ಧಾರವು ವೈರಮುತ್ತು ವಿರುದ್ಧ ಧ್ವನಿ ಎತ್ತಿದ ಮಹಿಳೆಯರ ನೋವುಗಳನ್ನು ಕಡೆಗಣಿಸಿದಂತಾಗುತ್ತದೆ ಮತ್ತು ಅವರಂತಹ ವ್ಯಕ್ತಿಗೆ ಮತ್ತಷ್ಟು ಸಾಮಾಜಿಕ ಮಾನ್ಯತೆ ನೀಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಜ್ಞಾನಪೀಠ ಎಂಬ ಸಾಹಿತ್ಯಿಕ ಸಂಸ್ಥೆಯು 2026ರ ಮಾರ್ಚ್ 14ರಂದು 2025ನೇ ಸಾಲಿನ (60ನೇ ವರ್ಷದ) ಜ್ಞಾನಪೀಠ ಪ್ರಶಸ್ತಿಯನ್ನು ವೈರಮುತ್ತು ಅವರಿಗೆ ಘೋಷಿಸಿದೆ. ಈ ಪ್ರತಿಷ್ಠಿತ ಸಂಸ್ಥೆಯನ್ನು 1944ರಲ್ಲಿ ಉದ್ಯಮಿ ಸಾಹು ಶಾಂತಿ ಪ್ರಸಾದ್ ಜೈನ್ ಅವರು ಸ್ಥಾಪಿಸಿದರು.

1964ರಿಂದ ಪ್ರತಿ ವರ್ಷದ ಜ್ಞಾನಪೀಠ ಪ್ರಶಸ್ತಿಯನ್ನು ಭಾರತೀಯ ಭಾಷೆಗಳಿಗೆ ನೀಡಿದ ಕೊಡುಗೆಗಾಗಿ ಸಾಹಿತಿಗಳಿಗೆ ನೀಡಲಾಗುತ್ತಿದೆ. ಇದನ್ನು ಭಾರತೀಯ ಸಾಹಿತ್ಯದ ಅತ್ಯಂತ ಪ್ರತಿಷ್ಠಿತ ಗೌರವವೆಂದು ಪರಿಗಣಿಸಲಾಗಿದೆ. ಈ ಪ್ರಶಸ್ತಿ 11 ಲಕ್ಷ ರೂಪಾಯಿ ನಗದು ಬಹುಮಾನ, ವಾಗ್ವೇವಿ (ಸರಸ್ವತಿ ದೇವಿಯ) ಕಂಚಿನ ವಿಗ್ರಹ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಗೌರವವನ್ನು ರಾಷ್ಟ್ರಪತಿ ಪ್ರಧಾನ ಮಾಡುತ್ತಾರೆ.

ಅಮೃತಾ ಪ್ರೀತಮ್, ಸಿ. ನಾರಾಯಣ ರೆಡ್ಡಿ, ಯು.ಆರ್. ಅನಂತಮೂರ್ತಿ, ಎಂ.ಟಿ ವಾಸುದೇವನ್ ನಾಯರ್, ಮಹಾಶ್ವೇತಾ ದೇವಿ, ಗಿರೀಶ್ ಕಾರ್ನಾಡ್, ಕೃಷ್ಣಾ ಸೋಬ್ತಿ, ಅಮಿತಾವ್ ಘೋಷ್ ಮತ್ತು ಗುಲ್ಜಾರ್ ಅವರಂತಹ ದಿಗ್ಗಜರು ಈ ಹಿಂದೆ ಈ ಪ್ರಶಸ್ತಿಯನ್ನು ಪಡೆದಿದ್ದಾರೆ.

2025ರ ಭಾರತೀಯ ಜ್ಞಾನಪೀಠ ಆಯ್ಕೆ ಸಮಿತಿಯು ಪ್ರತಿಭಾ ರೇ, ಮಾಧವ್ ಕೌಶಿಕ್, ದಾಮೋದರ್ ಮೌಜೊ, ಸುರಂಜನ್ ದಾಸ್, ಎ. ಕೃಷ್ಣ ರಾವ್, ಪ್ರಫುಲ್ಲ ಶಿಲೇದಾರ್, ಕೇಸುಭಾಯಿ ದೇಸಾಯಿ, ಜಾನಕಿ ಪ್ರಸಾದ್ ಶರ್ಮಾ, ಕೆ. ಶ್ರೀನಿವಾಸ್ ರಾವ್ ಮತ್ತು ಮಹೇಶ್ವರ್ ಸೇರಿದಂತೆ ಹಲವಾರು ಸಾಹಿತಿಗಳು ಮತ್ತು ವಿದ್ವಾಂಸರನ್ನು ಒಳಗೊಂಡಿತ್ತು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಟೀಕಿಸಿದ ಚಿನ್ಮಯಿ ಶ್ರೀಪಾದ, “2018ರಲ್ಲಿ, ವಿವಿಧ ವಯೋಮಾನದ ಅನೇಕ ಮಹಿಳೆಯರು ಒಬ್ಬ ಕವಿ ಮತ್ತು ಗೀತರಚನೆಕಾರನನ್ನು ತಮಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಎಂದು ಹೆಸರಿಸಿದ್ದರು. ಇಂದು ಅದೇ ವ್ಯಕ್ತಿಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಗುತ್ತಿದೆ… ಅವರ ವಿರುದ್ಧ ದನಿ ಎತ್ತಿದ ಮಹಿಳೆಯರ ಒಟ್ಟಾರೆ ಧ್ವನಿಯನ್ನು ಅಡಗಿಸಲಾಗಿದೆ. ಇದಕ್ಕಾಗಿ ನಾನು ದೊಡ್ಡ ಬೆಲೆ ತೆರಬೇಕಾಯಿತು – ತಮ್ಮ ಕನಸುಗಳನ್ನು ಅರ್ಧಕ್ಕೇ ಬಿಟ್ಟು ಹೋದ ಉಳಿದ ಮಹಿಳೆಯರು ನನ್ನಷ್ಟು ಅದೃಷ್ಟವಂತರಾಗಿರಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ವೈರಮುತ್ತು ಅವರಿಗೆ ಪ್ರಶಸ್ತಿ ಬಂದಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಅವರನ್ನೂ ಸಹ ಚಿನ್ಮಯಿ ಟೀಕಿಸಿದ್ದಾರೆ. ಇಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಬೆಂಬಲಿಸುವುದು ತಪ್ಪು ಎಂಬರ್ಥದಲ್ಲಿ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರ ಅಭಿನಂದನಾ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ಚಿನ್ಮಯಿ ಅವರು, “ಸಿನಿಮಾದಲ್ಲಿ ಇಂತಹ ಪ್ರಬಲ ಅಧಿಕಾರ ಹೊಂದಿದ್ದು, ರಾಜಕೀಯಕ್ಕೆ ಕಾಲಿಡುತ್ತಿರುವ ಪುರುಷರು, ತಮ್ಮ ‘ಮಾರ್ಗದರ್ಶಕ ಅಥವಾ ಚಿಕ್ಕಪ್ಪ’ನಂತಹ ವ್ಯಕ್ತಿಯಿಂದ ತಾವು ಕಿರುಕುಳಕ್ಕೊಳಗಾಗಿದ್ದೇವೆ ಎಂದು ದಾಖಲೆ ಸಮೇತ ಹೇಳುವ ಮಹಿಳೆಯರ ವಿಷಯದಲ್ಲಿ ಸಂಪೂರ್ಣ ಕಿವುಡರಂತೆ ವರ್ತಿಸುತ್ತಿದ್ದಾರೆ. ಪುರುಷರು ಎಂದಿಗೂ ನಮ್ಮ ಪರವಾಗಿ ನಿಲ್ಲುವುದಿಲ್ಲ ಎಂಬ ಅಂಶವನ್ನು ಮತ ಚಲಾಯಿಸುವ ಮಹಿಳೆಯರಿಗೆ ನೆನಪಿಸಬೇಕು” ಎಂದು ಹೇಳಿದ್ದಾರೆ.

ಸಂಗೀತಗಾರ, ಬರಹಗಾರ ಮತ್ತು ಹೋರಾಟಗಾರ ಟಿ.ಎಂ. ಕೃಷ್ಣ ಅವರು ವೈರಮುತ್ತು ಅವರಿಗೆ ನೀಡಲಾದ ಪ್ರಶಸ್ತಿಯನ್ನು ಟೀಕಿಸಿದ್ದು, ಇದು “ಅವರನ್ನು ಇನ್ನಷ್ಟು ಬಲಶಾಲಿಯನ್ನಾಗಿಸುತ್ತದೆ ಮತ್ತು ಅವರ ವಿರುದ್ಧ ಧ್ವನಿ ಎತ್ತುವ ಧೈರ್ಯ ಮಾಡಿದ ಎಲ್ಲಾ ಮಹಿಳೆಯರನ್ನು ಮತ್ತಷ್ಟು ಮೂಲೆಗುಂಪು ಮಾಡುತ್ತದೆ” ಎಂದು ಹೇಳಿದ್ದಾರೆ. ಮುಂದುವರಿದು, “ಒಬ್ಬ ಕಲಾವಿದನನ್ನು ಆತ ಸೃಷ್ಟಿಸುವ ಕಲೆಯಿಂದ ಬೇರ್ಪಡಿಸಲು ಸಾಧ್ಯವಿಲ್ಲ ಮತ್ತು ಹಾಗೆ ಮಾಡಬಾರದು. #metoo” ಎಂದು ಅವರು ಬರೆದುಕೊಂಡಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ ಅವರು 2023ರಲ್ಲಿ ವ್ಯಕ್ತಪಡಿಸಿದ್ದ ತಮ್ಮ ಅಭಿಪ್ರಾಯಗಳನ್ನು ಪುನರುಚ್ಚರಿಸಿದ್ದಾರೆ. ಆಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ವೈರಮುತ್ತು ಅವರ ಜನ್ಮದಿನದಂದು ಅವರ ಮನೆಗೆ ಭೇಟಿ ನೀಡಿದ್ದನ್ನು ಮೀನಾ ಟೀಕಿಸಿದ್ದರು. “ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಕವಿಯೊಂದಿಗೆ ರಾಜಕಾರಣಿಗಳು ಸಾರ್ವಜನಿಕವಾಗಿ ಇಷ್ಟೊಂದು ಮುಜುಗರದ ರೀತಿಯಲ್ಲಿ ಬೆರೆಯುವ ಅಗತ್ಯವೇನಿದೆ?” ಎಂದು ಅವರು ಆ ಸಮಯದಲ್ಲಿ ಪ್ರಶ್ನಿಸಿದ್ದರು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಇನ್ನೂ ಅನೇಕರು ಟೀಕಿಸಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...