Homeಮುಖಪುಟವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

- Advertisement -
- Advertisement -

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. 

ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ ಎಂದರೂ, ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ದೂರುಗಳಿಂದಾಗಿ ಅನೇಕರು ಈ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ತೀವ್ರವಾಗಿ ಖಂಡಿಸುತ್ತಿದ್ದಾರೆ.

ಗಾಯಕಿ ಚಿನ್ಮಯಿ ಶ್ರೀಪಾದ ಸೇರಿದಂತೆ ಹಲವು ಕಲಾವಿದರು ಈ ಪ್ರಶಸ್ತಿ ಆಯ್ಕೆಯ ವಿರುದ್ಧ ತಮ್ಮ ಆಕ್ರೋಶ ಮತ್ತು ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ನಿರ್ಧಾರವು ವೈರಮುತ್ತು ವಿರುದ್ಧ ಧ್ವನಿ ಎತ್ತಿದ ಮಹಿಳೆಯರ ನೋವುಗಳನ್ನು ಕಡೆಗಣಿಸಿದಂತಾಗುತ್ತದೆ ಮತ್ತು ಅವರಂತಹ ವ್ಯಕ್ತಿಗೆ ಮತ್ತಷ್ಟು ಸಾಮಾಜಿಕ ಮಾನ್ಯತೆ ನೀಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಜ್ಞಾನಪೀಠ ಎಂಬ ಸಾಹಿತ್ಯಿಕ ಸಂಸ್ಥೆಯು 2026ರ ಮಾರ್ಚ್ 14ರಂದು 2025ನೇ ಸಾಲಿನ (60ನೇ ವರ್ಷದ) ಜ್ಞಾನಪೀಠ ಪ್ರಶಸ್ತಿಯನ್ನು ವೈರಮುತ್ತು ಅವರಿಗೆ ಘೋಷಿಸಿದೆ. ಈ ಪ್ರತಿಷ್ಠಿತ ಸಂಸ್ಥೆಯನ್ನು 1944ರಲ್ಲಿ ಉದ್ಯಮಿ ಸಾಹು ಶಾಂತಿ ಪ್ರಸಾದ್ ಜೈನ್ ಅವರು ಸ್ಥಾಪಿಸಿದರು.

1964ರಿಂದ ಪ್ರತಿ ವರ್ಷದ ಜ್ಞಾನಪೀಠ ಪ್ರಶಸ್ತಿಯನ್ನು ಭಾರತೀಯ ಭಾಷೆಗಳಿಗೆ ನೀಡಿದ ಕೊಡುಗೆಗಾಗಿ ಸಾಹಿತಿಗಳಿಗೆ ನೀಡಲಾಗುತ್ತಿದೆ. ಇದನ್ನು ಭಾರತೀಯ ಸಾಹಿತ್ಯದ ಅತ್ಯಂತ ಪ್ರತಿಷ್ಠಿತ ಗೌರವವೆಂದು ಪರಿಗಣಿಸಲಾಗಿದೆ. ಈ ಪ್ರಶಸ್ತಿ 11 ಲಕ್ಷ ರೂಪಾಯಿ ನಗದು ಬಹುಮಾನ, ವಾಗ್ವೇವಿ (ಸರಸ್ವತಿ ದೇವಿಯ) ಕಂಚಿನ ವಿಗ್ರಹ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಗೌರವವನ್ನು ರಾಷ್ಟ್ರಪತಿ ಪ್ರಧಾನ ಮಾಡುತ್ತಾರೆ.

ಅಮೃತಾ ಪ್ರೀತಮ್, ಸಿ. ನಾರಾಯಣ ರೆಡ್ಡಿ, ಯು.ಆರ್. ಅನಂತಮೂರ್ತಿ, ಎಂ.ಟಿ ವಾಸುದೇವನ್ ನಾಯರ್, ಮಹಾಶ್ವೇತಾ ದೇವಿ, ಗಿರೀಶ್ ಕಾರ್ನಾಡ್, ಕೃಷ್ಣಾ ಸೋಬ್ತಿ, ಅಮಿತಾವ್ ಘೋಷ್ ಮತ್ತು ಗುಲ್ಜಾರ್ ಅವರಂತಹ ದಿಗ್ಗಜರು ಈ ಹಿಂದೆ ಈ ಪ್ರಶಸ್ತಿಯನ್ನು ಪಡೆದಿದ್ದಾರೆ.

2025ರ ಭಾರತೀಯ ಜ್ಞಾನಪೀಠ ಆಯ್ಕೆ ಸಮಿತಿಯು ಪ್ರತಿಭಾ ರೇ, ಮಾಧವ್ ಕೌಶಿಕ್, ದಾಮೋದರ್ ಮೌಜೊ, ಸುರಂಜನ್ ದಾಸ್, ಎ. ಕೃಷ್ಣ ರಾವ್, ಪ್ರಫುಲ್ಲ ಶಿಲೇದಾರ್, ಕೇಸುಭಾಯಿ ದೇಸಾಯಿ, ಜಾನಕಿ ಪ್ರಸಾದ್ ಶರ್ಮಾ, ಕೆ. ಶ್ರೀನಿವಾಸ್ ರಾವ್ ಮತ್ತು ಮಹೇಶ್ವರ್ ಸೇರಿದಂತೆ ಹಲವಾರು ಸಾಹಿತಿಗಳು ಮತ್ತು ವಿದ್ವಾಂಸರನ್ನು ಒಳಗೊಂಡಿತ್ತು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಟೀಕಿಸಿದ ಚಿನ್ಮಯಿ ಶ್ರೀಪಾದ, “2018ರಲ್ಲಿ, ವಿವಿಧ ವಯೋಮಾನದ ಅನೇಕ ಮಹಿಳೆಯರು ಒಬ್ಬ ಕವಿ ಮತ್ತು ಗೀತರಚನೆಕಾರನನ್ನು ತಮಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಎಂದು ಹೆಸರಿಸಿದ್ದರು. ಇಂದು ಅದೇ ವ್ಯಕ್ತಿಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಗುತ್ತಿದೆ… ಅವರ ವಿರುದ್ಧ ದನಿ ಎತ್ತಿದ ಮಹಿಳೆಯರ ಒಟ್ಟಾರೆ ಧ್ವನಿಯನ್ನು ಅಡಗಿಸಲಾಗಿದೆ. ಇದಕ್ಕಾಗಿ ನಾನು ದೊಡ್ಡ ಬೆಲೆ ತೆರಬೇಕಾಯಿತು – ತಮ್ಮ ಕನಸುಗಳನ್ನು ಅರ್ಧಕ್ಕೇ ಬಿಟ್ಟು ಹೋದ ಉಳಿದ ಮಹಿಳೆಯರು ನನ್ನಷ್ಟು ಅದೃಷ್ಟವಂತರಾಗಿರಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ವೈರಮುತ್ತು ಅವರಿಗೆ ಪ್ರಶಸ್ತಿ ಬಂದಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಅವರನ್ನೂ ಸಹ ಚಿನ್ಮಯಿ ಟೀಕಿಸಿದ್ದಾರೆ. ಇಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಬೆಂಬಲಿಸುವುದು ತಪ್ಪು ಎಂಬರ್ಥದಲ್ಲಿ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರ ಅಭಿನಂದನಾ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ಚಿನ್ಮಯಿ ಅವರು, “ಸಿನಿಮಾದಲ್ಲಿ ಇಂತಹ ಪ್ರಬಲ ಅಧಿಕಾರ ಹೊಂದಿದ್ದು, ರಾಜಕೀಯಕ್ಕೆ ಕಾಲಿಡುತ್ತಿರುವ ಪುರುಷರು, ತಮ್ಮ ‘ಮಾರ್ಗದರ್ಶಕ ಅಥವಾ ಚಿಕ್ಕಪ್ಪ’ನಂತಹ ವ್ಯಕ್ತಿಯಿಂದ ತಾವು ಕಿರುಕುಳಕ್ಕೊಳಗಾಗಿದ್ದೇವೆ ಎಂದು ದಾಖಲೆ ಸಮೇತ ಹೇಳುವ ಮಹಿಳೆಯರ ವಿಷಯದಲ್ಲಿ ಸಂಪೂರ್ಣ ಕಿವುಡರಂತೆ ವರ್ತಿಸುತ್ತಿದ್ದಾರೆ. ಪುರುಷರು ಎಂದಿಗೂ ನಮ್ಮ ಪರವಾಗಿ ನಿಲ್ಲುವುದಿಲ್ಲ ಎಂಬ ಅಂಶವನ್ನು ಮತ ಚಲಾಯಿಸುವ ಮಹಿಳೆಯರಿಗೆ ನೆನಪಿಸಬೇಕು” ಎಂದು ಹೇಳಿದ್ದಾರೆ.

ಸಂಗೀತಗಾರ, ಬರಹಗಾರ ಮತ್ತು ಹೋರಾಟಗಾರ ಟಿ.ಎಂ. ಕೃಷ್ಣ ಅವರು ವೈರಮುತ್ತು ಅವರಿಗೆ ನೀಡಲಾದ ಪ್ರಶಸ್ತಿಯನ್ನು ಟೀಕಿಸಿದ್ದು, ಇದು “ಅವರನ್ನು ಇನ್ನಷ್ಟು ಬಲಶಾಲಿಯನ್ನಾಗಿಸುತ್ತದೆ ಮತ್ತು ಅವರ ವಿರುದ್ಧ ಧ್ವನಿ ಎತ್ತುವ ಧೈರ್ಯ ಮಾಡಿದ ಎಲ್ಲಾ ಮಹಿಳೆಯರನ್ನು ಮತ್ತಷ್ಟು ಮೂಲೆಗುಂಪು ಮಾಡುತ್ತದೆ” ಎಂದು ಹೇಳಿದ್ದಾರೆ. ಮುಂದುವರಿದು, “ಒಬ್ಬ ಕಲಾವಿದನನ್ನು ಆತ ಸೃಷ್ಟಿಸುವ ಕಲೆಯಿಂದ ಬೇರ್ಪಡಿಸಲು ಸಾಧ್ಯವಿಲ್ಲ ಮತ್ತು ಹಾಗೆ ಮಾಡಬಾರದು. #metoo” ಎಂದು ಅವರು ಬರೆದುಕೊಂಡಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ ಅವರು 2023ರಲ್ಲಿ ವ್ಯಕ್ತಪಡಿಸಿದ್ದ ತಮ್ಮ ಅಭಿಪ್ರಾಯಗಳನ್ನು ಪುನರುಚ್ಚರಿಸಿದ್ದಾರೆ. ಆಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ವೈರಮುತ್ತು ಅವರ ಜನ್ಮದಿನದಂದು ಅವರ ಮನೆಗೆ ಭೇಟಿ ನೀಡಿದ್ದನ್ನು ಮೀನಾ ಟೀಕಿಸಿದ್ದರು. “ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಕವಿಯೊಂದಿಗೆ ರಾಜಕಾರಣಿಗಳು ಸಾರ್ವಜನಿಕವಾಗಿ ಇಷ್ಟೊಂದು ಮುಜುಗರದ ರೀತಿಯಲ್ಲಿ ಬೆರೆಯುವ ಅಗತ್ಯವೇನಿದೆ?” ಎಂದು ಅವರು ಆ ಸಮಯದಲ್ಲಿ ಪ್ರಶ್ನಿಸಿದ್ದರು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಇನ್ನೂ ಅನೇಕರು ಟೀಕಿಸಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...