Homeಮುಖಪುಟವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

- Advertisement -
- Advertisement -

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. 

ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ ಎಂದರೂ, ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ದೂರುಗಳಿಂದಾಗಿ ಅನೇಕರು ಈ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ತೀವ್ರವಾಗಿ ಖಂಡಿಸುತ್ತಿದ್ದಾರೆ.

ಗಾಯಕಿ ಚಿನ್ಮಯಿ ಶ್ರೀಪಾದ ಸೇರಿದಂತೆ ಹಲವು ಕಲಾವಿದರು ಈ ಪ್ರಶಸ್ತಿ ಆಯ್ಕೆಯ ವಿರುದ್ಧ ತಮ್ಮ ಆಕ್ರೋಶ ಮತ್ತು ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ನಿರ್ಧಾರವು ವೈರಮುತ್ತು ವಿರುದ್ಧ ಧ್ವನಿ ಎತ್ತಿದ ಮಹಿಳೆಯರ ನೋವುಗಳನ್ನು ಕಡೆಗಣಿಸಿದಂತಾಗುತ್ತದೆ ಮತ್ತು ಅವರಂತಹ ವ್ಯಕ್ತಿಗೆ ಮತ್ತಷ್ಟು ಸಾಮಾಜಿಕ ಮಾನ್ಯತೆ ನೀಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಜ್ಞಾನಪೀಠ ಎಂಬ ಸಾಹಿತ್ಯಿಕ ಸಂಸ್ಥೆಯು 2026ರ ಮಾರ್ಚ್ 14ರಂದು 2025ನೇ ಸಾಲಿನ (60ನೇ ವರ್ಷದ) ಜ್ಞಾನಪೀಠ ಪ್ರಶಸ್ತಿಯನ್ನು ವೈರಮುತ್ತು ಅವರಿಗೆ ಘೋಷಿಸಿದೆ. ಈ ಪ್ರತಿಷ್ಠಿತ ಸಂಸ್ಥೆಯನ್ನು 1944ರಲ್ಲಿ ಉದ್ಯಮಿ ಸಾಹು ಶಾಂತಿ ಪ್ರಸಾದ್ ಜೈನ್ ಅವರು ಸ್ಥಾಪಿಸಿದರು.

1964ರಿಂದ ಪ್ರತಿ ವರ್ಷದ ಜ್ಞಾನಪೀಠ ಪ್ರಶಸ್ತಿಯನ್ನು ಭಾರತೀಯ ಭಾಷೆಗಳಿಗೆ ನೀಡಿದ ಕೊಡುಗೆಗಾಗಿ ಸಾಹಿತಿಗಳಿಗೆ ನೀಡಲಾಗುತ್ತಿದೆ. ಇದನ್ನು ಭಾರತೀಯ ಸಾಹಿತ್ಯದ ಅತ್ಯಂತ ಪ್ರತಿಷ್ಠಿತ ಗೌರವವೆಂದು ಪರಿಗಣಿಸಲಾಗಿದೆ. ಈ ಪ್ರಶಸ್ತಿ 11 ಲಕ್ಷ ರೂಪಾಯಿ ನಗದು ಬಹುಮಾನ, ವಾಗ್ವೇವಿ (ಸರಸ್ವತಿ ದೇವಿಯ) ಕಂಚಿನ ವಿಗ್ರಹ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಗೌರವವನ್ನು ರಾಷ್ಟ್ರಪತಿ ಪ್ರಧಾನ ಮಾಡುತ್ತಾರೆ.

ಅಮೃತಾ ಪ್ರೀತಮ್, ಸಿ. ನಾರಾಯಣ ರೆಡ್ಡಿ, ಯು.ಆರ್. ಅನಂತಮೂರ್ತಿ, ಎಂ.ಟಿ ವಾಸುದೇವನ್ ನಾಯರ್, ಮಹಾಶ್ವೇತಾ ದೇವಿ, ಗಿರೀಶ್ ಕಾರ್ನಾಡ್, ಕೃಷ್ಣಾ ಸೋಬ್ತಿ, ಅಮಿತಾವ್ ಘೋಷ್ ಮತ್ತು ಗುಲ್ಜಾರ್ ಅವರಂತಹ ದಿಗ್ಗಜರು ಈ ಹಿಂದೆ ಈ ಪ್ರಶಸ್ತಿಯನ್ನು ಪಡೆದಿದ್ದಾರೆ.

2025ರ ಭಾರತೀಯ ಜ್ಞಾನಪೀಠ ಆಯ್ಕೆ ಸಮಿತಿಯು ಪ್ರತಿಭಾ ರೇ, ಮಾಧವ್ ಕೌಶಿಕ್, ದಾಮೋದರ್ ಮೌಜೊ, ಸುರಂಜನ್ ದಾಸ್, ಎ. ಕೃಷ್ಣ ರಾವ್, ಪ್ರಫುಲ್ಲ ಶಿಲೇದಾರ್, ಕೇಸುಭಾಯಿ ದೇಸಾಯಿ, ಜಾನಕಿ ಪ್ರಸಾದ್ ಶರ್ಮಾ, ಕೆ. ಶ್ರೀನಿವಾಸ್ ರಾವ್ ಮತ್ತು ಮಹೇಶ್ವರ್ ಸೇರಿದಂತೆ ಹಲವಾರು ಸಾಹಿತಿಗಳು ಮತ್ತು ವಿದ್ವಾಂಸರನ್ನು ಒಳಗೊಂಡಿತ್ತು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಟೀಕಿಸಿದ ಚಿನ್ಮಯಿ ಶ್ರೀಪಾದ, “2018ರಲ್ಲಿ, ವಿವಿಧ ವಯೋಮಾನದ ಅನೇಕ ಮಹಿಳೆಯರು ಒಬ್ಬ ಕವಿ ಮತ್ತು ಗೀತರಚನೆಕಾರನನ್ನು ತಮಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಎಂದು ಹೆಸರಿಸಿದ್ದರು. ಇಂದು ಅದೇ ವ್ಯಕ್ತಿಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಗುತ್ತಿದೆ… ಅವರ ವಿರುದ್ಧ ದನಿ ಎತ್ತಿದ ಮಹಿಳೆಯರ ಒಟ್ಟಾರೆ ಧ್ವನಿಯನ್ನು ಅಡಗಿಸಲಾಗಿದೆ. ಇದಕ್ಕಾಗಿ ನಾನು ದೊಡ್ಡ ಬೆಲೆ ತೆರಬೇಕಾಯಿತು – ತಮ್ಮ ಕನಸುಗಳನ್ನು ಅರ್ಧಕ್ಕೇ ಬಿಟ್ಟು ಹೋದ ಉಳಿದ ಮಹಿಳೆಯರು ನನ್ನಷ್ಟು ಅದೃಷ್ಟವಂತರಾಗಿರಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ವೈರಮುತ್ತು ಅವರಿಗೆ ಪ್ರಶಸ್ತಿ ಬಂದಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಅವರನ್ನೂ ಸಹ ಚಿನ್ಮಯಿ ಟೀಕಿಸಿದ್ದಾರೆ. ಇಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಬೆಂಬಲಿಸುವುದು ತಪ್ಪು ಎಂಬರ್ಥದಲ್ಲಿ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರ ಅಭಿನಂದನಾ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ಚಿನ್ಮಯಿ ಅವರು, “ಸಿನಿಮಾದಲ್ಲಿ ಇಂತಹ ಪ್ರಬಲ ಅಧಿಕಾರ ಹೊಂದಿದ್ದು, ರಾಜಕೀಯಕ್ಕೆ ಕಾಲಿಡುತ್ತಿರುವ ಪುರುಷರು, ತಮ್ಮ ‘ಮಾರ್ಗದರ್ಶಕ ಅಥವಾ ಚಿಕ್ಕಪ್ಪ’ನಂತಹ ವ್ಯಕ್ತಿಯಿಂದ ತಾವು ಕಿರುಕುಳಕ್ಕೊಳಗಾಗಿದ್ದೇವೆ ಎಂದು ದಾಖಲೆ ಸಮೇತ ಹೇಳುವ ಮಹಿಳೆಯರ ವಿಷಯದಲ್ಲಿ ಸಂಪೂರ್ಣ ಕಿವುಡರಂತೆ ವರ್ತಿಸುತ್ತಿದ್ದಾರೆ. ಪುರುಷರು ಎಂದಿಗೂ ನಮ್ಮ ಪರವಾಗಿ ನಿಲ್ಲುವುದಿಲ್ಲ ಎಂಬ ಅಂಶವನ್ನು ಮತ ಚಲಾಯಿಸುವ ಮಹಿಳೆಯರಿಗೆ ನೆನಪಿಸಬೇಕು” ಎಂದು ಹೇಳಿದ್ದಾರೆ.

ಸಂಗೀತಗಾರ, ಬರಹಗಾರ ಮತ್ತು ಹೋರಾಟಗಾರ ಟಿ.ಎಂ. ಕೃಷ್ಣ ಅವರು ವೈರಮುತ್ತು ಅವರಿಗೆ ನೀಡಲಾದ ಪ್ರಶಸ್ತಿಯನ್ನು ಟೀಕಿಸಿದ್ದು, ಇದು “ಅವರನ್ನು ಇನ್ನಷ್ಟು ಬಲಶಾಲಿಯನ್ನಾಗಿಸುತ್ತದೆ ಮತ್ತು ಅವರ ವಿರುದ್ಧ ಧ್ವನಿ ಎತ್ತುವ ಧೈರ್ಯ ಮಾಡಿದ ಎಲ್ಲಾ ಮಹಿಳೆಯರನ್ನು ಮತ್ತಷ್ಟು ಮೂಲೆಗುಂಪು ಮಾಡುತ್ತದೆ” ಎಂದು ಹೇಳಿದ್ದಾರೆ. ಮುಂದುವರಿದು, “ಒಬ್ಬ ಕಲಾವಿದನನ್ನು ಆತ ಸೃಷ್ಟಿಸುವ ಕಲೆಯಿಂದ ಬೇರ್ಪಡಿಸಲು ಸಾಧ್ಯವಿಲ್ಲ ಮತ್ತು ಹಾಗೆ ಮಾಡಬಾರದು. #metoo” ಎಂದು ಅವರು ಬರೆದುಕೊಂಡಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ ಅವರು 2023ರಲ್ಲಿ ವ್ಯಕ್ತಪಡಿಸಿದ್ದ ತಮ್ಮ ಅಭಿಪ್ರಾಯಗಳನ್ನು ಪುನರುಚ್ಚರಿಸಿದ್ದಾರೆ. ಆಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ವೈರಮುತ್ತು ಅವರ ಜನ್ಮದಿನದಂದು ಅವರ ಮನೆಗೆ ಭೇಟಿ ನೀಡಿದ್ದನ್ನು ಮೀನಾ ಟೀಕಿಸಿದ್ದರು. “ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಕವಿಯೊಂದಿಗೆ ರಾಜಕಾರಣಿಗಳು ಸಾರ್ವಜನಿಕವಾಗಿ ಇಷ್ಟೊಂದು ಮುಜುಗರದ ರೀತಿಯಲ್ಲಿ ಬೆರೆಯುವ ಅಗತ್ಯವೇನಿದೆ?” ಎಂದು ಅವರು ಆ ಸಮಯದಲ್ಲಿ ಪ್ರಶ್ನಿಸಿದ್ದರು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಇನ್ನೂ ಅನೇಕರು ಟೀಕಿಸಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...