Homeಮುಖಪುಟವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

- Advertisement -
- Advertisement -

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. 

ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ ಎಂದರೂ, ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ದೂರುಗಳಿಂದಾಗಿ ಅನೇಕರು ಈ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ತೀವ್ರವಾಗಿ ಖಂಡಿಸುತ್ತಿದ್ದಾರೆ.

ಗಾಯಕಿ ಚಿನ್ಮಯಿ ಶ್ರೀಪಾದ ಸೇರಿದಂತೆ ಹಲವು ಕಲಾವಿದರು ಈ ಪ್ರಶಸ್ತಿ ಆಯ್ಕೆಯ ವಿರುದ್ಧ ತಮ್ಮ ಆಕ್ರೋಶ ಮತ್ತು ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ನಿರ್ಧಾರವು ವೈರಮುತ್ತು ವಿರುದ್ಧ ಧ್ವನಿ ಎತ್ತಿದ ಮಹಿಳೆಯರ ನೋವುಗಳನ್ನು ಕಡೆಗಣಿಸಿದಂತಾಗುತ್ತದೆ ಮತ್ತು ಅವರಂತಹ ವ್ಯಕ್ತಿಗೆ ಮತ್ತಷ್ಟು ಸಾಮಾಜಿಕ ಮಾನ್ಯತೆ ನೀಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಜ್ಞಾನಪೀಠ ಎಂಬ ಸಾಹಿತ್ಯಿಕ ಸಂಸ್ಥೆಯು 2026ರ ಮಾರ್ಚ್ 14ರಂದು 2025ನೇ ಸಾಲಿನ (60ನೇ ವರ್ಷದ) ಜ್ಞಾನಪೀಠ ಪ್ರಶಸ್ತಿಯನ್ನು ವೈರಮುತ್ತು ಅವರಿಗೆ ಘೋಷಿಸಿದೆ. ಈ ಪ್ರತಿಷ್ಠಿತ ಸಂಸ್ಥೆಯನ್ನು 1944ರಲ್ಲಿ ಉದ್ಯಮಿ ಸಾಹು ಶಾಂತಿ ಪ್ರಸಾದ್ ಜೈನ್ ಅವರು ಸ್ಥಾಪಿಸಿದರು.

1964ರಿಂದ ಪ್ರತಿ ವರ್ಷದ ಜ್ಞಾನಪೀಠ ಪ್ರಶಸ್ತಿಯನ್ನು ಭಾರತೀಯ ಭಾಷೆಗಳಿಗೆ ನೀಡಿದ ಕೊಡುಗೆಗಾಗಿ ಸಾಹಿತಿಗಳಿಗೆ ನೀಡಲಾಗುತ್ತಿದೆ. ಇದನ್ನು ಭಾರತೀಯ ಸಾಹಿತ್ಯದ ಅತ್ಯಂತ ಪ್ರತಿಷ್ಠಿತ ಗೌರವವೆಂದು ಪರಿಗಣಿಸಲಾಗಿದೆ. ಈ ಪ್ರಶಸ್ತಿ 11 ಲಕ್ಷ ರೂಪಾಯಿ ನಗದು ಬಹುಮಾನ, ವಾಗ್ವೇವಿ (ಸರಸ್ವತಿ ದೇವಿಯ) ಕಂಚಿನ ವಿಗ್ರಹ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಗೌರವವನ್ನು ರಾಷ್ಟ್ರಪತಿ ಪ್ರಧಾನ ಮಾಡುತ್ತಾರೆ.

ಅಮೃತಾ ಪ್ರೀತಮ್, ಸಿ. ನಾರಾಯಣ ರೆಡ್ಡಿ, ಯು.ಆರ್. ಅನಂತಮೂರ್ತಿ, ಎಂ.ಟಿ ವಾಸುದೇವನ್ ನಾಯರ್, ಮಹಾಶ್ವೇತಾ ದೇವಿ, ಗಿರೀಶ್ ಕಾರ್ನಾಡ್, ಕೃಷ್ಣಾ ಸೋಬ್ತಿ, ಅಮಿತಾವ್ ಘೋಷ್ ಮತ್ತು ಗುಲ್ಜಾರ್ ಅವರಂತಹ ದಿಗ್ಗಜರು ಈ ಹಿಂದೆ ಈ ಪ್ರಶಸ್ತಿಯನ್ನು ಪಡೆದಿದ್ದಾರೆ.

2025ರ ಭಾರತೀಯ ಜ್ಞಾನಪೀಠ ಆಯ್ಕೆ ಸಮಿತಿಯು ಪ್ರತಿಭಾ ರೇ, ಮಾಧವ್ ಕೌಶಿಕ್, ದಾಮೋದರ್ ಮೌಜೊ, ಸುರಂಜನ್ ದಾಸ್, ಎ. ಕೃಷ್ಣ ರಾವ್, ಪ್ರಫುಲ್ಲ ಶಿಲೇದಾರ್, ಕೇಸುಭಾಯಿ ದೇಸಾಯಿ, ಜಾನಕಿ ಪ್ರಸಾದ್ ಶರ್ಮಾ, ಕೆ. ಶ್ರೀನಿವಾಸ್ ರಾವ್ ಮತ್ತು ಮಹೇಶ್ವರ್ ಸೇರಿದಂತೆ ಹಲವಾರು ಸಾಹಿತಿಗಳು ಮತ್ತು ವಿದ್ವಾಂಸರನ್ನು ಒಳಗೊಂಡಿತ್ತು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಟೀಕಿಸಿದ ಚಿನ್ಮಯಿ ಶ್ರೀಪಾದ, “2018ರಲ್ಲಿ, ವಿವಿಧ ವಯೋಮಾನದ ಅನೇಕ ಮಹಿಳೆಯರು ಒಬ್ಬ ಕವಿ ಮತ್ತು ಗೀತರಚನೆಕಾರನನ್ನು ತಮಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಎಂದು ಹೆಸರಿಸಿದ್ದರು. ಇಂದು ಅದೇ ವ್ಯಕ್ತಿಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಗುತ್ತಿದೆ… ಅವರ ವಿರುದ್ಧ ದನಿ ಎತ್ತಿದ ಮಹಿಳೆಯರ ಒಟ್ಟಾರೆ ಧ್ವನಿಯನ್ನು ಅಡಗಿಸಲಾಗಿದೆ. ಇದಕ್ಕಾಗಿ ನಾನು ದೊಡ್ಡ ಬೆಲೆ ತೆರಬೇಕಾಯಿತು – ತಮ್ಮ ಕನಸುಗಳನ್ನು ಅರ್ಧಕ್ಕೇ ಬಿಟ್ಟು ಹೋದ ಉಳಿದ ಮಹಿಳೆಯರು ನನ್ನಷ್ಟು ಅದೃಷ್ಟವಂತರಾಗಿರಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ವೈರಮುತ್ತು ಅವರಿಗೆ ಪ್ರಶಸ್ತಿ ಬಂದಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಅವರನ್ನೂ ಸಹ ಚಿನ್ಮಯಿ ಟೀಕಿಸಿದ್ದಾರೆ. ಇಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಬೆಂಬಲಿಸುವುದು ತಪ್ಪು ಎಂಬರ್ಥದಲ್ಲಿ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರ ಅಭಿನಂದನಾ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ಚಿನ್ಮಯಿ ಅವರು, “ಸಿನಿಮಾದಲ್ಲಿ ಇಂತಹ ಪ್ರಬಲ ಅಧಿಕಾರ ಹೊಂದಿದ್ದು, ರಾಜಕೀಯಕ್ಕೆ ಕಾಲಿಡುತ್ತಿರುವ ಪುರುಷರು, ತಮ್ಮ ‘ಮಾರ್ಗದರ್ಶಕ ಅಥವಾ ಚಿಕ್ಕಪ್ಪ’ನಂತಹ ವ್ಯಕ್ತಿಯಿಂದ ತಾವು ಕಿರುಕುಳಕ್ಕೊಳಗಾಗಿದ್ದೇವೆ ಎಂದು ದಾಖಲೆ ಸಮೇತ ಹೇಳುವ ಮಹಿಳೆಯರ ವಿಷಯದಲ್ಲಿ ಸಂಪೂರ್ಣ ಕಿವುಡರಂತೆ ವರ್ತಿಸುತ್ತಿದ್ದಾರೆ. ಪುರುಷರು ಎಂದಿಗೂ ನಮ್ಮ ಪರವಾಗಿ ನಿಲ್ಲುವುದಿಲ್ಲ ಎಂಬ ಅಂಶವನ್ನು ಮತ ಚಲಾಯಿಸುವ ಮಹಿಳೆಯರಿಗೆ ನೆನಪಿಸಬೇಕು” ಎಂದು ಹೇಳಿದ್ದಾರೆ.

ಸಂಗೀತಗಾರ, ಬರಹಗಾರ ಮತ್ತು ಹೋರಾಟಗಾರ ಟಿ.ಎಂ. ಕೃಷ್ಣ ಅವರು ವೈರಮುತ್ತು ಅವರಿಗೆ ನೀಡಲಾದ ಪ್ರಶಸ್ತಿಯನ್ನು ಟೀಕಿಸಿದ್ದು, ಇದು “ಅವರನ್ನು ಇನ್ನಷ್ಟು ಬಲಶಾಲಿಯನ್ನಾಗಿಸುತ್ತದೆ ಮತ್ತು ಅವರ ವಿರುದ್ಧ ಧ್ವನಿ ಎತ್ತುವ ಧೈರ್ಯ ಮಾಡಿದ ಎಲ್ಲಾ ಮಹಿಳೆಯರನ್ನು ಮತ್ತಷ್ಟು ಮೂಲೆಗುಂಪು ಮಾಡುತ್ತದೆ” ಎಂದು ಹೇಳಿದ್ದಾರೆ. ಮುಂದುವರಿದು, “ಒಬ್ಬ ಕಲಾವಿದನನ್ನು ಆತ ಸೃಷ್ಟಿಸುವ ಕಲೆಯಿಂದ ಬೇರ್ಪಡಿಸಲು ಸಾಧ್ಯವಿಲ್ಲ ಮತ್ತು ಹಾಗೆ ಮಾಡಬಾರದು. #metoo” ಎಂದು ಅವರು ಬರೆದುಕೊಂಡಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ ಅವರು 2023ರಲ್ಲಿ ವ್ಯಕ್ತಪಡಿಸಿದ್ದ ತಮ್ಮ ಅಭಿಪ್ರಾಯಗಳನ್ನು ಪುನರುಚ್ಚರಿಸಿದ್ದಾರೆ. ಆಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ವೈರಮುತ್ತು ಅವರ ಜನ್ಮದಿನದಂದು ಅವರ ಮನೆಗೆ ಭೇಟಿ ನೀಡಿದ್ದನ್ನು ಮೀನಾ ಟೀಕಿಸಿದ್ದರು. “ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಕವಿಯೊಂದಿಗೆ ರಾಜಕಾರಣಿಗಳು ಸಾರ್ವಜನಿಕವಾಗಿ ಇಷ್ಟೊಂದು ಮುಜುಗರದ ರೀತಿಯಲ್ಲಿ ಬೆರೆಯುವ ಅಗತ್ಯವೇನಿದೆ?” ಎಂದು ಅವರು ಆ ಸಮಯದಲ್ಲಿ ಪ್ರಶ್ನಿಸಿದ್ದರು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಇನ್ನೂ ಅನೇಕರು ಟೀಕಿಸಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...