Homeಕರ್ನಾಟಕಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

- Advertisement -
- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 11 ಜನರಲ್ಲಿ ಒಬ್ಬರಾದ ದಿವ್ಯಾಂಶಿ ಅವರ ತಾಯಿ, ತಮ್ಮ ಮಗಳ ಸಾವಿಗೆ ಕರ್ನಾಟಕ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. ಈ ದುರಂತವನ್ನು ಹುಚ್ಚುತನ ಹಾಗೂ ರಾಜ್ಯ ಸರ್ಕಾರದ ನಿರ್ವಹಣೆಯ ದುಷ್ಪರಿಣಾಮ ಎಂದು ಕರೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2025 ವಿಜಯೋತ್ಸವದ ಸಂದರ್ಭದಲ್ಲಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ದಿವ್ಯಾಂಶಿ ಸಾವನ್ನಪ್ಪಿದರು. ಕಾಲ್ತುಳಿತವು 11 ಜೀವಗಳನ್ನು ಬಲಿ ತೆಗೆದುಕೊಂಡಿತು; 47 ಅಭಿಮಾನಿಗಳನ್ನು ಗಾಯಗೊಳಿಸಿತು. ಅಂದಾಜು 2 ರಿಂದ 3 ಲಕ್ಷ ಜನರು ಕೇವಲ 35,000 ಸಾಮರ್ಥ್ಯವಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣ ಪ್ರವೇಶಿಸಲು ಆಗಮಿಸಿದ್ದರು.

“ನಾನು ಸಂಚಾರ ಪೊಲೀಸರನ್ನು ದೂಷಿಸುತ್ತೇನೆ; ಅವರಿಗೆ ಜನಸಂದಣಿಯನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿರಲಿಲ್ಲವೇ? ಸಾಕಷ್ಟು ಪೊಲೀಸ್ ನಿಯೋಜನೆ ಇತ್ತು. ಆದರೆ, ಯಾರೂ ಏನನ್ನೂ ನಿರ್ವಹಿಸಲಿಲ್ಲ. ಹೊರಗೆ ಇದು ನಡೆಯುತ್ತಿರುವಾಗ ಸರ್ಕಾರ ಕ್ರೀಡಾಂಗಣದೊಳಗೆ ಆಚರಣೆಗಳನ್ನು ನಡೆಸಿದ್ದು ಹುಚ್ಚುತನ” ಎಂದು ಅವರು ವರದಿಗಾರರ ಮುಂದೆ ಹೇಳಿದರು.

ಮೃತ ಬಾಲಕಿ ದಿವ್ಯಾಂಶಿ ಶವದ ಮುಂದೆ ರೋಧಿಸುತ್ತಿರುವ ಸಂಬಂಧಿಕರು

ಆಂಧ್ರಪ್ರದೇಶದ ಅಪ್ರಾಪ್ತ ಬಾಲಕಿ ದಿವ್ಯಾಂಶಿ ಬುಧವಾರ ತನ್ನ ತಾಯಿಯೊಂದಿಗೆ ತನ್ನ ಕ್ರಿಕೆಟ್ ಆರಾಧ್ಯ ದೈವ ವಿರಾಟ್ ಕೊಹ್ಲಿಯನ್ನು ನೋಡಲು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.

“ನಾವು ಫುಟ್‌ಪಾತ್‌ನಲ್ಲಿ ಆರಾಮವಾಗಿ ಕುಳಿತಿದ್ದೆವು. ಒಳಗೆ ಹೋಗುವ ಯೋಜನೆಯೂ ಇರಲಿಲ್ಲ. ಅವಳು ಕ್ರಿಕೆಟ್‌ನಿಂದ ತುಂಬಾ ಆಕರ್ಷಿತಳಾಗಿದ್ದಳು, ಆಟಗಾರರ ಬಗ್ಗೆ ಅವಳಿಗೆ ಎಲ್ಲವೂ ತಿಳಿದಿತ್ತು. ಅವಳು ಕೊಹ್ಲಿಯನ್ನು ನೋಡಲು ಬಯಸಿದ್ದಳು” ಎಂದು ತಾಯಿ ಹೇಳಿದರು.

ಮಧ್ಯಾಹ್ನ 3.30 ರ ಸುಮಾರಿಗೆ ಜನಸಂದಣಿ ಅನಿಯಂತ್ರಿತವಾಗಿ ಹೆಚ್ಚಾದಾಗ ಕಾಲ್ತುಳಿತ ಸಂಭವಿಸಿತು. “ನನಗೆ ಉಸಿರುಗಟ್ಟಿಸುತ್ತಿತ್ತು; ನಾನು ಒಬ್ಬ ವ್ಯಕ್ತಿಯನ್ನು ಸುರಕ್ಷಿತವಾಗಿ ಎಳೆಯುವಲ್ಲಿ ಯಶಸ್ವಿಯಾಗಿದ್ದೆ. ನಂತರ, ಕೇವಲ ಐದು ನಿಮಿಷಗಳಲ್ಲಿ, ದಿವ್ಯಾಂಶಿ ಕಾಣೆಯಾದಳು. ಅವಳು ಒಳಗೆ ಹೋಗಿರಬಹುದು ಎಂದು ನಾನು ಭಾವಿಸಿದೆ. ಕೆಲಹೊತ್ತಿನ ಬಳಿಕ ಗಾಯಗೊಂಡಿದ್ದ ಆಕೆಯನ್ನು ನಾನು ನೋಡಿದೆ” ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ತನ್ನ ಮಗಳ ಬಹುಮುಖ ಪ್ರತಿಭೆ ಕುರಿತು ಮಾತನಾಡಿದ ಅವರು, “ಅವಳು ಒಬ್ಬ ದೇವತೆ; ಅವಳ ಹೊಸ ಶಾಲೆಗೆ ಸೇರಿ ಕೇವಲ ಎರಡು ವರ್ಷವಾಗಿತ್ತು. ಶಿಕ್ಷಕರು ಈಗಾಗಲೇ ಅವಳ ಬಗ್ಗೆ ತುಂಬಾ ಹೆಮ್ಮೆಪಡುತ್ತಿದ್ದರು. ಅವಳನ್ನು ಹೆತ್ತಾಗ ನನಗೆ ಕೇವಲ 20 ವರ್ಷ; ನಾವು ಒಟ್ಟಿಗೆ ಬೆಳೆದೆವು. ನಾನು ಮನೆಯಲ್ಲಿ ಇಲ್ಲದಿದ್ದರೆ ಆಕೆಯ ತಮ್ಮನನ್ನು ತಾಯಿಯಂತೆ ಬೆಳೆಸುತ್ತಿದ್ದಳು” ಎಂದು ಭಾವುಕರಾದರು.

ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...