Homeಕರ್ನಾಟಕಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

- Advertisement -
- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 11 ಜನರಲ್ಲಿ ಒಬ್ಬರಾದ ದಿವ್ಯಾಂಶಿ ಅವರ ತಾಯಿ, ತಮ್ಮ ಮಗಳ ಸಾವಿಗೆ ಕರ್ನಾಟಕ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. ಈ ದುರಂತವನ್ನು ಹುಚ್ಚುತನ ಹಾಗೂ ರಾಜ್ಯ ಸರ್ಕಾರದ ನಿರ್ವಹಣೆಯ ದುಷ್ಪರಿಣಾಮ ಎಂದು ಕರೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2025 ವಿಜಯೋತ್ಸವದ ಸಂದರ್ಭದಲ್ಲಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ದಿವ್ಯಾಂಶಿ ಸಾವನ್ನಪ್ಪಿದರು. ಕಾಲ್ತುಳಿತವು 11 ಜೀವಗಳನ್ನು ಬಲಿ ತೆಗೆದುಕೊಂಡಿತು; 47 ಅಭಿಮಾನಿಗಳನ್ನು ಗಾಯಗೊಳಿಸಿತು. ಅಂದಾಜು 2 ರಿಂದ 3 ಲಕ್ಷ ಜನರು ಕೇವಲ 35,000 ಸಾಮರ್ಥ್ಯವಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣ ಪ್ರವೇಶಿಸಲು ಆಗಮಿಸಿದ್ದರು.

“ನಾನು ಸಂಚಾರ ಪೊಲೀಸರನ್ನು ದೂಷಿಸುತ್ತೇನೆ; ಅವರಿಗೆ ಜನಸಂದಣಿಯನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿರಲಿಲ್ಲವೇ? ಸಾಕಷ್ಟು ಪೊಲೀಸ್ ನಿಯೋಜನೆ ಇತ್ತು. ಆದರೆ, ಯಾರೂ ಏನನ್ನೂ ನಿರ್ವಹಿಸಲಿಲ್ಲ. ಹೊರಗೆ ಇದು ನಡೆಯುತ್ತಿರುವಾಗ ಸರ್ಕಾರ ಕ್ರೀಡಾಂಗಣದೊಳಗೆ ಆಚರಣೆಗಳನ್ನು ನಡೆಸಿದ್ದು ಹುಚ್ಚುತನ” ಎಂದು ಅವರು ವರದಿಗಾರರ ಮುಂದೆ ಹೇಳಿದರು.

ಮೃತ ಬಾಲಕಿ ದಿವ್ಯಾಂಶಿ ಶವದ ಮುಂದೆ ರೋಧಿಸುತ್ತಿರುವ ಸಂಬಂಧಿಕರು

ಆಂಧ್ರಪ್ರದೇಶದ ಅಪ್ರಾಪ್ತ ಬಾಲಕಿ ದಿವ್ಯಾಂಶಿ ಬುಧವಾರ ತನ್ನ ತಾಯಿಯೊಂದಿಗೆ ತನ್ನ ಕ್ರಿಕೆಟ್ ಆರಾಧ್ಯ ದೈವ ವಿರಾಟ್ ಕೊಹ್ಲಿಯನ್ನು ನೋಡಲು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.

“ನಾವು ಫುಟ್‌ಪಾತ್‌ನಲ್ಲಿ ಆರಾಮವಾಗಿ ಕುಳಿತಿದ್ದೆವು. ಒಳಗೆ ಹೋಗುವ ಯೋಜನೆಯೂ ಇರಲಿಲ್ಲ. ಅವಳು ಕ್ರಿಕೆಟ್‌ನಿಂದ ತುಂಬಾ ಆಕರ್ಷಿತಳಾಗಿದ್ದಳು, ಆಟಗಾರರ ಬಗ್ಗೆ ಅವಳಿಗೆ ಎಲ್ಲವೂ ತಿಳಿದಿತ್ತು. ಅವಳು ಕೊಹ್ಲಿಯನ್ನು ನೋಡಲು ಬಯಸಿದ್ದಳು” ಎಂದು ತಾಯಿ ಹೇಳಿದರು.

ಮಧ್ಯಾಹ್ನ 3.30 ರ ಸುಮಾರಿಗೆ ಜನಸಂದಣಿ ಅನಿಯಂತ್ರಿತವಾಗಿ ಹೆಚ್ಚಾದಾಗ ಕಾಲ್ತುಳಿತ ಸಂಭವಿಸಿತು. “ನನಗೆ ಉಸಿರುಗಟ್ಟಿಸುತ್ತಿತ್ತು; ನಾನು ಒಬ್ಬ ವ್ಯಕ್ತಿಯನ್ನು ಸುರಕ್ಷಿತವಾಗಿ ಎಳೆಯುವಲ್ಲಿ ಯಶಸ್ವಿಯಾಗಿದ್ದೆ. ನಂತರ, ಕೇವಲ ಐದು ನಿಮಿಷಗಳಲ್ಲಿ, ದಿವ್ಯಾಂಶಿ ಕಾಣೆಯಾದಳು. ಅವಳು ಒಳಗೆ ಹೋಗಿರಬಹುದು ಎಂದು ನಾನು ಭಾವಿಸಿದೆ. ಕೆಲಹೊತ್ತಿನ ಬಳಿಕ ಗಾಯಗೊಂಡಿದ್ದ ಆಕೆಯನ್ನು ನಾನು ನೋಡಿದೆ” ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ತನ್ನ ಮಗಳ ಬಹುಮುಖ ಪ್ರತಿಭೆ ಕುರಿತು ಮಾತನಾಡಿದ ಅವರು, “ಅವಳು ಒಬ್ಬ ದೇವತೆ; ಅವಳ ಹೊಸ ಶಾಲೆಗೆ ಸೇರಿ ಕೇವಲ ಎರಡು ವರ್ಷವಾಗಿತ್ತು. ಶಿಕ್ಷಕರು ಈಗಾಗಲೇ ಅವಳ ಬಗ್ಗೆ ತುಂಬಾ ಹೆಮ್ಮೆಪಡುತ್ತಿದ್ದರು. ಅವಳನ್ನು ಹೆತ್ತಾಗ ನನಗೆ ಕೇವಲ 20 ವರ್ಷ; ನಾವು ಒಟ್ಟಿಗೆ ಬೆಳೆದೆವು. ನಾನು ಮನೆಯಲ್ಲಿ ಇಲ್ಲದಿದ್ದರೆ ಆಕೆಯ ತಮ್ಮನನ್ನು ತಾಯಿಯಂತೆ ಬೆಳೆಸುತ್ತಿದ್ದಳು” ಎಂದು ಭಾವುಕರಾದರು.

ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...