Homeಕರ್ನಾಟಕಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

- Advertisement -
- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 11 ಜನರಲ್ಲಿ ಒಬ್ಬರಾದ ದಿವ್ಯಾಂಶಿ ಅವರ ತಾಯಿ, ತಮ್ಮ ಮಗಳ ಸಾವಿಗೆ ಕರ್ನಾಟಕ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. ಈ ದುರಂತವನ್ನು ಹುಚ್ಚುತನ ಹಾಗೂ ರಾಜ್ಯ ಸರ್ಕಾರದ ನಿರ್ವಹಣೆಯ ದುಷ್ಪರಿಣಾಮ ಎಂದು ಕರೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2025 ವಿಜಯೋತ್ಸವದ ಸಂದರ್ಭದಲ್ಲಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ದಿವ್ಯಾಂಶಿ ಸಾವನ್ನಪ್ಪಿದರು. ಕಾಲ್ತುಳಿತವು 11 ಜೀವಗಳನ್ನು ಬಲಿ ತೆಗೆದುಕೊಂಡಿತು; 47 ಅಭಿಮಾನಿಗಳನ್ನು ಗಾಯಗೊಳಿಸಿತು. ಅಂದಾಜು 2 ರಿಂದ 3 ಲಕ್ಷ ಜನರು ಕೇವಲ 35,000 ಸಾಮರ್ಥ್ಯವಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣ ಪ್ರವೇಶಿಸಲು ಆಗಮಿಸಿದ್ದರು.

“ನಾನು ಸಂಚಾರ ಪೊಲೀಸರನ್ನು ದೂಷಿಸುತ್ತೇನೆ; ಅವರಿಗೆ ಜನಸಂದಣಿಯನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿರಲಿಲ್ಲವೇ? ಸಾಕಷ್ಟು ಪೊಲೀಸ್ ನಿಯೋಜನೆ ಇತ್ತು. ಆದರೆ, ಯಾರೂ ಏನನ್ನೂ ನಿರ್ವಹಿಸಲಿಲ್ಲ. ಹೊರಗೆ ಇದು ನಡೆಯುತ್ತಿರುವಾಗ ಸರ್ಕಾರ ಕ್ರೀಡಾಂಗಣದೊಳಗೆ ಆಚರಣೆಗಳನ್ನು ನಡೆಸಿದ್ದು ಹುಚ್ಚುತನ” ಎಂದು ಅವರು ವರದಿಗಾರರ ಮುಂದೆ ಹೇಳಿದರು.

ಮೃತ ಬಾಲಕಿ ದಿವ್ಯಾಂಶಿ ಶವದ ಮುಂದೆ ರೋಧಿಸುತ್ತಿರುವ ಸಂಬಂಧಿಕರು

ಆಂಧ್ರಪ್ರದೇಶದ ಅಪ್ರಾಪ್ತ ಬಾಲಕಿ ದಿವ್ಯಾಂಶಿ ಬುಧವಾರ ತನ್ನ ತಾಯಿಯೊಂದಿಗೆ ತನ್ನ ಕ್ರಿಕೆಟ್ ಆರಾಧ್ಯ ದೈವ ವಿರಾಟ್ ಕೊಹ್ಲಿಯನ್ನು ನೋಡಲು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.

“ನಾವು ಫುಟ್‌ಪಾತ್‌ನಲ್ಲಿ ಆರಾಮವಾಗಿ ಕುಳಿತಿದ್ದೆವು. ಒಳಗೆ ಹೋಗುವ ಯೋಜನೆಯೂ ಇರಲಿಲ್ಲ. ಅವಳು ಕ್ರಿಕೆಟ್‌ನಿಂದ ತುಂಬಾ ಆಕರ್ಷಿತಳಾಗಿದ್ದಳು, ಆಟಗಾರರ ಬಗ್ಗೆ ಅವಳಿಗೆ ಎಲ್ಲವೂ ತಿಳಿದಿತ್ತು. ಅವಳು ಕೊಹ್ಲಿಯನ್ನು ನೋಡಲು ಬಯಸಿದ್ದಳು” ಎಂದು ತಾಯಿ ಹೇಳಿದರು.

ಮಧ್ಯಾಹ್ನ 3.30 ರ ಸುಮಾರಿಗೆ ಜನಸಂದಣಿ ಅನಿಯಂತ್ರಿತವಾಗಿ ಹೆಚ್ಚಾದಾಗ ಕಾಲ್ತುಳಿತ ಸಂಭವಿಸಿತು. “ನನಗೆ ಉಸಿರುಗಟ್ಟಿಸುತ್ತಿತ್ತು; ನಾನು ಒಬ್ಬ ವ್ಯಕ್ತಿಯನ್ನು ಸುರಕ್ಷಿತವಾಗಿ ಎಳೆಯುವಲ್ಲಿ ಯಶಸ್ವಿಯಾಗಿದ್ದೆ. ನಂತರ, ಕೇವಲ ಐದು ನಿಮಿಷಗಳಲ್ಲಿ, ದಿವ್ಯಾಂಶಿ ಕಾಣೆಯಾದಳು. ಅವಳು ಒಳಗೆ ಹೋಗಿರಬಹುದು ಎಂದು ನಾನು ಭಾವಿಸಿದೆ. ಕೆಲಹೊತ್ತಿನ ಬಳಿಕ ಗಾಯಗೊಂಡಿದ್ದ ಆಕೆಯನ್ನು ನಾನು ನೋಡಿದೆ” ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ತನ್ನ ಮಗಳ ಬಹುಮುಖ ಪ್ರತಿಭೆ ಕುರಿತು ಮಾತನಾಡಿದ ಅವರು, “ಅವಳು ಒಬ್ಬ ದೇವತೆ; ಅವಳ ಹೊಸ ಶಾಲೆಗೆ ಸೇರಿ ಕೇವಲ ಎರಡು ವರ್ಷವಾಗಿತ್ತು. ಶಿಕ್ಷಕರು ಈಗಾಗಲೇ ಅವಳ ಬಗ್ಗೆ ತುಂಬಾ ಹೆಮ್ಮೆಪಡುತ್ತಿದ್ದರು. ಅವಳನ್ನು ಹೆತ್ತಾಗ ನನಗೆ ಕೇವಲ 20 ವರ್ಷ; ನಾವು ಒಟ್ಟಿಗೆ ಬೆಳೆದೆವು. ನಾನು ಮನೆಯಲ್ಲಿ ಇಲ್ಲದಿದ್ದರೆ ಆಕೆಯ ತಮ್ಮನನ್ನು ತಾಯಿಯಂತೆ ಬೆಳೆಸುತ್ತಿದ್ದಳು” ಎಂದು ಭಾವುಕರಾದರು.

ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...