Homeಕರ್ನಾಟಕಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

- Advertisement -
- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 11 ಜನರಲ್ಲಿ ಒಬ್ಬರಾದ ದಿವ್ಯಾಂಶಿ ಅವರ ತಾಯಿ, ತಮ್ಮ ಮಗಳ ಸಾವಿಗೆ ಕರ್ನಾಟಕ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. ಈ ದುರಂತವನ್ನು ಹುಚ್ಚುತನ ಹಾಗೂ ರಾಜ್ಯ ಸರ್ಕಾರದ ನಿರ್ವಹಣೆಯ ದುಷ್ಪರಿಣಾಮ ಎಂದು ಕರೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2025 ವಿಜಯೋತ್ಸವದ ಸಂದರ್ಭದಲ್ಲಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ದಿವ್ಯಾಂಶಿ ಸಾವನ್ನಪ್ಪಿದರು. ಕಾಲ್ತುಳಿತವು 11 ಜೀವಗಳನ್ನು ಬಲಿ ತೆಗೆದುಕೊಂಡಿತು; 47 ಅಭಿಮಾನಿಗಳನ್ನು ಗಾಯಗೊಳಿಸಿತು. ಅಂದಾಜು 2 ರಿಂದ 3 ಲಕ್ಷ ಜನರು ಕೇವಲ 35,000 ಸಾಮರ್ಥ್ಯವಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣ ಪ್ರವೇಶಿಸಲು ಆಗಮಿಸಿದ್ದರು.

“ನಾನು ಸಂಚಾರ ಪೊಲೀಸರನ್ನು ದೂಷಿಸುತ್ತೇನೆ; ಅವರಿಗೆ ಜನಸಂದಣಿಯನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿರಲಿಲ್ಲವೇ? ಸಾಕಷ್ಟು ಪೊಲೀಸ್ ನಿಯೋಜನೆ ಇತ್ತು. ಆದರೆ, ಯಾರೂ ಏನನ್ನೂ ನಿರ್ವಹಿಸಲಿಲ್ಲ. ಹೊರಗೆ ಇದು ನಡೆಯುತ್ತಿರುವಾಗ ಸರ್ಕಾರ ಕ್ರೀಡಾಂಗಣದೊಳಗೆ ಆಚರಣೆಗಳನ್ನು ನಡೆಸಿದ್ದು ಹುಚ್ಚುತನ” ಎಂದು ಅವರು ವರದಿಗಾರರ ಮುಂದೆ ಹೇಳಿದರು.

ಮೃತ ಬಾಲಕಿ ದಿವ್ಯಾಂಶಿ ಶವದ ಮುಂದೆ ರೋಧಿಸುತ್ತಿರುವ ಸಂಬಂಧಿಕರು

ಆಂಧ್ರಪ್ರದೇಶದ ಅಪ್ರಾಪ್ತ ಬಾಲಕಿ ದಿವ್ಯಾಂಶಿ ಬುಧವಾರ ತನ್ನ ತಾಯಿಯೊಂದಿಗೆ ತನ್ನ ಕ್ರಿಕೆಟ್ ಆರಾಧ್ಯ ದೈವ ವಿರಾಟ್ ಕೊಹ್ಲಿಯನ್ನು ನೋಡಲು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.

“ನಾವು ಫುಟ್‌ಪಾತ್‌ನಲ್ಲಿ ಆರಾಮವಾಗಿ ಕುಳಿತಿದ್ದೆವು. ಒಳಗೆ ಹೋಗುವ ಯೋಜನೆಯೂ ಇರಲಿಲ್ಲ. ಅವಳು ಕ್ರಿಕೆಟ್‌ನಿಂದ ತುಂಬಾ ಆಕರ್ಷಿತಳಾಗಿದ್ದಳು, ಆಟಗಾರರ ಬಗ್ಗೆ ಅವಳಿಗೆ ಎಲ್ಲವೂ ತಿಳಿದಿತ್ತು. ಅವಳು ಕೊಹ್ಲಿಯನ್ನು ನೋಡಲು ಬಯಸಿದ್ದಳು” ಎಂದು ತಾಯಿ ಹೇಳಿದರು.

ಮಧ್ಯಾಹ್ನ 3.30 ರ ಸುಮಾರಿಗೆ ಜನಸಂದಣಿ ಅನಿಯಂತ್ರಿತವಾಗಿ ಹೆಚ್ಚಾದಾಗ ಕಾಲ್ತುಳಿತ ಸಂಭವಿಸಿತು. “ನನಗೆ ಉಸಿರುಗಟ್ಟಿಸುತ್ತಿತ್ತು; ನಾನು ಒಬ್ಬ ವ್ಯಕ್ತಿಯನ್ನು ಸುರಕ್ಷಿತವಾಗಿ ಎಳೆಯುವಲ್ಲಿ ಯಶಸ್ವಿಯಾಗಿದ್ದೆ. ನಂತರ, ಕೇವಲ ಐದು ನಿಮಿಷಗಳಲ್ಲಿ, ದಿವ್ಯಾಂಶಿ ಕಾಣೆಯಾದಳು. ಅವಳು ಒಳಗೆ ಹೋಗಿರಬಹುದು ಎಂದು ನಾನು ಭಾವಿಸಿದೆ. ಕೆಲಹೊತ್ತಿನ ಬಳಿಕ ಗಾಯಗೊಂಡಿದ್ದ ಆಕೆಯನ್ನು ನಾನು ನೋಡಿದೆ” ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ತನ್ನ ಮಗಳ ಬಹುಮುಖ ಪ್ರತಿಭೆ ಕುರಿತು ಮಾತನಾಡಿದ ಅವರು, “ಅವಳು ಒಬ್ಬ ದೇವತೆ; ಅವಳ ಹೊಸ ಶಾಲೆಗೆ ಸೇರಿ ಕೇವಲ ಎರಡು ವರ್ಷವಾಗಿತ್ತು. ಶಿಕ್ಷಕರು ಈಗಾಗಲೇ ಅವಳ ಬಗ್ಗೆ ತುಂಬಾ ಹೆಮ್ಮೆಪಡುತ್ತಿದ್ದರು. ಅವಳನ್ನು ಹೆತ್ತಾಗ ನನಗೆ ಕೇವಲ 20 ವರ್ಷ; ನಾವು ಒಟ್ಟಿಗೆ ಬೆಳೆದೆವು. ನಾನು ಮನೆಯಲ್ಲಿ ಇಲ್ಲದಿದ್ದರೆ ಆಕೆಯ ತಮ್ಮನನ್ನು ತಾಯಿಯಂತೆ ಬೆಳೆಸುತ್ತಿದ್ದಳು” ಎಂದು ಭಾವುಕರಾದರು.

ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...