Homeಕರ್ನಾಟಕಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

- Advertisement -
- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 11 ಜನರಲ್ಲಿ ಒಬ್ಬರಾದ ದಿವ್ಯಾಂಶಿ ಅವರ ತಾಯಿ, ತಮ್ಮ ಮಗಳ ಸಾವಿಗೆ ಕರ್ನಾಟಕ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. ಈ ದುರಂತವನ್ನು ಹುಚ್ಚುತನ ಹಾಗೂ ರಾಜ್ಯ ಸರ್ಕಾರದ ನಿರ್ವಹಣೆಯ ದುಷ್ಪರಿಣಾಮ ಎಂದು ಕರೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2025 ವಿಜಯೋತ್ಸವದ ಸಂದರ್ಭದಲ್ಲಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ದಿವ್ಯಾಂಶಿ ಸಾವನ್ನಪ್ಪಿದರು. ಕಾಲ್ತುಳಿತವು 11 ಜೀವಗಳನ್ನು ಬಲಿ ತೆಗೆದುಕೊಂಡಿತು; 47 ಅಭಿಮಾನಿಗಳನ್ನು ಗಾಯಗೊಳಿಸಿತು. ಅಂದಾಜು 2 ರಿಂದ 3 ಲಕ್ಷ ಜನರು ಕೇವಲ 35,000 ಸಾಮರ್ಥ್ಯವಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣ ಪ್ರವೇಶಿಸಲು ಆಗಮಿಸಿದ್ದರು.

“ನಾನು ಸಂಚಾರ ಪೊಲೀಸರನ್ನು ದೂಷಿಸುತ್ತೇನೆ; ಅವರಿಗೆ ಜನಸಂದಣಿಯನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿರಲಿಲ್ಲವೇ? ಸಾಕಷ್ಟು ಪೊಲೀಸ್ ನಿಯೋಜನೆ ಇತ್ತು. ಆದರೆ, ಯಾರೂ ಏನನ್ನೂ ನಿರ್ವಹಿಸಲಿಲ್ಲ. ಹೊರಗೆ ಇದು ನಡೆಯುತ್ತಿರುವಾಗ ಸರ್ಕಾರ ಕ್ರೀಡಾಂಗಣದೊಳಗೆ ಆಚರಣೆಗಳನ್ನು ನಡೆಸಿದ್ದು ಹುಚ್ಚುತನ” ಎಂದು ಅವರು ವರದಿಗಾರರ ಮುಂದೆ ಹೇಳಿದರು.

ಮೃತ ಬಾಲಕಿ ದಿವ್ಯಾಂಶಿ ಶವದ ಮುಂದೆ ರೋಧಿಸುತ್ತಿರುವ ಸಂಬಂಧಿಕರು

ಆಂಧ್ರಪ್ರದೇಶದ ಅಪ್ರಾಪ್ತ ಬಾಲಕಿ ದಿವ್ಯಾಂಶಿ ಬುಧವಾರ ತನ್ನ ತಾಯಿಯೊಂದಿಗೆ ತನ್ನ ಕ್ರಿಕೆಟ್ ಆರಾಧ್ಯ ದೈವ ವಿರಾಟ್ ಕೊಹ್ಲಿಯನ್ನು ನೋಡಲು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.

“ನಾವು ಫುಟ್‌ಪಾತ್‌ನಲ್ಲಿ ಆರಾಮವಾಗಿ ಕುಳಿತಿದ್ದೆವು. ಒಳಗೆ ಹೋಗುವ ಯೋಜನೆಯೂ ಇರಲಿಲ್ಲ. ಅವಳು ಕ್ರಿಕೆಟ್‌ನಿಂದ ತುಂಬಾ ಆಕರ್ಷಿತಳಾಗಿದ್ದಳು, ಆಟಗಾರರ ಬಗ್ಗೆ ಅವಳಿಗೆ ಎಲ್ಲವೂ ತಿಳಿದಿತ್ತು. ಅವಳು ಕೊಹ್ಲಿಯನ್ನು ನೋಡಲು ಬಯಸಿದ್ದಳು” ಎಂದು ತಾಯಿ ಹೇಳಿದರು.

ಮಧ್ಯಾಹ್ನ 3.30 ರ ಸುಮಾರಿಗೆ ಜನಸಂದಣಿ ಅನಿಯಂತ್ರಿತವಾಗಿ ಹೆಚ್ಚಾದಾಗ ಕಾಲ್ತುಳಿತ ಸಂಭವಿಸಿತು. “ನನಗೆ ಉಸಿರುಗಟ್ಟಿಸುತ್ತಿತ್ತು; ನಾನು ಒಬ್ಬ ವ್ಯಕ್ತಿಯನ್ನು ಸುರಕ್ಷಿತವಾಗಿ ಎಳೆಯುವಲ್ಲಿ ಯಶಸ್ವಿಯಾಗಿದ್ದೆ. ನಂತರ, ಕೇವಲ ಐದು ನಿಮಿಷಗಳಲ್ಲಿ, ದಿವ್ಯಾಂಶಿ ಕಾಣೆಯಾದಳು. ಅವಳು ಒಳಗೆ ಹೋಗಿರಬಹುದು ಎಂದು ನಾನು ಭಾವಿಸಿದೆ. ಕೆಲಹೊತ್ತಿನ ಬಳಿಕ ಗಾಯಗೊಂಡಿದ್ದ ಆಕೆಯನ್ನು ನಾನು ನೋಡಿದೆ” ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ತನ್ನ ಮಗಳ ಬಹುಮುಖ ಪ್ರತಿಭೆ ಕುರಿತು ಮಾತನಾಡಿದ ಅವರು, “ಅವಳು ಒಬ್ಬ ದೇವತೆ; ಅವಳ ಹೊಸ ಶಾಲೆಗೆ ಸೇರಿ ಕೇವಲ ಎರಡು ವರ್ಷವಾಗಿತ್ತು. ಶಿಕ್ಷಕರು ಈಗಾಗಲೇ ಅವಳ ಬಗ್ಗೆ ತುಂಬಾ ಹೆಮ್ಮೆಪಡುತ್ತಿದ್ದರು. ಅವಳನ್ನು ಹೆತ್ತಾಗ ನನಗೆ ಕೇವಲ 20 ವರ್ಷ; ನಾವು ಒಟ್ಟಿಗೆ ಬೆಳೆದೆವು. ನಾನು ಮನೆಯಲ್ಲಿ ಇಲ್ಲದಿದ್ದರೆ ಆಕೆಯ ತಮ್ಮನನ್ನು ತಾಯಿಯಂತೆ ಬೆಳೆಸುತ್ತಿದ್ದಳು” ಎಂದು ಭಾವುಕರಾದರು.

ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...