Homeಮುಖಪುಟಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ನಮಗೆ ಬಿಜೆಪಿಯೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಸ್ಯೆ ಇದೆ.

- Advertisement -
- Advertisement -

ಅಕ್ಟೋಬರ್-ನವಂಬರ್‌ನಲ್ಲಿ ನಡೆಯುವ ಬಿಹಾರ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಅವರು ಏಕಾಂಗಿಯಾಗಿ ಸ್ಪರ್ಧಿಸುವ ಆಶಯವನ್ನು ವ್ಯಕ್ತಪಡಿಸಿದ್ದು, ಬಿಜೆಪಿಯು ತನ್ನ ಅಭ್ಯರ್ಥಿಗಳ ಬಗ್ಗೆ ಮರುಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ, ಬಿಹಾರದ ಉಸ್ತುವಾರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೇರಿದಂತೆ ಬಿಜೆಪಿ ಉನ್ನತ ನಾಯಕರು ದೆಹಲಿಯಲ್ಲಿ ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಅವರ ಮನೆಯಲ್ಲಿ ಸಭೆ ನಡೆಸುತ್ತಿದ್ದಾರೆ. ನಿನ್ನೆ, ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಇತರ ಉನ್ನತ ನಾಯಕರು ಬಿಹಾರ ಸ್ಥಾನಗಳು ಮತ್ತು ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!

ಲೋಕ್ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖಂಡ ಚಿರಾಗ್ ಪಾಸ್ವಾನ್ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟದ ಭಾಗವಾಗಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಿನ್ನೆ ಘೋಷಿಸಿದರು. “ನಮಗೆ ಬಿಜೆಪಿಯೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಸ್ಯೆ ಇದೆ. ಹಾಗಾಗಿ ಬಿಹಾರ ಚುನಾವಣೆಯ ನಂತರ ತಮ್ಮ ಪಕ್ಷ ಮತ್ತು ಬಿಜೆಪಿ ಸೇರಿ ಸರ್ಕಾರ ರಚಿಸಲಿವೆ” ಎಂದು ಹೇಳಿದರು. ಚಿರಾಗ್ ಪಾಸ್ವಾನ್ ಅವರ ತಂದೆ ರಾಮ್ ವಿಲಾಸ್ ಪಾಸ್ವಾನ್, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ಆದರೆ, ಬಿಜೆಪಿ ಸ್ಪರ್ಧಿಸುವ ಸ್ಥಾನಗಳನ್ನು ಬಿಟ್ಟು ನಿತೀಶ್ ಕುಮಾರ್ ಅವರ ಜನತಾದಳ ಯುನೈಟೆಡ್ (ಜೆಡಿಯು) ಪಕ್ಷದ ಎದುರು ಅಭ್ಯರ್ಥಿಗಳನ್ನು ನೇಮಿಸುವುದಾಗಿ ಪಾಸ್ವಾನ್ ಘೋಷಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ನಾಯಕರೊಡನೆ ಎರಡು ಸಭೆಗಳನ್ನು ನಡೆಸಿದ ಚಿರಾಗ್ ಪಾಸ್ವಾನ್‌ರವರ ಈ ನಡೆ ಮತ್ತು ಬಿಜೆಪಿಯ ಮೌನವು ತನ್ನ ‘ಪ್ಲ್ಯಾನ್ ಬಿ’ಯಲ್ಲಿ ನಿತೀಶ್ ಕುಮಾರ್‌ ಅವರನ್ನು ನಿಗ್ರಹಿಸಲು ಮೌನ ಸಮ್ಮತಿಯನ್ನು ಸೂಚಿಸಿದೆಯೇ ಎಂದು ಹಲವರಲ್ಲಿ ಅನುಮಾನ ಮೂಡಿಸಿದೆ. ಚಿರಾಗ್ ಪಾಸ್ವಾನ್‌ರವರ ಈ ಘೋಷಣೆಯ ನಂತರವೂ ಯಾವುದೇ ಬಿಜೆಪಿ ಮುಖಂಡರು ಪ್ರತಿಕ್ರಿಯಿಸದಿರುವುದು ಈ ಊಹಾಪೋಹಗಳಿಗೆ ಇಂಬು ನೀಡಿವೆ. ಅದಾಗ್ಯೂ ಮೇಲ್ನೋಟಕ್ಕೆ ನಿತೀಶ್ ಕುಮಾರ್‌ ಅವರನ್ನು ಎನ್‌ಡಿಎ ಮೈತ್ರಿ ಕೂಟದ ನಾಯಕ ಎಂದು ಬಿಜೆಪಿ ದೃಢವಾಗಿ ಅನುಮೋದಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಬಿಜೆಪಿ-ನಿತೀಶ್ ಕುಮಾರ್ ಸ್ಥಾನಗಳ ಒಪ್ಪಂದದಲ್ಲಿ, ಬಿಹಾರದ 243 ಸ್ಥಾನಗಳಲ್ಲಿ, ಜೆಡಿಯು- 122, ಬಿಜೆಪಿ- 121 ಸ್ಥಾನಗಳಿಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ತನ್ನ ಪಾಲಿನಿಂದ ಎಲ್‌ಜೆಪಿಗೆ ಸ್ಥಾನಗಳನ್ನು ನೀಡಬೇಕಾಗಿತ್ತು. ಆದರೆ ಇದು ಈಗ ವಿವಾದಾಸ್ಪದವಾಗಿದೆ.

ದಲಿತರ ಮತಗಳ ಭದ್ರ ನೆಲೆ ಎಂದು ಹೇಳಿಕೊಳ್ಳುವ ಎಲ್‌ಜಿಪಿ ಹಿಂದಿನ ಚುನಾವಣೆಗಳಲ್ಲಿಯೂ ಇದೇ ರೀತಿಯ ತಂತ್ರವನ್ನು ಅನುಸರಿಸಿತ್ತು.

ಚಿರಾಗ್ ಪಾಸ್ವಾನ್ ಅವರು ಇತ್ತೀಚಿನ ದಿನಗಳಲ್ಲಿ ನಿತೀಶ್ ಕುಮಾರ್ ಅವರ ಬಗ್ಗೆ ತೀವ್ರವಾದ ಟೀಕೆಗಳನ್ನು ಮಾಡುತ್ತಿದ್ದರು. ರಾಜ್ಯದ ಮುಖ್ಯಮಂತ್ರಿಗಳು ಕೊರೊನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮತ್ತು ವಲಸೆಗಾರರ ಬಿಕ್ಕಟ್ಟನ್ನು ಎದುರಿಸುವುದರಲ್ಲಿ ಎಡವಿದ್ದಾರೆ ಎಂದು ಬಹಿರಂಗವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎನ್‌ಡಿಎ ಮತ್ತು ಮಹಾಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ. ಈ ಹಿಂದೆ, ಎನ್‌ಡಿಯ ಮೈತ್ರಿಕೂಟದಲ್ಲಿ ನಿತೀಶ್‌ ಕುಮಾರ್‌ರವರ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ ಮತ್ತು ಜತಿನ್ ರಾಮ್‌ ಮಾಂಝಿಯವರ ಹಿಂದೂಸ್ತಾನ್ ಅವಮ್ ಮೋರ್ಚಾ ಸೇರಿತ್ತು. ಇದರ ಪ್ರತಿಸ್ಪರ್ಧಿ ಮಹಾಮೈತ್ರಿಯಲ್ಲಿ ಲಾಲು ಪ್ರಸಾದ್ ಯಾದವ್‌ರವರ ಆರ್‌ಜೆಡಿ, ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿತ್ತು. ಆದರೆ ಈಗ ಚಿರಾಗ್ ಪಾಸ್ವಾನ್ ಅವರ ಈ ನಿರ್ಧಾರವು ಈ ಯೋಜನೆಯನ್ನು ತಿರುಗುಮುರುಗು ಮಾಡಿದೆ.

ಸದ್ಯಕ್ಕೆ ಲಾಲು ಪ್ರಸಾದ್ ಯಾದವ್‌ರವರು ಜೈಲಿನಲ್ಲಿರುವ ಕಾರಣ ಅವರ ಮಗ ತೇಜಸ್ವಿ ಯಾದವ್ ಆರ್‌ಜೆಡಿ ಮತ್ತು ಮಹಾಮೈತ್ರಿಯನ್ನು ಮುನ್ನಡೆಸುತ್ತಿದ್ದಾರೆ.

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಅಕ್ಟೋಬರ್ 28 ರಿಂದ ಆರಂಭವಾಗಲಿದ್ದು, 3 ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಹಲವರು ವೈರಸ್ ವಿರುದ್ಧ ಹೋರಾಡುತ್ತಿದ್ದರೆ ಬಿಹಾರ ಸಿಎಂ ಚುನಾವಣೆ ಪ್ರಚಾರದಲ್ಲಿದ್ದಾರೆ; ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...