Homeಮುಖಪುಟಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ನಮಗೆ ಬಿಜೆಪಿಯೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಸ್ಯೆ ಇದೆ.

- Advertisement -
- Advertisement -

ಅಕ್ಟೋಬರ್-ನವಂಬರ್‌ನಲ್ಲಿ ನಡೆಯುವ ಬಿಹಾರ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಅವರು ಏಕಾಂಗಿಯಾಗಿ ಸ್ಪರ್ಧಿಸುವ ಆಶಯವನ್ನು ವ್ಯಕ್ತಪಡಿಸಿದ್ದು, ಬಿಜೆಪಿಯು ತನ್ನ ಅಭ್ಯರ್ಥಿಗಳ ಬಗ್ಗೆ ಮರುಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ, ಬಿಹಾರದ ಉಸ್ತುವಾರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೇರಿದಂತೆ ಬಿಜೆಪಿ ಉನ್ನತ ನಾಯಕರು ದೆಹಲಿಯಲ್ಲಿ ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಅವರ ಮನೆಯಲ್ಲಿ ಸಭೆ ನಡೆಸುತ್ತಿದ್ದಾರೆ. ನಿನ್ನೆ, ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಇತರ ಉನ್ನತ ನಾಯಕರು ಬಿಹಾರ ಸ್ಥಾನಗಳು ಮತ್ತು ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!

ಲೋಕ್ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖಂಡ ಚಿರಾಗ್ ಪಾಸ್ವಾನ್ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟದ ಭಾಗವಾಗಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಿನ್ನೆ ಘೋಷಿಸಿದರು. “ನಮಗೆ ಬಿಜೆಪಿಯೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಸ್ಯೆ ಇದೆ. ಹಾಗಾಗಿ ಬಿಹಾರ ಚುನಾವಣೆಯ ನಂತರ ತಮ್ಮ ಪಕ್ಷ ಮತ್ತು ಬಿಜೆಪಿ ಸೇರಿ ಸರ್ಕಾರ ರಚಿಸಲಿವೆ” ಎಂದು ಹೇಳಿದರು. ಚಿರಾಗ್ ಪಾಸ್ವಾನ್ ಅವರ ತಂದೆ ರಾಮ್ ವಿಲಾಸ್ ಪಾಸ್ವಾನ್, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ಆದರೆ, ಬಿಜೆಪಿ ಸ್ಪರ್ಧಿಸುವ ಸ್ಥಾನಗಳನ್ನು ಬಿಟ್ಟು ನಿತೀಶ್ ಕುಮಾರ್ ಅವರ ಜನತಾದಳ ಯುನೈಟೆಡ್ (ಜೆಡಿಯು) ಪಕ್ಷದ ಎದುರು ಅಭ್ಯರ್ಥಿಗಳನ್ನು ನೇಮಿಸುವುದಾಗಿ ಪಾಸ್ವಾನ್ ಘೋಷಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ನಾಯಕರೊಡನೆ ಎರಡು ಸಭೆಗಳನ್ನು ನಡೆಸಿದ ಚಿರಾಗ್ ಪಾಸ್ವಾನ್‌ರವರ ಈ ನಡೆ ಮತ್ತು ಬಿಜೆಪಿಯ ಮೌನವು ತನ್ನ ‘ಪ್ಲ್ಯಾನ್ ಬಿ’ಯಲ್ಲಿ ನಿತೀಶ್ ಕುಮಾರ್‌ ಅವರನ್ನು ನಿಗ್ರಹಿಸಲು ಮೌನ ಸಮ್ಮತಿಯನ್ನು ಸೂಚಿಸಿದೆಯೇ ಎಂದು ಹಲವರಲ್ಲಿ ಅನುಮಾನ ಮೂಡಿಸಿದೆ. ಚಿರಾಗ್ ಪಾಸ್ವಾನ್‌ರವರ ಈ ಘೋಷಣೆಯ ನಂತರವೂ ಯಾವುದೇ ಬಿಜೆಪಿ ಮುಖಂಡರು ಪ್ರತಿಕ್ರಿಯಿಸದಿರುವುದು ಈ ಊಹಾಪೋಹಗಳಿಗೆ ಇಂಬು ನೀಡಿವೆ. ಅದಾಗ್ಯೂ ಮೇಲ್ನೋಟಕ್ಕೆ ನಿತೀಶ್ ಕುಮಾರ್‌ ಅವರನ್ನು ಎನ್‌ಡಿಎ ಮೈತ್ರಿ ಕೂಟದ ನಾಯಕ ಎಂದು ಬಿಜೆಪಿ ದೃಢವಾಗಿ ಅನುಮೋದಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಬಿಜೆಪಿ-ನಿತೀಶ್ ಕುಮಾರ್ ಸ್ಥಾನಗಳ ಒಪ್ಪಂದದಲ್ಲಿ, ಬಿಹಾರದ 243 ಸ್ಥಾನಗಳಲ್ಲಿ, ಜೆಡಿಯು- 122, ಬಿಜೆಪಿ- 121 ಸ್ಥಾನಗಳಿಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ತನ್ನ ಪಾಲಿನಿಂದ ಎಲ್‌ಜೆಪಿಗೆ ಸ್ಥಾನಗಳನ್ನು ನೀಡಬೇಕಾಗಿತ್ತು. ಆದರೆ ಇದು ಈಗ ವಿವಾದಾಸ್ಪದವಾಗಿದೆ.

ದಲಿತರ ಮತಗಳ ಭದ್ರ ನೆಲೆ ಎಂದು ಹೇಳಿಕೊಳ್ಳುವ ಎಲ್‌ಜಿಪಿ ಹಿಂದಿನ ಚುನಾವಣೆಗಳಲ್ಲಿಯೂ ಇದೇ ರೀತಿಯ ತಂತ್ರವನ್ನು ಅನುಸರಿಸಿತ್ತು.

ಚಿರಾಗ್ ಪಾಸ್ವಾನ್ ಅವರು ಇತ್ತೀಚಿನ ದಿನಗಳಲ್ಲಿ ನಿತೀಶ್ ಕುಮಾರ್ ಅವರ ಬಗ್ಗೆ ತೀವ್ರವಾದ ಟೀಕೆಗಳನ್ನು ಮಾಡುತ್ತಿದ್ದರು. ರಾಜ್ಯದ ಮುಖ್ಯಮಂತ್ರಿಗಳು ಕೊರೊನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮತ್ತು ವಲಸೆಗಾರರ ಬಿಕ್ಕಟ್ಟನ್ನು ಎದುರಿಸುವುದರಲ್ಲಿ ಎಡವಿದ್ದಾರೆ ಎಂದು ಬಹಿರಂಗವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎನ್‌ಡಿಎ ಮತ್ತು ಮಹಾಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ. ಈ ಹಿಂದೆ, ಎನ್‌ಡಿಯ ಮೈತ್ರಿಕೂಟದಲ್ಲಿ ನಿತೀಶ್‌ ಕುಮಾರ್‌ರವರ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ ಮತ್ತು ಜತಿನ್ ರಾಮ್‌ ಮಾಂಝಿಯವರ ಹಿಂದೂಸ್ತಾನ್ ಅವಮ್ ಮೋರ್ಚಾ ಸೇರಿತ್ತು. ಇದರ ಪ್ರತಿಸ್ಪರ್ಧಿ ಮಹಾಮೈತ್ರಿಯಲ್ಲಿ ಲಾಲು ಪ್ರಸಾದ್ ಯಾದವ್‌ರವರ ಆರ್‌ಜೆಡಿ, ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿತ್ತು. ಆದರೆ ಈಗ ಚಿರಾಗ್ ಪಾಸ್ವಾನ್ ಅವರ ಈ ನಿರ್ಧಾರವು ಈ ಯೋಜನೆಯನ್ನು ತಿರುಗುಮುರುಗು ಮಾಡಿದೆ.

ಸದ್ಯಕ್ಕೆ ಲಾಲು ಪ್ರಸಾದ್ ಯಾದವ್‌ರವರು ಜೈಲಿನಲ್ಲಿರುವ ಕಾರಣ ಅವರ ಮಗ ತೇಜಸ್ವಿ ಯಾದವ್ ಆರ್‌ಜೆಡಿ ಮತ್ತು ಮಹಾಮೈತ್ರಿಯನ್ನು ಮುನ್ನಡೆಸುತ್ತಿದ್ದಾರೆ.

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಅಕ್ಟೋಬರ್ 28 ರಿಂದ ಆರಂಭವಾಗಲಿದ್ದು, 3 ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಹಲವರು ವೈರಸ್ ವಿರುದ್ಧ ಹೋರಾಡುತ್ತಿದ್ದರೆ ಬಿಹಾರ ಸಿಎಂ ಚುನಾವಣೆ ಪ್ರಚಾರದಲ್ಲಿದ್ದಾರೆ; ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...