Homeಮುಖಪುಟಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ನಮಗೆ ಬಿಜೆಪಿಯೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಸ್ಯೆ ಇದೆ.

- Advertisement -
- Advertisement -

ಅಕ್ಟೋಬರ್-ನವಂಬರ್‌ನಲ್ಲಿ ನಡೆಯುವ ಬಿಹಾರ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಅವರು ಏಕಾಂಗಿಯಾಗಿ ಸ್ಪರ್ಧಿಸುವ ಆಶಯವನ್ನು ವ್ಯಕ್ತಪಡಿಸಿದ್ದು, ಬಿಜೆಪಿಯು ತನ್ನ ಅಭ್ಯರ್ಥಿಗಳ ಬಗ್ಗೆ ಮರುಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ, ಬಿಹಾರದ ಉಸ್ತುವಾರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೇರಿದಂತೆ ಬಿಜೆಪಿ ಉನ್ನತ ನಾಯಕರು ದೆಹಲಿಯಲ್ಲಿ ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಅವರ ಮನೆಯಲ್ಲಿ ಸಭೆ ನಡೆಸುತ್ತಿದ್ದಾರೆ. ನಿನ್ನೆ, ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಇತರ ಉನ್ನತ ನಾಯಕರು ಬಿಹಾರ ಸ್ಥಾನಗಳು ಮತ್ತು ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!

ಲೋಕ್ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖಂಡ ಚಿರಾಗ್ ಪಾಸ್ವಾನ್ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟದ ಭಾಗವಾಗಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಿನ್ನೆ ಘೋಷಿಸಿದರು. “ನಮಗೆ ಬಿಜೆಪಿಯೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಸ್ಯೆ ಇದೆ. ಹಾಗಾಗಿ ಬಿಹಾರ ಚುನಾವಣೆಯ ನಂತರ ತಮ್ಮ ಪಕ್ಷ ಮತ್ತು ಬಿಜೆಪಿ ಸೇರಿ ಸರ್ಕಾರ ರಚಿಸಲಿವೆ” ಎಂದು ಹೇಳಿದರು. ಚಿರಾಗ್ ಪಾಸ್ವಾನ್ ಅವರ ತಂದೆ ರಾಮ್ ವಿಲಾಸ್ ಪಾಸ್ವಾನ್, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ಆದರೆ, ಬಿಜೆಪಿ ಸ್ಪರ್ಧಿಸುವ ಸ್ಥಾನಗಳನ್ನು ಬಿಟ್ಟು ನಿತೀಶ್ ಕುಮಾರ್ ಅವರ ಜನತಾದಳ ಯುನೈಟೆಡ್ (ಜೆಡಿಯು) ಪಕ್ಷದ ಎದುರು ಅಭ್ಯರ್ಥಿಗಳನ್ನು ನೇಮಿಸುವುದಾಗಿ ಪಾಸ್ವಾನ್ ಘೋಷಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ನಾಯಕರೊಡನೆ ಎರಡು ಸಭೆಗಳನ್ನು ನಡೆಸಿದ ಚಿರಾಗ್ ಪಾಸ್ವಾನ್‌ರವರ ಈ ನಡೆ ಮತ್ತು ಬಿಜೆಪಿಯ ಮೌನವು ತನ್ನ ‘ಪ್ಲ್ಯಾನ್ ಬಿ’ಯಲ್ಲಿ ನಿತೀಶ್ ಕುಮಾರ್‌ ಅವರನ್ನು ನಿಗ್ರಹಿಸಲು ಮೌನ ಸಮ್ಮತಿಯನ್ನು ಸೂಚಿಸಿದೆಯೇ ಎಂದು ಹಲವರಲ್ಲಿ ಅನುಮಾನ ಮೂಡಿಸಿದೆ. ಚಿರಾಗ್ ಪಾಸ್ವಾನ್‌ರವರ ಈ ಘೋಷಣೆಯ ನಂತರವೂ ಯಾವುದೇ ಬಿಜೆಪಿ ಮುಖಂಡರು ಪ್ರತಿಕ್ರಿಯಿಸದಿರುವುದು ಈ ಊಹಾಪೋಹಗಳಿಗೆ ಇಂಬು ನೀಡಿವೆ. ಅದಾಗ್ಯೂ ಮೇಲ್ನೋಟಕ್ಕೆ ನಿತೀಶ್ ಕುಮಾರ್‌ ಅವರನ್ನು ಎನ್‌ಡಿಎ ಮೈತ್ರಿ ಕೂಟದ ನಾಯಕ ಎಂದು ಬಿಜೆಪಿ ದೃಢವಾಗಿ ಅನುಮೋದಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಬಿಜೆಪಿ-ನಿತೀಶ್ ಕುಮಾರ್ ಸ್ಥಾನಗಳ ಒಪ್ಪಂದದಲ್ಲಿ, ಬಿಹಾರದ 243 ಸ್ಥಾನಗಳಲ್ಲಿ, ಜೆಡಿಯು- 122, ಬಿಜೆಪಿ- 121 ಸ್ಥಾನಗಳಿಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ತನ್ನ ಪಾಲಿನಿಂದ ಎಲ್‌ಜೆಪಿಗೆ ಸ್ಥಾನಗಳನ್ನು ನೀಡಬೇಕಾಗಿತ್ತು. ಆದರೆ ಇದು ಈಗ ವಿವಾದಾಸ್ಪದವಾಗಿದೆ.

ದಲಿತರ ಮತಗಳ ಭದ್ರ ನೆಲೆ ಎಂದು ಹೇಳಿಕೊಳ್ಳುವ ಎಲ್‌ಜಿಪಿ ಹಿಂದಿನ ಚುನಾವಣೆಗಳಲ್ಲಿಯೂ ಇದೇ ರೀತಿಯ ತಂತ್ರವನ್ನು ಅನುಸರಿಸಿತ್ತು.

ಚಿರಾಗ್ ಪಾಸ್ವಾನ್ ಅವರು ಇತ್ತೀಚಿನ ದಿನಗಳಲ್ಲಿ ನಿತೀಶ್ ಕುಮಾರ್ ಅವರ ಬಗ್ಗೆ ತೀವ್ರವಾದ ಟೀಕೆಗಳನ್ನು ಮಾಡುತ್ತಿದ್ದರು. ರಾಜ್ಯದ ಮುಖ್ಯಮಂತ್ರಿಗಳು ಕೊರೊನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮತ್ತು ವಲಸೆಗಾರರ ಬಿಕ್ಕಟ್ಟನ್ನು ಎದುರಿಸುವುದರಲ್ಲಿ ಎಡವಿದ್ದಾರೆ ಎಂದು ಬಹಿರಂಗವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎನ್‌ಡಿಎ ಮತ್ತು ಮಹಾಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ. ಈ ಹಿಂದೆ, ಎನ್‌ಡಿಯ ಮೈತ್ರಿಕೂಟದಲ್ಲಿ ನಿತೀಶ್‌ ಕುಮಾರ್‌ರವರ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ ಮತ್ತು ಜತಿನ್ ರಾಮ್‌ ಮಾಂಝಿಯವರ ಹಿಂದೂಸ್ತಾನ್ ಅವಮ್ ಮೋರ್ಚಾ ಸೇರಿತ್ತು. ಇದರ ಪ್ರತಿಸ್ಪರ್ಧಿ ಮಹಾಮೈತ್ರಿಯಲ್ಲಿ ಲಾಲು ಪ್ರಸಾದ್ ಯಾದವ್‌ರವರ ಆರ್‌ಜೆಡಿ, ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿತ್ತು. ಆದರೆ ಈಗ ಚಿರಾಗ್ ಪಾಸ್ವಾನ್ ಅವರ ಈ ನಿರ್ಧಾರವು ಈ ಯೋಜನೆಯನ್ನು ತಿರುಗುಮುರುಗು ಮಾಡಿದೆ.

ಸದ್ಯಕ್ಕೆ ಲಾಲು ಪ್ರಸಾದ್ ಯಾದವ್‌ರವರು ಜೈಲಿನಲ್ಲಿರುವ ಕಾರಣ ಅವರ ಮಗ ತೇಜಸ್ವಿ ಯಾದವ್ ಆರ್‌ಜೆಡಿ ಮತ್ತು ಮಹಾಮೈತ್ರಿಯನ್ನು ಮುನ್ನಡೆಸುತ್ತಿದ್ದಾರೆ.

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಅಕ್ಟೋಬರ್ 28 ರಿಂದ ಆರಂಭವಾಗಲಿದ್ದು, 3 ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಹಲವರು ವೈರಸ್ ವಿರುದ್ಧ ಹೋರಾಡುತ್ತಿದ್ದರೆ ಬಿಹಾರ ಸಿಎಂ ಚುನಾವಣೆ ಪ್ರಚಾರದಲ್ಲಿದ್ದಾರೆ; ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...