Homeಮುಖಪುಟಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ನಮಗೆ ಬಿಜೆಪಿಯೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಸ್ಯೆ ಇದೆ.

- Advertisement -
- Advertisement -

ಅಕ್ಟೋಬರ್-ನವಂಬರ್‌ನಲ್ಲಿ ನಡೆಯುವ ಬಿಹಾರ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಅವರು ಏಕಾಂಗಿಯಾಗಿ ಸ್ಪರ್ಧಿಸುವ ಆಶಯವನ್ನು ವ್ಯಕ್ತಪಡಿಸಿದ್ದು, ಬಿಜೆಪಿಯು ತನ್ನ ಅಭ್ಯರ್ಥಿಗಳ ಬಗ್ಗೆ ಮರುಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ, ಬಿಹಾರದ ಉಸ್ತುವಾರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೇರಿದಂತೆ ಬಿಜೆಪಿ ಉನ್ನತ ನಾಯಕರು ದೆಹಲಿಯಲ್ಲಿ ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಅವರ ಮನೆಯಲ್ಲಿ ಸಭೆ ನಡೆಸುತ್ತಿದ್ದಾರೆ. ನಿನ್ನೆ, ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಇತರ ಉನ್ನತ ನಾಯಕರು ಬಿಹಾರ ಸ್ಥಾನಗಳು ಮತ್ತು ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!

ಲೋಕ್ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖಂಡ ಚಿರಾಗ್ ಪಾಸ್ವಾನ್ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟದ ಭಾಗವಾಗಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಿನ್ನೆ ಘೋಷಿಸಿದರು. “ನಮಗೆ ಬಿಜೆಪಿಯೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಸಮಸ್ಯೆ ಇದೆ. ಹಾಗಾಗಿ ಬಿಹಾರ ಚುನಾವಣೆಯ ನಂತರ ತಮ್ಮ ಪಕ್ಷ ಮತ್ತು ಬಿಜೆಪಿ ಸೇರಿ ಸರ್ಕಾರ ರಚಿಸಲಿವೆ” ಎಂದು ಹೇಳಿದರು. ಚಿರಾಗ್ ಪಾಸ್ವಾನ್ ಅವರ ತಂದೆ ರಾಮ್ ವಿಲಾಸ್ ಪಾಸ್ವಾನ್, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ಆದರೆ, ಬಿಜೆಪಿ ಸ್ಪರ್ಧಿಸುವ ಸ್ಥಾನಗಳನ್ನು ಬಿಟ್ಟು ನಿತೀಶ್ ಕುಮಾರ್ ಅವರ ಜನತಾದಳ ಯುನೈಟೆಡ್ (ಜೆಡಿಯು) ಪಕ್ಷದ ಎದುರು ಅಭ್ಯರ್ಥಿಗಳನ್ನು ನೇಮಿಸುವುದಾಗಿ ಪಾಸ್ವಾನ್ ಘೋಷಿಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ನಾಯಕರೊಡನೆ ಎರಡು ಸಭೆಗಳನ್ನು ನಡೆಸಿದ ಚಿರಾಗ್ ಪಾಸ್ವಾನ್‌ರವರ ಈ ನಡೆ ಮತ್ತು ಬಿಜೆಪಿಯ ಮೌನವು ತನ್ನ ‘ಪ್ಲ್ಯಾನ್ ಬಿ’ಯಲ್ಲಿ ನಿತೀಶ್ ಕುಮಾರ್‌ ಅವರನ್ನು ನಿಗ್ರಹಿಸಲು ಮೌನ ಸಮ್ಮತಿಯನ್ನು ಸೂಚಿಸಿದೆಯೇ ಎಂದು ಹಲವರಲ್ಲಿ ಅನುಮಾನ ಮೂಡಿಸಿದೆ. ಚಿರಾಗ್ ಪಾಸ್ವಾನ್‌ರವರ ಈ ಘೋಷಣೆಯ ನಂತರವೂ ಯಾವುದೇ ಬಿಜೆಪಿ ಮುಖಂಡರು ಪ್ರತಿಕ್ರಿಯಿಸದಿರುವುದು ಈ ಊಹಾಪೋಹಗಳಿಗೆ ಇಂಬು ನೀಡಿವೆ. ಅದಾಗ್ಯೂ ಮೇಲ್ನೋಟಕ್ಕೆ ನಿತೀಶ್ ಕುಮಾರ್‌ ಅವರನ್ನು ಎನ್‌ಡಿಎ ಮೈತ್ರಿ ಕೂಟದ ನಾಯಕ ಎಂದು ಬಿಜೆಪಿ ದೃಢವಾಗಿ ಅನುಮೋದಿಸಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

ಬಿಜೆಪಿ-ನಿತೀಶ್ ಕುಮಾರ್ ಸ್ಥಾನಗಳ ಒಪ್ಪಂದದಲ್ಲಿ, ಬಿಹಾರದ 243 ಸ್ಥಾನಗಳಲ್ಲಿ, ಜೆಡಿಯು- 122, ಬಿಜೆಪಿ- 121 ಸ್ಥಾನಗಳಿಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಬಿಜೆಪಿ ತನ್ನ ಪಾಲಿನಿಂದ ಎಲ್‌ಜೆಪಿಗೆ ಸ್ಥಾನಗಳನ್ನು ನೀಡಬೇಕಾಗಿತ್ತು. ಆದರೆ ಇದು ಈಗ ವಿವಾದಾಸ್ಪದವಾಗಿದೆ.

ದಲಿತರ ಮತಗಳ ಭದ್ರ ನೆಲೆ ಎಂದು ಹೇಳಿಕೊಳ್ಳುವ ಎಲ್‌ಜಿಪಿ ಹಿಂದಿನ ಚುನಾವಣೆಗಳಲ್ಲಿಯೂ ಇದೇ ರೀತಿಯ ತಂತ್ರವನ್ನು ಅನುಸರಿಸಿತ್ತು.

ಚಿರಾಗ್ ಪಾಸ್ವಾನ್ ಅವರು ಇತ್ತೀಚಿನ ದಿನಗಳಲ್ಲಿ ನಿತೀಶ್ ಕುಮಾರ್ ಅವರ ಬಗ್ಗೆ ತೀವ್ರವಾದ ಟೀಕೆಗಳನ್ನು ಮಾಡುತ್ತಿದ್ದರು. ರಾಜ್ಯದ ಮುಖ್ಯಮಂತ್ರಿಗಳು ಕೊರೊನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಮತ್ತು ವಲಸೆಗಾರರ ಬಿಕ್ಕಟ್ಟನ್ನು ಎದುರಿಸುವುದರಲ್ಲಿ ಎಡವಿದ್ದಾರೆ ಎಂದು ಬಹಿರಂಗವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎನ್‌ಡಿಎ ಮತ್ತು ಮಹಾಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ. ಈ ಹಿಂದೆ, ಎನ್‌ಡಿಯ ಮೈತ್ರಿಕೂಟದಲ್ಲಿ ನಿತೀಶ್‌ ಕುಮಾರ್‌ರವರ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ ಮತ್ತು ಜತಿನ್ ರಾಮ್‌ ಮಾಂಝಿಯವರ ಹಿಂದೂಸ್ತಾನ್ ಅವಮ್ ಮೋರ್ಚಾ ಸೇರಿತ್ತು. ಇದರ ಪ್ರತಿಸ್ಪರ್ಧಿ ಮಹಾಮೈತ್ರಿಯಲ್ಲಿ ಲಾಲು ಪ್ರಸಾದ್ ಯಾದವ್‌ರವರ ಆರ್‌ಜೆಡಿ, ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿತ್ತು. ಆದರೆ ಈಗ ಚಿರಾಗ್ ಪಾಸ್ವಾನ್ ಅವರ ಈ ನಿರ್ಧಾರವು ಈ ಯೋಜನೆಯನ್ನು ತಿರುಗುಮುರುಗು ಮಾಡಿದೆ.

ಸದ್ಯಕ್ಕೆ ಲಾಲು ಪ್ರಸಾದ್ ಯಾದವ್‌ರವರು ಜೈಲಿನಲ್ಲಿರುವ ಕಾರಣ ಅವರ ಮಗ ತೇಜಸ್ವಿ ಯಾದವ್ ಆರ್‌ಜೆಡಿ ಮತ್ತು ಮಹಾಮೈತ್ರಿಯನ್ನು ಮುನ್ನಡೆಸುತ್ತಿದ್ದಾರೆ.

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಅಕ್ಟೋಬರ್ 28 ರಿಂದ ಆರಂಭವಾಗಲಿದ್ದು, 3 ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಹಲವರು ವೈರಸ್ ವಿರುದ್ಧ ಹೋರಾಡುತ್ತಿದ್ದರೆ ಬಿಹಾರ ಸಿಎಂ ಚುನಾವಣೆ ಪ್ರಚಾರದಲ್ಲಿದ್ದಾರೆ; ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...