Homeಮುಖಪುಟಬಿಹಾರ: ’ಧನ್ಯವಾದ ಯಾತ್ರೆ’ ಕೈಗೊಳ್ಳಲಿರುವ ಎಲ್‌ಜೆಪಿಯ ಚಿರಾಗ್ ಪಾಸ್ವಾನ್!

ಬಿಹಾರ: ’ಧನ್ಯವಾದ ಯಾತ್ರೆ’ ಕೈಗೊಳ್ಳಲಿರುವ ಎಲ್‌ಜೆಪಿಯ ಚಿರಾಗ್ ಪಾಸ್ವಾನ್!

‘ಬಿಹಾರ ಮೊದಲು, ಬಿಹಾರಿ ಮೊದಲು’ ಎಂಬ ಅಭಿಯಾನಕ್ಕೆ 25 ಲಕ್ಷ ಬಿಹಾರ ಮತದಾರರ ಪ್ರೀತಿ ಮತ್ತು ಬೆಂಬಲ ಸಿಕ್ಕಿದೆ. ಅವರಿಗೆ ಧನ್ಯವಾದ ಹೇಳಲು ಧನ್ಯವಾದ ಯಾತ್ರೆ’- ಚಿರಾಗ್ ಪಾಸ್ವಾನ್

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ137 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಕೇವಲ ಒಂದು ಸ್ಥಾನ ಪಡೆದಿರುವ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ನವೆಂಬರ್ ಅಂತ್ಯದಲ್ಲಿ ‘ಧನ್ಯವಾದ ಯಾತ್ರೆ’ ಕೈಗೊಳ್ಳಲಿದ್ದಾರೆ.  ರಾಜ್ಯಾದ್ಯಂತ ‘ಬಿಹಾರ ಮೊದಲು, ಬಿಹಾರಿ ಮೊದಲು’ ಎಂಬ ಅಭಿಯಾನವನ್ನು ಬೆಂಬಲಿಸಿದ್ದಕ್ಕಾಗಿ ಮತದಾರರಿಗೆ ಧನ್ಯವಾದ ಸಲ್ಲಿಸಲು ಈ ಯಾತ್ರೆ ನಡೆಸುವುದಾಗಿ ತಿಳಿಸಿದ್ದಾರೆ.

31 ಕ್ಷೇತ್ರಗಳಲ್ಲಿಎಲ್‌ಜೆಪಿಯು ಮಹಾಘಟಬಂಧನ್ ಅಭ್ಯರ್ಥಿ ಮತ್ತು ಜನತಾದಳ (ಯುನೈಟೆಡ್) ನಡುವಿನ ಗೆಲುವಿನ ಅಂತರಕ್ಕಿಂತ ಹೆಚ್ಚಿನ ಮತ ಗಳಿಸಿದೆ. ಒಟ್ಟು ಎಲ್‌ಜೆಪಿ 25 ಲಕ್ಷ ಮತಗಳನ್ನು ಪಡೆದಿದೆ.

“ನಮ್ಮ ಪಕ್ಷ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲು ನಿರ್ಧರಿಸಿದ್ದು ಇದೇ ಮೊದಲು. ನಮ್ಮ ‘‘ಬಿಹಾರ ಮೊದಲು, ಬಿಹಾರಿ ಮೊದಲು’ ಎಂಬ ಅಭಿಯಾನಕ್ಕೆ 25 ಲಕ್ಷ ಬಿಹಾರ ಮತದಾರರ ಪ್ರೀತಿ ಮತ್ತು ಬೆಂಬಲ ಸಿಕ್ಕಿದೆ. ಜನರು ನೀಡಿದ ಬೆಂಬಲಕ್ಕೆ ಧನ್ಯವಾದ ಹೇಳಲು ನಾನು ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಭೇಟಿ ನೀಡಲಿದ್ದೇನೆ ”ಎಂದು ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

ಎಲ್‌ಜೆಪಿಯನ್ನು ಜೆಡಿಯು ಬಹಿರಂಗವಾಗಿಯೇ ಟೀಕಿಸುತ್ತಿರುವ ಈ ಸಮಯದಲ್ಲಿ ಚಿರಾಗ್ ಪಾಸ್ವಾನ್ ಧನ್ಯವಾದ ಯಾತ್ರೆಗೆ ಮುಂದಾಗಿದ್ದಾರೆ. ನವೆಂಬರ್ 20ರ ನಂತರ ಬಿಹಾರ ಖತ್ ಹಬ್ಬ ಮುಗಿದ ಬಳಿಕ ಯಾತ್ರೆ ಪ್ರಾರಂಭವಾಗಲಿದೆ.

137 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಿದ್ದ ಚಿರಾಗ್ ಪಾಸ್ವಾನ್ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದ್ದಾರೆ. ಆದರೆ ಇವರ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದ ಕನಿಷ್ಟ 20 ಕ್ಷೇತ್ರಗಳಲ್ಲಿ ಜೆಡಿಯು ಸೋತಿರುವುದು ಗಮನಾರ್ಹ. ಆದರೆ ಈ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಈ ನಡೆಯಿಂದಾಗಿ ಸುಮಾರು 40 ಸ್ಥಾನಗಳನ್ನು ಜೆಡಿಯು ಕಳೆದುಕೊಂಡಿರಬಹುದು. “ಈ ಚುನಾವಣೆಯಲ್ಲಿ ಜೆಡಿಯು ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು” ಎಂದು ಚಿರಾಗ್ ಪಾಸ್ವಾನ್ ಹೇಳಿದ್ದರು.

2015ರ ಚುನಾವಣೆಯಲ್ಲಿ 71 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಯು ಈ ಚುನಾವಣೆಯಲ್ಲಿ 43 ಸ್ಥಾನಗಳಿಗೆ ಕುಸಿದಿದ್ದರೆ, ಆಗ 53 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ ಈಗ ತನ್ನ ಗೆಲುವನ್ನು 74ಕ್ಕೆ ಹೆಚ್ಚಿಸಿಕೊಂಡಿದೆ. ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳ 75 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...