Homeಮುಖಪುಟಬಿಹಾರ: ’ಧನ್ಯವಾದ ಯಾತ್ರೆ’ ಕೈಗೊಳ್ಳಲಿರುವ ಎಲ್‌ಜೆಪಿಯ ಚಿರಾಗ್ ಪಾಸ್ವಾನ್!

ಬಿಹಾರ: ’ಧನ್ಯವಾದ ಯಾತ್ರೆ’ ಕೈಗೊಳ್ಳಲಿರುವ ಎಲ್‌ಜೆಪಿಯ ಚಿರಾಗ್ ಪಾಸ್ವಾನ್!

‘ಬಿಹಾರ ಮೊದಲು, ಬಿಹಾರಿ ಮೊದಲು’ ಎಂಬ ಅಭಿಯಾನಕ್ಕೆ 25 ಲಕ್ಷ ಬಿಹಾರ ಮತದಾರರ ಪ್ರೀತಿ ಮತ್ತು ಬೆಂಬಲ ಸಿಕ್ಕಿದೆ. ಅವರಿಗೆ ಧನ್ಯವಾದ ಹೇಳಲು ಧನ್ಯವಾದ ಯಾತ್ರೆ’- ಚಿರಾಗ್ ಪಾಸ್ವಾನ್

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ137 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಕೇವಲ ಒಂದು ಸ್ಥಾನ ಪಡೆದಿರುವ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ನವೆಂಬರ್ ಅಂತ್ಯದಲ್ಲಿ ‘ಧನ್ಯವಾದ ಯಾತ್ರೆ’ ಕೈಗೊಳ್ಳಲಿದ್ದಾರೆ.  ರಾಜ್ಯಾದ್ಯಂತ ‘ಬಿಹಾರ ಮೊದಲು, ಬಿಹಾರಿ ಮೊದಲು’ ಎಂಬ ಅಭಿಯಾನವನ್ನು ಬೆಂಬಲಿಸಿದ್ದಕ್ಕಾಗಿ ಮತದಾರರಿಗೆ ಧನ್ಯವಾದ ಸಲ್ಲಿಸಲು ಈ ಯಾತ್ರೆ ನಡೆಸುವುದಾಗಿ ತಿಳಿಸಿದ್ದಾರೆ.

31 ಕ್ಷೇತ್ರಗಳಲ್ಲಿಎಲ್‌ಜೆಪಿಯು ಮಹಾಘಟಬಂಧನ್ ಅಭ್ಯರ್ಥಿ ಮತ್ತು ಜನತಾದಳ (ಯುನೈಟೆಡ್) ನಡುವಿನ ಗೆಲುವಿನ ಅಂತರಕ್ಕಿಂತ ಹೆಚ್ಚಿನ ಮತ ಗಳಿಸಿದೆ. ಒಟ್ಟು ಎಲ್‌ಜೆಪಿ 25 ಲಕ್ಷ ಮತಗಳನ್ನು ಪಡೆದಿದೆ.

“ನಮ್ಮ ಪಕ್ಷ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲು ನಿರ್ಧರಿಸಿದ್ದು ಇದೇ ಮೊದಲು. ನಮ್ಮ ‘‘ಬಿಹಾರ ಮೊದಲು, ಬಿಹಾರಿ ಮೊದಲು’ ಎಂಬ ಅಭಿಯಾನಕ್ಕೆ 25 ಲಕ್ಷ ಬಿಹಾರ ಮತದಾರರ ಪ್ರೀತಿ ಮತ್ತು ಬೆಂಬಲ ಸಿಕ್ಕಿದೆ. ಜನರು ನೀಡಿದ ಬೆಂಬಲಕ್ಕೆ ಧನ್ಯವಾದ ಹೇಳಲು ನಾನು ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಭೇಟಿ ನೀಡಲಿದ್ದೇನೆ ”ಎಂದು ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

ಎಲ್‌ಜೆಪಿಯನ್ನು ಜೆಡಿಯು ಬಹಿರಂಗವಾಗಿಯೇ ಟೀಕಿಸುತ್ತಿರುವ ಈ ಸಮಯದಲ್ಲಿ ಚಿರಾಗ್ ಪಾಸ್ವಾನ್ ಧನ್ಯವಾದ ಯಾತ್ರೆಗೆ ಮುಂದಾಗಿದ್ದಾರೆ. ನವೆಂಬರ್ 20ರ ನಂತರ ಬಿಹಾರ ಖತ್ ಹಬ್ಬ ಮುಗಿದ ಬಳಿಕ ಯಾತ್ರೆ ಪ್ರಾರಂಭವಾಗಲಿದೆ.

137 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಿದ್ದ ಚಿರಾಗ್ ಪಾಸ್ವಾನ್ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದ್ದಾರೆ. ಆದರೆ ಇವರ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದ ಕನಿಷ್ಟ 20 ಕ್ಷೇತ್ರಗಳಲ್ಲಿ ಜೆಡಿಯು ಸೋತಿರುವುದು ಗಮನಾರ್ಹ. ಆದರೆ ಈ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಈ ನಡೆಯಿಂದಾಗಿ ಸುಮಾರು 40 ಸ್ಥಾನಗಳನ್ನು ಜೆಡಿಯು ಕಳೆದುಕೊಂಡಿರಬಹುದು. “ಈ ಚುನಾವಣೆಯಲ್ಲಿ ಜೆಡಿಯು ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು” ಎಂದು ಚಿರಾಗ್ ಪಾಸ್ವಾನ್ ಹೇಳಿದ್ದರು.

2015ರ ಚುನಾವಣೆಯಲ್ಲಿ 71 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಯು ಈ ಚುನಾವಣೆಯಲ್ಲಿ 43 ಸ್ಥಾನಗಳಿಗೆ ಕುಸಿದಿದ್ದರೆ, ಆಗ 53 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ ಈಗ ತನ್ನ ಗೆಲುವನ್ನು 74ಕ್ಕೆ ಹೆಚ್ಚಿಸಿಕೊಂಡಿದೆ. ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳ 75 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...