Homeಮುಖಪುಟಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

- Advertisement -
- Advertisement -

ಕನ್ನಡ ಸಿನಿಮಾ ರಂಗದಲ್ಲಿ ಶ್ರೀ ಮಂಜುನಾಥನಾಗಿ, ಸಿಪಾಯಿಯ ಸ್ನೇಹಿತರಾಗಿ ಕನ್ನಡಿಗರ ಮನಗೆದ್ದಿದ್ದ ತೆಲುಗು ಚಿತ್ರರಂಗದ ಹಿರಿಯ ನಟ ಮೆಗಾಸ್ಟಾರ್‌ ಚಿರಂಜೀವಿ ಇಂದು (ಆಗಸ್ಟ್ 22) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿರುವ ಚಿರಂಜೀವಿ ಅವರಿಗೆ ಎಲ್ಲಾ ಚಿತ್ರರಂಗ, ಅಭಿಮಾನಿಗಳು ಸೇರಿದಂತೆ ಗಣ್ಯರ ಕಡೆಯಿಂದಲೂ ಶುಭಾಶಯಗಳು ಹರಿದು ಬರುತ್ತಿವೆ.

ಟಾಲಿವುಡ್​ನ ಅತ್ಯಂತ ಜನಪ್ರಿಯ ನಟ ಹಾಗೂ ಈಗಲೂ ನಾಯಕನಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಮೆಗಾಸ್ಟಾರ್‌ ಚಿರಂಜೀವಿಗೆ ಅವರ ಮಗ ನಟ ರಾಮ್ ಚರಣ್ ತೇಜಾ ವಿಶೇಷವಾಗಿ ಶುಭಾಶಯ ಕೋರಿದ್ದು, ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ.

ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರು ಒಟ್ಟಾಗಿ ನಟಿಸುತ್ತಿರುವ ಮುಂಬರುವ ಚಿತ್ರ ’ಆಚಾರ್ಯ’ದ ತೆರೆಮರೆಯ ಕೆಲವು ಕ್ಲಿಪ್‌ಗಳನ್ನು ಹಂಚಿಕೊಂಡಿದ್ದಾರೆ. ರಾಮ್ ಚರಣ್ ಮತ್ತು ಚಿರಂಜೀವಿ ಚಿತ್ರೀಕರಣದ ನಡುವೆ ಪರಸ್ಪರ ಸಂವಹನ ನಡೆಸುವುದನ್ನು ನಾವು ನೋಡಬಹುದು. ತಂದೆ ತನ್ನ ಮಗನಿಗೆ ಕೆಲವು ತಾಂತ್ರಿಕ ಸಲಹೆಗಳನ್ನು ನೀಡುತ್ತಿರುವಂತೆ ಕಾಣಿಸುತ್ತದೆ.

ಇದನ್ನೂ ಓದಿ: ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

On Ram Charan's birthday, Chiranjeevi unveils new Acharya poster featuring them together - Hindustan Times

ಕಾಡಿನ ನಡುವಿನ ಚಿತ್ರೀಕರಣದಲ್ಲಿ ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರೂ ರಹಸ್ಯವಾಗಿ ಪರಸ್ಪರರ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿರುವ ದೃಶ್ಯಗಳು ವಿಡಿಯೊದಲ್ಲಿವೆ. “ಮೆಗಾಸ್ಟಾರ್‌ ಜೊತೆಗಿನ ಪ್ರತಿ ಕ್ಷಣವೂ ಕಲಿಕೆಯ ಅನುಭವ. ಅವರೊಂದಿಗೆ ಪ್ರತಿ ಕ್ಷಣವೂ ಸಂತೋಷ. ಜನ್ಮದಿನದ ಶುಭಾಶಯಗಳು ಅಪ್ಪಾ. ಜನ್ಮದಿನದ ಶುಭಾಶಯಗಳು ಆಚಾರ್ಯ” ಎಂದಿದ್ದಾರೆ.

 

View this post on Instagram

 

A post shared by Ram Charan (@alwaysramcharan)

ನಟ ಮತ್ತು ಚಿರಂಜೀವಿಯವರ ಸೋದರಳಿಯ ಅಲ್ಲು ಅರ್ಜುನ್ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ, “ನನ್ನ ಮತ್ತು ನಮ್ಮ ಏಕೈಕ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದಿದ್ದಾರೆ.

 

ಖ್ಯಾತ ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರನಾಗಿ ಜನಿಸಿದ್ದು ಅದೃಷ್ಟ ಎಂದು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ. ಚಿರು ಅವರನ್ನು ಮೆಚ್ಚುವ ಲಕ್ಷಾಂತರ ಅಭಿಮಾನಿಗಳಲ್ಲಿ ನಾನು ಒಬ್ಬ ಎಂದಿದ್ದಾರೆ. ಒಬ್ಬ ಸಾಮಾನ್ಯನಾಗಿ ತನ್ನ ಪಯಣವನ್ನು ಆರಂಭಿಸಿದ ಚಿರು ಅನೇಕ ಕಷ್ಟಗಳನ್ನು ಎದುರಿಸಿ, ಅಸಾಮಾನ್ಯ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅಣ್ಣನಾಗಿ ಹುಟ್ಟಿದರೂ ಚಿರು ನನ್ನನ್ನು ತಂದೆಯಂತೆ ಪೋಷಿಸಿದ್ದಾರೆ. ತಂದೆಯ ಸ್ಥಾನದಲ್ಲಿ ನಿಂತು, ಪ್ರೀತಿಯನ್ನು ನೀಡುತ್ತಾರೆ ಎಂದು ಪವನ್ ಕಲ್ಯಾಣ್ ಶುಭಾಶಯ ತಿಳಿಸಿದ್ದಾರೆ.

Chiranjeevi COVID-19 | Pawan Kalyan wishes South superstar Chiranjeevi a quick recovery from COVID-19

ಚಿರಂಜೀವಿ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 2019 ರ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಮುಂದೆ ಕೊರಟಾಲ ಶಿವ ನಿರ್ದೇಶನದ ಆಚಾರ್ಯದಲ್ಲಿ  ರಾಮ್ ಚರಣ್  ಕಾಜಲ್ ಅಗರ್ವಾಲ್ ಮತ್ತು ಪೂಜಾ ಹೆಗ್ಡೆ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಜೊತೆಗೆ ವಾಲ್ಟರ್‌ ವೀರಯ್ಯ, ಭೋಳ ಶಂಕರ್‌ ಹಾಗೂ ಗಾಡ್‌ಫಾದರ್ ಚಿತ್ರಗಳು ಇಂದು ಘೋಷಣೆಯಾಗಿವೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...