Homeಮುಖಪುಟಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

- Advertisement -
- Advertisement -

ಕನ್ನಡ ಸಿನಿಮಾ ರಂಗದಲ್ಲಿ ಶ್ರೀ ಮಂಜುನಾಥನಾಗಿ, ಸಿಪಾಯಿಯ ಸ್ನೇಹಿತರಾಗಿ ಕನ್ನಡಿಗರ ಮನಗೆದ್ದಿದ್ದ ತೆಲುಗು ಚಿತ್ರರಂಗದ ಹಿರಿಯ ನಟ ಮೆಗಾಸ್ಟಾರ್‌ ಚಿರಂಜೀವಿ ಇಂದು (ಆಗಸ್ಟ್ 22) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿರುವ ಚಿರಂಜೀವಿ ಅವರಿಗೆ ಎಲ್ಲಾ ಚಿತ್ರರಂಗ, ಅಭಿಮಾನಿಗಳು ಸೇರಿದಂತೆ ಗಣ್ಯರ ಕಡೆಯಿಂದಲೂ ಶುಭಾಶಯಗಳು ಹರಿದು ಬರುತ್ತಿವೆ.

ಟಾಲಿವುಡ್​ನ ಅತ್ಯಂತ ಜನಪ್ರಿಯ ನಟ ಹಾಗೂ ಈಗಲೂ ನಾಯಕನಾಗಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಮೆಗಾಸ್ಟಾರ್‌ ಚಿರಂಜೀವಿಗೆ ಅವರ ಮಗ ನಟ ರಾಮ್ ಚರಣ್ ತೇಜಾ ವಿಶೇಷವಾಗಿ ಶುಭಾಶಯ ಕೋರಿದ್ದು, ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ.

ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರು ಒಟ್ಟಾಗಿ ನಟಿಸುತ್ತಿರುವ ಮುಂಬರುವ ಚಿತ್ರ ’ಆಚಾರ್ಯ’ದ ತೆರೆಮರೆಯ ಕೆಲವು ಕ್ಲಿಪ್‌ಗಳನ್ನು ಹಂಚಿಕೊಂಡಿದ್ದಾರೆ. ರಾಮ್ ಚರಣ್ ಮತ್ತು ಚಿರಂಜೀವಿ ಚಿತ್ರೀಕರಣದ ನಡುವೆ ಪರಸ್ಪರ ಸಂವಹನ ನಡೆಸುವುದನ್ನು ನಾವು ನೋಡಬಹುದು. ತಂದೆ ತನ್ನ ಮಗನಿಗೆ ಕೆಲವು ತಾಂತ್ರಿಕ ಸಲಹೆಗಳನ್ನು ನೀಡುತ್ತಿರುವಂತೆ ಕಾಣಿಸುತ್ತದೆ.

ಇದನ್ನೂ ಓದಿ: ‘ಮೊದಲು ಆಕಾಶ.. ಈಗ ನಿಂತ ನೆಲವನ್ನೂ ಕಸಿಯುತ್ತಿದ್ದಾರೆ!’; ಫ್ಲೈಯಿಂಗ್‌ ಎಲಿಫೆಂಟ್ಸ್‌ ಕಿರುಚಿತ್ರ

On Ram Charan's birthday, Chiranjeevi unveils new Acharya poster featuring them together - Hindustan Times

ಕಾಡಿನ ನಡುವಿನ ಚಿತ್ರೀಕರಣದಲ್ಲಿ ರಾಮ್ ಚರಣ್ ಮತ್ತು ಚಿರಂಜೀವಿ ಇಬ್ಬರೂ ರಹಸ್ಯವಾಗಿ ಪರಸ್ಪರರ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿರುವ ದೃಶ್ಯಗಳು ವಿಡಿಯೊದಲ್ಲಿವೆ. “ಮೆಗಾಸ್ಟಾರ್‌ ಜೊತೆಗಿನ ಪ್ರತಿ ಕ್ಷಣವೂ ಕಲಿಕೆಯ ಅನುಭವ. ಅವರೊಂದಿಗೆ ಪ್ರತಿ ಕ್ಷಣವೂ ಸಂತೋಷ. ಜನ್ಮದಿನದ ಶುಭಾಶಯಗಳು ಅಪ್ಪಾ. ಜನ್ಮದಿನದ ಶುಭಾಶಯಗಳು ಆಚಾರ್ಯ” ಎಂದಿದ್ದಾರೆ.

 

View this post on Instagram

 

A post shared by Ram Charan (@alwaysramcharan)

ನಟ ಮತ್ತು ಚಿರಂಜೀವಿಯವರ ಸೋದರಳಿಯ ಅಲ್ಲು ಅರ್ಜುನ್ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ, “ನನ್ನ ಮತ್ತು ನಮ್ಮ ಏಕೈಕ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದಿದ್ದಾರೆ.

 

ಖ್ಯಾತ ಮೆಗಾಸ್ಟಾರ್ ಚಿರಂಜೀವಿ ಅವರ ಕಿರಿಯ ಸಹೋದರನಾಗಿ ಜನಿಸಿದ್ದು ಅದೃಷ್ಟ ಎಂದು ನಟ ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ. ಚಿರು ಅವರನ್ನು ಮೆಚ್ಚುವ ಲಕ್ಷಾಂತರ ಅಭಿಮಾನಿಗಳಲ್ಲಿ ನಾನು ಒಬ್ಬ ಎಂದಿದ್ದಾರೆ. ಒಬ್ಬ ಸಾಮಾನ್ಯನಾಗಿ ತನ್ನ ಪಯಣವನ್ನು ಆರಂಭಿಸಿದ ಚಿರು ಅನೇಕ ಕಷ್ಟಗಳನ್ನು ಎದುರಿಸಿ, ಅಸಾಮಾನ್ಯ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅಣ್ಣನಾಗಿ ಹುಟ್ಟಿದರೂ ಚಿರು ನನ್ನನ್ನು ತಂದೆಯಂತೆ ಪೋಷಿಸಿದ್ದಾರೆ. ತಂದೆಯ ಸ್ಥಾನದಲ್ಲಿ ನಿಂತು, ಪ್ರೀತಿಯನ್ನು ನೀಡುತ್ತಾರೆ ಎಂದು ಪವನ್ ಕಲ್ಯಾಣ್ ಶುಭಾಶಯ ತಿಳಿಸಿದ್ದಾರೆ.

Chiranjeevi COVID-19 | Pawan Kalyan wishes South superstar Chiranjeevi a quick recovery from COVID-19

ಚಿರಂಜೀವಿ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 2019 ರ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. ಮುಂದೆ ಕೊರಟಾಲ ಶಿವ ನಿರ್ದೇಶನದ ಆಚಾರ್ಯದಲ್ಲಿ  ರಾಮ್ ಚರಣ್  ಕಾಜಲ್ ಅಗರ್ವಾಲ್ ಮತ್ತು ಪೂಜಾ ಹೆಗ್ಡೆ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ. ಇವುಗಳ ಜೊತೆಗೆ ವಾಲ್ಟರ್‌ ವೀರಯ್ಯ, ಭೋಳ ಶಂಕರ್‌ ಹಾಗೂ ಗಾಡ್‌ಫಾದರ್ ಚಿತ್ರಗಳು ಇಂದು ಘೋಷಣೆಯಾಗಿವೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...